ETV Bharat / state

ಬೆಂಗಳೂರಲ್ಲಿ ಮುಂದುವರೆದ ಮಧ್ಯಪ್ರದೇಶ ಕೈ​​​ ಶಾಸಕರ ರೆಸಾರ್ಟ್ ವಾಸ್ತವ್ಯ: ಬಿಗಿ ಪೊಲೀಸ್​ ಭದ್ರತೆ

author img

By

Published : Mar 11, 2020, 10:32 AM IST

ಮಧ್ಯಪ್ರದೇಶದ 17 ಜನ ಶಾಸಕರ ತಂಡ ತಂಗಿರುವ ದೇವನಹಳ್ಳಿ ಸಮೀಪದ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ಕಾಂಗ್ರೆಸ್​ ಶಾಸಕರು
Prestige Golf Shire Resort

ಬೆಂಗಳೂರು: ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ಹಿನ್ನೆಲೆ ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ಶಾಸಕರು ದೇವನಹಳ್ಳಿ ಸಮೀಪದ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್

ಕಾಂಗ್ರೆಸ್​ ಶಾಸಕರ ರೆಸಾರ್ಟ್ ವಾಸ್ತವ್ಯ ಮುಂದುವರೆದಿದ್ದು, ಜ್ಯೋತಿರಾದಿತ್ಯ ಸಿಂಧಿಯಾ ಇಂದು ಬಿಜೆಪಿ ಸೇರ್ಪಡೆ ಹಿನ್ನೆಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಬಳಿಯ ಪ್ರೆಸ್ಟೀಜ್ ಗಾಲ್ಪ್ ಶೈರ್ ರೆಸಾರ್ಟ್​ನಲ್ಲಿರೋ ಶಾಸಕರ ಮುಂದಿನ ಬೆಳವಣಿಗೆ ಗೊತ್ತಾಗಲಿದೆ.

ನಿನ್ನೆ ಸಂಜೆಯಿಂದ ತಡರಾತ್ರಿವರೆಗೂ ಹೋಳಿ ಮತ್ತು ಪಾರ್ಟಿ ಮಾಡಿ ಫುಲ್ ರಿಲ್ಯಾಕ್ಸ್ ಮೂಡನಲ್ಲಿರೋ ಶಾಸಕರು ಇಂದು ಎಂದಿನಂತೆ ರೆಸಾರ್ಟ್​ನಲ್ಲಿ ವಾಕಿಂಗ್, ಜಾಗಿಂಗ್​ ಮಾಡಿ ಬೆಳಗಿನ ಉಪಹಾರ ಮುಗಿಸಿ ಟಿವಿ ಮುಂದೆ ಕುಳಿತು ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆ ಗಮನಿಸುತ್ತಿದ್ದಾರೆ.

ಮಧ್ಯಪ್ರದೇಶದ 17 ಜನ ಶಾಸಕರ ತಂಡ ತಂಗಿರುವ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ಬೆಂಗಳೂರು: ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ಹಿನ್ನೆಲೆ ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ಶಾಸಕರು ದೇವನಹಳ್ಳಿ ಸಮೀಪದ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್

ಕಾಂಗ್ರೆಸ್​ ಶಾಸಕರ ರೆಸಾರ್ಟ್ ವಾಸ್ತವ್ಯ ಮುಂದುವರೆದಿದ್ದು, ಜ್ಯೋತಿರಾದಿತ್ಯ ಸಿಂಧಿಯಾ ಇಂದು ಬಿಜೆಪಿ ಸೇರ್ಪಡೆ ಹಿನ್ನೆಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಬಳಿಯ ಪ್ರೆಸ್ಟೀಜ್ ಗಾಲ್ಪ್ ಶೈರ್ ರೆಸಾರ್ಟ್​ನಲ್ಲಿರೋ ಶಾಸಕರ ಮುಂದಿನ ಬೆಳವಣಿಗೆ ಗೊತ್ತಾಗಲಿದೆ.

ನಿನ್ನೆ ಸಂಜೆಯಿಂದ ತಡರಾತ್ರಿವರೆಗೂ ಹೋಳಿ ಮತ್ತು ಪಾರ್ಟಿ ಮಾಡಿ ಫುಲ್ ರಿಲ್ಯಾಕ್ಸ್ ಮೂಡನಲ್ಲಿರೋ ಶಾಸಕರು ಇಂದು ಎಂದಿನಂತೆ ರೆಸಾರ್ಟ್​ನಲ್ಲಿ ವಾಕಿಂಗ್, ಜಾಗಿಂಗ್​ ಮಾಡಿ ಬೆಳಗಿನ ಉಪಹಾರ ಮುಗಿಸಿ ಟಿವಿ ಮುಂದೆ ಕುಳಿತು ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆ ಗಮನಿಸುತ್ತಿದ್ದಾರೆ.

ಮಧ್ಯಪ್ರದೇಶದ 17 ಜನ ಶಾಸಕರ ತಂಡ ತಂಗಿರುವ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.