ETV Bharat / state

ಹೋರಾಟ ಹಾರಾಟ ಆಗಬಾರದು: ಸಚಿವ ಆರ್.ಅಶೋಕ್​​

author img

By

Published : Nov 21, 2020, 4:10 PM IST

Updated : Nov 21, 2020, 7:06 PM IST

ಕರ್ನಾಟಕ ಬಂದ್​ಗೆ ಕರೆ ನೀಡಿರುವ ಸಂಘಟನೆಗಳ ಹೋರಾಟ ಹಾರಾಟ ಆಗಬಾರದು. ಈಗಾಗಲೇ ಬಂದ್ ಮಾಡುವ ಬಗ್ಗೆ ಜನಸಾಮಾನ್ಯರಿಗೆ ಬೇಸರ ಮೂಡಿಸಿದೆ. ನಿಗಮವನ್ನು ಜನಾಂಗಕ್ಕೆ ಮಾಡಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಆರ್.ಅಶೋಕ್​ ಹೇಳಿದರು.

Minister R. Ashok
ಸಚಿವ ಆರ್.ಅಶೋಕ್

ಬೆಂಗಳೂರು: ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್.ಅಶೋಕ್, ಹೋರಾಟ ಹಾರಾಟ ಆಗಬಾರದು ಎಂದು ಹೇಳಿದ್ದಾರೆ.

ಸಚಿವ ಆರ್.ಅಶೋಕ್​​

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ಭಾಷೆಗೆ ಸಂಬಂಧಿಸಿದ್ದಲ್ಲ. ಮರಾಠ ಜನಾಂಗದ ಬಡವರ ಏಳಿಗೆಗೆ ನಿಗಮ ಮಾಡಿದ್ದು, ಇದು ಕೇವಲ ಬೆಳಗಾವಿಯಲ್ಲಿರುವ ಮರಾಠಿಗರಿಗೆ ಮಾಡಿದ್ದಲ್ಲ. ಕರ್ನಾಟಕದ ಅನೇಕ ಭಾಗಗಳಲ್ಲಿ ಮರಾಠ ಸಮುದಾಯದವರು ಇದ್ದಾರೆ. ಮರಾಠ ಸಮುದಾಯದ ನಿಗಮ ಮಾಡಿರುವುದು ಜನಾಂಗದ ಅಭಿವೃದ್ಧಿಗಾಗಿ ಹೊರತು ಭಾಷೆಗಾಗಿ ಅಲ್ಲ. ಬಂದ್​ಗೆ ಕರೆ ನೀಡಿರುವ ಸಂಘಟನೆಗಳ ಹೋರಾಟ ಹಾರಾಟ ಆಗಬಾರದು. ಈಗಾಗಲೇ ಬಂದ್ ಮಾಡುವ ಬಗ್ಗೆ ಜನಸಾಮಾನ್ಯರಿಗೆ ಬೇಸರ ಮೂಡಿಸಿದೆ. ನಿಗಮವನ್ನು ಜನಾಂಗಕ್ಕೆ ಮಾಡಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ನ್ಯಾಯಾಲಯವು ಕೂಡ ಬಂದ್​ಗಳ ಬಗ್ಗೆ ಸ್ಪಷ್ಟವಾಗಿ ಹೇಳಿದೆ. ರಾಜ್ಯದ ಜನ ಬಂದ್​ಗೆ ಬೆಂಬಲ ನೀಡುವುದಿಲ್ಲವೆಂಬ ವಿಶ್ವಾಸವಿದೆ ಎಂದರು. ಶಾಂತಿಯುತ ಪ್ರತಿಭಟನೆ ಮಾಡಲಿ, ಅದನ್ನು ಬಿಟ್ಟು ಬಂದ್ ಮಾಡುವುದು ಸರಿಯಲ್ಲ. ಹಾಗಾಗಿ ಬಂದ್​ ಕೈಬಿಡುವಂತೆ ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದರು.

ಬೆಂಗಳೂರು: ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್.ಅಶೋಕ್, ಹೋರಾಟ ಹಾರಾಟ ಆಗಬಾರದು ಎಂದು ಹೇಳಿದ್ದಾರೆ.

ಸಚಿವ ಆರ್.ಅಶೋಕ್​​

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ಭಾಷೆಗೆ ಸಂಬಂಧಿಸಿದ್ದಲ್ಲ. ಮರಾಠ ಜನಾಂಗದ ಬಡವರ ಏಳಿಗೆಗೆ ನಿಗಮ ಮಾಡಿದ್ದು, ಇದು ಕೇವಲ ಬೆಳಗಾವಿಯಲ್ಲಿರುವ ಮರಾಠಿಗರಿಗೆ ಮಾಡಿದ್ದಲ್ಲ. ಕರ್ನಾಟಕದ ಅನೇಕ ಭಾಗಗಳಲ್ಲಿ ಮರಾಠ ಸಮುದಾಯದವರು ಇದ್ದಾರೆ. ಮರಾಠ ಸಮುದಾಯದ ನಿಗಮ ಮಾಡಿರುವುದು ಜನಾಂಗದ ಅಭಿವೃದ್ಧಿಗಾಗಿ ಹೊರತು ಭಾಷೆಗಾಗಿ ಅಲ್ಲ. ಬಂದ್​ಗೆ ಕರೆ ನೀಡಿರುವ ಸಂಘಟನೆಗಳ ಹೋರಾಟ ಹಾರಾಟ ಆಗಬಾರದು. ಈಗಾಗಲೇ ಬಂದ್ ಮಾಡುವ ಬಗ್ಗೆ ಜನಸಾಮಾನ್ಯರಿಗೆ ಬೇಸರ ಮೂಡಿಸಿದೆ. ನಿಗಮವನ್ನು ಜನಾಂಗಕ್ಕೆ ಮಾಡಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ನ್ಯಾಯಾಲಯವು ಕೂಡ ಬಂದ್​ಗಳ ಬಗ್ಗೆ ಸ್ಪಷ್ಟವಾಗಿ ಹೇಳಿದೆ. ರಾಜ್ಯದ ಜನ ಬಂದ್​ಗೆ ಬೆಂಬಲ ನೀಡುವುದಿಲ್ಲವೆಂಬ ವಿಶ್ವಾಸವಿದೆ ಎಂದರು. ಶಾಂತಿಯುತ ಪ್ರತಿಭಟನೆ ಮಾಡಲಿ, ಅದನ್ನು ಬಿಟ್ಟು ಬಂದ್ ಮಾಡುವುದು ಸರಿಯಲ್ಲ. ಹಾಗಾಗಿ ಬಂದ್​ ಕೈಬಿಡುವಂತೆ ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದರು.

Last Updated : Nov 21, 2020, 7:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.