ETV Bharat / state

‘ಜೀವಸಾರ್ಥಕತೆ’ ಕಾರ್ಯಕ್ರಮವನ್ನು ಕರ್ನಾಟಕದ ‘ಸೊಟ್ಟೊ’ ಎಂದು ಗುರುತಿಸಲು ತೀರ್ಮಾನ - STATE ORGAN TISSUE TRANSPLANT ORGANISATION news

ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಅಂಗಾಂಗ ಕಸಿ ಕಾರ್ಯಕ್ರಮದ ಪ್ರಚಾರಕ್ಕೆ ಸಂಬಂಧಿಸಿದಂತೆ ಜೀವಸಾರ್ಥಕತೆಯ ಪ್ರಮುಖರೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಅಂಗಾಂಗ ದಾನವನ್ನು ಉತ್ತೇಜಿಸಲು ಜೀವಸಾರ್ಥಕತೆ ಕಾರ್ಯಕ್ರಮವನ್ನು ಸೊಟ್ಟೊ ಎಂದು ಗುರುತಿಸಲು ತೀರ್ಮಾನಿಸಲಾಗಿದೆ.

Minister Sudhakar Meeting with Jeevasarthakathe officials
ಜೀವಸಾರ್ಥಕತೆ ಪ್ರಮುಖರೊಂದಿಗೆ ಸಚಿವ ಸುಧಾಕರ್ ಸಭೆ
author img

By

Published : Dec 22, 2020, 7:42 AM IST

ಬೆಂಗಳೂರು: ಅಂಗಾಂಗ ದಾನವನ್ನು ಪ್ರೇರೇಪಿಸಲು ಜೀವಸಾರ್ಥಕತೆ ಕಾರ್ಯಕ್ರಮವನ್ನು ಕರ್ನಾಟಕದ ಸೊಟ್ಟೊ (SOTTO-STATE ORGAN TISSUE TRANSPLANT ORGANISATION) ಎಂದು ಗುರುತಿಸಲು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಂಗಾಂಗ ಕಸಿ ಕಾರ್ಯಕ್ರಮದ ಪ್ರಚಾರಕ್ಕೆ ಸಂಬಂಧಿಸಿದಂತೆ ಜೀವಸಾರ್ಥಕತೆಯ ಪ್ರಮುಖರೊಂದಿಗೆ ಸಭೆ ನಡೆಸಿದರು. ಕೋವಿಡ್ ಪ್ರಕರಣಗಳ ಇಳಿಕೆಯೊಂದಿಗೆ ದಾನಿಗಳ ಸಂಖ್ಯೆ ಹೆಚ್ಚುತ್ತಿದೆ. 2019 ರಲ್ಲಿ 105 ಅಂಗಾಂಗ ದಾನಿಗಳಿದ್ದರು. 2020 ರಲ್ಲಿ ಪೂರ್ವ ಕೋವಿಡ್ ಸಮಯದಲ್ಲಿ ಅಂದರೆ ಜನವರಿಯಿಂದ ಮಾರ್ಚ್‌ವರೆಗೆ 25 ಹಾಗೂ ಕಳೆದ ಎರಡು ತಿಂಗಳಲ್ಲಿ 9 ಅಂಗಾಂಗ ಕಸಿ ನಡೆದಿದೆ. ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯವು ಜೀವಸಾರ್ಥಕತೆಯ ಬಗ್ಗೆ ವರದಿ ನೀಡಿ, ಕರ್ನಾಟಕದ ಸೊಟ್ಟೊ ಎಂದು ಗುರುತಿಸಬೇಕೆಂದು ಶಿಫಾರಸು ಮಾಡಿದ್ದು, ಇದನ್ನು ಜಾರಿ ಮಾಡಲು ನಿರ್ಧರಿಸಲಾಯಿತು.

ಓದಿ: ಮೊದಲನೇ ಹಂತದ ಚುನಾವಣೆಗೆ ಕ್ಷಣಗಣನೆ; ಕಲಬುರಗಿಯಲ್ಲಿ ಇಡೀ ರಾತ್ರಿ ರೌಂಡ್ಸ್

ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಿಗೆ ಅಂಗಾಂಗ ಮರುಪಡೆಯುವಿಕೆಗೆ ಪರವಾನಗಿ ನೀಡಲಾಗುವುದು. ಇದಕ್ಕೆ ಮಾರ್ಗದರ್ಶನ ನೀಡಲು ಉನ್ನತ ಮಟ್ಟದ ಸಲಹಾ ಸಮಿತಿ ರಚಿಸಲಾಗುತ್ತದೆ. ಹೊಸದಾಗಿ ಉಪನಿರ್ದೇಶಕರು, ಕಚೇರಿ ಪೋಷಕ ಸಿಬ್ಬಂದಿ ಮತ್ತು 20 ಅಂಗಾಂಗ ಕಸಿ ಸಂಯೋಜಕರನ್ನು ನೇಮಿಸಲಾಗುವುದು. ಇದಕ್ಕಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಕಸಿ ಕುರಿತು ಜಾಗೃತಿಗೆ ರಾಜ್ಯಾದ್ಯಂತ ಅಭಿಯಾನ ನಡೆಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಬೆಂಗಳೂರು: ಅಂಗಾಂಗ ದಾನವನ್ನು ಪ್ರೇರೇಪಿಸಲು ಜೀವಸಾರ್ಥಕತೆ ಕಾರ್ಯಕ್ರಮವನ್ನು ಕರ್ನಾಟಕದ ಸೊಟ್ಟೊ (SOTTO-STATE ORGAN TISSUE TRANSPLANT ORGANISATION) ಎಂದು ಗುರುತಿಸಲು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಂಗಾಂಗ ಕಸಿ ಕಾರ್ಯಕ್ರಮದ ಪ್ರಚಾರಕ್ಕೆ ಸಂಬಂಧಿಸಿದಂತೆ ಜೀವಸಾರ್ಥಕತೆಯ ಪ್ರಮುಖರೊಂದಿಗೆ ಸಭೆ ನಡೆಸಿದರು. ಕೋವಿಡ್ ಪ್ರಕರಣಗಳ ಇಳಿಕೆಯೊಂದಿಗೆ ದಾನಿಗಳ ಸಂಖ್ಯೆ ಹೆಚ್ಚುತ್ತಿದೆ. 2019 ರಲ್ಲಿ 105 ಅಂಗಾಂಗ ದಾನಿಗಳಿದ್ದರು. 2020 ರಲ್ಲಿ ಪೂರ್ವ ಕೋವಿಡ್ ಸಮಯದಲ್ಲಿ ಅಂದರೆ ಜನವರಿಯಿಂದ ಮಾರ್ಚ್‌ವರೆಗೆ 25 ಹಾಗೂ ಕಳೆದ ಎರಡು ತಿಂಗಳಲ್ಲಿ 9 ಅಂಗಾಂಗ ಕಸಿ ನಡೆದಿದೆ. ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯವು ಜೀವಸಾರ್ಥಕತೆಯ ಬಗ್ಗೆ ವರದಿ ನೀಡಿ, ಕರ್ನಾಟಕದ ಸೊಟ್ಟೊ ಎಂದು ಗುರುತಿಸಬೇಕೆಂದು ಶಿಫಾರಸು ಮಾಡಿದ್ದು, ಇದನ್ನು ಜಾರಿ ಮಾಡಲು ನಿರ್ಧರಿಸಲಾಯಿತು.

ಓದಿ: ಮೊದಲನೇ ಹಂತದ ಚುನಾವಣೆಗೆ ಕ್ಷಣಗಣನೆ; ಕಲಬುರಗಿಯಲ್ಲಿ ಇಡೀ ರಾತ್ರಿ ರೌಂಡ್ಸ್

ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಿಗೆ ಅಂಗಾಂಗ ಮರುಪಡೆಯುವಿಕೆಗೆ ಪರವಾನಗಿ ನೀಡಲಾಗುವುದು. ಇದಕ್ಕೆ ಮಾರ್ಗದರ್ಶನ ನೀಡಲು ಉನ್ನತ ಮಟ್ಟದ ಸಲಹಾ ಸಮಿತಿ ರಚಿಸಲಾಗುತ್ತದೆ. ಹೊಸದಾಗಿ ಉಪನಿರ್ದೇಶಕರು, ಕಚೇರಿ ಪೋಷಕ ಸಿಬ್ಬಂದಿ ಮತ್ತು 20 ಅಂಗಾಂಗ ಕಸಿ ಸಂಯೋಜಕರನ್ನು ನೇಮಿಸಲಾಗುವುದು. ಇದಕ್ಕಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಕಸಿ ಕುರಿತು ಜಾಗೃತಿಗೆ ರಾಜ್ಯಾದ್ಯಂತ ಅಭಿಯಾನ ನಡೆಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.