ETV Bharat / state

ಎಪಿಎಂಸಿ ಕಾಯ್ದೆ ತಿದ್ದುಪಡಿ ಪ್ರಸ್ತಾವನೆ ಕೈಬಿಡಿ: ಸಿದ್ದರಾಮಯ್ಯ - ಎಪಿಎಂಸಿ ಕಾಯ್ದೆ ತಿದ್ದುಪಡಿ ಪ್ರಸ್ತಾವನೆ

ಎಪಿಎಂಸಿ ಕಾಯ್ದೆ ತಿದ್ದುಪಡಿಗಾಗಿ ಸರ್ಕಾರ ಚಿಂತನೆ ನಡೆಸಿದ್ದು, ಈ ನಿರ್ಧಾರವನ್ನು ಕೈಬಿಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇಂದು ದೂರವಾಣಿ ಮೂಲಕ ಸಿಎಂಗೆ ಇದರ ಆಗು ಹೋಗುಗಳ ಬಗ್ಗೆ ತಿಳಿಸಿದ್ದಾರೆ.

Siddaramaiah
ಸಿದ್ದರಾಮಯ್ಯ
author img

By

Published : May 13, 2020, 7:24 PM IST

ಬೆಂಗಳೂರು: ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವನೆ ಕೈಬಿಡುವಂತೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ, ಈ ಕಾಯ್ದೆಗೆ ತಿದ್ದುಪಡಿ ತಂದರೆ ಆಗಬಹುದಾದ ತೊಂದರೆಗಳ ಬಗ್ಗೆ ವಿವರಿಸಿದರು. ಈ ಕಾಯ್ದೆಗೆ ತಿದ್ದುಪಡಿ ತಂದು ಬಹುರಾಷ್ಟ್ರೀಯ ಕಂಪನಿಗಳು ಕೃಷಿ ಮಾರುಕಟ್ಟೆ ಪ್ರವೇಶ ಮಾಡಿದರೆ ಸರ್ಕಾರದ ಹಿಡಿತ ಇಲ್ಲದಂತೆ ಆಗುತ್ತದೆ. ಕೃಷಿ ಉತ್ಪನ್ನಗಳಿಗೆ ದರ ನಿಗದಿ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳಲು ಅವಕಾಶ ಇಲ್ಲದಂತೆ ಆಗುತ್ತದೆ ಎಂದಿದ್ದಾರೆ.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಆಗುವ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹೀಗಾಗಿ ನಿರ್ಧಾರ ಮರು ಪರಿಶೀಲಿಸಿ ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗಳಿಗೆ ಹೇಳಿ, ಸರ್ಕಾರ ರೈತರ ಪರವಾಗಿರಬೇಕು ಎಂದು ಒತ್ತಾಯಿಸಿದರು.

ಬೆಂಗಳೂರು: ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವನೆ ಕೈಬಿಡುವಂತೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ, ಈ ಕಾಯ್ದೆಗೆ ತಿದ್ದುಪಡಿ ತಂದರೆ ಆಗಬಹುದಾದ ತೊಂದರೆಗಳ ಬಗ್ಗೆ ವಿವರಿಸಿದರು. ಈ ಕಾಯ್ದೆಗೆ ತಿದ್ದುಪಡಿ ತಂದು ಬಹುರಾಷ್ಟ್ರೀಯ ಕಂಪನಿಗಳು ಕೃಷಿ ಮಾರುಕಟ್ಟೆ ಪ್ರವೇಶ ಮಾಡಿದರೆ ಸರ್ಕಾರದ ಹಿಡಿತ ಇಲ್ಲದಂತೆ ಆಗುತ್ತದೆ. ಕೃಷಿ ಉತ್ಪನ್ನಗಳಿಗೆ ದರ ನಿಗದಿ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳಲು ಅವಕಾಶ ಇಲ್ಲದಂತೆ ಆಗುತ್ತದೆ ಎಂದಿದ್ದಾರೆ.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಆಗುವ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹೀಗಾಗಿ ನಿರ್ಧಾರ ಮರು ಪರಿಶೀಲಿಸಿ ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗಳಿಗೆ ಹೇಳಿ, ಸರ್ಕಾರ ರೈತರ ಪರವಾಗಿರಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.