ETV Bharat / state

ಕಾರ್ಮಿಕರಿಲ್ಲದೇ ಕಂಗಾಲಾದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು

ದೇಶದಲ್ಲಿ 2 ನೇ ಅತಿ ದೊಡ್ಡ ಉದ್ಯೋಗ ನೀಡುವ ವಲಯವಾದ ಎಂಎಸ್​​ಎಂಇ, ಈಗ ಕಾರ್ಮಿಕರ ಕೊರತೆಯಿಂದ ಕಂಗಾಲಾಗಿದೆ ಎಂದು ಕಾಸಿಯಾ ಸಂಘದ ಅಧ್ಯಕ್ಷ ರಾಜು ಬೇಸರ ವ್ಯಕ್ತಪಡಿಸಿದ್ದಾರೆ.

author img

By

Published : May 5, 2020, 5:09 PM IST

small and medium scale industries
ಕಾಸಿಯಾ ಸಂಘದ ಅಧ್ಯಕ್ಷ ರಾಜು

ಬೆಂಗಳೂರು : ಲಾಕ್​ಡೌನ್ ನಿಯಮಗಳನ್ನು ಸಡಿಲಿಕೆ ಮಾಡಿದ ಸರ್ಕಾರ, ಕೈಗಾರಿಕೆಗಳನ್ನು ಪ್ರರಂಭಿಸಲು ಹಸಿರು ನಿಶಾನೆ ತೋರಿದೆ. ಆದರೆ, ವಲಸೆ ಕಾರ್ಮಿಕರು ಊರುಗಳಿಗೆ ತೆರಳಿರುವುದರಿಂದ ಕೈಗಾರಿಕೆಗಳಲ್ಲಿ ಕಾರ್ಮಿಕರ ಕೊರತೆ ಹೆಚ್ಚಾಗಿದೆ.

ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ಊರಿಗೆ ತೆರಳಲು ಅವಕಾಶ ಕಲ್ಪಿಸಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಕಾರ್ಮಿಕರಿಲ್ಲದೇ ಉತ್ಪಾದನೆ ಮಾಡುವುದು ಅಸಾಧ್ಯವಾಗಿದೆ. ಸದ್ಯ ಪೀಣ್ಯ, ಕಾಮಾಕ್ಷಿಪಾಳ್ಯ, ರಾಜಾಜಿನಗರ, ಬಿಡದಿ ಪ್ರದೇಶಗಳಲ್ಲಿ ಶೇಕಡ 25 ರಿಂದ 30 ರಷ್ಟು ಕೈಗಾರಿಕೆಗಳು ಮಾತ್ರ ಪ್ರಾರಂಭಗೊಂಡಿವೆ. ಈ ಕೈಗಾರಿಕೆಗಳಲ್ಲಿ ಶೇ 30 ರಷ್ಟು ಕಾರ್ಮಿಕರು ಮಾತ್ರ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಇಷ್ಟಲ್ಲದೇ ಊರಿಗೆ ತೆರಳಿದ ಕಾರ್ಮಿಕರು 14 ದಿನ ಕ್ಯಾರಂಟೈನ್​ನಲ್ಲಿ ಇಡಬೇಕು ಹೀಗಾದರೆ ಕೈಗಾರಿಕೆಗಳನ್ನು ನಡೆಸುವುದು ಕಷ್ಟ ಎಂದು ಕಾಸಿಯಾ ಸಂಘದ ಅಧ್ಯಕ್ಷ ರಾಜು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಸಿಯಾ ಸಂಘದ ಅಧ್ಯಕ್ಷ ರಾಜು

ಸರ್ಕಾರಿ ಸಂಸ್ಥೆಗಳ ಒತ್ತಡ:

ಕಳೆದ 40 ದಿನಗಳಿಂದ ಬಾಗಿಲು ಮುಚ್ಚಿದ್ದ ಕೈಗಾರಿಕೆಗಳು ನಿನ್ನೆಯಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ. ಇದರ ಬೆನ್ನಲ್ಲೇ ಬೆಸ್ಕಾಂ, ಮಾಲಿನ್ಯ ನಿಯಂತ್ರಣ ಮಂಡಳಿ, ಜಲಮಂಡಳಿ ಸೇರಿದಂತೆ ಸರ್ಕಾರಿ ಸಂಸ್ಥೆಗಳು ನಾನಾ ರೀತಿಯಲ್ಲಿ ಒತ್ತಡ ಹೇರಲು ಪ್ರಾರಂಭಿಸಿದೆ. ಈ ಕೂಡಲೇ ಸರ್ಕಾರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಹಾಯಕ್ಕೆ ಬರಬೇಕು ಎಂದು ರಾಜು ಆಗ್ರಹಿಸಿದ್ದಾರೆ.

ಬೆಂಗಳೂರು : ಲಾಕ್​ಡೌನ್ ನಿಯಮಗಳನ್ನು ಸಡಿಲಿಕೆ ಮಾಡಿದ ಸರ್ಕಾರ, ಕೈಗಾರಿಕೆಗಳನ್ನು ಪ್ರರಂಭಿಸಲು ಹಸಿರು ನಿಶಾನೆ ತೋರಿದೆ. ಆದರೆ, ವಲಸೆ ಕಾರ್ಮಿಕರು ಊರುಗಳಿಗೆ ತೆರಳಿರುವುದರಿಂದ ಕೈಗಾರಿಕೆಗಳಲ್ಲಿ ಕಾರ್ಮಿಕರ ಕೊರತೆ ಹೆಚ್ಚಾಗಿದೆ.

ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ಊರಿಗೆ ತೆರಳಲು ಅವಕಾಶ ಕಲ್ಪಿಸಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಕಾರ್ಮಿಕರಿಲ್ಲದೇ ಉತ್ಪಾದನೆ ಮಾಡುವುದು ಅಸಾಧ್ಯವಾಗಿದೆ. ಸದ್ಯ ಪೀಣ್ಯ, ಕಾಮಾಕ್ಷಿಪಾಳ್ಯ, ರಾಜಾಜಿನಗರ, ಬಿಡದಿ ಪ್ರದೇಶಗಳಲ್ಲಿ ಶೇಕಡ 25 ರಿಂದ 30 ರಷ್ಟು ಕೈಗಾರಿಕೆಗಳು ಮಾತ್ರ ಪ್ರಾರಂಭಗೊಂಡಿವೆ. ಈ ಕೈಗಾರಿಕೆಗಳಲ್ಲಿ ಶೇ 30 ರಷ್ಟು ಕಾರ್ಮಿಕರು ಮಾತ್ರ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಇಷ್ಟಲ್ಲದೇ ಊರಿಗೆ ತೆರಳಿದ ಕಾರ್ಮಿಕರು 14 ದಿನ ಕ್ಯಾರಂಟೈನ್​ನಲ್ಲಿ ಇಡಬೇಕು ಹೀಗಾದರೆ ಕೈಗಾರಿಕೆಗಳನ್ನು ನಡೆಸುವುದು ಕಷ್ಟ ಎಂದು ಕಾಸಿಯಾ ಸಂಘದ ಅಧ್ಯಕ್ಷ ರಾಜು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಸಿಯಾ ಸಂಘದ ಅಧ್ಯಕ್ಷ ರಾಜು

ಸರ್ಕಾರಿ ಸಂಸ್ಥೆಗಳ ಒತ್ತಡ:

ಕಳೆದ 40 ದಿನಗಳಿಂದ ಬಾಗಿಲು ಮುಚ್ಚಿದ್ದ ಕೈಗಾರಿಕೆಗಳು ನಿನ್ನೆಯಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ. ಇದರ ಬೆನ್ನಲ್ಲೇ ಬೆಸ್ಕಾಂ, ಮಾಲಿನ್ಯ ನಿಯಂತ್ರಣ ಮಂಡಳಿ, ಜಲಮಂಡಳಿ ಸೇರಿದಂತೆ ಸರ್ಕಾರಿ ಸಂಸ್ಥೆಗಳು ನಾನಾ ರೀತಿಯಲ್ಲಿ ಒತ್ತಡ ಹೇರಲು ಪ್ರಾರಂಭಿಸಿದೆ. ಈ ಕೂಡಲೇ ಸರ್ಕಾರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಹಾಯಕ್ಕೆ ಬರಬೇಕು ಎಂದು ರಾಜು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.