ETV Bharat / state

ಮಾಂಡೌಸ್​ ಚಂಡಮಾರುತ: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ

author img

By

Published : Dec 9, 2022, 4:57 PM IST

ಮಾಂಡೌಸ್​​ ಚಂಡಮಾರುತದ ಪರಿಣಾಮ ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದೆ. ಕೆಲವೆಡೆ ಹಗುರ ಮಳೆಯಾಗುತ್ತಿದೆ.

KN_BNG_
ಸಿಲಿಕಾನ್​ ಸಿಟಿಯಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಾಂಡೌಸ್ ಚಂಡಮಾರುತದ ಕಾರಣ ಕರ್ನಾಟಕದ ದಕ್ಷಿಣ ಒಳನಾಡಿನ ಭಾಗದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಇಂದು ಮಧ್ಯರಾತ್ರಿಯಿಂದ ತಮಿಳುನಾಡಿನ ಉತ್ತರ, ಪುದುಚೇರಿ ಮತ್ತು ಆಂಧ್ರಪ್ರದೇಶದ ಶ್ರೀಹರಿಕೋಟಾದ ತೀರ ಪ್ರದೇಶಗಳನ್ನು ಹಾದುಹೋಗಲಿದೆ. ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಹಲವೆಡೆ ಹಗುರ ಮಳೆಯಾಗುತ್ತಿದೆ ಎಂದು ಇಲಾಖೆ ಹೇಳಿದೆ.

ಚಂಡಮಾರುತದ ಪ್ರಭಾವದಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಪ್ರಾರಂಭವಾಗಿದೆ.

50 ಮಿ.ಮೀ.ವರೆಗೂ ಮಳೆ: ಕೆಲವೆಡೆ ಹಗುರ ಇಲ್ಲವೇ ತುಂತುರು ಮಳೆಯಾಗುತ್ತಿದೆ. ನಾಳೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಸುಮಾರು 50 ಮಿ.ಮೀ.ವರೆಗೂ ಮಳೆ ಸಂಭವವಿದೆ.

ಶನಿವಾರ ಮತ್ತು ಭಾನುವಾರ ಬೆಂಗಳೂರು ಜಿಲ್ಲೆಯ ಉತ್ತರ ಹಾಗೂ ಪೂರ್ವಭಾಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 16, 17ರಂದು ಮತ್ತೆ ಮಳೆ: ಡಿ.16 ಮತ್ತು 17ರಂದು ಹಗುರ ಮಳೆಯಾಗುವ ಮುನ್ಸೂಚನೆಗಳಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಚಂಡಮಾರುತದ ಪ್ರಭಾವವಿಲ್ಲ.

ಇದನ್ನೂ ಓದಿ: ಮ್ಯಾಂಡೌಸ್​​ ಸೈಕ್ಲೋನ್: ತಮಿಳುನಾಡು, ಪುದುಚೇರಿ ಮತ್ತು ಆಂಧ್ರದ ಕರಾವಳಿಯಲ್ಲಿ ಕಟ್ಟೆಚ್ಚರ.. ಕೆಲವೆಡೆ ರಜೆ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಾಂಡೌಸ್ ಚಂಡಮಾರುತದ ಕಾರಣ ಕರ್ನಾಟಕದ ದಕ್ಷಿಣ ಒಳನಾಡಿನ ಭಾಗದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಇಂದು ಮಧ್ಯರಾತ್ರಿಯಿಂದ ತಮಿಳುನಾಡಿನ ಉತ್ತರ, ಪುದುಚೇರಿ ಮತ್ತು ಆಂಧ್ರಪ್ರದೇಶದ ಶ್ರೀಹರಿಕೋಟಾದ ತೀರ ಪ್ರದೇಶಗಳನ್ನು ಹಾದುಹೋಗಲಿದೆ. ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಹಲವೆಡೆ ಹಗುರ ಮಳೆಯಾಗುತ್ತಿದೆ ಎಂದು ಇಲಾಖೆ ಹೇಳಿದೆ.

ಚಂಡಮಾರುತದ ಪ್ರಭಾವದಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಪ್ರಾರಂಭವಾಗಿದೆ.

50 ಮಿ.ಮೀ.ವರೆಗೂ ಮಳೆ: ಕೆಲವೆಡೆ ಹಗುರ ಇಲ್ಲವೇ ತುಂತುರು ಮಳೆಯಾಗುತ್ತಿದೆ. ನಾಳೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಸುಮಾರು 50 ಮಿ.ಮೀ.ವರೆಗೂ ಮಳೆ ಸಂಭವವಿದೆ.

ಶನಿವಾರ ಮತ್ತು ಭಾನುವಾರ ಬೆಂಗಳೂರು ಜಿಲ್ಲೆಯ ಉತ್ತರ ಹಾಗೂ ಪೂರ್ವಭಾಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 16, 17ರಂದು ಮತ್ತೆ ಮಳೆ: ಡಿ.16 ಮತ್ತು 17ರಂದು ಹಗುರ ಮಳೆಯಾಗುವ ಮುನ್ಸೂಚನೆಗಳಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಚಂಡಮಾರುತದ ಪ್ರಭಾವವಿಲ್ಲ.

ಇದನ್ನೂ ಓದಿ: ಮ್ಯಾಂಡೌಸ್​​ ಸೈಕ್ಲೋನ್: ತಮಿಳುನಾಡು, ಪುದುಚೇರಿ ಮತ್ತು ಆಂಧ್ರದ ಕರಾವಳಿಯಲ್ಲಿ ಕಟ್ಟೆಚ್ಚರ.. ಕೆಲವೆಡೆ ರಜೆ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.