ETV Bharat / state

ಬೆಂಗಳೂರಿನ 12 ಆರ್​​ಟಿಒ ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ

author img

By ETV Bharat Karnataka Team

Published : Sep 13, 2023, 9:04 PM IST

Lokayukta Raid: ಬೆಂಗಳೂರಿನ 12 ಆರ್​​ಟಿಒ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಕೈಗೊಂಡಿದ್ದಾರೆ.

lokayukta-raid-rto-offices-in-bengaluru
ಬೆಂಗಳೂರಿನ 12 ಆರ್​​ಟಿಒ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಬೆಂಗಳೂರು: ವ್ಯಾಪಕ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರ ನೇತೃತ್ವದ ತಂಡ ನಗರದಲ್ಲಿನ 12 ಪ್ರಾದೇಶಿಕ ಸಾರಿಗೆ ಕಚೇರಿಗಳ (ಆರ್​ಟಿಓ) ಮೇಲೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಆರ್​​ಟಿಓ ಕಚೇರಿಗಳಲ್ಲಿ ನಿರಂತರ ಅವ್ಯವಹಾರ ಹಾಗೂ ಅಕ್ರಮ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆ, ಗೌಪ್ಯ ಮಾಹಿತಿ ಆಧರಿಸಿ ಬುಧವಾರ ಖುದ್ದು ಲೋಕಾಯುಕ್ತ ನ್ಯಾಯಮೂರ್ತಿಗಳು ಆರ್​​ಟಿಓ ಕಚೇರಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಜಯನಗರ ಹಾಗೂ ರಾಜಾಜಿನಗರದ ಆರ್​​ಟಿಓ ಕಚೇರಿಗಳಿಗೆ ಲೋಕಾಯುಕ್ತರು ತೆರಳಿ ತಪಾಸಣೆ‌ ನಡೆಸಿದರು.‌ ಉಪ ಲೋಕಾಯುಕ್ತ ಕೆ ಎನ್‌ ಫಣೀಂದ್ರ ಅವರು ಯಶವಂತಪುರ ಆರ್​​ಟಿಓ ಕಚೇರಿ ಮೇಲೆ ದಾಳಿ‌ ನಡೆಸಿ ಪರಿಶೀಲನೆ ನಡೆಸಿದರು.‌ ಜೊತೆಗೆ ಯಲಹಂಕ, ಇಂದಿರಾನಗರ, ಕೆ ಆರ್ ಪುರ, ಹೆಚ್​ಎಸ್​ಆರ್ ಲೇಔಟ್ ಸೇರಿ ನಗರದ 12 ಪ್ರಾದೇಶಿಕ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.

ಪರಿಶೀಲನೆ ವೇಳೆ‌, ಅಧಿಕಾರಿಗಳು ಹಾಗೂ ಸಿಬ್ಬಂದಿ ವಾಹನದ ದಾಖಲಾತಿ ನೀಡದೇ ವಿಳಂಬ ಧೋರಣೆ, ಹೊಸ ನೋಂದಣಿ ಮಾಡಿಸದೇ ಬಾಕಿ ಉಳಿಸಿಕೊಂಡಿರುವುದು, ಸ್ಥಳೀಯ ಏಜೆಂಟರೊಂದಿಗೆ ಸಿಬ್ಬಂದಿ ಭಾಗಿಯಾಗಿ ಅವ್ಯವಹಾರದಲ್ಲಿ ಶಾಮೀಲು ಸೇರಿದಂತೆ ವಿವಿಧ ರೀತಿಯ ಅಕ್ರಮ ಎಸಗಿರುತ್ತಿರುವುದು ಕಂಡು ಬಂದಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇವನಹಳ್ಳಿಯಲ್ಲೂ ಲೋಕಾಯುಕ್ತ ದಾಳಿ: ಸಾರ್ವಜನಿಕರ ದೂರಿನ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದೇವನಹಳ್ಳಿ ಆರ್​ಟಿಓ ಕಚೇರಿ ಮೇಲೆಯೂ ಇಂದು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಪವನ್ ನಜೀರ್ ನೇತೃತ್ವದಲ್ಲಿ ಓರ್ವ ಡಿವೈಎಸ್​ಪಿ ಮತ್ತು ಇಬ್ಬರು ಇನ್ಸ್​ಪೆಕ್ಟರ್​ಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸತತ 2 ಗಂಟೆಗೂ ಅಧಿಕ ಕಾಲ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆರ್​​ಟಿಒ ಹಾಗೂ ಇತರ ಅಧಿಕಾರಿಗಳನ್ನು ಕೂರಿಸಿಕೊಂಡು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ತನಿಖೆ ವಿಳಂಬಕ್ಕೆ.. ಲೋಕಾಯುಕ್ತ ಸಂಸ್ಥೆಯನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಲು ಹೈಕೋರ್ಟ್ ಸೂಚನೆ

ಬೆಂಗಳೂರು: ವ್ಯಾಪಕ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರ ನೇತೃತ್ವದ ತಂಡ ನಗರದಲ್ಲಿನ 12 ಪ್ರಾದೇಶಿಕ ಸಾರಿಗೆ ಕಚೇರಿಗಳ (ಆರ್​ಟಿಓ) ಮೇಲೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಆರ್​​ಟಿಓ ಕಚೇರಿಗಳಲ್ಲಿ ನಿರಂತರ ಅವ್ಯವಹಾರ ಹಾಗೂ ಅಕ್ರಮ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆ, ಗೌಪ್ಯ ಮಾಹಿತಿ ಆಧರಿಸಿ ಬುಧವಾರ ಖುದ್ದು ಲೋಕಾಯುಕ್ತ ನ್ಯಾಯಮೂರ್ತಿಗಳು ಆರ್​​ಟಿಓ ಕಚೇರಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಜಯನಗರ ಹಾಗೂ ರಾಜಾಜಿನಗರದ ಆರ್​​ಟಿಓ ಕಚೇರಿಗಳಿಗೆ ಲೋಕಾಯುಕ್ತರು ತೆರಳಿ ತಪಾಸಣೆ‌ ನಡೆಸಿದರು.‌ ಉಪ ಲೋಕಾಯುಕ್ತ ಕೆ ಎನ್‌ ಫಣೀಂದ್ರ ಅವರು ಯಶವಂತಪುರ ಆರ್​​ಟಿಓ ಕಚೇರಿ ಮೇಲೆ ದಾಳಿ‌ ನಡೆಸಿ ಪರಿಶೀಲನೆ ನಡೆಸಿದರು.‌ ಜೊತೆಗೆ ಯಲಹಂಕ, ಇಂದಿರಾನಗರ, ಕೆ ಆರ್ ಪುರ, ಹೆಚ್​ಎಸ್​ಆರ್ ಲೇಔಟ್ ಸೇರಿ ನಗರದ 12 ಪ್ರಾದೇಶಿಕ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.

ಪರಿಶೀಲನೆ ವೇಳೆ‌, ಅಧಿಕಾರಿಗಳು ಹಾಗೂ ಸಿಬ್ಬಂದಿ ವಾಹನದ ದಾಖಲಾತಿ ನೀಡದೇ ವಿಳಂಬ ಧೋರಣೆ, ಹೊಸ ನೋಂದಣಿ ಮಾಡಿಸದೇ ಬಾಕಿ ಉಳಿಸಿಕೊಂಡಿರುವುದು, ಸ್ಥಳೀಯ ಏಜೆಂಟರೊಂದಿಗೆ ಸಿಬ್ಬಂದಿ ಭಾಗಿಯಾಗಿ ಅವ್ಯವಹಾರದಲ್ಲಿ ಶಾಮೀಲು ಸೇರಿದಂತೆ ವಿವಿಧ ರೀತಿಯ ಅಕ್ರಮ ಎಸಗಿರುತ್ತಿರುವುದು ಕಂಡು ಬಂದಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇವನಹಳ್ಳಿಯಲ್ಲೂ ಲೋಕಾಯುಕ್ತ ದಾಳಿ: ಸಾರ್ವಜನಿಕರ ದೂರಿನ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದೇವನಹಳ್ಳಿ ಆರ್​ಟಿಓ ಕಚೇರಿ ಮೇಲೆಯೂ ಇಂದು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಪವನ್ ನಜೀರ್ ನೇತೃತ್ವದಲ್ಲಿ ಓರ್ವ ಡಿವೈಎಸ್​ಪಿ ಮತ್ತು ಇಬ್ಬರು ಇನ್ಸ್​ಪೆಕ್ಟರ್​ಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸತತ 2 ಗಂಟೆಗೂ ಅಧಿಕ ಕಾಲ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆರ್​​ಟಿಒ ಹಾಗೂ ಇತರ ಅಧಿಕಾರಿಗಳನ್ನು ಕೂರಿಸಿಕೊಂಡು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ತನಿಖೆ ವಿಳಂಬಕ್ಕೆ.. ಲೋಕಾಯುಕ್ತ ಸಂಸ್ಥೆಯನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಲು ಹೈಕೋರ್ಟ್ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.