ETV Bharat / state

ಚಿದಂಬರಂಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು... ಖರ್ಗೆ ಪ್ರತಿಕ್ರಿಯೆ ಏನು?

ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್​ ಇಂದು ಜಾಮೀನು ನೀಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಕಾನೂನು ಅಡಿಯಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡಲಿ. ಅದನ್ನ ಬಿಟ್ಟು ಬೇಕಂತಲೇ ಪ್ರಕರಣ ದಾಖಲಿಸೋದು ಬೇಡವೆಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

author img

By

Published : Dec 4, 2019, 5:18 PM IST

Mallikarjun kharge reaction about supreme court bail for p chidambaram, ಐಎನ್‌ಎಕ್ಸ್ ಮೀಡಿಯಾ ಹಗರಣ
ಐಎನ್‌ಎಕ್ಸ್ ಮೀಡಿಯಾ ಹಗರಣ

ಬೆಂಗಳೂರು: ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಮೇಲೆ ರಾಜಕೀಯ ದುರುದ್ದೇಶದಿಂದ ಐಎನ್‌ಎಕ್ಸ್ ಮೀಡಿಯಾ ಹಗರಣ ಪ್ರಕರಣ ದಾಖಲಿಸಲಾಗಿತ್ತು. ಕೊನೆಗೂ ಸುಪ್ರೀಂಕೋರ್ಟ್ ತೀರ್ಪಿನಿಂದ ಅವರಿಗೆ ಗೆಲುವು ಸಿಕ್ಕಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪ್ರೀಂ ತೀರ್ಪು ತಡವಾಗಿ ಬಂದರೂ, ಅದನ್ನು ನಾನು ಸ್ವಾಗತಿಸುತ್ತೇನೆ. ಕಾನೂನು ಅಡಿಯಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡಲಿ. ಅದನ್ನ ಬಿಟ್ಟು ಬೇಕಂತಲೇ ಪ್ರಕರಣ ದಾಖಲಿಸೋದು ಬೇಡ. ಕೋರ್ಟ್ ತೀರ್ಪು ನೀಡಿದೆ, ಆದ್ರೆ ಬಹಳ ವಿಳಂಬವಾಗಿದೆ. ಮೂರು ತಿಂಗಳಿಂದ ಜೈಲುವಾಸ ಮಾಡಬೇಕಾಗಿ ಬಂತು. ಚಿದಂಬರಂ ಓರ್ವ ಆರ್ಥಿಕ ತಜ್ಞ, ರಾಜಕೀಯ ಧುರಿಣ ಮತ್ತು ಕಾನೂನು ತಜ್ಞ ಆಗಿದ್ದಾರೆ. ಸಾಕ್ಷ್ಯಗಳನ್ನ ಅವರೇನೂ ನಾಶ ಮಾಡಲ್ಲ, ಚಿದಂಬರಂ ಉತ್ತಮ ವ್ಯಕ್ತಿತ್ವ ಹೊಂದಿದವರು ಅಂತಾ ಕೋರ್ಟ್ ಹೇಳಿದೆ ಎಂದು ಸುಪ್ರೀಂಕೋರ್ಟ್​ನಿಂದ ಷರತ್ತು ಬದ್ಧ ಜಾಮೀನು ಮಂಜೂರಾಗಿರುವ ಬಗ್ಗೆ ಖರ್ಗೆ ಪ್ರತಿಕ್ರಿಯೆ ನೀಡಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ

ಉಪ ಚುನಾವಣೆ ಬಳಿಕ ಏನು ಮಾಡಬೇಕು ಅನ್ನೋ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ. 15 ಕ್ಷೇತ್ರಗಳಲ್ಲಿ ಬಹುತೇಕ ನಾವು ಗೆಲ್ಲುತ್ತೇವೆ. ನಾನು 50 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದು, ನನ್ನನ್ನ ಒಂದು ಜಾತಿಗೆ ಮೀಸಲು ಮಾಡಬೇಡಿ. ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.

ಮತ್ತೆ ಆಪರೇಷನ್ ಕಮಲ ನಡೆಯುವ ವಿಚಾರವು ನನಗೆ ಗೊತ್ತಿಲ್ಲ. ಅದೆಲ್ಲ ಡಿ.9ರ ಬಳಿಕ ಗೊತ್ತಾಗುತ್ತೆ. ಬಿಜೆಪಿಗೆ ಎಷ್ಟು ಸ್ಥಾನ ಬರುತ್ತೆ, ಜೆಡಿಎಸ್​​ಗೆ ಎಷ್ಟು ಸ್ಥಾನ ಬರುತ್ತೆ, ಎಂಬುದನ್ನು ನೋಡೋಣ. ಗೊತ್ತಿಲ್ಲದ ವಿಚಾರದ ಬಗ್ಗೆ ಹೇಳಿಕೆ ನೀಡೋದು ಬೇಡ ಎಂದು ಖರ್ಗೆ ಹೇಳಿದ್ರು.

ಮಹಾರಾಷ್ಟ್ರದ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ರಾಜ್ಯ ನಾಯಕರ ಜೊತೆ ಮಾತಾಡಿದ ವಿಚಾರ ಗೊತ್ತಿಲ್ಲ. ಊಹಾಪೋಹದ ಪ್ರಶ್ನೆಗಳ ಬಗ್ಗೆ ಮಾತಾಡಲ್ಲ ಎಂದ ಖರ್ಗೆ, ಎಸ್.ಎಂ.ಕೃಷ್ಣ ಅವರು ಒಳ್ಳೆಯ ಕೆಲಸ ಮಾಡಿ ಬಿಜೆಪಿಗೆ ಹೋಗಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಟಾಂಗ್ ನೀಡಿದ್ರು.

ಬೆಂಗಳೂರು: ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಮೇಲೆ ರಾಜಕೀಯ ದುರುದ್ದೇಶದಿಂದ ಐಎನ್‌ಎಕ್ಸ್ ಮೀಡಿಯಾ ಹಗರಣ ಪ್ರಕರಣ ದಾಖಲಿಸಲಾಗಿತ್ತು. ಕೊನೆಗೂ ಸುಪ್ರೀಂಕೋರ್ಟ್ ತೀರ್ಪಿನಿಂದ ಅವರಿಗೆ ಗೆಲುವು ಸಿಕ್ಕಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪ್ರೀಂ ತೀರ್ಪು ತಡವಾಗಿ ಬಂದರೂ, ಅದನ್ನು ನಾನು ಸ್ವಾಗತಿಸುತ್ತೇನೆ. ಕಾನೂನು ಅಡಿಯಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡಲಿ. ಅದನ್ನ ಬಿಟ್ಟು ಬೇಕಂತಲೇ ಪ್ರಕರಣ ದಾಖಲಿಸೋದು ಬೇಡ. ಕೋರ್ಟ್ ತೀರ್ಪು ನೀಡಿದೆ, ಆದ್ರೆ ಬಹಳ ವಿಳಂಬವಾಗಿದೆ. ಮೂರು ತಿಂಗಳಿಂದ ಜೈಲುವಾಸ ಮಾಡಬೇಕಾಗಿ ಬಂತು. ಚಿದಂಬರಂ ಓರ್ವ ಆರ್ಥಿಕ ತಜ್ಞ, ರಾಜಕೀಯ ಧುರಿಣ ಮತ್ತು ಕಾನೂನು ತಜ್ಞ ಆಗಿದ್ದಾರೆ. ಸಾಕ್ಷ್ಯಗಳನ್ನ ಅವರೇನೂ ನಾಶ ಮಾಡಲ್ಲ, ಚಿದಂಬರಂ ಉತ್ತಮ ವ್ಯಕ್ತಿತ್ವ ಹೊಂದಿದವರು ಅಂತಾ ಕೋರ್ಟ್ ಹೇಳಿದೆ ಎಂದು ಸುಪ್ರೀಂಕೋರ್ಟ್​ನಿಂದ ಷರತ್ತು ಬದ್ಧ ಜಾಮೀನು ಮಂಜೂರಾಗಿರುವ ಬಗ್ಗೆ ಖರ್ಗೆ ಪ್ರತಿಕ್ರಿಯೆ ನೀಡಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ

ಉಪ ಚುನಾವಣೆ ಬಳಿಕ ಏನು ಮಾಡಬೇಕು ಅನ್ನೋ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ. 15 ಕ್ಷೇತ್ರಗಳಲ್ಲಿ ಬಹುತೇಕ ನಾವು ಗೆಲ್ಲುತ್ತೇವೆ. ನಾನು 50 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದು, ನನ್ನನ್ನ ಒಂದು ಜಾತಿಗೆ ಮೀಸಲು ಮಾಡಬೇಡಿ. ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.

ಮತ್ತೆ ಆಪರೇಷನ್ ಕಮಲ ನಡೆಯುವ ವಿಚಾರವು ನನಗೆ ಗೊತ್ತಿಲ್ಲ. ಅದೆಲ್ಲ ಡಿ.9ರ ಬಳಿಕ ಗೊತ್ತಾಗುತ್ತೆ. ಬಿಜೆಪಿಗೆ ಎಷ್ಟು ಸ್ಥಾನ ಬರುತ್ತೆ, ಜೆಡಿಎಸ್​​ಗೆ ಎಷ್ಟು ಸ್ಥಾನ ಬರುತ್ತೆ, ಎಂಬುದನ್ನು ನೋಡೋಣ. ಗೊತ್ತಿಲ್ಲದ ವಿಚಾರದ ಬಗ್ಗೆ ಹೇಳಿಕೆ ನೀಡೋದು ಬೇಡ ಎಂದು ಖರ್ಗೆ ಹೇಳಿದ್ರು.

ಮಹಾರಾಷ್ಟ್ರದ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ರಾಜ್ಯ ನಾಯಕರ ಜೊತೆ ಮಾತಾಡಿದ ವಿಚಾರ ಗೊತ್ತಿಲ್ಲ. ಊಹಾಪೋಹದ ಪ್ರಶ್ನೆಗಳ ಬಗ್ಗೆ ಮಾತಾಡಲ್ಲ ಎಂದ ಖರ್ಗೆ, ಎಸ್.ಎಂ.ಕೃಷ್ಣ ಅವರು ಒಳ್ಳೆಯ ಕೆಲಸ ಮಾಡಿ ಬಿಜೆಪಿಗೆ ಹೋಗಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಟಾಂಗ್ ನೀಡಿದ್ರು.

Intro:newsBody:ತಡವಾಗಿಯಾದರೂ ಸುಪ್ರೀಂ ಒಳ್ಳೆ ತೀರ್ಪು ಕೊಟ್ಟಿದೆ: ಖರ್ಗೆ

ಬೆಂಗಳೂರು: ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಮೇಲೆ ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲು ಮಾಡಲಾಗಿತ್ತು. ಮಾನಸಿಕವಾಗಿ ಅವರಿಗೆ ಕಿರುಕುಳ ಕೊಡಲು ಪ್ರಕರಣ ಹಾಕಲಾಗಿತ್ತು. ಕೊನೆಗೆ ಸುಪ್ರೀಂನಿಂದ ಗೆಲುವು ಸಿಕ್ಕಿದೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿ, ಸುಪ್ರೀಂ ತೀರ್ಪುನ ನಾನು ಸ್ವಾಗತ ಮಾಡುತ್ತೇನೆ. ಕಾನೂನು ಅಡಿಯಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡಲಿ. ಅದನ್ನ ಬಿಟ್ಟು ಬೇಕು ಅಂತಾಲೇ ಪ್ರಕರಣ ದಾಖಲು ಮಾಡೋದು ಬೇಡ. ಕೋರ್ಟ್ ತೀರ್ಪು ನೀಡಿದೆ. ಆದ್ರೆ ಬಹಳ ವಿಳಂಬವಾಗಿ ತೀರ್ಪು ಬಂದಿದೆ. ಮೂರು ತಿಂಗಳಿಂದ ಜೈಲು ವಾಸ ಮಾಡಬೇಕಾಗಿ ಬಂತು. ಒಬ್ಬ ಆರ್ಥಿಕ ತಜ್ಞ, ರಾಜಕೀಯ ಧುರೀಣ, ಕಾನೂನು ತಜ್ಞ ಆಗಿದ್ದಾರೆ. ಸಾಕ್ಷ್ಯಗಳನ್ನ ಅವರೇನೂ ನಾಶ ಮಾಡಲ್ಲ ಅಂತಾ ಕೋರ್ಟ್ ಹೇಳಿದೆ. ಚಿದಂಬರಂ ಉತ್ತಮ ವ್ಯಕ್ತಿತ್ವ ಹೊಂದಿದವರು ಅಂತಾ ಕೋರ್ಟ್ ಹೇಳಿದೆ ಎಂದು ಹೇಳಿದರು.
ರಾಜ್ಯದ ಜನರ ವಾತಾವರಣ ಗಮನಿಸಿದ್ರೆ ಕಾಂಗ್ರೆಸ್ ಗೆ ಹೆಚ್ಚಿನ ಸೀಟ್ ಬರಲಿದೆ. ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲ್ಲ. ಬಳಿಕ ಏನ್ ಮಾಡಬೇಕು ಅಂತ ಹೈಕಮಾಂಡ್ ತೀರ್ಮಾನ ಮಾಡಲಿದೆ. 15 ಕ್ಷೇತ್ರಗಳಲ್ಲಿ ಬಹುತೇಕ ನಾವು ಗೆಲ್ಲುತ್ತೇವೆ. ಜನರು ಕಾಂಗ್ರೆಸ್ ಪರವಾಗಿ ಇದ್ದಾರೆ. ನನ್ನನ್ನ ಒಂದು ಜಾತಿಗೆ ಮೀಸಲು ಮಾಡಬೇಡಿ. ಕುಮಾರಸ್ವಾಮಿ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ. ನಾನು 50 ವರ್ಷದಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೀನಿ ಎಂದರು.
ಮತ್ತೇ ಆಪರೇಶನ್ ಕಮಲದ ವಿಚಾರ, ಆ ವಿಚಾರ ನನಗೆ ಗೊತ್ತಿಲ್ಲ. ಅದೆಲ್ಲ ಡಿ.9 ರ ಬಳಿಕ ಗೊತ್ತಾಗುತ್ತೆ. ಬಿಜೆಪಿಗೆ ಎಷ್ಟು ಸೀಟ್ ಬರುತ್ತೆ, ಜೆಡಿ ಎಸ್ ಗೆ ಎಷ್ಟು ಸ್ಥಾನ ಬರುತ್ತೆ , ಬಿಜೆಪಿ ಎಷ್ಟು ಸೀಟ್ ಬರುತ್ತೆ ನೋಡೋಣ. ಗೊತ್ತಿಲ್ಲದ ವಿಚಾರದ ಬಗ್ಗೆ ಹೇಳಿಕೆ ನೀಡೋದು ಬೇಡ ಎಂದರು.
ಶರದ್ ಪವಾರ್ ರಾಜ್ಯ ನಾಯಕರ ಜೊತೆ ಮಾತಾಡಿದ ವಿಚಾರ ಗೊತ್ತಿಲ್ಲ. ಊಹಾಪೋಹದ ಪ್ರಶ್ನೆಗಳ ಬಗ್ಗೆ ಮಾತಾಡಲ್ಲ. ಒಳ್ಳೆಯ ಕೆಲಸ ಮಾಡಿ ಬಿಜೆಪಿಗೆ ಹೋಗಿದ್ದಾರೆ. ಒಳ್ಖೆಯದಾಗಲಿ. ಎಸ್ ಎಂ ಕೃಷ್ಣಗೆ ಟಾಂಗ್ ನೀಡಿದರು.
Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.