ETV Bharat / state

'ಮೀಸಲಾತಿ ವಿಚಾರದಲ್ಲಿ ಸುಪ್ರೀಂ ತೀರ್ಪು ರಾಷ್ಟ್ರಮಟ್ಟದಲ್ಲಿ ತಲ್ಲಣಗೊಳ್ಳುವಂಥದ್ದು'

author img

By

Published : Feb 9, 2020, 7:56 PM IST

ಮೀಸಲಾತಿ ವಿಚಾರದಲ್ಲಿ ರಾಷ್ಟ್ರ ಮಟ್ಟದಲ್ಲಿ ತಲ್ಲಣಗೊಳ್ಳುವಂತ ತೀರ್ಪನ್ನು ಸುಪ್ರೀಂಕೋರ್ಟ್ ಕೊಟ್ಟಿದೆ ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

mallikarjun kharge pressmeet in bengaluru
ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಟಿ

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ರಾಜ್ಯವಷ್ಟೇ ಅಲ್ಲ, ರಾಷ್ಟ್ರ ಮಟ್ಟದಲ್ಲಿ ತಲ್ಲಣಗೊಳ್ಳುವಂತಹ ತೀರ್ಪನ್ನು ಸುಪ್ರೀಂಕೋರ್ಟ್ ಕೊಟ್ಟಿದೆ ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮೀಸಲಾತಿಗೂ ತಿದ್ದುಪಡಿ ತಂದು ಆಯಾ ರಾಜ್ಯಗಳಲ್ಲಿ ಸರ್ಕಾರದ ಶಕ್ತಿ ಬಳಸಿ ಅದನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದರು. ಎಲ್ಲಾ ರಾಜ್ಯದಲ್ಲಿ ಮೀಸಲಾತಿ ತೆಗೆಯಬೇಕು, ಸಂವಿಧಾನ ಬದಲಿಸಬೇಕೆನ್ನುವುದು ಬಿಜೆಪಿ ಸರ್ಕಾರದ ಹಂಬಲವಾಗಿದೆ ಎಂದು ಇದೇ ವೇಳೆ ಅವರು ಆರೋಪಿಸಿದರು.

ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಟಿ

ಸಂವಿಧಾನದಲ್ಲಿ ಮೀಸಲಾತಿ ಬಗ್ಗೆ ಅಚ್ಚುಕಟ್ಟಾಗಿ ಹೇಳಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಮೀಸಲಾತಿ ಬಗ್ಗೆ ನೀಡಿರುವ ತೀರ್ಪು ಆಘಾತಕಾರಿಯಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಂಸದ ಎನ್. ಚಂದ್ರಪ್ಪ, ಕಾಂಗ್ರೆಸ್ ಮುಖಂಡರಾದ ವಿ.ಆರ್. ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ರಾಜ್ಯವಷ್ಟೇ ಅಲ್ಲ, ರಾಷ್ಟ್ರ ಮಟ್ಟದಲ್ಲಿ ತಲ್ಲಣಗೊಳ್ಳುವಂತಹ ತೀರ್ಪನ್ನು ಸುಪ್ರೀಂಕೋರ್ಟ್ ಕೊಟ್ಟಿದೆ ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮೀಸಲಾತಿಗೂ ತಿದ್ದುಪಡಿ ತಂದು ಆಯಾ ರಾಜ್ಯಗಳಲ್ಲಿ ಸರ್ಕಾರದ ಶಕ್ತಿ ಬಳಸಿ ಅದನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದರು. ಎಲ್ಲಾ ರಾಜ್ಯದಲ್ಲಿ ಮೀಸಲಾತಿ ತೆಗೆಯಬೇಕು, ಸಂವಿಧಾನ ಬದಲಿಸಬೇಕೆನ್ನುವುದು ಬಿಜೆಪಿ ಸರ್ಕಾರದ ಹಂಬಲವಾಗಿದೆ ಎಂದು ಇದೇ ವೇಳೆ ಅವರು ಆರೋಪಿಸಿದರು.

ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಟಿ

ಸಂವಿಧಾನದಲ್ಲಿ ಮೀಸಲಾತಿ ಬಗ್ಗೆ ಅಚ್ಚುಕಟ್ಟಾಗಿ ಹೇಳಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಮೀಸಲಾತಿ ಬಗ್ಗೆ ನೀಡಿರುವ ತೀರ್ಪು ಆಘಾತಕಾರಿಯಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಂಸದ ಎನ್. ಚಂದ್ರಪ್ಪ, ಕಾಂಗ್ರೆಸ್ ಮುಖಂಡರಾದ ವಿ.ಆರ್. ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.