ETV Bharat / state

ಲವ್ ಫ್ಲಾಪ್ ಆಯ್ತು ಅಂತಾ ಕೈ ರಕ್ತ ಮಾಡಿಕೊಂಡವರು.. 4 ವರ್ಷದಲ್ಲಿ 215 ಕೊಲೆಗಳು ಪ್ರೀತಿ ವಿಚಾರಕ್ಕೆ ಆಗಿರೋದು!

author img

By

Published : Jan 8, 2023, 9:57 PM IST

ಪ್ರೀತಿ-ಪ್ರೇಮ ವಿಚಾರ- ನಾಲ್ಕು ವರ್ಷದಲ್ಲಿ 215 ಕೊಲೆ ಪ್ರಕರಣ ದಾಖಲು- ಯುವ ಜನಾಂಗವು ಅರಿವಿಲ್ಲದೆ ಅಪರಾಧಗಳಲ್ಲಿ ಭಾಗಿಯಾದವರು

Etv Bharat
4 ವರ್ಷದಲ್ಲಿ 215 ಕೊಲೆಗಳು ಪ್ರೀತಿ ವಿಚಾರಕ್ಕೆ ಆಗಿರೋದು

ಬೆಂಗಳೂರು: ಪ್ರೀತಿ ಮಾಯೆ ಹುಷಾರು ಎಂಬ ಮಾತಿದೆ. ಪ್ರೀತಿ ಸಿಕ್ಕಿಲ್ಲ ಎಂಬ ಕಾರಣಕ್ಕಾಗಿ ಜನರು ಅಪರಾಧ ಕೃತ್ಯವೆಸಗುವುದಕ್ಕೂ ಹಿಂಜರಿಯುವುದಿಲ್ಲ. ಪ್ರೇಮ ವೈಫಲ್ಯ ಅಥವಾ ತನ್ನ ಪ್ರೀತಿ ಪರರ ಪಾಲಾಗುತ್ತಿದೆ ಎಂಬ ಹೊಟ್ಟೆ ಕಿಚ್ಚಿಗೆ ಅಕ್ರೋಶಗೊಂಡು ಕೊಲೆ ಪ್ರಕರಣಗಳಲ್ಲಿ ಭಾಗಿಯಾವವರ ಸಂಖ್ಯೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಳೆದ ನಾಲ್ಕು ವರ್ಷಗಳಲ್ಲಿ ನಡೆದ‌ ಹತ್ಯೆಗಳ ಪೈಕಿ 215 ಕೊಲೆಗಳು ಲವ್ ಗಾಗಿಯೇ ನಡೆದಿವೆ ಎಂಬುದು ಆತಂಕಕಾರಿ ಸಂಗತಿಯಾಗಿದೆ.

ಭವಿಷ್ಯದ ಅರಿವಿಲ್ಲದೆ ಅಪರಾಧ ಕೃತ್ಯ.. 2018 ರಿಂದ 2022 ರವರೆಗೆ ರಾಜ್ಯದಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿ 215 ಮರ್ಡರ್ ಕೇಸ್​ಗಳು ಪ್ರೀತಿ-ಪ್ರೇಮದ ವಿಚಾರಕ್ಕಾಗಿಯೇ ನಡೆದಿವೆ. ವರ್ಷಕ್ಕೆ ಸರಾಸರಿ 43 ಕೇಸ್​ಗಳು‌ ಇದೇ ಕಾರಣಕ್ಕಾಗಿ ನಡೆದಿವೆ. 2018ರಲ್ಲಿ 60 ಕೊಲೆಗಳು ಪ್ರೀತಿಗಾಗಿಯೇ ನಡೆದಿವೆ. ಇನ್ನು, ಕೋವಿಡ್ ಸೋಂಕು ಕಾಣಿಸಿಕೊಂಡ 2020ರಲ್ಲಿ 60 ಮರ್ಡರ್ ಕೇಸ್​ಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ಅಂಕಿ ಅಂಶಗಳಿಂದಲೇ ತಿಳಿದುಬಂದಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರೀತಿಯ ಬಲೆಗೆ ಬೀಳುವ ಯುವ ಜನಾಂಗ ತಮಗೆ ಗೊತ್ತಾಗಿಯೋ-ಗೊತ್ತಿಲ್ಲದಂತೆ‌ಯೋ ಅಪರಾಧ‌ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಒಂದು ಕ್ಷಣ ಆಲೋಚಿಸದೆ ಲವ್​ಗಾಗಿ ದುಷ್ಟ ಮಾರ್ಗ ಹಿಡಿದು ತಮ್ಮ‌‌ ಸುಂದರವಾದ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ.

ದ್ವೇಷ, ಕೋಪದ ಕೈಗೆ ಬುದ್ಧಿ ಕೊಡುವ ಯುವಜನಾಂಗ.. ಪ್ರೀತಿಸುತ್ತಿದ್ದ ಹುಡುಗಿ ಬೇರೆಯವನೊಂದಿಗೆ ಸುತ್ತಾಡುತ್ತಿದ್ದಾಳೆ ಎಂಬುದಕ್ಕೋ, ತನ್ನನ್ನು ತಿರಸ್ಕರಿಸಿದಳು ಎಂಬ ಕಾರಣಕ್ಕೋ ಅಥವಾ ತಮ್ಮ‌ ಪ್ರೀತಿಗೆ ಅಡ್ಡಿಬಂದವರನ್ನು ಪ್ರಾಣ ತೆಗೆದಾದರೂ ಸರಿ, ನಾವು ಒಂದಾಗೋಣ ಎಂಬ ಮನಸ್ಥಿತಿಯಿಂದ ಹೇಯ ಕೃತ್ಯಕ್ಕೆ ಹಿಂದೇಟು ಹಾಕುತ್ತಿಲ್ಲ. ಹೆಚ್ಚಾಗಿ ಪ್ರೀತಿ ನಿರಾಕರಿಸಿದ ಪ್ರಿಯತಮೆ ಮೇಲೆ ಕೋಪದ ಕೈಗೆ ಬುದ್ಧಿ ಕೊಟ್ಟಿದ್ದಾರೆ. ಕಳೆದ ವರ್ಷ ಏಪ್ರಿಲ್ 28ರಂದು ತನ್ನ ಪ್ರೀತಿ ಧಿಕ್ಕರಿಸಿದ್ದ ಯುವತಿ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದ ನಾಗರಾಜ್ ಎಂಬಾತನನ್ನು ಬಂಧಿಸಲಾಗಿತ್ತು. ಅದೃಷ್ಟವಶಾತ್ ಸಂತ್ರಸ್ತೆ ಚಿಕಿತ್ಸೆ ಪಡೆದ ಬಳಿಕ ಚೇತರಿಸಿಕೊಳ್ಳುತ್ತಿದ್ದಾಳೆ.

ಇದೇ ರೀತಿ ಕಳೆದ ವಾರ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಟೆಕ್​ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯು ತನ್ನ ಪ್ರೇಮ ನಿವೇದನೆಯನ್ನು ಒಪ್ಪಿಲ್ಲ ಎಂಬ ಕಾರಣಕ್ಕೆ ಅಕ್ರೋಶ ವ್ಯಕ್ತಪಡಿಸಿ ಕಾಲೇಜು ಅಂಗಳದಲ್ಲಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದ. ಬಳಿಕ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಓದುವ ವಯಸ್ಸಿನಲ್ಲಿ ಪ್ರೀತಿ-ಪ್ರೇಮದ ಗುಂಗು.. 'ಓದುವ ವಯಸ್ಸಿನಲ್ಲಿ ಪ್ರೀತಿಯ ಪಾಶಕ್ಕೆ ಬಿದ್ದು ಲವ್ ಎಂಬ ಸೆಳೆತಕ್ಕೆ ಒಳಗಾಗುವ ಯುವಕರು ಯಾವುದೇ‌ ಹೇಯ ಕೃತ್ಯವೆಸಗುವುದಕ್ಕೂ ಹಿಂಜರಿಯುವುದಿಲ್ಲ. ಹೀಗಾಗಿ ಪೋಷಕರು ತಮ್ಮ ಮಕ್ಕಳಿಗೆ ತಪ್ಪು-ಸರಿ ಬಗ್ಗೆ ಬುದ್ಧಿ ಹೇಳಬೇಕಿದೆ' ಎಂದು ಮಹಿಳಾ ಹಾಗೂ ಮಕ್ಕಳ ಹಕ್ಕು ಹೋರಾಟಗಾರ್ತಿ ನಂದಿನಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪತಿಯ ಜತೆ ಸೇರಿ‌ ಪ್ರಿಯಕರನ ಹತ್ಯೆ: ಮೂವರು ಆರೋಪಿಗಳ ಬಂಧನ

ಬೆಂಗಳೂರು: ಪ್ರೀತಿ ಮಾಯೆ ಹುಷಾರು ಎಂಬ ಮಾತಿದೆ. ಪ್ರೀತಿ ಸಿಕ್ಕಿಲ್ಲ ಎಂಬ ಕಾರಣಕ್ಕಾಗಿ ಜನರು ಅಪರಾಧ ಕೃತ್ಯವೆಸಗುವುದಕ್ಕೂ ಹಿಂಜರಿಯುವುದಿಲ್ಲ. ಪ್ರೇಮ ವೈಫಲ್ಯ ಅಥವಾ ತನ್ನ ಪ್ರೀತಿ ಪರರ ಪಾಲಾಗುತ್ತಿದೆ ಎಂಬ ಹೊಟ್ಟೆ ಕಿಚ್ಚಿಗೆ ಅಕ್ರೋಶಗೊಂಡು ಕೊಲೆ ಪ್ರಕರಣಗಳಲ್ಲಿ ಭಾಗಿಯಾವವರ ಸಂಖ್ಯೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಳೆದ ನಾಲ್ಕು ವರ್ಷಗಳಲ್ಲಿ ನಡೆದ‌ ಹತ್ಯೆಗಳ ಪೈಕಿ 215 ಕೊಲೆಗಳು ಲವ್ ಗಾಗಿಯೇ ನಡೆದಿವೆ ಎಂಬುದು ಆತಂಕಕಾರಿ ಸಂಗತಿಯಾಗಿದೆ.

ಭವಿಷ್ಯದ ಅರಿವಿಲ್ಲದೆ ಅಪರಾಧ ಕೃತ್ಯ.. 2018 ರಿಂದ 2022 ರವರೆಗೆ ರಾಜ್ಯದಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿ 215 ಮರ್ಡರ್ ಕೇಸ್​ಗಳು ಪ್ರೀತಿ-ಪ್ರೇಮದ ವಿಚಾರಕ್ಕಾಗಿಯೇ ನಡೆದಿವೆ. ವರ್ಷಕ್ಕೆ ಸರಾಸರಿ 43 ಕೇಸ್​ಗಳು‌ ಇದೇ ಕಾರಣಕ್ಕಾಗಿ ನಡೆದಿವೆ. 2018ರಲ್ಲಿ 60 ಕೊಲೆಗಳು ಪ್ರೀತಿಗಾಗಿಯೇ ನಡೆದಿವೆ. ಇನ್ನು, ಕೋವಿಡ್ ಸೋಂಕು ಕಾಣಿಸಿಕೊಂಡ 2020ರಲ್ಲಿ 60 ಮರ್ಡರ್ ಕೇಸ್​ಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ಅಂಕಿ ಅಂಶಗಳಿಂದಲೇ ತಿಳಿದುಬಂದಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರೀತಿಯ ಬಲೆಗೆ ಬೀಳುವ ಯುವ ಜನಾಂಗ ತಮಗೆ ಗೊತ್ತಾಗಿಯೋ-ಗೊತ್ತಿಲ್ಲದಂತೆ‌ಯೋ ಅಪರಾಧ‌ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಒಂದು ಕ್ಷಣ ಆಲೋಚಿಸದೆ ಲವ್​ಗಾಗಿ ದುಷ್ಟ ಮಾರ್ಗ ಹಿಡಿದು ತಮ್ಮ‌‌ ಸುಂದರವಾದ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ.

ದ್ವೇಷ, ಕೋಪದ ಕೈಗೆ ಬುದ್ಧಿ ಕೊಡುವ ಯುವಜನಾಂಗ.. ಪ್ರೀತಿಸುತ್ತಿದ್ದ ಹುಡುಗಿ ಬೇರೆಯವನೊಂದಿಗೆ ಸುತ್ತಾಡುತ್ತಿದ್ದಾಳೆ ಎಂಬುದಕ್ಕೋ, ತನ್ನನ್ನು ತಿರಸ್ಕರಿಸಿದಳು ಎಂಬ ಕಾರಣಕ್ಕೋ ಅಥವಾ ತಮ್ಮ‌ ಪ್ರೀತಿಗೆ ಅಡ್ಡಿಬಂದವರನ್ನು ಪ್ರಾಣ ತೆಗೆದಾದರೂ ಸರಿ, ನಾವು ಒಂದಾಗೋಣ ಎಂಬ ಮನಸ್ಥಿತಿಯಿಂದ ಹೇಯ ಕೃತ್ಯಕ್ಕೆ ಹಿಂದೇಟು ಹಾಕುತ್ತಿಲ್ಲ. ಹೆಚ್ಚಾಗಿ ಪ್ರೀತಿ ನಿರಾಕರಿಸಿದ ಪ್ರಿಯತಮೆ ಮೇಲೆ ಕೋಪದ ಕೈಗೆ ಬುದ್ಧಿ ಕೊಟ್ಟಿದ್ದಾರೆ. ಕಳೆದ ವರ್ಷ ಏಪ್ರಿಲ್ 28ರಂದು ತನ್ನ ಪ್ರೀತಿ ಧಿಕ್ಕರಿಸಿದ್ದ ಯುವತಿ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದ ನಾಗರಾಜ್ ಎಂಬಾತನನ್ನು ಬಂಧಿಸಲಾಗಿತ್ತು. ಅದೃಷ್ಟವಶಾತ್ ಸಂತ್ರಸ್ತೆ ಚಿಕಿತ್ಸೆ ಪಡೆದ ಬಳಿಕ ಚೇತರಿಸಿಕೊಳ್ಳುತ್ತಿದ್ದಾಳೆ.

ಇದೇ ರೀತಿ ಕಳೆದ ವಾರ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಟೆಕ್​ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯು ತನ್ನ ಪ್ರೇಮ ನಿವೇದನೆಯನ್ನು ಒಪ್ಪಿಲ್ಲ ಎಂಬ ಕಾರಣಕ್ಕೆ ಅಕ್ರೋಶ ವ್ಯಕ್ತಪಡಿಸಿ ಕಾಲೇಜು ಅಂಗಳದಲ್ಲಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದ. ಬಳಿಕ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಓದುವ ವಯಸ್ಸಿನಲ್ಲಿ ಪ್ರೀತಿ-ಪ್ರೇಮದ ಗುಂಗು.. 'ಓದುವ ವಯಸ್ಸಿನಲ್ಲಿ ಪ್ರೀತಿಯ ಪಾಶಕ್ಕೆ ಬಿದ್ದು ಲವ್ ಎಂಬ ಸೆಳೆತಕ್ಕೆ ಒಳಗಾಗುವ ಯುವಕರು ಯಾವುದೇ‌ ಹೇಯ ಕೃತ್ಯವೆಸಗುವುದಕ್ಕೂ ಹಿಂಜರಿಯುವುದಿಲ್ಲ. ಹೀಗಾಗಿ ಪೋಷಕರು ತಮ್ಮ ಮಕ್ಕಳಿಗೆ ತಪ್ಪು-ಸರಿ ಬಗ್ಗೆ ಬುದ್ಧಿ ಹೇಳಬೇಕಿದೆ' ಎಂದು ಮಹಿಳಾ ಹಾಗೂ ಮಕ್ಕಳ ಹಕ್ಕು ಹೋರಾಟಗಾರ್ತಿ ನಂದಿನಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪತಿಯ ಜತೆ ಸೇರಿ‌ ಪ್ರಿಯಕರನ ಹತ್ಯೆ: ಮೂವರು ಆರೋಪಿಗಳ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.