ETV Bharat / state

ಮ್ಯಾಂಡೌಸ್‌ ಚಂಡಮಾರುತದ ಎಫೆಕ್ಟ್: ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

author img

By

Published : Dec 10, 2022, 5:03 PM IST

Updated : Dec 10, 2022, 9:08 PM IST

ಮ್ಯಾಂಡೌಸ್​ ಚಂಡಮಾರುತದ ಹಿನ್ನೆಲೆ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ತಾಪಮಾನ ಇಳಿಕೆಯಾಗಿದ್ದು, ಕೆಲ ಭಾಗಗಳಲ್ಲಿ ಮಳೆಯಾಗುತ್ತಿದೆ.

KN_BNG
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ತೀವ್ರತರದ ಮ್ಯಾಂಡೌಸ್‌ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಡಿಸೆಂಬರ್ 12ರ ವರೆಗೆ ಮೋಡ ಕವಿದ ವಾತಾವರಣ, ಚಳಿಯ ಜೊತೆಗೆ ಮಳೆ ಸುರಿಯಲಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಮಳೆ ಚಳಿಯ ವಾತಾವರಣ ಸೃಷ್ಟಿಯಾಗಿದೆ. ನಾಳೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಇನ್ನೂ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಇಲಾಖೆ ಹೇಳಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್: ಉಳಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಜೆಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದೆ.

ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಮಳೆ: ಮ್ಯಾಂಡೌಸ್‌ ಚಂಡಮಾರುತದ ಪರಿಣಾಮದಿಂದ ಸಿಲಿಕಾನ್ ಸಿಟಿಯ ತಾಪಮಾನ ಇಳಿಕೆಯಾಗಿದೆ. ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ಕೆಲ ಭಾಗಗಳಲ್ಲಿ ಮಳೆ ಸುರಿಯುತ್ತಿದ್ದು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಮ್ಯಾಂಡೌಸ್ ಚಂಡಮಾರುತ: ಬೆಂಗಳೂರಲ್ಲಿ ಜಿಟಿಜಿಟಿ ಮಳೆ, ಬಾಗಲಕೋಟೆಯಲ್ಲಿ ಅತೀ ಕನಿಷ್ಠ ಉಷ್ಣಾಂಶ ದಾಖಲು

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ತೀವ್ರತರದ ಮ್ಯಾಂಡೌಸ್‌ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಡಿಸೆಂಬರ್ 12ರ ವರೆಗೆ ಮೋಡ ಕವಿದ ವಾತಾವರಣ, ಚಳಿಯ ಜೊತೆಗೆ ಮಳೆ ಸುರಿಯಲಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಮಳೆ ಚಳಿಯ ವಾತಾವರಣ ಸೃಷ್ಟಿಯಾಗಿದೆ. ನಾಳೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಇನ್ನೂ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಇಲಾಖೆ ಹೇಳಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್: ಉಳಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಜೆಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದೆ.

ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಮಳೆ: ಮ್ಯಾಂಡೌಸ್‌ ಚಂಡಮಾರುತದ ಪರಿಣಾಮದಿಂದ ಸಿಲಿಕಾನ್ ಸಿಟಿಯ ತಾಪಮಾನ ಇಳಿಕೆಯಾಗಿದೆ. ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ಕೆಲ ಭಾಗಗಳಲ್ಲಿ ಮಳೆ ಸುರಿಯುತ್ತಿದ್ದು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಮ್ಯಾಂಡೌಸ್ ಚಂಡಮಾರುತ: ಬೆಂಗಳೂರಲ್ಲಿ ಜಿಟಿಜಿಟಿ ಮಳೆ, ಬಾಗಲಕೋಟೆಯಲ್ಲಿ ಅತೀ ಕನಿಷ್ಠ ಉಷ್ಣಾಂಶ ದಾಖಲು

Last Updated : Dec 10, 2022, 9:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.