ETV Bharat / state

ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್​​ ಹಿರಿಯ ನಾಯಕರ ಸಭೆ - ವಿಧಾನ ಸೌಧದ ಪ್ರತಿಪಕ್ಷ ನಾಯಕರ ಕಚೇರಿ

ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ ನಡೆಯಿತು.

senior leaders Meeting
ಹಿರಿಯ ನಾಯಕರ ಸಭೆ
author img

By

Published : Mar 11, 2020, 12:27 PM IST

ಬೆಂಗಳೂರು: ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ ನಡೆಯಿತು.

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಡಿಸಿಎಂ ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಮಾಜಿ ಸಚಿವ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ತುಕಾರಾಂ ಭಾಗಿಯಾಗಿದ್ದರು. ಮಾಜಿ ಸ್ಪೀಕರ್ ಹಾಗೂ ಶಾಸಕ ರಮೇಶ್ ಕುಮಾರ್ ವಿರುದ್ಧ ಸಚಿವ ಡಾ. ಕೆ.ಸುಧಾಕರ್ ಮಾಡಿರುವ ಆರೋಪದ ಹಕ್ಕುಚ್ಯುತಿ ಮಂಡನೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ವಿಧಾನಸೌಧದ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ

ಮಂಗಳವಾರ ಸ್ಪೀಕರ್​ಗೆ ನೋಟಿಸ್ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಸದನದಲ್ಲಿ ಈ ಬಗ್ಗೆ ಹಕ್ಕುಚ್ಯುತಿ ಮಂಡಿಸುವುದಾಗಿ ನಿನ್ನೆಯೇ ತಿಳಿಸಿದ್ದರು. ಈ ಸಂಬಂಧ ಹಿರಿಯ ನಾಯಕರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡರು.

ಕಾಂಗ್ರೆಸ್ ಹಿರಿಯ ನಾಯಕರ ಸಭೆ ಮುಕ್ತಾಯವಾದ ಬಳಿಕ ಕಾಂಗ್ರೆಸ್​ನ ಎಲ್ಲಾ ನಾಯಕರು ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳಲು ತೆರಳಿದರು.

ಬೆಂಗಳೂರು: ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ ನಡೆಯಿತು.

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಡಿಸಿಎಂ ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಮಾಜಿ ಸಚಿವ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ತುಕಾರಾಂ ಭಾಗಿಯಾಗಿದ್ದರು. ಮಾಜಿ ಸ್ಪೀಕರ್ ಹಾಗೂ ಶಾಸಕ ರಮೇಶ್ ಕುಮಾರ್ ವಿರುದ್ಧ ಸಚಿವ ಡಾ. ಕೆ.ಸುಧಾಕರ್ ಮಾಡಿರುವ ಆರೋಪದ ಹಕ್ಕುಚ್ಯುತಿ ಮಂಡನೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ವಿಧಾನಸೌಧದ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ

ಮಂಗಳವಾರ ಸ್ಪೀಕರ್​ಗೆ ನೋಟಿಸ್ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಸದನದಲ್ಲಿ ಈ ಬಗ್ಗೆ ಹಕ್ಕುಚ್ಯುತಿ ಮಂಡಿಸುವುದಾಗಿ ನಿನ್ನೆಯೇ ತಿಳಿಸಿದ್ದರು. ಈ ಸಂಬಂಧ ಹಿರಿಯ ನಾಯಕರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡರು.

ಕಾಂಗ್ರೆಸ್ ಹಿರಿಯ ನಾಯಕರ ಸಭೆ ಮುಕ್ತಾಯವಾದ ಬಳಿಕ ಕಾಂಗ್ರೆಸ್​ನ ಎಲ್ಲಾ ನಾಯಕರು ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳಲು ತೆರಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.