ETV Bharat / state

ಹೊಯ್ಸಳ ಹತ್ತಿ ಹೋದ ವ್ಯಕ್ತಿ ಶವವಾಗಿ ಪತ್ತೆ: ಬೆಂಗಳೂರು ಪೊಲೀಸರ ವಿರುದ್ಧ ಗಂಭೀರ ಆರೋಪ

author img

By

Published : Oct 7, 2022, 7:44 AM IST

ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ ಎಂಬ ಆರೋಪ‌ ಕೇಳಿ ಬರುತ್ತಿದೆ. ಪೊಲೀಸರು ವಿಚಾರಣೆಗೆ ಕರೆದೊಯ್ದ ಮಾರನೇ ದಿನ ಜಾರ್ಖಂಡ್​​ ಮೂಲದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ.

man went in Hoysala vehicle of police  found dead
ಪೊಲೀಸರ ವಿರುದ್ಧ ಸಾರ್ವಜನಿಕರ ದೂರು

ಬೆಂಗಳೂರು: ರಾಮಮೂರ್ತಿನಗರ ಪೊಲೀಸರ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ ಎಂಬ ಆರೋಪ‌ ಕೇಳಿ ಬರುತ್ತಿದೆ. ಜಾರ್ಖಂಡ್ ಮೂಲದ ವ್ಯಕ್ತಿಯನ್ನು ವಿಚಾರಣೆಗೆ ಕರೆತಂದಿದ್ದು, ಬಳಿಕ ಆತ ಶವವಾಗಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕಳೆದ‌ ತಿಂಗಳ 23ರಂದು ಮಕ್ಕಳ ಕಳ್ಳ ಎಂದು ವ್ಯಕ್ತಿಯನ್ನು ಸಾರ್ವಜನಿಕರು ಥಳಿಸಿ ರಾಮಮೂರ್ತಿನಗರ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಆ ವ್ಯಕ್ತಿಯನ್ನ ಹೊಯ್ಸಳ ವಾಹನದಲ್ಲಿ ಕರೆದೊಯ್ದಿರುವ ವಿಡಿಯೋ ಕೂಡ ಸಾರ್ವಜನಿಕರ ಮೊಬೈಲ್​​ನಲ್ಲಿ ಸೆರೆಯಾಗಿದೆ. ಇದಾದ ಮಾರನೇ ದಿನ ಆ ವ್ಯಕ್ತಿ ಕೆಆರ್ ಪುರದ ಐಟಿಐ ಕಾಲೋನಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಅಪರಿಚಿತ ಶವ ದೊರೆತಿದ್ದರಿಂದ ಕೆ ಆರ್ ಪುರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಗುರುತು ಪತ್ತೆಯಾಗಿಲ್ಲ ಎಂದು ಕೈ ತೊಳೆದುಕೊಂಡಿದ್ದರು. ಹೀಗಾಗಿ ರಾಮಮೂರ್ತಿನಗರ ಪೊಲೀಸರ ಮೇಲೆ ಲಾಕಪ್ ಡೆತ್ ಆರೋಪ ಕೇಳಿ ಬಂದಿದೆ.

ಪೊಲೀಸರ ವಿರುದ್ಧ ಸಾರ್ವಜನಿಕರ ದೂರು

ರಾಮಮೂರ್ತಿನಗರ ಪೊಲೀಸರ ಕಸ್ಟಡಿಯಲ್ಲಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಕೊಡಿಸದ ಹಿನ್ನೆಲೆ ಆತ ಸತ್ತಿರುವ ಅನುಮಾನ ವ್ಯಕ್ತವಾಗಿದೆ. ಸದ್ಯ ಪೊಲೀಸರ ನಡೆ ವಿರುದ್ಧ ಸೂಕ್ತ ‌ತನಿಖೆ ನಡೆಸುವಂತೆ ದೂರುದಾರ ಪರಮೇಶ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಆನ್‌ಲೈನ್ ರಮ್ಮಿಗೆ ವ್ಯಸನಿಯಾಗಿದ್ದ ಯುವಕ ಆತ್ಮಹತ್ಯೆ

ಬೆಂಗಳೂರು: ರಾಮಮೂರ್ತಿನಗರ ಪೊಲೀಸರ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ ಎಂಬ ಆರೋಪ‌ ಕೇಳಿ ಬರುತ್ತಿದೆ. ಜಾರ್ಖಂಡ್ ಮೂಲದ ವ್ಯಕ್ತಿಯನ್ನು ವಿಚಾರಣೆಗೆ ಕರೆತಂದಿದ್ದು, ಬಳಿಕ ಆತ ಶವವಾಗಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕಳೆದ‌ ತಿಂಗಳ 23ರಂದು ಮಕ್ಕಳ ಕಳ್ಳ ಎಂದು ವ್ಯಕ್ತಿಯನ್ನು ಸಾರ್ವಜನಿಕರು ಥಳಿಸಿ ರಾಮಮೂರ್ತಿನಗರ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಆ ವ್ಯಕ್ತಿಯನ್ನ ಹೊಯ್ಸಳ ವಾಹನದಲ್ಲಿ ಕರೆದೊಯ್ದಿರುವ ವಿಡಿಯೋ ಕೂಡ ಸಾರ್ವಜನಿಕರ ಮೊಬೈಲ್​​ನಲ್ಲಿ ಸೆರೆಯಾಗಿದೆ. ಇದಾದ ಮಾರನೇ ದಿನ ಆ ವ್ಯಕ್ತಿ ಕೆಆರ್ ಪುರದ ಐಟಿಐ ಕಾಲೋನಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಅಪರಿಚಿತ ಶವ ದೊರೆತಿದ್ದರಿಂದ ಕೆ ಆರ್ ಪುರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಗುರುತು ಪತ್ತೆಯಾಗಿಲ್ಲ ಎಂದು ಕೈ ತೊಳೆದುಕೊಂಡಿದ್ದರು. ಹೀಗಾಗಿ ರಾಮಮೂರ್ತಿನಗರ ಪೊಲೀಸರ ಮೇಲೆ ಲಾಕಪ್ ಡೆತ್ ಆರೋಪ ಕೇಳಿ ಬಂದಿದೆ.

ಪೊಲೀಸರ ವಿರುದ್ಧ ಸಾರ್ವಜನಿಕರ ದೂರು

ರಾಮಮೂರ್ತಿನಗರ ಪೊಲೀಸರ ಕಸ್ಟಡಿಯಲ್ಲಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಕೊಡಿಸದ ಹಿನ್ನೆಲೆ ಆತ ಸತ್ತಿರುವ ಅನುಮಾನ ವ್ಯಕ್ತವಾಗಿದೆ. ಸದ್ಯ ಪೊಲೀಸರ ನಡೆ ವಿರುದ್ಧ ಸೂಕ್ತ ‌ತನಿಖೆ ನಡೆಸುವಂತೆ ದೂರುದಾರ ಪರಮೇಶ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಆನ್‌ಲೈನ್ ರಮ್ಮಿಗೆ ವ್ಯಸನಿಯಾಗಿದ್ದ ಯುವಕ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.