ETV Bharat / state

ಕುರುಬ ಸಮುದಾಯಕ್ಕೆ ಕ್ಷಮೆಯಾಚಿಸದ ಮಾಧುಸ್ವಾಮಿ: ಮಾಧ್ಯಮದವರ ವಿರುದ್ಧ ಈಶ್ವರಪ್ಪ ಕಿಡಿ! - ಬೆಂಗಳೂರು ಸಚಿವ ಜೆ.ಸಿ‌.ಮಾಧುಸ್ವಾಮಿ

ಸಚಿವ ಜೆ.ಸಿ‌.ಮಾಧುಸ್ವಾಮಿ ಕುರುಬ ಸಮುದಾಯಕ್ಕೆ ಕ್ಷಮೆಯಾಚಿಸದೇ ಸಿಎಂ ಯಡಿಯೂರಪ್ಪ ಕ್ಷಮೆ ಯಾಚಿಸುವ ಸನ್ನಿವೇಶ ನಿರ್ಮಾಣ ಆಗಿದ್ದರೆ, ನಾನು ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

ಸಚಿವರು
author img

By

Published : Nov 20, 2019, 9:51 PM IST

ಬೆಂಗಳೂರು: ಕೊನೆಗೂ ಸಚಿವ ಜೆ.ಸಿ‌.ಮಾಧುಸ್ವಾಮಿ ಕುರುಬ ಸಮುದಾಯಕ್ಕೆ ಕ್ಷಮೆಯಾಚಿಸಲು ಮುಂದಾಗಿಲ್ಲ. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಸಿಎಂ ಯಡಿಯೂರಪ್ಪ ಕ್ಷಮೆ ಯಾಚಿಸುವ ಸನ್ನಿವೇಶ ನಿರ್ಮಾಣ ಆಗಿದ್ದರೆ, ನಾನು ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಅವರು ತಿಳಿಸಿದರು.

ಸಚಿವ ಜೆ.ಸಿ‌.ಮಾಧುಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

ಹುಳಿಯಾರ್ ಕುರುಬ ಸಮುದಾಯದ ಶಾಖಾ ಮಠದ ಸ್ವಾಮೀಜಿ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಒರಟಾಗಿ ವರ್ತಿಸಿರುವ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ಸಿಎಂ ಇಂದು ಕುರುಬ ಸಮುದಾಯಕ್ಕೆ ಕ್ಷಮೆ‌ಯಾಚಿಸಿದ್ದರು. ಈ ಹಿನ್ನೆಲೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ ಮುಖ್ಯಮಂತ್ರಿಗಳಿಗೆ ಕ್ಷಮೆ ಕೇಳುವಷ್ಟು ನೋವಾಗಿದ್ದರೆ ವಿಷಾದಿಸುತ್ತೇನೆ ಎಂದಷ್ಟೇ ತಿಳಿಸಿದರು. ಆದರೆ ಕೊನೆಗೂ ಮಾಧುಸ್ವಾಮಿ ಕ್ಷಮೆ ಕೇಳಲು ಮುಂದಾಗಿಲ್ಲ. ಸಿಎಂ ಕ್ಷಮೆಯಾಚಿಸಿರುವ ಸ್ಥಿತಿ ನಿರ್ಮಾಣವಾಗಿದ್ದಕ್ಕೆ ಕೇವಲ ವಿಷಾದ ವ್ಯಕ್ತಪಡಿಸಿದರಷ್ಟೇ ಹೊರತು ಕ್ಷಮೆಯಾಚಿಸಿಲ್ಲ.

ಇನ್ನು ಸಚಿವ ಮಾಧುಸ್ವಾಮಿ ಬಗ್ಗೆ ಸಮರ್ಥನೆ ಮಾಡಿಕೊಳ್ಳಲು ಹೋಗಿ ಮಾಧ್ಯಮಗಳನ್ನೇ ಸಚಿವ ಕೆ.ಎಸ್.ಈಶ್ವರಪ್ಪ ವ್ಯಭಿಚಾರಕ್ಕೆ ಹೋಲಿಸಿದರು. ವಿಧಾನಸೌಧದಲ್ಲಿ ಮಾತನಾಡುತ್ತಾ, ಮಾಧ್ಯಮಗಳೇ ಈ ವಿಚಾರವಾಗಿ ರಾಜಕಾರಣ ಮಾಡುತ್ತಿವೆ. ಮಾಧುಸ್ವಾಮಿ ತುಂಬಾ ಸ್ಪಷ್ಟವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ನೀವು ಮಾಡಿದ ವ್ಯಭಿಚಾರಕ್ಕೆ ಇಷ್ಟೆಲ್ಲ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರು: ಕೊನೆಗೂ ಸಚಿವ ಜೆ.ಸಿ‌.ಮಾಧುಸ್ವಾಮಿ ಕುರುಬ ಸಮುದಾಯಕ್ಕೆ ಕ್ಷಮೆಯಾಚಿಸಲು ಮುಂದಾಗಿಲ್ಲ. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಸಿಎಂ ಯಡಿಯೂರಪ್ಪ ಕ್ಷಮೆ ಯಾಚಿಸುವ ಸನ್ನಿವೇಶ ನಿರ್ಮಾಣ ಆಗಿದ್ದರೆ, ನಾನು ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಅವರು ತಿಳಿಸಿದರು.

ಸಚಿವ ಜೆ.ಸಿ‌.ಮಾಧುಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

ಹುಳಿಯಾರ್ ಕುರುಬ ಸಮುದಾಯದ ಶಾಖಾ ಮಠದ ಸ್ವಾಮೀಜಿ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಒರಟಾಗಿ ವರ್ತಿಸಿರುವ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ಸಿಎಂ ಇಂದು ಕುರುಬ ಸಮುದಾಯಕ್ಕೆ ಕ್ಷಮೆ‌ಯಾಚಿಸಿದ್ದರು. ಈ ಹಿನ್ನೆಲೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ ಮುಖ್ಯಮಂತ್ರಿಗಳಿಗೆ ಕ್ಷಮೆ ಕೇಳುವಷ್ಟು ನೋವಾಗಿದ್ದರೆ ವಿಷಾದಿಸುತ್ತೇನೆ ಎಂದಷ್ಟೇ ತಿಳಿಸಿದರು. ಆದರೆ ಕೊನೆಗೂ ಮಾಧುಸ್ವಾಮಿ ಕ್ಷಮೆ ಕೇಳಲು ಮುಂದಾಗಿಲ್ಲ. ಸಿಎಂ ಕ್ಷಮೆಯಾಚಿಸಿರುವ ಸ್ಥಿತಿ ನಿರ್ಮಾಣವಾಗಿದ್ದಕ್ಕೆ ಕೇವಲ ವಿಷಾದ ವ್ಯಕ್ತಪಡಿಸಿದರಷ್ಟೇ ಹೊರತು ಕ್ಷಮೆಯಾಚಿಸಿಲ್ಲ.

ಇನ್ನು ಸಚಿವ ಮಾಧುಸ್ವಾಮಿ ಬಗ್ಗೆ ಸಮರ್ಥನೆ ಮಾಡಿಕೊಳ್ಳಲು ಹೋಗಿ ಮಾಧ್ಯಮಗಳನ್ನೇ ಸಚಿವ ಕೆ.ಎಸ್.ಈಶ್ವರಪ್ಪ ವ್ಯಭಿಚಾರಕ್ಕೆ ಹೋಲಿಸಿದರು. ವಿಧಾನಸೌಧದಲ್ಲಿ ಮಾತನಾಡುತ್ತಾ, ಮಾಧ್ಯಮಗಳೇ ಈ ವಿಚಾರವಾಗಿ ರಾಜಕಾರಣ ಮಾಡುತ್ತಿವೆ. ಮಾಧುಸ್ವಾಮಿ ತುಂಬಾ ಸ್ಪಷ್ಟವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ನೀವು ಮಾಡಿದ ವ್ಯಭಿಚಾರಕ್ಕೆ ಇಷ್ಟೆಲ್ಲ ಆಗಿದೆ ಎಂದು ವಾಗ್ದಾಳಿ ನಡೆಸಿದರು.

Intro:Body:KN_BNG_04_MADHUSWAMYESHWRAPPA_BYTE_SCRIPT_7201951

ಕುರುಬ ಸಮುದಾಯದ ಕ್ಷಮೆಯಾಚಿಸದ ಮಾಧುಸ್ವಾಮಿ; ಮಾಧ್ಯಮದವರ ಮೇಲೆ ಈಶ್ವರಪ್ಪ ಕಿಡಿ!

ಬೆಂಗಳೂರು: ಕೊನೆಗೂ ಸಚಿವ ಜೆ.ಸಿ‌.ಮಾಧುಸ್ವಾಮಿ ಕುರುಬ ಸಮುದಾಯದ ಕ್ಷಮೆಯಾಚಿಸಲು ಮುಂದಾಗಿಲ್ಲ.

ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಸಿಎಂ ಯಡಿಯೂರಪ್ಪ ಕ್ಷಮೆ ಯಾಚಿಸುವ ನಿರ್ಮಾಣ ಆಗಿದ್ದರೆ, ನಾನು ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದರು.

ಹುಳಿಯಾರ್ ಕುರುಬ ಸಮುದಾಯದ ಶಾಖಾ ಮಠದ ಸ್ವಾಮೀಜಿ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಒರಟಾಗಿ ವರ್ತಿಸಿರುವ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ಸಿಎಂ ಇಂದು ಕುರುಬ ಸಮುದಾಯದ ಕ್ಷಮೆ‌ಯಾಚಿಸಿದ್ದರು. ಈ ಹಿನ್ನೆಲೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ ಮುಖ್ಯಮಂತ್ರಿಗಳಿಗೆ ಕ್ಷಮೆ ಕೇಳುವಷ್ಟು ನೋವಾಗಿದ್ದರೆ ವಿಷಾದಿಸುತ್ತೇನೆ ಎಂದಷ್ಟೇ ತಿಳಿಸಿದರು.

ಆದರೆ ಕೊನೆಗೂ ಮಾಧುಸ್ವಾಮಿ ಕ್ಷಮೆ ಕೇಳಲು ಮುಂದಾಗಿಲ್ಲ. ಸಿಎಂ ಕ್ಷಮೆಯಾಚಿಸಿರುವ ಸ್ಥಿತಿ ನಿರ್ಮಾಣವಾಗಿದ್ದಕ್ಕೆ ಕೇವಲ ವಿಷಾದ ವ್ಯಕ್ತಪಡಿಸಿದರಷ್ಟೇ ಹೊರತು ಕ್ಷಮೆಯಾಚಿಸಿಲ್ಲ.

ಮಾಧ್ಯಮದವರ ಮೇಲೆ ಕೆ.ಎಸ್.ಈಶ್ವರಪ್ಪ ಕಿಡಿ:

ಸಚಿವ ಮಾಧುಸ್ವಾಮಿ ಸಮರ್ಥನೆ ಮಾಡಿಕೊಳ್ಳಲು ಹೋಗಿ ಮಾಧ್ಯಮಗಳನ್ನೇ ಸಚಿವ ಕೆ.ಎಸ್.ಈಶ್ವರಪ್ಪ ವ್ಯಭಿಚಾರಕ್ಕೆ ಹೋಲಿಸಿದರು.

ವಿಧಾನಸೌಧದಲ್ಲಿ ಮಾತನಾಡುತ್ತಾ, ಮಾಧ್ಯಮಗಳೇ ಈ ವಿಚಾರವಾಗಿ ರಾಜಕಾರಣ ಮಾಡುತ್ತಿವೆ. ಮಾಧುಸ್ವಾಮಿ ತುಂಬಾ ಸ್ಪಷ್ಟವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ನೀವು ಮಾಡಿದ ವ್ಯಭಿಚಾರಕ್ಕೆ ಇಷ್ಟೆಲ್ಲ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆವರೆಗೆ ಮಾತ್ರ ತಾನೇ ಇದು ಮಾಡೋದು ನೀವು. ಅಲ್ಲಿಯವರೆಗೆ ನೀವು ಮುಂದುವರಿಸಿ ಎಂದು‌ ಮಾಧ್ಯಮಗಳ ಮೇಲೆಯೇ ಈಶ್ವರಪ್ಪ ಗೂಬೆ ಕೂರಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.