ETV Bharat / state

ಸಚಿವ ಎಂಟಿಬಿ ನಾಗರಾಜ್​ಗೆ ಕೊರೊನಾ ದೃಢ

author img

By

Published : Jan 15, 2022, 9:10 PM IST

ಪೌರಡಾಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಕೊರೊನಾ ದೃಢಪಟ್ಟಿದೆ. ಈ ಕುರಿತಂತೆ ಸ್ವತಃ ಸಚಿವರೇ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

Minister MTB Nagaraj tested covid positive
ಸಚಿವ ಎಂಟಿಬಿ ನಾಗರಾಜ್​ಗೆ ಕೊರೊನಾ ದೃಢ

ಬೆಂಗಳೂರು: ಪೌರಡಾಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಅವರಿಗೂ ಕೊರೊನಾ ದೃಢಪಟ್ಟಿದೆ. ಕಳೆದ ಎರಡು ದಿನಗಳಿಂದ ನಾಗರಾಜ್​ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಕೋವಿಡ್ ತಪಾಸಣೆ ಮಾಡಿಸಿಕೊಂಡಿದ್ದಾರೆ. ಆಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಸೋಂಕಿನ ಸೌಮ್ಯ ಲಕ್ಷಣಗಳಿರುವ ಕಾರಣ ಹೋಮ್​​​ ಐಸೋಲೇಷನ್​ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

  • ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ...#Covid_19

    — N.Nagaraj (MTB) (@MtbNagaraju) January 15, 2022 " class="align-text-top noRightClick twitterSection" data=" ">

ನನಗೆ ಕೋವಿಡ್ ದೃಢಪಟ್ಟಿದ್ದು, ನಾನು ಆರೋಗ್ಯವಾಗಿದ್ದೇನೆ. ಕಳೆದ ಎರಡ್ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ತಪಾಸಣೆ ಮಾಡಿಸಿಕೊಳ್ಳಿ ಎಂದು ಸಚಿವರು ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಕಂದಾಯ ಸಚಿವ ಆರ್.ಅಶೋಕ್ ಅವರಿಗೂ ಕೊರೊನಾ ಸೋಂಕು ‌ದೃಢಪಟ್ಟಿತ್ತು.

ಮತ್ತೆ 114 ಮಂದಿ ಪೊಲೀಸರಿಗೆ ತಗುಲಿದ ಕೊರೊನಾ:

ಇಂದೂ 114 ಮಂದಿ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಸುಮಾರು 23 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 618 ಮಂದಿ ಪೊಲೀಸರಿಗೆ ಕೋವಿಡ್ ದೃಢಪಟ್ಟಿದೆ.

ಇದನ್ನೂ ಓದಿ: ರಾಜ್ಯದಲ್ಲಿಂದು 32,793 ಕೊರೊನಾ ಕೇಸ್​ ಪತ್ತೆ: ಪಾಸಿಟಿವಿಟಿ ದರ 15%ಕ್ಕೆ ಏರಿಕೆ

ಬೆಂಗಳೂರು: ಪೌರಡಾಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಅವರಿಗೂ ಕೊರೊನಾ ದೃಢಪಟ್ಟಿದೆ. ಕಳೆದ ಎರಡು ದಿನಗಳಿಂದ ನಾಗರಾಜ್​ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಕೋವಿಡ್ ತಪಾಸಣೆ ಮಾಡಿಸಿಕೊಂಡಿದ್ದಾರೆ. ಆಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಸೋಂಕಿನ ಸೌಮ್ಯ ಲಕ್ಷಣಗಳಿರುವ ಕಾರಣ ಹೋಮ್​​​ ಐಸೋಲೇಷನ್​ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

  • ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ...#Covid_19

    — N.Nagaraj (MTB) (@MtbNagaraju) January 15, 2022 " class="align-text-top noRightClick twitterSection" data=" ">

ನನಗೆ ಕೋವಿಡ್ ದೃಢಪಟ್ಟಿದ್ದು, ನಾನು ಆರೋಗ್ಯವಾಗಿದ್ದೇನೆ. ಕಳೆದ ಎರಡ್ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ತಪಾಸಣೆ ಮಾಡಿಸಿಕೊಳ್ಳಿ ಎಂದು ಸಚಿವರು ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಕಂದಾಯ ಸಚಿವ ಆರ್.ಅಶೋಕ್ ಅವರಿಗೂ ಕೊರೊನಾ ಸೋಂಕು ‌ದೃಢಪಟ್ಟಿತ್ತು.

ಮತ್ತೆ 114 ಮಂದಿ ಪೊಲೀಸರಿಗೆ ತಗುಲಿದ ಕೊರೊನಾ:

ಇಂದೂ 114 ಮಂದಿ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಸುಮಾರು 23 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 618 ಮಂದಿ ಪೊಲೀಸರಿಗೆ ಕೋವಿಡ್ ದೃಢಪಟ್ಟಿದೆ.

ಇದನ್ನೂ ಓದಿ: ರಾಜ್ಯದಲ್ಲಿಂದು 32,793 ಕೊರೊನಾ ಕೇಸ್​ ಪತ್ತೆ: ಪಾಸಿಟಿವಿಟಿ ದರ 15%ಕ್ಕೆ ಏರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.