ETV Bharat / state

ಮಂಗಳೂರು ಪಾಲಿಕೆ ಘನತ್ಯಾಜ್ಯ ವಿಲೇವಾರಿ ವಿವಾದ : ವಸ್ತುಸ್ಥಿತಿ ವರದಿ ಕೇಳಿದ ಹೈಕೋರ್ಟ್

author img

By

Published : Mar 30, 2021, 8:31 PM IST

ಕೆಲ ತಿಂಗಳಲ್ಲೇ ಮುಂಗಾರು ಸಹ ಆರಂಭವಾಗಲಿದೆ. ಒಂದೊಮ್ಮೆ ಕಸ ಸುರಿಯುವುದು ಮುಂದುವರಿದು, ಮಳೆ ಪ್ರಾರಂಭವಾದರೆ ಮತ್ತೆ ಅನಾಹುತವಾಗುವ ಸಾಧ್ಯತೆಗಳಿವೆ. ಸಮಸ್ಯೆ ಗಂಭೀರವಾಗಿದ್ದು, ನ್ಯಾಯಾಲಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ..

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಪಚ್ಚನಾಡಿಯ ಘನತ್ಯಾಜ್ಯ ಭೂಭರ್ತಿ ಘಟಕದಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯುವುದನ್ನು ಮುಂದುರಿಸಿರುವ ಹಿನ್ನೆಲೆ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ವಸ್ತುಸ್ಥಿತಿ ವರದಿ ನೀಡುವಂತೆ ಹೈಕೋರ್ಟ್ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಳೀಯ ಪರಿಸರ ಅಧಿಕಾರಿಗೆ ನಿರ್ದೇಶಿಸಿದೆ.

ಮಹಾನಗರ ವ್ಯಾಪ್ತಿಯ ಪಚ್ಚನಾಡಿಯಲ್ಲಿನ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಉಂಟಾದ ಅನಾಹುತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ಶ್ರೀಧರ್ ಪ್ರಭು ವಾದಿಸಿ, ಭೂಭರ್ತಿ ಘಟಕದಲ್ಲಿ ಈಗಲೂ ತ್ಯಾಜ್ಯ ಸುರಿಯಲಾಗುತ್ತಿದೆ.

ನಿನ್ನೆ ಮಂಗಳೂರಿನಲ್ಲಿ ಅಕಾಲಿಕ ಮಳೆ ಬಂದಿದೆ. ಕೆಲ ತಿಂಗಳಲ್ಲೇ ಮುಂಗಾರು ಸಹ ಆರಂಭವಾಗಲಿದೆ. ಒಂದೊಮ್ಮೆ ಕಸ ಸುರಿಯುವುದು ಮುಂದುವರಿದು, ಮಳೆ ಪ್ರಾರಂಭವಾದರೆ ಮತ್ತೆ ಅನಾಹುತವಾಗುವ ಸಾಧ್ಯತೆಗಳಿವೆ. ಸಮಸ್ಯೆ ಗಂಭೀರವಾಗಿದ್ದು, ನ್ಯಾಯಾಲಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಭೂಭರ್ತಿ ಘಟಕದಲ್ಲಿ ತ್ಯಾಜ್ಯ ಸುರಿಯುವುದನ್ನು ಮುಂದುವರೆಸಿರುವುದು ಅಪಾಯಕಾರಿ ಬೆಳವಣಿಗೆ. ಹೀಗಾಗಿ, ಕೆಎಸ್​ಪಿಸಿಬಿಯ ಸ್ಥಳೀಯ ಪರಿಸರ ಅಧಿಕಾರಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಬೇಕು. ಈ ಕುರಿತ ವರದಿಯನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿತು.

ಭೇಟಿ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನೂ ಜೊತೆಗೆ ಕರೆದೊಯ್ದು ಪರಿಶೀಲಿಸಬೇಕು ಎಂದು ನಿರ್ದೇಶಿಸಿತು. ಅಲ್ಲದೇ, ಭೂಭರ್ತಿ ಘಟಕದ ಜಮೀನು ಸ್ವಾಧೀನಪಡಿಸಿಕೊಳ್ಳಲು ಪಾಲಿಕೆಗೆ ಹಣಕಾಸಿನ ಕೊರತೆ ಇದ್ದರೆ, ಸರ್ಕಾರಕ್ಕೆ ನೆರವು ಕೋರಬೇಕೆಂದು ಸೂಚಿಸಿ, ವಿಚಾರಣೆಯನ್ನು ಏ.16ಕ್ಕೆ ಮುಂದೂಡಿತು.

ಇದನ್ನೂ ಓದಿ.. ರೈಲು ಹತ್ತುವ ಮುನ್ನ ನಿಮ್ಮ ಮೊಬೈಲ್, ಲ್ಯಾಪ್​ಟಾಪ್ ಚಾರ್ಜ್​ ಎಷ್ಟಿದೆ ಒಮ್ಮೆ ನೋಡ್ಕೊಳ್ಳಿ!

ಬೆಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಪಚ್ಚನಾಡಿಯ ಘನತ್ಯಾಜ್ಯ ಭೂಭರ್ತಿ ಘಟಕದಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯುವುದನ್ನು ಮುಂದುರಿಸಿರುವ ಹಿನ್ನೆಲೆ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ವಸ್ತುಸ್ಥಿತಿ ವರದಿ ನೀಡುವಂತೆ ಹೈಕೋರ್ಟ್ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಳೀಯ ಪರಿಸರ ಅಧಿಕಾರಿಗೆ ನಿರ್ದೇಶಿಸಿದೆ.

ಮಹಾನಗರ ವ್ಯಾಪ್ತಿಯ ಪಚ್ಚನಾಡಿಯಲ್ಲಿನ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಉಂಟಾದ ಅನಾಹುತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ಶ್ರೀಧರ್ ಪ್ರಭು ವಾದಿಸಿ, ಭೂಭರ್ತಿ ಘಟಕದಲ್ಲಿ ಈಗಲೂ ತ್ಯಾಜ್ಯ ಸುರಿಯಲಾಗುತ್ತಿದೆ.

ನಿನ್ನೆ ಮಂಗಳೂರಿನಲ್ಲಿ ಅಕಾಲಿಕ ಮಳೆ ಬಂದಿದೆ. ಕೆಲ ತಿಂಗಳಲ್ಲೇ ಮುಂಗಾರು ಸಹ ಆರಂಭವಾಗಲಿದೆ. ಒಂದೊಮ್ಮೆ ಕಸ ಸುರಿಯುವುದು ಮುಂದುವರಿದು, ಮಳೆ ಪ್ರಾರಂಭವಾದರೆ ಮತ್ತೆ ಅನಾಹುತವಾಗುವ ಸಾಧ್ಯತೆಗಳಿವೆ. ಸಮಸ್ಯೆ ಗಂಭೀರವಾಗಿದ್ದು, ನ್ಯಾಯಾಲಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಭೂಭರ್ತಿ ಘಟಕದಲ್ಲಿ ತ್ಯಾಜ್ಯ ಸುರಿಯುವುದನ್ನು ಮುಂದುವರೆಸಿರುವುದು ಅಪಾಯಕಾರಿ ಬೆಳವಣಿಗೆ. ಹೀಗಾಗಿ, ಕೆಎಸ್​ಪಿಸಿಬಿಯ ಸ್ಥಳೀಯ ಪರಿಸರ ಅಧಿಕಾರಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಬೇಕು. ಈ ಕುರಿತ ವರದಿಯನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿತು.

ಭೇಟಿ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನೂ ಜೊತೆಗೆ ಕರೆದೊಯ್ದು ಪರಿಶೀಲಿಸಬೇಕು ಎಂದು ನಿರ್ದೇಶಿಸಿತು. ಅಲ್ಲದೇ, ಭೂಭರ್ತಿ ಘಟಕದ ಜಮೀನು ಸ್ವಾಧೀನಪಡಿಸಿಕೊಳ್ಳಲು ಪಾಲಿಕೆಗೆ ಹಣಕಾಸಿನ ಕೊರತೆ ಇದ್ದರೆ, ಸರ್ಕಾರಕ್ಕೆ ನೆರವು ಕೋರಬೇಕೆಂದು ಸೂಚಿಸಿ, ವಿಚಾರಣೆಯನ್ನು ಏ.16ಕ್ಕೆ ಮುಂದೂಡಿತು.

ಇದನ್ನೂ ಓದಿ.. ರೈಲು ಹತ್ತುವ ಮುನ್ನ ನಿಮ್ಮ ಮೊಬೈಲ್, ಲ್ಯಾಪ್​ಟಾಪ್ ಚಾರ್ಜ್​ ಎಷ್ಟಿದೆ ಒಮ್ಮೆ ನೋಡ್ಕೊಳ್ಳಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.