ETV Bharat / state

ಡಿಎಂಕೆ ಜೊತೆಗಿನ ಮೈತ್ರಿ ತಮಿಳುನಾಡು ವಿಧಾನಸಭೆಯಲ್ಲೂ ಮುಂದುವರೆಯಲಿದೆ: ದಿನೇಶ್ ಗುಂಡೂರಾವ್

author img

By

Published : Nov 17, 2020, 9:50 AM IST

Updated : Nov 17, 2020, 10:16 AM IST

ಕಳೆದ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಇತರೆ ಪಕ್ಷಗಳ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಇದರಿಂದಾಗಿ 2019ರ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಲಭಿಸಿತ್ತು. ಇದೀಗ ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯಲಿದೆ ಎಂದು ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಟ್ವೀಟ್​ ಮಾಡಿದ್ದಾರೆ.

dinesh gundurao
ದಿನೇಶ್ ಗುಂಡೂರಾವ್

ಬೆಂಗಳೂರು: ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆಯಲ್ಲೂ ಮಹಾಘಟಬಂಧನ್ ಮುಂದುವರಿಯಲಿದೆ ಎಂದು ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಟ್ವೀಟ್ ಮೂಲಕ ಈ ಮಾಹಿತಿ ನೀಡಿರುವ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಇತರೆ ಪಕ್ಷಗಳ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಇದರಿಂದಾಗಿ 2019ರ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿತ್ತು. ಇದೀಗ ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರೆಯಲಿದೆ. ಈ ಮಹಾಘಟಬಂಧನ್ ಅನ್ನು ಬಲಿಷ್ಠಗೊಳಿಸಲು ಕಾಂಗ್ರೆಸ್ ತನ್ನದೇ ಬಹುಮುಖ್ಯ ಪಾತ್ರ ನಿಭಾಯಿಸಲಿದೆ ಎಂದು ತಿಳಿಸಿದ್ದಾರೆ.

dinesh gundurao tweet
ದಿನೇಶ್ ಗುಂಡೂರಾವ್ ಟ್ವೀಟ್​​​

2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಎಂಕೆ ಸ್ಟ್ಯಾಲಿನ್ ನೇತೃತ್ವದ ಕಾಂಗ್ರೆಸ್ ಒಳಗೊಂಡ ಮಹಾಘಟಬಂಧನ್ 38 ಸ್ಥಾನಗಳನ್ನು ಗೆಲ್ಲುವಲ್ಲಿ ಸಫಲವಾಗಿತ್ತು. ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಾಗೂ ಎನ್​​ಡಿಎ ಮೈತ್ರಿಕೂಟ ಕೇವಲ ಒಂದು ಸ್ಥಾನ ಮಾತ್ರ ಗೆದ್ದಿತ್ತು.

ಇದೀಗ ಬಿಹಾರದಲ್ಲಿ ಮಹಾಘಟಬಂಧನ್ ವಿಫಲವಾದ ಹಿನ್ನೆಲೆ ತಮಿಳುನಾಡಿನಲ್ಲಿಯೂ ಕಾಂಗ್ರೆಸ್ ಪ್ರತ್ಯೇಕವಾಗಿ ಚುನಾವಣೆ ಎದುರಿಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಲೋಕಸಭೆ ಯಶಸ್ಸು ವಿಧಾನಸಭೆ ಚುನಾವಣೆಯಲ್ಲಿ ಮುಂದುವರಿಯಲಿದೆ ಎಂದು ಹೇಳುವ ಮೂಲಕ ದಿನೇಶ್ ಗುಂಡೂರಾವ್ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬೆಂಗಳೂರು: ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆಯಲ್ಲೂ ಮಹಾಘಟಬಂಧನ್ ಮುಂದುವರಿಯಲಿದೆ ಎಂದು ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಟ್ವೀಟ್ ಮೂಲಕ ಈ ಮಾಹಿತಿ ನೀಡಿರುವ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಇತರೆ ಪಕ್ಷಗಳ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಇದರಿಂದಾಗಿ 2019ರ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿತ್ತು. ಇದೀಗ ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರೆಯಲಿದೆ. ಈ ಮಹಾಘಟಬಂಧನ್ ಅನ್ನು ಬಲಿಷ್ಠಗೊಳಿಸಲು ಕಾಂಗ್ರೆಸ್ ತನ್ನದೇ ಬಹುಮುಖ್ಯ ಪಾತ್ರ ನಿಭಾಯಿಸಲಿದೆ ಎಂದು ತಿಳಿಸಿದ್ದಾರೆ.

dinesh gundurao tweet
ದಿನೇಶ್ ಗುಂಡೂರಾವ್ ಟ್ವೀಟ್​​​

2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಎಂಕೆ ಸ್ಟ್ಯಾಲಿನ್ ನೇತೃತ್ವದ ಕಾಂಗ್ರೆಸ್ ಒಳಗೊಂಡ ಮಹಾಘಟಬಂಧನ್ 38 ಸ್ಥಾನಗಳನ್ನು ಗೆಲ್ಲುವಲ್ಲಿ ಸಫಲವಾಗಿತ್ತು. ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಾಗೂ ಎನ್​​ಡಿಎ ಮೈತ್ರಿಕೂಟ ಕೇವಲ ಒಂದು ಸ್ಥಾನ ಮಾತ್ರ ಗೆದ್ದಿತ್ತು.

ಇದೀಗ ಬಿಹಾರದಲ್ಲಿ ಮಹಾಘಟಬಂಧನ್ ವಿಫಲವಾದ ಹಿನ್ನೆಲೆ ತಮಿಳುನಾಡಿನಲ್ಲಿಯೂ ಕಾಂಗ್ರೆಸ್ ಪ್ರತ್ಯೇಕವಾಗಿ ಚುನಾವಣೆ ಎದುರಿಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಲೋಕಸಭೆ ಯಶಸ್ಸು ವಿಧಾನಸಭೆ ಚುನಾವಣೆಯಲ್ಲಿ ಮುಂದುವರಿಯಲಿದೆ ಎಂದು ಹೇಳುವ ಮೂಲಕ ದಿನೇಶ್ ಗುಂಡೂರಾವ್ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

Last Updated : Nov 17, 2020, 10:16 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.