ETV Bharat / state

ಮಹಾ ಗಡಿ ಕ್ಯಾತೆ: ಉಭಯ ಸದನದಲ್ಲಿ ಖಂಡನಾ ನಿರ್ಣಯ ಮಂಡನೆಗೆ ನಿರ್ಧಾರ

author img

By

Published : Dec 20, 2022, 9:08 PM IST

ಮಹಾರಾಷ್ಟ್ರದ ಗಡಿ ಕ್ಯಾತೆ ವಿಚಾರವಾಗಿ ಸದನದಲ್ಲಿ ಖಂಡನಾ ನಿರ್ಣಯ ಮಂಡನೆ ಮಾಡೋಣ ಎಂದು ಸಿಎಂ ಬೊಮ್ಮಾಯಿ ಹೇಳಿದ್ದು, ಇದಕ್ಕೆ ಸಿದ್ದರಾಮಯ್ಯ ಕೂಡಾ ಸಹಮತ ವ್ಯಕ್ತಪಡಿಸಿದ್ದಾರೆ.

maha border condemnation
ಮಹಾ ಗಡಿ ಕ್ಯಾತೆ ಖಂಡನಾ ನಿರ್ಣಯ ಮಂಡನೆಗೆ ನಿರ್ಧಾರ
ಉಭಯ ಸದನದಲ್ಲಿ ಖಂಡನಾ ನಿರ್ಣಯ ಮಂಡನೆಗೆ ನಿರ್ಧಾರ

ಬೆಂಗಳೂರು/ಬೆಳಗಾವಿ: ಮಹಾರಾಷ್ಟ್ರದ ಗಡಿ ಕ್ಯಾತೆ ಬಗ್ಗೆ ಸದನದಲ್ಲಿ ಖಂಡನಾ ನಿರ್ಣಯ ಮಂಡನೆಗೆ ವಿಧಾನಸಭೆಯಲ್ಲಿ ನಿರ್ಧಾರ ಮಾಡಲಾಯಿತು‌. ಎಲ್ಲರೂ ಒಪ್ಪುವುದಾದರೆ ಉತ್ತರ ಕೊಡುವ ಸಂದರ್ಭದಲ್ಲಿ ಎರಡು ಸದನದಲ್ಲಿ ಖಂಡನಾ ನಿರ್ಣಯ ಮಂಡನೆ ಮಾಡೋಣ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಸಹಮತ ವ್ಯಕ್ತಪಡಿಸಿದರು‌.

ನಿಯಮ 69 ಅಡಿಯಲ್ಲಿ ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ,‌ ಎಲ್ಲರೂ ಒಪ್ಪುವುದಾದರೆ ಉತ್ತರ ಕೊಡುವ ಸಂದರ್ಭದಲ್ಲಿ ಎರಡು ಸದನದಲ್ಲಿ ನಿರ್ಣಯ ಮಂಡನೆ ಮಾಡೋಣ ಎಂದರು. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ಸಹಮತ ವ್ಯಕ್ತಪಡಿಸಿದರು‌.

ಇನ್ನೊಂದು ರಾಜ್ಯಕ್ಕೆ ‌ನುಗ್ಗಿ ಬರುತ್ತೇವೆ ಎಂಬ ಪ್ರವೃತ್ತಿ ಖಂಡನೀಯ. ಅವರ ಧೋರಣೆ ಏನು ಎಂದು ಜಗತ್ತಿಗೆ ಗೊತ್ತಾಗುತ್ತಿದೆ. ನಮ್ಮ ಗಡಿ ರಕ್ಷಣೆ ನಾವು ಮಾಡುತ್ತೇವೆ. ಗಡಿಯಲ್ಲಿ ಇದ್ದ ಕನ್ನಡಿಗರಿಗೆ ತೊಂದರೆ ಕೊಟ್ಟರೆ ಸುಮ್ಮನಿರಲ್ಲ ಎಂಬ ಕಠಿಣ ಸಂದೇಶ ಕೊಟ್ಟಿದ್ದೇವೆ ಎಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಗಡಿ ವಿವಾದ.. ಅಮಿತ್ ಶಾ ಕರೆದ ಸಭೆಗೆ ಸಿಎಂ ಹೋಗಬಾರದಿತ್ತು: ಸಿದ್ದರಾಮಯ್ಯ ಅಸಮಾಧಾನ

ಉಭಯ ಸದನದಲ್ಲಿ ಖಂಡನಾ ನಿರ್ಣಯ ಮಂಡನೆಗೆ ನಿರ್ಧಾರ

ಬೆಂಗಳೂರು/ಬೆಳಗಾವಿ: ಮಹಾರಾಷ್ಟ್ರದ ಗಡಿ ಕ್ಯಾತೆ ಬಗ್ಗೆ ಸದನದಲ್ಲಿ ಖಂಡನಾ ನಿರ್ಣಯ ಮಂಡನೆಗೆ ವಿಧಾನಸಭೆಯಲ್ಲಿ ನಿರ್ಧಾರ ಮಾಡಲಾಯಿತು‌. ಎಲ್ಲರೂ ಒಪ್ಪುವುದಾದರೆ ಉತ್ತರ ಕೊಡುವ ಸಂದರ್ಭದಲ್ಲಿ ಎರಡು ಸದನದಲ್ಲಿ ಖಂಡನಾ ನಿರ್ಣಯ ಮಂಡನೆ ಮಾಡೋಣ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಸಹಮತ ವ್ಯಕ್ತಪಡಿಸಿದರು‌.

ನಿಯಮ 69 ಅಡಿಯಲ್ಲಿ ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ,‌ ಎಲ್ಲರೂ ಒಪ್ಪುವುದಾದರೆ ಉತ್ತರ ಕೊಡುವ ಸಂದರ್ಭದಲ್ಲಿ ಎರಡು ಸದನದಲ್ಲಿ ನಿರ್ಣಯ ಮಂಡನೆ ಮಾಡೋಣ ಎಂದರು. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ಸಹಮತ ವ್ಯಕ್ತಪಡಿಸಿದರು‌.

ಇನ್ನೊಂದು ರಾಜ್ಯಕ್ಕೆ ‌ನುಗ್ಗಿ ಬರುತ್ತೇವೆ ಎಂಬ ಪ್ರವೃತ್ತಿ ಖಂಡನೀಯ. ಅವರ ಧೋರಣೆ ಏನು ಎಂದು ಜಗತ್ತಿಗೆ ಗೊತ್ತಾಗುತ್ತಿದೆ. ನಮ್ಮ ಗಡಿ ರಕ್ಷಣೆ ನಾವು ಮಾಡುತ್ತೇವೆ. ಗಡಿಯಲ್ಲಿ ಇದ್ದ ಕನ್ನಡಿಗರಿಗೆ ತೊಂದರೆ ಕೊಟ್ಟರೆ ಸುಮ್ಮನಿರಲ್ಲ ಎಂಬ ಕಠಿಣ ಸಂದೇಶ ಕೊಟ್ಟಿದ್ದೇವೆ ಎಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಗಡಿ ವಿವಾದ.. ಅಮಿತ್ ಶಾ ಕರೆದ ಸಭೆಗೆ ಸಿಎಂ ಹೋಗಬಾರದಿತ್ತು: ಸಿದ್ದರಾಮಯ್ಯ ಅಸಮಾಧಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.