ETV Bharat / state

ಕೆಇಎ ಪರೀಕ್ಷೆ ಹಗರಣದ ಆರೋಪಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ: ಸಚಿವ ಪರಮೇಶ್ವರ್

ಕೆಇಎ ಪರೀಕ್ಷೆ ಹಗರಣದ ಕಿಂಗ್‌ಪಿನ್‌ ಪೊಲೀಸರ ನಿರ್ಲಕ್ಷ್ಯದಿಂದ ತಪ್ಪಿಸಿ‌ಕೊಂಡಿದ್ದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

author img

By ETV Bharat Karnataka Team

Published : Nov 7, 2023, 6:51 PM IST

Etv Bharatminister-parameshwar-reaction-on-kea-exam-scam-accused
ಕೆಇಎ ಪರೀಕ್ಷೆ ಹಗರಣ ಆರೋಪಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಇದೆ: ಸಚಿವ ಪರಮೇಶ್ವರ್

ಬೆಂಗಳೂರು: ಕೆಇಎ ಪರೀಕ್ಷೆ ಹಗರಣದ ಕಿಂಗ್‌ಪಿನ್‌ ಆರ್.ಡಿ‌.ಪಾಟೀಲ್ ಮಹಾರಾಷ್ಟ್ರದಲ್ಲಿ ತಲೆ‌ಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಆರೋಪಿ ಆರ್.ಡಿ.ಪಾಡೀಲ್ ಪರಾರಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆತ ಮಹಾರಾಷ್ಟ್ರದಲ್ಲಿ ತಲೆ ಮರೆಸಿಕೊಂಡಿದ್ದಾನೆಂಬ ಮಾಹಿತಿ ಇದೆ. ಪೊಲೀಸರ ನಿರ್ಲಕ್ಷ್ಯದಿಂದ ತಪ್ಪಿಸಿ‌ಕೊಂಡಿದ್ದರೆ ನಿರ್ಧಾಕ್ಷಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಆರ್.ಡಿ.ಪಾಟೀಲ್ ಮೇಲೆ ಸಾಕಷ್ಟು ಕೇಸ್‌ಗಳಿವೆ. ತಪ್ಪಿಸಿಕೊಂಡು ಎಲ್ಲಿಗೆ ಎಷ್ಟು ದಿವಸ ಹೋಗ್ತಾರೆ. ಪ್ರಕರಣವನ್ನು ಅಗತ್ಯವಿದ್ದರೆ ಸಿಐಡಿ ತನಿಖೆಗೆ ಕೊಡುತ್ತೇವೆ ಎಂದರು.

ಮರು ಪರೀಕ್ಷೆ ನಡೆಸುವ ಬಗ್ಗೆ ಕೆಇಎ ತೀರ್ಮಾನ ಮಾಡುತ್ತೆ. ನಮಗೆ ದೂರು ಕೊಟ್ಟ ಹಿನ್ನೆಲೆಯಲ್ಲಿ ತನಿಖೆ ಮಾಡ್ತಿದ್ದೇವೆ. ಕಿಂಗ್‌ಪಿನ್‌ಗಳು ಭಯ ಇಲ್ಲದಿರುವುದಕ್ಕೆ ಇಷ್ಟು ದಿವಸ ಹೀಗೆ ಮಾಡಿದ್ದಾರೆ. ಇನ್ಮುಂದೆ ಹಾಗೆ ಆಗದಂತೆ ಮಾಡ್ತೀವಿ ಎಂದರು.

ಇದೇ ವೇಳೆ, ಒಳಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ಒಳ‌ಮೀಸಲಾತಿ ಜಾರಿಗೆ ಮುನಿಯಪ್ಪ ಸೇರಿ ಎಡ ಸಮುದಾಯ ನಾಯಕರ ಒತ್ತಾಯ ಇದೆ. ನಿನ್ನೆ ಎಡ ಸಮುದಾಯದ ಮುಖಂಡರಿಂದ ಸಭೆ ನಡೆದಿದೆ. ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಚಿತ್ರದುರ್ಗದಲ್ಲಿ ಸಮಾವೇಶ ಮಾಡಿದ್ವಿ. ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸದಾಶಿವ ಆಯೋಗದ ವರದಿ ಇದೆ. ಮೊದಲ ಅಧಿವೇಶನದಲ್ಲೇ ಮಂಡನೆ ಮಾಡುವ ತೀರ್ಮಾನವನ್ನು ಕೂಡ ತೆಗೆದುಕೊಂಡಿದ್ವಿ. ಕಾರಣಾಂತರಗಳಿಂದ ಮೊದಲ ಅಧಿವೇಶನದಲ್ಲಿ ಆಗಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಎರಡನೇ ಅಧಿವೇಶನ ಬೆಳಗಾವಿನಲ್ಲಿ ಆಗುತ್ತೆ. ಅಲ್ಲಿ ಮಾಡಬೇಕು ಅಂತ ಹೇಳಿ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ನಾನು ಮಾದೇವಪ್ಪ, ಮುನಿಯಪ್ಪ ಎಲ್ಲರೂ ಸೇರಿ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಮುಖ್ಯಮಂತ್ರಿಗಳು ಈ ಸಮುದಾಯದ ಮುಖಂಡರ ಜೊತೆ ಚರ್ಚೆ ಮಾಡುತ್ತೇನೆ ಎಂದಿದ್ದಾರೆ. ಈ ಕುರಿತು ನಾನು ತೀರ್ಮಾನ ಮಾಡುತ್ತೇನೆ ಅಂತ ಹೇಳಿದ್ದಾರೆ ಎಂದರು.

ಒಳ ಮೀಸಲಾತಿ ಬಗ್ಗೆ ಚರ್ಚೆ ಆಗಬೇಕು, ಎಲ್ಲರ ಅಭಿಪ್ರಾಯಗಳನ್ನು ತೆಗೆದುಕೊಳ್ಳಬೇಕು. ಎಲ್ಲರ ಮನಸ್ಸುಗಳು ಒಂದಾಗಬೇಕು. ಹಾಗಾಗಿ ಮುಖ್ಯಮಂತ್ರಿಗಳು ಎಲ್ಲರೊಂದಿಗೆ ಚರ್ಚೆ ಮಾಡುವ ತೀರ್ಮಾನ ಮಾಡಿದ್ದಾರೆ. ಈ ಸರ್ಕಾರದಲ್ಲಿ ಮಾಡಬಾರದು ಮಾಡಬೇಕು ಅನ್ನುವಂತ ಭಿನ್ನಾಭಿಪ್ರಾಯಗಳು ಇಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಧಾರವಾಡ: ಕೆಇಎ ಪರೀಕ್ಷೆ ಅಕ್ರಮದ ಬಗ್ಗೆ ಸರ್ಕಾರಕ್ಕೆ ಮೊದಲೇ ದೂರು ನೀಡಿದ್ದ ಅಭ್ಯರ್ಥಿ ಹೇಳಿದ್ದೇನು?

ಆರ್ ಡಿ ಪಾಟೀಲ್ ಎಸ್ಕೇಪ್ ದೃಶ್ಯ ಸಿಸಿಟಿಯಲ್ಲಿ ಸೆರೆ: ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ ಪ್ರಕರಣದ ಕಿಂಗ್‌ಪಿನ್ ಆರ್ ಡಿ ಪಾಟೀಲ್ ವಸತಿ ಸಮುಚ್ಚಯದಿಂದ ಪರಾರಿಯಾಗಿದ್ದ. ಆತ ಕಾಂಪೌಂಡ್ ಹಾರಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಗರದ ಜೇವರ್ಗಿ ರಸ್ತೆಯಲ್ಲಿರುವ ವರ್ಧಾ ಅಪಾರ್ಟ್ಮೆಂಟ್​​ನಿಂದ ಆರ್ ಡಿ ಪಾಟೀಲ್ ಎಸ್ಕೆಪ್ ಆಗಿದ್ದು, ಈ ದೃಶ್ಯ ಜಾಲತಾಣದಲ್ಲಿ ವೈರಲ್​ ಆಗಿತ್ತು.

ಬೆಂಗಳೂರು: ಕೆಇಎ ಪರೀಕ್ಷೆ ಹಗರಣದ ಕಿಂಗ್‌ಪಿನ್‌ ಆರ್.ಡಿ‌.ಪಾಟೀಲ್ ಮಹಾರಾಷ್ಟ್ರದಲ್ಲಿ ತಲೆ‌ಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಆರೋಪಿ ಆರ್.ಡಿ.ಪಾಡೀಲ್ ಪರಾರಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆತ ಮಹಾರಾಷ್ಟ್ರದಲ್ಲಿ ತಲೆ ಮರೆಸಿಕೊಂಡಿದ್ದಾನೆಂಬ ಮಾಹಿತಿ ಇದೆ. ಪೊಲೀಸರ ನಿರ್ಲಕ್ಷ್ಯದಿಂದ ತಪ್ಪಿಸಿ‌ಕೊಂಡಿದ್ದರೆ ನಿರ್ಧಾಕ್ಷಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಆರ್.ಡಿ.ಪಾಟೀಲ್ ಮೇಲೆ ಸಾಕಷ್ಟು ಕೇಸ್‌ಗಳಿವೆ. ತಪ್ಪಿಸಿಕೊಂಡು ಎಲ್ಲಿಗೆ ಎಷ್ಟು ದಿವಸ ಹೋಗ್ತಾರೆ. ಪ್ರಕರಣವನ್ನು ಅಗತ್ಯವಿದ್ದರೆ ಸಿಐಡಿ ತನಿಖೆಗೆ ಕೊಡುತ್ತೇವೆ ಎಂದರು.

ಮರು ಪರೀಕ್ಷೆ ನಡೆಸುವ ಬಗ್ಗೆ ಕೆಇಎ ತೀರ್ಮಾನ ಮಾಡುತ್ತೆ. ನಮಗೆ ದೂರು ಕೊಟ್ಟ ಹಿನ್ನೆಲೆಯಲ್ಲಿ ತನಿಖೆ ಮಾಡ್ತಿದ್ದೇವೆ. ಕಿಂಗ್‌ಪಿನ್‌ಗಳು ಭಯ ಇಲ್ಲದಿರುವುದಕ್ಕೆ ಇಷ್ಟು ದಿವಸ ಹೀಗೆ ಮಾಡಿದ್ದಾರೆ. ಇನ್ಮುಂದೆ ಹಾಗೆ ಆಗದಂತೆ ಮಾಡ್ತೀವಿ ಎಂದರು.

ಇದೇ ವೇಳೆ, ಒಳಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ಒಳ‌ಮೀಸಲಾತಿ ಜಾರಿಗೆ ಮುನಿಯಪ್ಪ ಸೇರಿ ಎಡ ಸಮುದಾಯ ನಾಯಕರ ಒತ್ತಾಯ ಇದೆ. ನಿನ್ನೆ ಎಡ ಸಮುದಾಯದ ಮುಖಂಡರಿಂದ ಸಭೆ ನಡೆದಿದೆ. ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಚಿತ್ರದುರ್ಗದಲ್ಲಿ ಸಮಾವೇಶ ಮಾಡಿದ್ವಿ. ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸದಾಶಿವ ಆಯೋಗದ ವರದಿ ಇದೆ. ಮೊದಲ ಅಧಿವೇಶನದಲ್ಲೇ ಮಂಡನೆ ಮಾಡುವ ತೀರ್ಮಾನವನ್ನು ಕೂಡ ತೆಗೆದುಕೊಂಡಿದ್ವಿ. ಕಾರಣಾಂತರಗಳಿಂದ ಮೊದಲ ಅಧಿವೇಶನದಲ್ಲಿ ಆಗಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಎರಡನೇ ಅಧಿವೇಶನ ಬೆಳಗಾವಿನಲ್ಲಿ ಆಗುತ್ತೆ. ಅಲ್ಲಿ ಮಾಡಬೇಕು ಅಂತ ಹೇಳಿ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ನಾನು ಮಾದೇವಪ್ಪ, ಮುನಿಯಪ್ಪ ಎಲ್ಲರೂ ಸೇರಿ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಮುಖ್ಯಮಂತ್ರಿಗಳು ಈ ಸಮುದಾಯದ ಮುಖಂಡರ ಜೊತೆ ಚರ್ಚೆ ಮಾಡುತ್ತೇನೆ ಎಂದಿದ್ದಾರೆ. ಈ ಕುರಿತು ನಾನು ತೀರ್ಮಾನ ಮಾಡುತ್ತೇನೆ ಅಂತ ಹೇಳಿದ್ದಾರೆ ಎಂದರು.

ಒಳ ಮೀಸಲಾತಿ ಬಗ್ಗೆ ಚರ್ಚೆ ಆಗಬೇಕು, ಎಲ್ಲರ ಅಭಿಪ್ರಾಯಗಳನ್ನು ತೆಗೆದುಕೊಳ್ಳಬೇಕು. ಎಲ್ಲರ ಮನಸ್ಸುಗಳು ಒಂದಾಗಬೇಕು. ಹಾಗಾಗಿ ಮುಖ್ಯಮಂತ್ರಿಗಳು ಎಲ್ಲರೊಂದಿಗೆ ಚರ್ಚೆ ಮಾಡುವ ತೀರ್ಮಾನ ಮಾಡಿದ್ದಾರೆ. ಈ ಸರ್ಕಾರದಲ್ಲಿ ಮಾಡಬಾರದು ಮಾಡಬೇಕು ಅನ್ನುವಂತ ಭಿನ್ನಾಭಿಪ್ರಾಯಗಳು ಇಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಧಾರವಾಡ: ಕೆಇಎ ಪರೀಕ್ಷೆ ಅಕ್ರಮದ ಬಗ್ಗೆ ಸರ್ಕಾರಕ್ಕೆ ಮೊದಲೇ ದೂರು ನೀಡಿದ್ದ ಅಭ್ಯರ್ಥಿ ಹೇಳಿದ್ದೇನು?

ಆರ್ ಡಿ ಪಾಟೀಲ್ ಎಸ್ಕೇಪ್ ದೃಶ್ಯ ಸಿಸಿಟಿಯಲ್ಲಿ ಸೆರೆ: ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ ಪ್ರಕರಣದ ಕಿಂಗ್‌ಪಿನ್ ಆರ್ ಡಿ ಪಾಟೀಲ್ ವಸತಿ ಸಮುಚ್ಚಯದಿಂದ ಪರಾರಿಯಾಗಿದ್ದ. ಆತ ಕಾಂಪೌಂಡ್ ಹಾರಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಗರದ ಜೇವರ್ಗಿ ರಸ್ತೆಯಲ್ಲಿರುವ ವರ್ಧಾ ಅಪಾರ್ಟ್ಮೆಂಟ್​​ನಿಂದ ಆರ್ ಡಿ ಪಾಟೀಲ್ ಎಸ್ಕೆಪ್ ಆಗಿದ್ದು, ಈ ದೃಶ್ಯ ಜಾಲತಾಣದಲ್ಲಿ ವೈರಲ್​ ಆಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.