ETV Bharat / state

ನಮ್ಮ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಬಗ್ಗೆ ನನಗೆ ಭರವಸೆ ಇದೆ: ಸಾರಿಗೆ ಸಚಿವ ಸವದಿ

author img

By

Published : Dec 11, 2020, 7:50 PM IST

Updated : Dec 11, 2020, 8:10 PM IST

ನಾನು ಇತರೆ ಎಲ್ಲಾ ಕೆಲಸ-ಕಾರ್ಯಗಳನ್ನು ಬಿಟ್ಟು, ನಮ್ಮ ನೌಕರರ ಆಗಮನಕ್ಕಾಗಿ ಕಾಯುತ್ತಿದ್ದೇನೆ. ಆದರೆ, ಇದುವರೆಗೂ ಯಾರೂ ಮಾತುಕತೆಗೆ ಬಂದಿಲ್ಲ. ನೌಕರರ ಮುಷ್ಕರದಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

Laxman Savadi Reaction about Transport Workers Strike
ಸಾರಿಗೆ ನೌಕರರ ಮುಷ್ಕರದ ಬಗ್ಗೆ ಲಕ್ಷಣ ಸವದಿ ಪ್ರತಿಕ್ರಿಯೆ

ಬೆಂಗಳೂರು : ನಮ್ಮ ಇಲಾಖೆ ನೌಕರರು ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಸಿಎಂ ಭೇಟಿಯಾಗಿ ಚರ್ಚೆ ಮಾಡಿದ ಬಳಿಕ ಮಾತನಾಡಿದ ಅವರು, ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲಿ. ನಾನು ಇತರೆ ಎಲ್ಲಾ ಕೆಲಸ-ಕಾರ್ಯಗಳನ್ನು ಬಿಟ್ಟು, ನಮ್ಮ ನೌಕರರ ಆಗಮನಕ್ಕಾಗಿ ಕಾಯುತ್ತಿದ್ದೇನೆ. ಆದರೆ, ಇದುವರೆಗೂ ಯಾರೂ ಮಾತುಕತೆಗೆ ಬಂದಿಲ್ಲ. ನೌಕರರ ಮುಷ್ಕರದಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮತ್ತೊಮ್ಮೆ ನಮ್ಮ ನೌಕರರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ಸಾರಿಗೆ ಸಚಿವ ಲಕ್ಷ್ಮಣ ಸವದಿ

ಓದಿ: ಕೊರೊನಾ ಸಂದರ್ಭದಲ್ಲಿ ನೀಡಿದ್ದ ಹೇಳಿಕೆಗೆ ಬದ್ಧರಾಗಿದ್ದೇವೆ: ಸಾರಿಗೆ ಸಚಿವ ಸವದಿ

ನಾನು ಪ್ರಮುಖ ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಮಾತುಕತೆ ನಡೆಸಿದ್ದೇನೆ. ಬಿಎಂಟಿಸಿ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಅಧ್ಯಕ್ಷ ನಂದೀಶ್ ರೆಡ್ಡಿಯನ್ನೂ ಕಳಿಸಿದ್ದೆ. ಆದರೆ, ಮಾತುಕತೆಗೆ ಯಾರೂ ಒಪ್ಪಿಲ್ಲ, ಬರಲೂ ಇಲ್ಲ, ಬೇಡಿಕೆಯನ್ನೂ ತಿಳಿಸಿಲ್ಲ. ಈ ಬಗ್ಗೆ ಸಿಎಂಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಚಿವರು ತಿಳಿಸಿದರು.

ಬೆಂಗಳೂರು : ನಮ್ಮ ಇಲಾಖೆ ನೌಕರರು ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಸಿಎಂ ಭೇಟಿಯಾಗಿ ಚರ್ಚೆ ಮಾಡಿದ ಬಳಿಕ ಮಾತನಾಡಿದ ಅವರು, ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲಿ. ನಾನು ಇತರೆ ಎಲ್ಲಾ ಕೆಲಸ-ಕಾರ್ಯಗಳನ್ನು ಬಿಟ್ಟು, ನಮ್ಮ ನೌಕರರ ಆಗಮನಕ್ಕಾಗಿ ಕಾಯುತ್ತಿದ್ದೇನೆ. ಆದರೆ, ಇದುವರೆಗೂ ಯಾರೂ ಮಾತುಕತೆಗೆ ಬಂದಿಲ್ಲ. ನೌಕರರ ಮುಷ್ಕರದಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮತ್ತೊಮ್ಮೆ ನಮ್ಮ ನೌಕರರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ಸಾರಿಗೆ ಸಚಿವ ಲಕ್ಷ್ಮಣ ಸವದಿ

ಓದಿ: ಕೊರೊನಾ ಸಂದರ್ಭದಲ್ಲಿ ನೀಡಿದ್ದ ಹೇಳಿಕೆಗೆ ಬದ್ಧರಾಗಿದ್ದೇವೆ: ಸಾರಿಗೆ ಸಚಿವ ಸವದಿ

ನಾನು ಪ್ರಮುಖ ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಮಾತುಕತೆ ನಡೆಸಿದ್ದೇನೆ. ಬಿಎಂಟಿಸಿ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಅಧ್ಯಕ್ಷ ನಂದೀಶ್ ರೆಡ್ಡಿಯನ್ನೂ ಕಳಿಸಿದ್ದೆ. ಆದರೆ, ಮಾತುಕತೆಗೆ ಯಾರೂ ಒಪ್ಪಿಲ್ಲ, ಬರಲೂ ಇಲ್ಲ, ಬೇಡಿಕೆಯನ್ನೂ ತಿಳಿಸಿಲ್ಲ. ಈ ಬಗ್ಗೆ ಸಿಎಂಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಚಿವರು ತಿಳಿಸಿದರು.

Last Updated : Dec 11, 2020, 8:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.