ETV Bharat / state

ರಸ್ತೆಗಿಳಿದ ಬಿಸಿಯೂಟ ಕಾರ್ಯಕರ್ತೆಯರು: ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಪೊಲೀಸ್​ ವಶಕ್ಕೆ - ಬಿಸಿಯೂಟ ಕಾರ್ಯಕರ್ತೆಯರ

ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಇಂದು ಬಿಸಿಯೂಟ ಕಾರ್ಯಕರ್ತೆಯರು ಫ್ರೀಡಂಪಾರ್ಕ್ ಬಳಿ ಸಾವಿರ ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಂಘಟನೆಯ ರಾಜ್ಯಾಧ್ಯಕ್ಷೆಯನ್ನು ವಶಕ್ಕೆ ಪಡೆದಿದ್ದಾರೆ.

Meal workers protest news
ರಸ್ತೆಗಿಳಿದ ಬಿಸಿಯೂಟ ಕಾರ್ಯಕರ್ತೆಯರು: ಅಧ್ಯಕ್ಷೆ ವರಲಕ್ಷೀ ಪೊಲೀಸ್​ ವಶಕ್ಕೆ
author img

By

Published : Feb 3, 2020, 4:59 PM IST

ಬೆಂಗಳೂರು: ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಇಂದು ಬಿಸಿಯೂಟ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆಗೆ ಮುಂದಾಗಿದ್ದು, ಮುಂಜಾಗೃತ ಕ್ರಮವಾಗಿ ನಗರ ಆಯುಕ್ತ ಭಾಸ್ಕರ್ ರಾವ್ ಅವರು ರ‍್ಯಾಲಿಗೆ ಅವಕಾಶ ಮಾಡಿ‌ಕೊಡದೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಆದರೆ ನಿಷೇಧಾಜ್ಞೆ ಲೆಕ್ಕಿಸದೇ ಬೀದಿಗಿಳಿದಿರುವ ಕಾರಣ ಮುಂಜಾಗೃತ ಕ್ರಮವಾಗಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮೀ ಅವರನ್ನ ಪಶ್ಚಿಮ ವಿಭಾಗ ಪೊಲೀಸರು ಮನೆಯಲ್ಲಿಯೇ ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿಟ್ಟಿದ್ದಾರೆ. ಹೀಗಾಗಿ ರ‍್ಯಾಲಿ ನಡೆಸಲು ತಯಾರಾಗಿದ್ದ ಪ್ಲಾನ್ಅನ್ನು ಸದ್ಯ ಮೊಟಕುಗೊಳಿಸಿದ್ದಾರೆ.

ಮತ್ತೊಂದೆಡೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳ ಬಳಿ ಖಾಕಿ ಕಣ್ಗಾವಲಿದ್ದು, ಯಾರಿಗೂ ಪ್ರತಿಭಟನೆಗೆ ಅವಕಾಶ ಮಾಡಿಕೊಡದೆ ಶಾಂತಿಯುತವಾಗಿರುವಂತೆ ಸೂಚನೆ ನೀಡಿದ್ದಾರೆ.

ಆಯುಕ್ತರ ಸೂಚನೆ ಇದ್ದರೂ ಕೂಡ ಇದನ್ನ ಲೆಕ್ಕಿಸದೇ ಫ್ರೀಡಂ ಪಾರ್ಕ್ ಬಳಿ ಸಾವಿರ ಮಂದಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ನಿಷೇಧಾಜ್ಞೆ ನಿಯಮ ಉಲ್ಲಂಘಿಸಿದ ಕಾರಣ ಪಶ್ಚಿಮ ವಿಭಾಗ ಪೊಲೀಸರು ಕಾನೂನು ಕೈಗೊಳ್ಳಲು ಮುಂದಾಗಿದ್ದಾರೆ.

ಬೆಂಗಳೂರು: ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಇಂದು ಬಿಸಿಯೂಟ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆಗೆ ಮುಂದಾಗಿದ್ದು, ಮುಂಜಾಗೃತ ಕ್ರಮವಾಗಿ ನಗರ ಆಯುಕ್ತ ಭಾಸ್ಕರ್ ರಾವ್ ಅವರು ರ‍್ಯಾಲಿಗೆ ಅವಕಾಶ ಮಾಡಿ‌ಕೊಡದೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಆದರೆ ನಿಷೇಧಾಜ್ಞೆ ಲೆಕ್ಕಿಸದೇ ಬೀದಿಗಿಳಿದಿರುವ ಕಾರಣ ಮುಂಜಾಗೃತ ಕ್ರಮವಾಗಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮೀ ಅವರನ್ನ ಪಶ್ಚಿಮ ವಿಭಾಗ ಪೊಲೀಸರು ಮನೆಯಲ್ಲಿಯೇ ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿಟ್ಟಿದ್ದಾರೆ. ಹೀಗಾಗಿ ರ‍್ಯಾಲಿ ನಡೆಸಲು ತಯಾರಾಗಿದ್ದ ಪ್ಲಾನ್ಅನ್ನು ಸದ್ಯ ಮೊಟಕುಗೊಳಿಸಿದ್ದಾರೆ.

ಮತ್ತೊಂದೆಡೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳ ಬಳಿ ಖಾಕಿ ಕಣ್ಗಾವಲಿದ್ದು, ಯಾರಿಗೂ ಪ್ರತಿಭಟನೆಗೆ ಅವಕಾಶ ಮಾಡಿಕೊಡದೆ ಶಾಂತಿಯುತವಾಗಿರುವಂತೆ ಸೂಚನೆ ನೀಡಿದ್ದಾರೆ.

ಆಯುಕ್ತರ ಸೂಚನೆ ಇದ್ದರೂ ಕೂಡ ಇದನ್ನ ಲೆಕ್ಕಿಸದೇ ಫ್ರೀಡಂ ಪಾರ್ಕ್ ಬಳಿ ಸಾವಿರ ಮಂದಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ನಿಷೇಧಾಜ್ಞೆ ನಿಯಮ ಉಲ್ಲಂಘಿಸಿದ ಕಾರಣ ಪಶ್ಚಿಮ ವಿಭಾಗ ಪೊಲೀಸರು ಕಾನೂನು ಕೈಗೊಳ್ಳಲು ಮುಂದಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.