ETV Bharat / state

ಪ್ರಯಾಣಿಕರ ಸಮಸ್ಯೆ ಆಲಿಸಲು ಮೆಜೆಸ್ಟಿಕ್​ಗೆ ಬಂದ ಸಚಿವ ಲಕ್ಷ್ಮಣ ಸವದಿ

author img

By

Published : Apr 27, 2021, 12:29 PM IST

ಸಚಿವ ಲಕ್ಷಣ ಸವದಿ ಮತ್ತು ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರಯಾಣಿಕರ ಸಮಸ್ಯೆ ಆಲಿಸಿದರು.

Minister Laxman Savadi Visited Majestic Bus Stand Bengaluru
ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ ಹಿನ್ನೆಲೆ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದು, ರಾಜ್ಯ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಜಿಲ್ಲೆಗಳಿಗೆ ಬಸ್​ ವ್ಯವಸ್ಥೆ ಮಾಡಿದೆ.

ಹೀಗಾಗಿ ಇಂದು ಪ್ರಯಾಣಿಕರ ಸಮಸ್ಯೆ ಆಲಿಸಲು ಮೆಜೆಸ್ಟಿಕ್ ಬಸ್​ ನಿಲ್ದಾಣಕ್ಕೆ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಭೇಟಿ ನೀಡಿ‌ದರು. ಊರಿನತ್ತ ತೆರಳುತ್ತಿದ್ದ ಪ್ರಯಾಣಿಕರುನ್ನು ಮಾತನಾಡಿಸಿದ ಸಚಿವರು, ಸರಿಯಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು.

ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಸಚಿವ ಲಕ್ಷ್ಮಣ ಸವದಿ

ಓದಿ : ಡಿಕೆಶಿ ಬಳಿ ತಮ್ಮ ಸಮಸ್ಯೆ ಹೇಳಿಕೊಂಡ ಮಂಗಳಮುಖಿಯರು

ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ ಕೂಡ ಬಸ್​ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿದರು. ಪ್ರಯಾಣಿಕರ ದಟ್ಟಣೆ ಹೆಚ್ಚಾದಂತೆ ಹೆಚ್ಚುವರಿ ಬಸ್​ಗಳನ್ನು ಬಿಡಲು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ ಹಿನ್ನೆಲೆ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದು, ರಾಜ್ಯ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಜಿಲ್ಲೆಗಳಿಗೆ ಬಸ್​ ವ್ಯವಸ್ಥೆ ಮಾಡಿದೆ.

ಹೀಗಾಗಿ ಇಂದು ಪ್ರಯಾಣಿಕರ ಸಮಸ್ಯೆ ಆಲಿಸಲು ಮೆಜೆಸ್ಟಿಕ್ ಬಸ್​ ನಿಲ್ದಾಣಕ್ಕೆ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಭೇಟಿ ನೀಡಿ‌ದರು. ಊರಿನತ್ತ ತೆರಳುತ್ತಿದ್ದ ಪ್ರಯಾಣಿಕರುನ್ನು ಮಾತನಾಡಿಸಿದ ಸಚಿವರು, ಸರಿಯಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು.

ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಸಚಿವ ಲಕ್ಷ್ಮಣ ಸವದಿ

ಓದಿ : ಡಿಕೆಶಿ ಬಳಿ ತಮ್ಮ ಸಮಸ್ಯೆ ಹೇಳಿಕೊಂಡ ಮಂಗಳಮುಖಿಯರು

ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ ಕೂಡ ಬಸ್​ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿದರು. ಪ್ರಯಾಣಿಕರ ದಟ್ಟಣೆ ಹೆಚ್ಚಾದಂತೆ ಹೆಚ್ಚುವರಿ ಬಸ್​ಗಳನ್ನು ಬಿಡಲು ಅಧಿಕಾರಿಗಳಿಗೆ ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.