ETV Bharat / state

ಅತೃಪ್ತರ ನಿಗೂಢ ನಡೆ... ಮೈತ್ರಿ ನಾಯಕರಿಗೆ ವೈ ಎಸ್ ವಿ ದತ್ತಾ ಕೊಟ್ರು ಈ ಸಲಹೆ

ಮೈತ್ರಿ ನಾಯಕರು ದಿಟ್ಟ ನಿರ್ಧಾರ ಕೈಗೊಳ್ಳಬೇಕು. ನಾವು ಯಾರನ್ನೂ ಓಲೈಕೆ ಮಾಡಲ್ಲ ಅಂತ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಅವರ ಆತ್ಮಸಾಕ್ಷಿಗೆ ಬಿಟ್ಟು ಸುಮ್ಮನಾಗಬೇಕು. ಸುಮ್ಮನೆ ತೇಪೆ ಹಾಕುವ ಕೆಲಸ ಮಾಡಬಾರದು ಎಂದು ಮಾಜಿ ಶಾಸಕ ವೈಎಸ್​ವಿ ದತ್ತಾ ಸಲಹೆ ನೀಡಿದ್ದಾರೆ.

author img

By

Published : Jul 2, 2019, 4:55 PM IST

ವೈಎಸ್ ವಿ ದತ್ತಾ

ಬೆಂಗಳೂರು: ಅತೃಪ್ತರು ಇದ್ದರೆ ಅಂತಹವರನ್ನು ಅವರ ಪಾಡಿಗೆ ಬಿಟ್ಟು ಬಿಡಬೇಕು. ಮೈತ್ರಿ ನಾಯಕರು ಮನವೊಲಿಸುವ ಕೆಲಸ ಮಾಡಬಾರದು ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತಾ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, ರಾಜೀನಾಮೆ ನೀಡುವುದೊಂದೇ ಪರಿಹಾರವಲ್ಲ. ಕಾಂಗ್ರೆಸ್-ಜೆಡಿಎಸ್​ನಲ್ಲಿ ಯಾರೂ ಅತೃಪ್ತರಿಲ್ಲ. ಇಬ್ಬರೂ ಬೇರೆ ಬೇರೆ ವಿಚಾರಗಳಿಗೆ ರಾಜೀನಾಮೆ ಕೊಟ್ಟಿದ್ದಾರೆ ಎಂದರು.

ಸಿಎಂ ವಿದೇಶಕ್ಕೆ ಹೋದಾಗ ರಾಜೀನಾಮೆ ಕೊಡಿ, ಬಿಸಿ ಮುಟ್ಟಿಸಬಹುದು ಎಂದು ಯಾರಾದರೂ ಹೇಳಿರಬೇಕು. ಅದಕ್ಕೇ ರಾಜೀನಾಮೆ ಕೊಟ್ಟಿರಬಹುದು ಎಂದು ದತ್ತಾ ಅಭಿಪ್ರಾಯಪಟ್ಟರು.

ವೈಎಸ್ ವಿ ದತ್ತಾ

ಅತೃಪತ್ತರ ಚಟುವಟಿಕೆ ಬಗ್ಗೆ ಮೈತ್ರಿ ನಾಯಕರು ದಿಟ್ಟ ನಿರ್ಧಾರ ಕೈಗೊಳ್ಳಬೇಕು. ನಾವು ಯಾರನ್ನೂ ಓಲೈಕೆ ಮಾಡಲ್ಲ ಅಂತ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಅವರ ಆತ್ಮಸಾಕ್ಷಿಗೆ ಬಿಟ್ಟು ಸುಮ್ಮನಾಗಬೇಕು. ಸುಮ್ಮನೆ ತೇಪೆ ಹಾಕುವ ಕೆಲಸ ಮಾಡಬಾರದು ಎಂದು ಸಲಹೆ ನೀಡಿದರು.

ಮೈತ್ರಿ ಸರ್ಕಾರ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಇನ್ನೂ ನಾಲ್ಕು ವರ್ಷ ಇರಲಿದೆ‌. ಜೆಡಿಎಸ್​ ವರಿಷ್ಠ ದೇವೇಗೌಡರು ಮಧ್ಯಂತರ ಚುನಾವಣೆ ಬರುತ್ತದೆ ಅಂತ ಹೇಳಿಲ್ಲ. ಅವರು ಮಾತನಾಡಿರುವುದು ಮುಂಬರುವ ನಗರಸಭೆ, ಪುರಸಭೆ, ಜಿಲ್ಲಾ ಪಂಚಾಯತ್​ ಹಾಗೂ ಪಾಲಿಕೆ ಚುನಾವಣೆ ಬಗ್ಗೆ ಎಂದು ವೈಎಸ್​ವೈ ದತ್ತಾ ಸಮರ್ಥನೆ ನೀಡಿದ್ದಾರೆ.

ಬೆಂಗಳೂರು: ಅತೃಪ್ತರು ಇದ್ದರೆ ಅಂತಹವರನ್ನು ಅವರ ಪಾಡಿಗೆ ಬಿಟ್ಟು ಬಿಡಬೇಕು. ಮೈತ್ರಿ ನಾಯಕರು ಮನವೊಲಿಸುವ ಕೆಲಸ ಮಾಡಬಾರದು ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತಾ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, ರಾಜೀನಾಮೆ ನೀಡುವುದೊಂದೇ ಪರಿಹಾರವಲ್ಲ. ಕಾಂಗ್ರೆಸ್-ಜೆಡಿಎಸ್​ನಲ್ಲಿ ಯಾರೂ ಅತೃಪ್ತರಿಲ್ಲ. ಇಬ್ಬರೂ ಬೇರೆ ಬೇರೆ ವಿಚಾರಗಳಿಗೆ ರಾಜೀನಾಮೆ ಕೊಟ್ಟಿದ್ದಾರೆ ಎಂದರು.

ಸಿಎಂ ವಿದೇಶಕ್ಕೆ ಹೋದಾಗ ರಾಜೀನಾಮೆ ಕೊಡಿ, ಬಿಸಿ ಮುಟ್ಟಿಸಬಹುದು ಎಂದು ಯಾರಾದರೂ ಹೇಳಿರಬೇಕು. ಅದಕ್ಕೇ ರಾಜೀನಾಮೆ ಕೊಟ್ಟಿರಬಹುದು ಎಂದು ದತ್ತಾ ಅಭಿಪ್ರಾಯಪಟ್ಟರು.

ವೈಎಸ್ ವಿ ದತ್ತಾ

ಅತೃಪತ್ತರ ಚಟುವಟಿಕೆ ಬಗ್ಗೆ ಮೈತ್ರಿ ನಾಯಕರು ದಿಟ್ಟ ನಿರ್ಧಾರ ಕೈಗೊಳ್ಳಬೇಕು. ನಾವು ಯಾರನ್ನೂ ಓಲೈಕೆ ಮಾಡಲ್ಲ ಅಂತ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಅವರ ಆತ್ಮಸಾಕ್ಷಿಗೆ ಬಿಟ್ಟು ಸುಮ್ಮನಾಗಬೇಕು. ಸುಮ್ಮನೆ ತೇಪೆ ಹಾಕುವ ಕೆಲಸ ಮಾಡಬಾರದು ಎಂದು ಸಲಹೆ ನೀಡಿದರು.

ಮೈತ್ರಿ ಸರ್ಕಾರ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಇನ್ನೂ ನಾಲ್ಕು ವರ್ಷ ಇರಲಿದೆ‌. ಜೆಡಿಎಸ್​ ವರಿಷ್ಠ ದೇವೇಗೌಡರು ಮಧ್ಯಂತರ ಚುನಾವಣೆ ಬರುತ್ತದೆ ಅಂತ ಹೇಳಿಲ್ಲ. ಅವರು ಮಾತನಾಡಿರುವುದು ಮುಂಬರುವ ನಗರಸಭೆ, ಪುರಸಭೆ, ಜಿಲ್ಲಾ ಪಂಚಾಯತ್​ ಹಾಗೂ ಪಾಲಿಕೆ ಚುನಾವಣೆ ಬಗ್ಗೆ ಎಂದು ವೈಎಸ್​ವೈ ದತ್ತಾ ಸಮರ್ಥನೆ ನೀಡಿದ್ದಾರೆ.

Intro:Ysv dhattaBody:KN_BNG_0೨_YSVDHATTA_MLARESIGNATION_SCRIPT_7201951

ಅತೃಪ್ತರು ಇದ್ದರೆ ಅಂತಹವರನ್ನು ಅವರ ಪಾಡಿಗೆ ಬಿಟ್ಟು ಬಿಡಬೇಕು: ವೈಎಸ್ ವಿ ದತ್ತಾ

ಬೆಂಗಳೂರು: ಅತೃಪ್ತರು ಇದ್ದರೆ ಅಂತಹವರನ್ನು ಅವರ ಪಾಡಿಗೆ ಬಿಟ್ಟು ಬಿಡಬೇಕು. ಮೈತ್ರಿ ನಾಯಕರು ಮನವೊಲಿಸುವ ಕೆಲಸ ಮಾಡಬಾರದು ಎಂದು ಮಾಜಿ ಶಾಸಕ ವೈಎಸ್ ವಿ ದತ್ತಾ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ರಾಜೀನಾಮೆ ನೀಡುವುದೊಂದೇ ಪರಿಹಾರವಲ್ಲ. ಕಾಂಗ್ರೆಸ್ - ಜೆಡಿಎಸ್ ನಲ್ಲಿ ಯಾರೂ ಅತೃಪ್ತರಿಲ್ಲ. ಇಬ್ಬರೂ ಬೇರೆ ಬೇರೆ ವಿಚಾರಗಳಿಗೆ ರಾಜೀನಾಮೆ ಕೊಟ್ಟಿದ್ದಾರೆ. ಸಿಎಂ ಫಾರಿನ್ ಹೋದಾಗ ರಾಜೀನಾಮೆ ಕೊಡಿ, ಬಿಸಿ ಮುಟ್ಟಿಸಬಹುದು ಅಂತ ಯಾರಾದರೂ ಹೇಳಿರಬೇಕು. ಅದಕ್ಕೇ ರಾಜೀನಾಮೆ ಕೊಟ್ಟಿರಬಹುದು ಎಂದು ಸ್ಪಷ್ಟಪಡಿಸಿದರು.

ಮೈತ್ರಿ ನಾಯಕರು ದಿಟ್ಟ ನಿರ್ಧಾರ ಕೈಗೊಳ್ಳಬೇಕು. ನಾವು ಯಾರನ್ನೂ ಓಲೈಕೆ ಮಾಡಲ್ಲ ಅಂತ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಅವರ ಆತ್ಮಸಾಕ್ಷಿಗೆ ಬಿಟ್ಟು ಸುಮ್ಮನಾಗಬೇಕು. ಸುಮ್ಮನೆ ತೇಪೆ ಹಾಕುವ ಕೆಲಸ ಮಾಡಬಾರದು ಎಂದು ಸಲಹೆ ನೀಡಿದರು.

ಮೈತ್ರಿ ಸರ್ಕಾರ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಇನ್ನೂ ನಾಲ್ಕು ವರ್ಷ ಇರಲಿದೆ‌. ದೇವೇಗೌಡರು ಮಧ್ಯಂತರ ಚುನಾವಣೆ ಬರುತ್ತದೆ ಅಂತ ಹೇಳಿಲ್ಲ. ಅವರು ಮಾತನಾಡಿರುವುದು ಮುಂಬರುವ ನಗರ ಸಭೆ, ಪುರಸಭೆ, ಜಿಲ್ಲಾ ಪಂಚಾಯಿತಿ, ಪಾಲಿಕೆ ಚುನಾವಣೆ ಬಗ್ಗೆ ಎಂದು ಸಮರ್ಥಿಸಿದರು.Conclusion:Venkat
ETV Bharat Logo

Copyright © 2024 Ushodaya Enterprises Pvt. Ltd., All Rights Reserved.