ETV Bharat / state

ಇಂದು ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ : ಶಿಂಧೆ ಸೇರಿ ಮೂವರು ವೀಕ್ಷಕರ ನೇಮಕ

author img

By

Published : May 14, 2023, 5:02 PM IST

ಇಂದು ಸಂಜೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ನಿಟ್ಟಿನಲ್ಲಿ ಮೂವರು ವೀಕ್ಷಕರನ್ನು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿದ್ದಾರೆ.

mallikarjun-kharge-appoints-observers-in-karnataka-ahead-of-congress-legislative-party-meeting
ಇಂದು ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ : ಶಿಂಧೆ ಸೇರಿ ಮೂವರು ವೀಕ್ಷಕರ ನೇಮಕ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಭರ್ಜರಿ ಗೆಲುವು ಸಾಧಿಸಿದೆ. ಸುಮಾರು 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್​ ಸಂಪೂರ್ಣ ಬಹುಮತವನ್ನು ಪಡೆದಿದೆ. ಆಡಳಿತಾರೂಢ ಬಿಜೆಪಿಯು ಕೇವಲ 66 ಸ್ಥಾನಗಳನ್ನು ಪಡೆಯುವ ಹೀನಾಯ ಸೋಲನ್ನು ಕಂಡಿದೆ. ಈ ಬೆನ್ನಲ್ಲೇ ಮಾಧ್ಯಮಗೋಷ್ಟಿ ನಡೆಸಿದ್ದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಜನತೆಗೆ ಧನ್ಯವಾದ ಅರ್ಪಿಸಿದ್ದರು.

ಕಾಂಗ್ರೆಸ್​ ಬಹುಮತ ಪಡೆದ ಹಿನ್ನೆಲೆ ಇಂದು ಸಂಜೆ 5.30ಕ್ಕೆ ಕಾಂಗ್ರೆಸ್​ ಶಾಸಕಾಂಗ ಸಭೆ ಕರೆದಿತ್ತು. ಇಲ್ಲಿ ಮುಖ್ಯಮಂತ್ರಿ ಬಗ್ಗೆ ನಿರ್ಣಯ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದ್ದರು. ಈ ನಿಟ್ಟಿನಲ್ಲಿ ಎಐಸಿಸಿ​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೂವರು ವೀಕ್ಷಕರನ್ನು ನೇಮಕ ಮಾಡಿದ್ದಾರೆ. ಇವರಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್​ಕುಮಾರ್​ ಶಿಂಧೆ, ಕಾಂಗ್ರೆಸ್​​ ನಾಯಕರುಗಳಾದ ಜಿತೇಂದ್ರ ಸಿಂಗ್​ ಮತ್ತು ದೀಪಕ್​ ಬಬಾರಿಯಾ ಅವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್​ ಸಂಘಟನಾ ​ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್​​, ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್​ಕುಮಾರ್​ ಶಿಂಧೆ, ಕಾಂಗ್ರೆಸ್​​ ನಾಯಕರುಗಳಾದ ಜಿತೇಂದ್ರ ಸಿಂಗ್​ ಮತ್ತು ದೀಪಕ್​ ಬಬಾರಿಯಾ ಅವರನ್ನು ವೀಕ್ಷಕರನ್ನಾಗಿ ಆಯ್ಕೆ ಮಾಡಿದ್ದಾರೆ. ಇವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಉಪಸ್ಥಿತರಿದ್ದು, ಪಕ್ಷದ ಹೈಕಮಾಂಡ್​​ಗೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಶನಿವಾರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿರುವುದನ್ನು '2024ರ ಚುನಾವಣೆಯ ಮೈಲಿಗಲ್ಲುಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದ್ದರು.

ಕಾಂಗ್ರೆಸ್​ ಭರ್ಜರಿ ಗೆಲುವಿನ ಬಗ್ಗೆ ಮಾತನಾಡಿದ್ದ ಕೆ.ಸಿ.ವೇಣುಗೋಪಾಲ್, ರಾಜ್ಯದಲ್ಲಿ ಕಾಂಗ್ರೆಸ್ ಬಡವರ ಪರ ನಿಂತಿದೆ. ಹೀಗಾಗಿ ರಾಜ್ಯದಲ್ಲಿ ಜನಾದೇಶ ಗೆದ್ದಿದೆ. ಬಿಜೆಪಿಯ ಒಡೆದು ಆಳುವ ರಾಜಕೀಯವು ಪ್ರತಿ ಬಾರಿ ಯಶಸ್ವಿಯಾಗುವುದಿಲ್ಲ. ಇದು ಬಿಜೆಪಿ ಒಂದು ಸ್ಪಷ್ಟ ಸಂದೇಶ ಎಂದು ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್​ ರಾಜ್ಯದ ಬಡ ಜನರ ಪರ ನಿಂತಿತ್ತು. ಬಿಜೆಪಿ ಶ್ರೀಮಂತರ ಪರ ನಿಂತಿದ್ದರು. ಅಂತಿಮವಾಗಿ ಈ ಚುನಾವಣೆಯಲ್ಲಿ ಬಡವರು ಗೆದ್ದಿದ್ದಾರೆ ಎಂದು ಹೇಳಿದ್ದರು.

ಚುನಾವಣಾ ಆಯೋಗದ ಪ್ರಕಾರ, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನಗಳನ್ನು ಗೆದ್ದು, ಆಡಳಿತಾರೂಢ ಬಿಜೆಪಿ ಪಕ್ಷವನ್ನು ಹೀನಾಯವಾಗಿ ಸೋಲಿಸಿದೆ. ಬಿಜೆಪಿ 66 ಸ್ಥಾನಗಳಲ್ಲಿ ಗೆದ್ದು ಭಾರಿ ಹಿನ್ನಡೆ ಅನುಭವಿಸಿದೆ. ಜೆಡಿಎಸ್​ 19 ಸ್ಥಾನಗಳನ್ನು ಗಳಿಸಿದ್ದು, ಕಿಂಗ್​​ ಮೇಕರ್​ ಆಗುವ ಕನಸು ಭಗ್ನವಾಗಿದೆ. ಪಕ್ಷೇತರರು ಎರಡು ಸ್ಥಾನಗಳಲ್ಲಿ ಜಯಗಳಿಸಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ ಒಂದೊಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಶಾಸಕರು

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಭರ್ಜರಿ ಗೆಲುವು ಸಾಧಿಸಿದೆ. ಸುಮಾರು 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್​ ಸಂಪೂರ್ಣ ಬಹುಮತವನ್ನು ಪಡೆದಿದೆ. ಆಡಳಿತಾರೂಢ ಬಿಜೆಪಿಯು ಕೇವಲ 66 ಸ್ಥಾನಗಳನ್ನು ಪಡೆಯುವ ಹೀನಾಯ ಸೋಲನ್ನು ಕಂಡಿದೆ. ಈ ಬೆನ್ನಲ್ಲೇ ಮಾಧ್ಯಮಗೋಷ್ಟಿ ನಡೆಸಿದ್ದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಜನತೆಗೆ ಧನ್ಯವಾದ ಅರ್ಪಿಸಿದ್ದರು.

ಕಾಂಗ್ರೆಸ್​ ಬಹುಮತ ಪಡೆದ ಹಿನ್ನೆಲೆ ಇಂದು ಸಂಜೆ 5.30ಕ್ಕೆ ಕಾಂಗ್ರೆಸ್​ ಶಾಸಕಾಂಗ ಸಭೆ ಕರೆದಿತ್ತು. ಇಲ್ಲಿ ಮುಖ್ಯಮಂತ್ರಿ ಬಗ್ಗೆ ನಿರ್ಣಯ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದ್ದರು. ಈ ನಿಟ್ಟಿನಲ್ಲಿ ಎಐಸಿಸಿ​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೂವರು ವೀಕ್ಷಕರನ್ನು ನೇಮಕ ಮಾಡಿದ್ದಾರೆ. ಇವರಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್​ಕುಮಾರ್​ ಶಿಂಧೆ, ಕಾಂಗ್ರೆಸ್​​ ನಾಯಕರುಗಳಾದ ಜಿತೇಂದ್ರ ಸಿಂಗ್​ ಮತ್ತು ದೀಪಕ್​ ಬಬಾರಿಯಾ ಅವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್​ ಸಂಘಟನಾ ​ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್​​, ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್​ಕುಮಾರ್​ ಶಿಂಧೆ, ಕಾಂಗ್ರೆಸ್​​ ನಾಯಕರುಗಳಾದ ಜಿತೇಂದ್ರ ಸಿಂಗ್​ ಮತ್ತು ದೀಪಕ್​ ಬಬಾರಿಯಾ ಅವರನ್ನು ವೀಕ್ಷಕರನ್ನಾಗಿ ಆಯ್ಕೆ ಮಾಡಿದ್ದಾರೆ. ಇವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಉಪಸ್ಥಿತರಿದ್ದು, ಪಕ್ಷದ ಹೈಕಮಾಂಡ್​​ಗೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಶನಿವಾರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿರುವುದನ್ನು '2024ರ ಚುನಾವಣೆಯ ಮೈಲಿಗಲ್ಲುಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದ್ದರು.

ಕಾಂಗ್ರೆಸ್​ ಭರ್ಜರಿ ಗೆಲುವಿನ ಬಗ್ಗೆ ಮಾತನಾಡಿದ್ದ ಕೆ.ಸಿ.ವೇಣುಗೋಪಾಲ್, ರಾಜ್ಯದಲ್ಲಿ ಕಾಂಗ್ರೆಸ್ ಬಡವರ ಪರ ನಿಂತಿದೆ. ಹೀಗಾಗಿ ರಾಜ್ಯದಲ್ಲಿ ಜನಾದೇಶ ಗೆದ್ದಿದೆ. ಬಿಜೆಪಿಯ ಒಡೆದು ಆಳುವ ರಾಜಕೀಯವು ಪ್ರತಿ ಬಾರಿ ಯಶಸ್ವಿಯಾಗುವುದಿಲ್ಲ. ಇದು ಬಿಜೆಪಿ ಒಂದು ಸ್ಪಷ್ಟ ಸಂದೇಶ ಎಂದು ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್​ ರಾಜ್ಯದ ಬಡ ಜನರ ಪರ ನಿಂತಿತ್ತು. ಬಿಜೆಪಿ ಶ್ರೀಮಂತರ ಪರ ನಿಂತಿದ್ದರು. ಅಂತಿಮವಾಗಿ ಈ ಚುನಾವಣೆಯಲ್ಲಿ ಬಡವರು ಗೆದ್ದಿದ್ದಾರೆ ಎಂದು ಹೇಳಿದ್ದರು.

ಚುನಾವಣಾ ಆಯೋಗದ ಪ್ರಕಾರ, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನಗಳನ್ನು ಗೆದ್ದು, ಆಡಳಿತಾರೂಢ ಬಿಜೆಪಿ ಪಕ್ಷವನ್ನು ಹೀನಾಯವಾಗಿ ಸೋಲಿಸಿದೆ. ಬಿಜೆಪಿ 66 ಸ್ಥಾನಗಳಲ್ಲಿ ಗೆದ್ದು ಭಾರಿ ಹಿನ್ನಡೆ ಅನುಭವಿಸಿದೆ. ಜೆಡಿಎಸ್​ 19 ಸ್ಥಾನಗಳನ್ನು ಗಳಿಸಿದ್ದು, ಕಿಂಗ್​​ ಮೇಕರ್​ ಆಗುವ ಕನಸು ಭಗ್ನವಾಗಿದೆ. ಪಕ್ಷೇತರರು ಎರಡು ಸ್ಥಾನಗಳಲ್ಲಿ ಜಯಗಳಿಸಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ ಒಂದೊಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಶಾಸಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.