ETV Bharat / state

ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹ ಅಭಿಯಾನಕ್ಕೆ ಸಚಿವ ಡಿ.ವಿ.ಎಸ್ ಚಾಲನೆ

author img

By

Published : Jan 31, 2021, 8:08 AM IST

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನಕ್ಕೆ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಚಾಲನೆ ನೀಡಿದರು.

Minister D V Sadananda Gowda launches Shree Rama Mandir construction fund raising campaign
ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹ ಅಭಿಯಾನಕ್ಕೆ ಸಚಿವ ಡಿ.ವಿ.ಎಸ್ ಚಾಲನೆ

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ನಿಧಿ ಸಂಗ್ರಹ ಅಭಿಯಾನಕ್ಕೆ ಬಿಜಿಪಿ ಹಿರಿಯ ನಾಯಕ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ವಿ.ಎಸ್ ಸಂಘ ಪರಿವಾರದ ನೇತೃತ್ವದಲ್ಲಿ ನಡೆದ ಅಯೋಧ್ಯೆ ಆಂದೋಲನವು ಭಾರತೀಯ ಸಮಾಜದಲ್ಲಿ ಜಾಗೃತಿ ಒಗ್ಗಟ್ಟು, ಸಾಮರಸ್ಯ ಮೂಡಿಸಿತು. ದೇಶಭಕ್ತಿಯನ್ನು ಜಾಗೃತಗೊಳಿಸಿತು. ನಮ್ಮ ದೇಶದಲ್ಲಿ ಹಲವು ಪ್ರಾಂತ, ವರ್ಗ, ಭಾಷೆ, ಆಚಾರ-ವಿಚಾರಗಳು ಇವೆ. ಆದರೆ ದೇಶದಲ್ಲಿ ಐಕ್ಯತೆ ಸಾಧಿಸುವ ಶಕ್ತಿ ಅಯೋಧ್ಯೆ ಶ್ರೀರಾಮಚಂದ್ರನಿಗಿದೆ ಎಂದರು.

ದೇಶದ ಸರ್ವೋಚ್ಛ ನ್ಯಾಯಾಲಯವು ರಾಮಜನ್ಮಭೂಮಿ ಪರವಾಗಿ ತೀರ್ಪು ನೀಡಿತು. ನಮ್ಮ ಸುದೈವಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗಲೇ ಈ ತೀರ್ಪು ಬಂತು. ಹಾಗೆಯೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಸರ್ಕಾರವು ಸಂವಿಧಾನದ 370ನೇ ಪರಿಚ್ಛೇದವನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರವನ್ನು ದೇಶದಲ್ಲಿ ಎಲ್ಲ ರೀತಿಯಿಂದಲೂ ಐಕ್ಯಗೊಳಿಸುವ ಕೆಲಸಮಾಡಿದೆ ಎಂದು ಹೇಳಿದರು.

ಓದಿ : ಛಲಬೇಕು ಸಾಧಕನಿಗೆ.. ಕಾಲಿನಿಂದ ಪರೀಕ್ಷೆ ಬರೆದು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ದಿವ್ಯಾಂಗ..

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ನಿಧಿ ಸಂಗ್ರಹ ಅಭಿಯಾನಕ್ಕೆ ಬಿಜಿಪಿ ಹಿರಿಯ ನಾಯಕ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ವಿ.ಎಸ್ ಸಂಘ ಪರಿವಾರದ ನೇತೃತ್ವದಲ್ಲಿ ನಡೆದ ಅಯೋಧ್ಯೆ ಆಂದೋಲನವು ಭಾರತೀಯ ಸಮಾಜದಲ್ಲಿ ಜಾಗೃತಿ ಒಗ್ಗಟ್ಟು, ಸಾಮರಸ್ಯ ಮೂಡಿಸಿತು. ದೇಶಭಕ್ತಿಯನ್ನು ಜಾಗೃತಗೊಳಿಸಿತು. ನಮ್ಮ ದೇಶದಲ್ಲಿ ಹಲವು ಪ್ರಾಂತ, ವರ್ಗ, ಭಾಷೆ, ಆಚಾರ-ವಿಚಾರಗಳು ಇವೆ. ಆದರೆ ದೇಶದಲ್ಲಿ ಐಕ್ಯತೆ ಸಾಧಿಸುವ ಶಕ್ತಿ ಅಯೋಧ್ಯೆ ಶ್ರೀರಾಮಚಂದ್ರನಿಗಿದೆ ಎಂದರು.

ದೇಶದ ಸರ್ವೋಚ್ಛ ನ್ಯಾಯಾಲಯವು ರಾಮಜನ್ಮಭೂಮಿ ಪರವಾಗಿ ತೀರ್ಪು ನೀಡಿತು. ನಮ್ಮ ಸುದೈವಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗಲೇ ಈ ತೀರ್ಪು ಬಂತು. ಹಾಗೆಯೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಸರ್ಕಾರವು ಸಂವಿಧಾನದ 370ನೇ ಪರಿಚ್ಛೇದವನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರವನ್ನು ದೇಶದಲ್ಲಿ ಎಲ್ಲ ರೀತಿಯಿಂದಲೂ ಐಕ್ಯಗೊಳಿಸುವ ಕೆಲಸಮಾಡಿದೆ ಎಂದು ಹೇಳಿದರು.

ಓದಿ : ಛಲಬೇಕು ಸಾಧಕನಿಗೆ.. ಕಾಲಿನಿಂದ ಪರೀಕ್ಷೆ ಬರೆದು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ದಿವ್ಯಾಂಗ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.