ETV Bharat / state

ಬೆಂಗಳೂರಲ್ಲಿ ವರುಣನ ಆರ್ಭಟ.. 30 ನಿಮಿಷದಲ್ಲಿ 43 ಮಿ.ಮೀ. ದಾಖಲೆಯ ಮಳೆ - Rainfall in Bangalore news

ಬೆಂಗಳೂರಿನಲ್ಲಿ ಕೇವಲ 30 ನಿಮಿಷದಲ್ಲಿ 43 ಮಿ.ಮೀ. ಮಳೆಯಾಗಿದ್ದು, ನಿನ್ನೆ ಸುರಿದ ಮಳೆ ಇಡೀ ತಿಂಗಳ ಸರಾಸರಿ ಮಳೆಗೆ ಸಮ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Rainfall in Bangalore
ಬೆಂಗಳೂರಿನಲ್ಲಿ 30 ನಿಮಿಷದಲ್ಲಿ 43 ಮಿ.ಮೀ. ಮಳೆ
author img

By

Published : Apr 24, 2021, 10:45 AM IST

ಬೆಂಗಳೂರು: ನಗರದಲ್ಲಿ ನಿನ್ನೆ ತಡರಾತ್ರಿ 30 ನಿಮಿಷಗಳಲ್ಲಿ 43 ಮಿ.ಮೀ. ನಷ್ಟು ಮಳೆ ಸುರಿದಿದೆ. ಐಎಂಡಿಯ ಸ್ವಯಂಚಾಲಿತ ಹವಾಮಾನ ಕೇಂದ್ರವು ಕೇವಲ 15 ನಿಮಿಷಗಳಲ್ಲಿ 31 ಮಿ.ಮೀ ಸುರಿದಿದೆ ಎಂದು ಸಾಮಾಜಿಕ ಜಾಲತಾಣದ ಪುಟದಲ್ಲಿ ದಾಖಲಿಸಿದೆ.

ಬೆಂಗಳೂರಿನಲ್ಲಿ 30 ನಿಮಿಷದಲ್ಲಿ 43 ಮಿ.ಮೀ. ಮಳೆ

ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ವರುಣನ ಅರ್ಭಟ ಹೆಚ್ಚಾಗಿತ್ತು. ರಾಜಧಾನಿಯಲ್ಲಿ ಸಂಜೆ ಮತ್ತು ತಡರಾತ್ರಿ ಸುರಿದ ಭಾರಿ ಮಳೆಗೆ ಗುಂಡಿಗಳಲ್ಲಿ ನೀರು ತುಂಬಿ ಸಂಪೂರ್ಣ ರಸ್ತೆ ಜಲವೃತಗೊಂಡಿತ್ತು.

ವೀಕೆಂಡ್​​ ಲಾಕ್​ಡೌನ್​ ಹಿನ್ನೆಲೆ ಬಸ್​ಗಳ ಸಂಖ್ಯೆ ಕೂಡ ಗಣನೀಯವಾಗಿ ಕಡಿಮೆಯಿದ್ದು, ಜನರು ತೊಂದರೆ ಅನುಭವಿಸುವಂತಾಗಿತ್ತು. ಮೆಜೆಸ್ಟಿಕ್​, ಗಾಂಧಿನಗರ, ಯಶವಂತಪುರ, ದಾಸರಹಳ್ಳಿ, ರಾಜಾಜಿನಗರ, ಬಸವೇಶ್ವರನಗರ, ವಿಲ್ಸನ್​ ಗಾರ್ಡನ್​, ಶಾಂತಿ ನಗರ, ಕೋರಮಂಗಲ ಸೇರಿದಂತೆ ಹಲವೆಡೆ ಮಳೆಗೆ ಕೆಲ ಹೊತ್ತು ಟ್ರಾಫಿಕ್​ ಸಮಸ್ಯೆ ಉಂಟಾಗಿತ್ತು.

ಓದಿ: ಬೆಂಗಳೂರಿನಲ್ಲಿ ನಾಲ್ಕನೇ ದಿನವೂ ಸುರಿಯುತ್ತಿರುವ ಅಶ್ವಿನಿ ಮಳೆ: ಮುಂದಿನ 3 ದಿನವೂ ಮಳೆ ಸಾಧ್ಯತೆ

ತಡರಾತ್ರಿ ಕೂಡ ಸುಮಾರು ಒಂದು ಗಂಟೆ ಗುಡುಗು-ಮಿಂಚಿನಿಂದ ಕೂಡಿದ ಭಾರಿ ಮಳೆಯಾಗಿದೆ, ತಗ್ಗು ಪ್ರದೇಶದ ಹಲವೆಡೆ ಮಳೆ ನೀರು ನುಗ್ಗಿದೆ. ಅರಬ್ಬೀ ಸಮುದ್ರದಲ್ಲಿ ಸುಳಿಗಾಳಿ ಎದ್ದಿರುವುದರಿಂದ ನಿನ್ನೆ ಕೂಡ ರಾಜಧಾನಿಯಲ್ಲಿ ಭಾರಿ ಮಳೆ ಸುರಿದಿದೆ.

ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಸಾಧಾರಣ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇಂದೂ ಕೂಡ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು: ನಗರದಲ್ಲಿ ನಿನ್ನೆ ತಡರಾತ್ರಿ 30 ನಿಮಿಷಗಳಲ್ಲಿ 43 ಮಿ.ಮೀ. ನಷ್ಟು ಮಳೆ ಸುರಿದಿದೆ. ಐಎಂಡಿಯ ಸ್ವಯಂಚಾಲಿತ ಹವಾಮಾನ ಕೇಂದ್ರವು ಕೇವಲ 15 ನಿಮಿಷಗಳಲ್ಲಿ 31 ಮಿ.ಮೀ ಸುರಿದಿದೆ ಎಂದು ಸಾಮಾಜಿಕ ಜಾಲತಾಣದ ಪುಟದಲ್ಲಿ ದಾಖಲಿಸಿದೆ.

ಬೆಂಗಳೂರಿನಲ್ಲಿ 30 ನಿಮಿಷದಲ್ಲಿ 43 ಮಿ.ಮೀ. ಮಳೆ

ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ವರುಣನ ಅರ್ಭಟ ಹೆಚ್ಚಾಗಿತ್ತು. ರಾಜಧಾನಿಯಲ್ಲಿ ಸಂಜೆ ಮತ್ತು ತಡರಾತ್ರಿ ಸುರಿದ ಭಾರಿ ಮಳೆಗೆ ಗುಂಡಿಗಳಲ್ಲಿ ನೀರು ತುಂಬಿ ಸಂಪೂರ್ಣ ರಸ್ತೆ ಜಲವೃತಗೊಂಡಿತ್ತು.

ವೀಕೆಂಡ್​​ ಲಾಕ್​ಡೌನ್​ ಹಿನ್ನೆಲೆ ಬಸ್​ಗಳ ಸಂಖ್ಯೆ ಕೂಡ ಗಣನೀಯವಾಗಿ ಕಡಿಮೆಯಿದ್ದು, ಜನರು ತೊಂದರೆ ಅನುಭವಿಸುವಂತಾಗಿತ್ತು. ಮೆಜೆಸ್ಟಿಕ್​, ಗಾಂಧಿನಗರ, ಯಶವಂತಪುರ, ದಾಸರಹಳ್ಳಿ, ರಾಜಾಜಿನಗರ, ಬಸವೇಶ್ವರನಗರ, ವಿಲ್ಸನ್​ ಗಾರ್ಡನ್​, ಶಾಂತಿ ನಗರ, ಕೋರಮಂಗಲ ಸೇರಿದಂತೆ ಹಲವೆಡೆ ಮಳೆಗೆ ಕೆಲ ಹೊತ್ತು ಟ್ರಾಫಿಕ್​ ಸಮಸ್ಯೆ ಉಂಟಾಗಿತ್ತು.

ಓದಿ: ಬೆಂಗಳೂರಿನಲ್ಲಿ ನಾಲ್ಕನೇ ದಿನವೂ ಸುರಿಯುತ್ತಿರುವ ಅಶ್ವಿನಿ ಮಳೆ: ಮುಂದಿನ 3 ದಿನವೂ ಮಳೆ ಸಾಧ್ಯತೆ

ತಡರಾತ್ರಿ ಕೂಡ ಸುಮಾರು ಒಂದು ಗಂಟೆ ಗುಡುಗು-ಮಿಂಚಿನಿಂದ ಕೂಡಿದ ಭಾರಿ ಮಳೆಯಾಗಿದೆ, ತಗ್ಗು ಪ್ರದೇಶದ ಹಲವೆಡೆ ಮಳೆ ನೀರು ನುಗ್ಗಿದೆ. ಅರಬ್ಬೀ ಸಮುದ್ರದಲ್ಲಿ ಸುಳಿಗಾಳಿ ಎದ್ದಿರುವುದರಿಂದ ನಿನ್ನೆ ಕೂಡ ರಾಜಧಾನಿಯಲ್ಲಿ ಭಾರಿ ಮಳೆ ಸುರಿದಿದೆ.

ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಸಾಧಾರಣ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇಂದೂ ಕೂಡ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.