ETV Bharat / state

6 ವರ್ಷದೊಳಗಿನ ಮಕ್ಕಳಲ್ಲಿನ ಶ್ರವಣದೋಷ ನಿವಾರಣೆಗೆ ಕಾಕ್ಲಿಯರ್‌ ಇಂಪ್ಲಾಂಟ್‌ ಯೋಜನೆ: ಸಚಿವ ಸುಧಾಕರ್

author img

By

Published : Mar 2, 2023, 5:21 PM IST

ಮಾರ್ಚ್​ 3 ವಿಶ್ವ ಶ್ರವಣ ದಿನ ಆಚರಣೆ - ಎಲ್ಲಾ ಆರೋಗ್ಯ ಕಾರ್ಯಕರ್ತೆಯರಿಗೆ ಕಿವಿಯ ಆರೈಕೆ, ಪ್ರಥಮ ಚಿಕಿತ್ಸೆ ಹಾಗೂ ತಪಾಸಣೆ ಬಗ್ಗೆ ತರಬೇತಿ - ಆರೋಗ್ಯ ಸಚಿವ ಡಾ ಕೆ ಸುಧಾಕರ್

ಸಚಿವ ಡಾ ಕೆ ಸುಧಾಕರ್
ಸಚಿವ ಡಾ ಕೆ ಸುಧಾಕರ್

ಬೆಂಗಳೂರು : ರಾಜ್ಯ ಸರ್ಕಾರದ ಕಾಕ್ಲಿಯಾರ್‌ ಇಂಪ್ಲಾಂಟ್‌ ಯೋಜನೆಯಡಿ ಈ ವರ್ಷ 115 ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಇಂತಹ ಕ್ರಮಗಳ ಮೂಲಕ ಕಿವಿಯ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಪ್ರತಿವರ್ಷ ಮಾರ್ಚ್‌ 3 ರಂದು ವಿಶ್ವ ಶ್ರವಣ ದಿನ ಆಚರಿಸುತ್ತಿದ್ದು, ಈ ವರ್ಷ ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ, ಬನ್ನಿ ವಾಸ್ತವವಾಗಿಸೋಣ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಎಲ್ಲಾ ಆರೋಗ್ಯ ಕಾರ್ಯಕರ್ತೆಯರಿಗೆ, ಕಿವಿಯ ಆರೈಕೆ, ಪ್ರಥಮ ಚಿಕಿತ್ಸೆ ಹಾಗೂ ತಪಾಸಣೆ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಈ ಮೂಲಕ ಕಿವಿಯ ಆರೈಕೆ ಹಾಗೂ ಶ್ರವಣ ಆರೈಕೆಯನ್ನು ಪ್ರಾಥಮಿಕ ಆರೋಗ್ಯ ಸೇವೆಗಳಲ್ಲಿ ವಿಲೀನಗೊಳಿಸಲಾಗುತ್ತಿದೆ. 6 ವರ್ಷದೊಳಗಿನ ಮಕ್ಕಳಲ್ಲಿನ ಗಂಭೀರ ಸ್ವರೂಪದ ಶ್ರವಣ ದೋಷದ ನಿವಾರಣೆಗೆ ಕಾಕ್ಲಿಯರ್‌ ಇಂಪ್ಲಾಂಟ್‌ ಯೋಜನೆ ತರಲಾಗಿದೆ. ಇದರಲ್ಲಿ ಈ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಉಳಿದ 577 ಫಲಾನುಭವಿಗಳಿಗೆ ವಿವಿಧ ಹಂತದಲ್ಲಿ ಕಾಕ್ಲಿಯಾರ್‌ ಶಸ್ತ್ರ ಚಿಕಿತ್ಸೆಗಾಗಿ ತಯಾರಿ ನಡೆಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

2,00,305 ಮಂದಿಗೆ ಶ್ರವಣ ದೋಷ : ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ವಿಶ್ವದಾದ್ಯಂತ 430 ದಶ ಲಕ್ಷ ಜನರು ಶ್ರವಣ ದೋಷದಿಂದ ಬಳಲುತ್ತಿದ್ದಾರೆ. 2050 ರ ವೇಳೆಗೆ ಈ ಸಂಖ್ಯೆ 700 ದಶಲಕ್ಷ ದಾಟುವ ಆತಂಕವಿದೆ. ರಾಜ್ಯದಲ್ಲಿ 2008-09 ರಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮ ಜಾರಿಯಾಗಿದ್ದು, ಉಪಕರಣ ಮತ್ತು ಶಸ್ತ್ರಚಿಕಿತ್ಸೆಗಾಗಿ ಎಲ್ಲಾ ಜಿಲ್ಲೆಗಳಲ್ಲಿ ತರಬೇತಿ ನೀಡಲಾಗುತ್ತಿದೆ.

ಕಳೆದ 5 ವರ್ಷಗಳಲ್ಲಿ ಎನ್.ಪಿ.ಪಿ.ಸಿ.ಡಿ ಕಾರ್ಯಕ್ರಮ ವಿಭಾಗದಿಂದ 2,00,305 ಶ್ರವಣ ದೋಷವುಳ್ಳವರನ್ನು ಹಾಗೂ 35,418 ಗಂಭೀರ ಶ್ರವಣ ದೋಷವುಳ್ಳವರನ್ನು ಗುರುತಿಸಲಾಗಿದೆ. 5 ವರ್ಷದೊಳಗಿನ 2,381 ಮಕ್ಕಳಲ್ಲಿ ಗಂಭೀರ ಶ್ರವಣ ದೋಷವಿದೆ. ರಾಜ್ಯದ ಎಲ್ಲಾ ಇ.ಎನ್.ಟಿ ತಜ್ಞರ ಸಹಾಯದಿಂದ ಕಿವಿಯ ಸಮಸ್ಯೆಗಳಿಗೆ 10,213 ಶಸ್ತ್ರಚಿಕಿತ್ಸೆ ಮಾಡಲಾಗಿದೆ. 11,857 ಫಲಾನುಭವಿಗಳಿಗೆ ಶ್ರವಣ ಸಾಧನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಶ್ವ ಶ್ರವಣ ದಿನದಂದು ಎಲ್ಲಾ ಜಿಲ್ಲೆಗಳಲ್ಲಿ ಶ್ರವಣ ತಪಾಸಣಾ ಶಿಬಿರ ನಡೆಸಿ ಚಿಕಿತ್ಸೆ ಒದಗಿಸಲಾಗುವುದು. 6 ವರ್ಷದೊಳಗಿನ ಮಕ್ಕಳಲ್ಲಿ ಎರಡು ಕಿವಿಗಳಲ್ಲಿ ಗಂಭೀರ ಸ್ವರೂಪದ ಶ್ರವಣ ದೋಷಗಳನ್ನು ಗುರುತಿಸಿ ಕಾಕ್ಲಿಯಾರ್‌ ಇಂಪ್ಲಾಂಟ್‌ ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ವಿಕಲಚೇತನ ವ್ಯಕ್ತಿಗಳ ಸಬಲೀಕರಣ ಇಲಾಖೆಯಿಂದ ಮತ್ತು ಸಂಘ ಸಂಸ್ಥೆಗಳಿಂದ ಶ್ರವಣ ಸಾಧನಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

20 ಡಿಎಲ್​ಗಳಿಗಿಂತ ಕಡಿಮೆ ಶಬ್ದವನ್ನು ಯಾರಿಗೆ ಕೇಳಲಾಗುವುದಿಲ್ಲವೋ ಅವರಿಗೆ ಶ್ರವಣ ದೋಷದ ಸಾಧ್ಯತೆ ಇರುತ್ತದೆ. ಯಾವುದೇ ವಯಸ್ಸಿನಲ್ಲಿ ಶ್ರವಣ ದೋಷವು ವಿವಿಧ ಕಾರಣಗಳಿಂದ ಸಂಭವಿಸಬಹುದು. ಜೆನೆಟಿಕ್ಸ್, ಜೋರಾದ ಶಬ್ದ, ಸೋಂಕು, ದೀರ್ಘಕಾಲದ ಕಾಯಿಲೆಗಳು ( ಟಿ.ಬಿ, ಕ್ಯಾನ್ಸರ್‌), ಗರ್ಭಿಣಿಯರಲ್ಲಿ ಉಂಟಾಗುವ ಸೋಂಕುಗಳು (TORCH) ದೀರ್ಘ ಕಾಲ ತೆಗೆದುಕೊಳ್ಳುವ ಔಷಧಿಗಳಿಂದ, ರಕ್ತ ಸಂಬಂಧದಲ್ಲಿ ಮದುವೆ, ಹೆರಿಗೆ ವೇಳೆ ಸಮಸ್ಯೆ, ಅವಧಿಪೂರ್ವ ಜನನ, ವಯಸ್ಸಿಗೆ ತಕ್ಕಂತೆ ಆಗದ ಬೆಳವಣಿಗೆ, ಜೋರಾದ ಪೆಟ್ಟು ಬೀಳುವುದರಿಂದ, ಕಿವಿಯೊಳಗೆ ಅನವಶ್ಯಕವಾಗಿ ಕಡ್ಡಿ, ಪೆನ್ಸಿಲ್‌ ಅಥವಾ ಇನ್ಯಾವುದೇ ವಸ್ತುಗಳನ್ನು ಹಾಕುವುದರಿಂದ ಸಮಸ್ಯೆ ಬರುತ್ತದೆ ಎಂದಿದ್ದಾರೆ.

ಶ್ರವಣ ದೋಷ ತಡೆಗಟ್ಟುವ ಕ್ರಮ : ನಿಯಮಿತ ಶ್ರವಣ ಪರೀಕ್ಷೆ, ನವಜಾತ ಶಿಶುಗಳಿಗೆ ಶ್ರವಣ ಪರೀಕ್ಷೆ, ಗರ್ಭಿಣಿಯರಿಗೆ ಶ್ರವಣ ಪರೀಕ್ಷೆ, ವಯಸ್ಕರು ಹೆಚ್ಚು ಶಬ್ದವನ್ನು ನಿರಂತರವಾಗಿ ಕೇಳುವುದನ್ನು ಕಡಿಮೆ ಮಾಡುವುದರಿಂದ, ಹೆಚ್ಚು ಶಬ್ದ ಇರುವಲ್ಲಿ (ಕಾರ್ಖಾನೆ) ಕಿವಿಗಳಿಗೆ ಹಿಯರ್‌ ಪ್ಯಾಡ್ಸ್ ಅಳವಡಿಕೆ, ರಕ್ತ ಸಂಬಂಧದಲ್ಲಿ ಮದುವೆಯಾಗಬಾರದು, ಪ್ರಾಥಮಿಕ ಹಂತದಲ್ಲಿ ಕಿವಿಯ ತೊಂದರೆಗಳನ್ನು ಗುರುತಿಸಿ ಚಿಕಿತ್ಸೆ, ಯಾವುದೇ ಔಷಧಿಗಳನ್ನು ವೈದ್ಯರ ಸಲಹೆಯಿಂದಲೇ ಪಡೆಯುವುದು, ಧೀರ್ಘ ಕಾಲದ ಚಿಕಿತ್ಸಾವಧಿಯಲ್ಲಿ ನಿಯಮಿತವಾಗಿ ಶ್ರವಣ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು.

ಪ್ರಾರಂಭಿಕ ಹಂತದಲ್ಲೇ ಶ್ರವಣ ದೋಷ ಪರೀಕ್ಷೆ, ಗುಗ್ಗೆ ಮತ್ತು ಇತರೆ ಸೋರಿಕೆಯಿದ್ದಲ್ಲಿ ಕಿವಿಯನ್ನು ಸ್ವಚ್ಛಗೊಳಿಸುವುದು ಮತ್ತು ಚಿಕಿತ್ಸೆ ನೀಡುವುದು, ಗಂಟಿನ ತೊಂದರೆ, ಕಿವಿಯ ತಮಟೆಗೆ ಪೆಟ್ಟಾಗಿದ್ದಲ್ಲಿ ಚಿಕಿತ್ಸೆ ನೀಡುವುದು, ಸೋಂಕು ಅಥವಾ ಉರಿಯೂತ ಇದ್ದಲ್ಲಿ ಚಿಕಿತ್ಸೆ ನೀಡಬೇಕು ಎಂದು ಮಾಧ್ಯಮ ಹೇಳಿಕೆಯಲ್ಲಿ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ : ರಾಮನಗರ ಜಿಲ್ಲಾ ಆಸ್ಪತ್ರೆಗೆ ಚಾಲನೆ ನೀಡಿದ ಮೂರು ಪಕ್ಷದ ನಾಯಕರು

ಬೆಂಗಳೂರು : ರಾಜ್ಯ ಸರ್ಕಾರದ ಕಾಕ್ಲಿಯಾರ್‌ ಇಂಪ್ಲಾಂಟ್‌ ಯೋಜನೆಯಡಿ ಈ ವರ್ಷ 115 ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಇಂತಹ ಕ್ರಮಗಳ ಮೂಲಕ ಕಿವಿಯ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಪ್ರತಿವರ್ಷ ಮಾರ್ಚ್‌ 3 ರಂದು ವಿಶ್ವ ಶ್ರವಣ ದಿನ ಆಚರಿಸುತ್ತಿದ್ದು, ಈ ವರ್ಷ ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ, ಬನ್ನಿ ವಾಸ್ತವವಾಗಿಸೋಣ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಎಲ್ಲಾ ಆರೋಗ್ಯ ಕಾರ್ಯಕರ್ತೆಯರಿಗೆ, ಕಿವಿಯ ಆರೈಕೆ, ಪ್ರಥಮ ಚಿಕಿತ್ಸೆ ಹಾಗೂ ತಪಾಸಣೆ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಈ ಮೂಲಕ ಕಿವಿಯ ಆರೈಕೆ ಹಾಗೂ ಶ್ರವಣ ಆರೈಕೆಯನ್ನು ಪ್ರಾಥಮಿಕ ಆರೋಗ್ಯ ಸೇವೆಗಳಲ್ಲಿ ವಿಲೀನಗೊಳಿಸಲಾಗುತ್ತಿದೆ. 6 ವರ್ಷದೊಳಗಿನ ಮಕ್ಕಳಲ್ಲಿನ ಗಂಭೀರ ಸ್ವರೂಪದ ಶ್ರವಣ ದೋಷದ ನಿವಾರಣೆಗೆ ಕಾಕ್ಲಿಯರ್‌ ಇಂಪ್ಲಾಂಟ್‌ ಯೋಜನೆ ತರಲಾಗಿದೆ. ಇದರಲ್ಲಿ ಈ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಉಳಿದ 577 ಫಲಾನುಭವಿಗಳಿಗೆ ವಿವಿಧ ಹಂತದಲ್ಲಿ ಕಾಕ್ಲಿಯಾರ್‌ ಶಸ್ತ್ರ ಚಿಕಿತ್ಸೆಗಾಗಿ ತಯಾರಿ ನಡೆಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

2,00,305 ಮಂದಿಗೆ ಶ್ರವಣ ದೋಷ : ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ವಿಶ್ವದಾದ್ಯಂತ 430 ದಶ ಲಕ್ಷ ಜನರು ಶ್ರವಣ ದೋಷದಿಂದ ಬಳಲುತ್ತಿದ್ದಾರೆ. 2050 ರ ವೇಳೆಗೆ ಈ ಸಂಖ್ಯೆ 700 ದಶಲಕ್ಷ ದಾಟುವ ಆತಂಕವಿದೆ. ರಾಜ್ಯದಲ್ಲಿ 2008-09 ರಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮ ಜಾರಿಯಾಗಿದ್ದು, ಉಪಕರಣ ಮತ್ತು ಶಸ್ತ್ರಚಿಕಿತ್ಸೆಗಾಗಿ ಎಲ್ಲಾ ಜಿಲ್ಲೆಗಳಲ್ಲಿ ತರಬೇತಿ ನೀಡಲಾಗುತ್ತಿದೆ.

ಕಳೆದ 5 ವರ್ಷಗಳಲ್ಲಿ ಎನ್.ಪಿ.ಪಿ.ಸಿ.ಡಿ ಕಾರ್ಯಕ್ರಮ ವಿಭಾಗದಿಂದ 2,00,305 ಶ್ರವಣ ದೋಷವುಳ್ಳವರನ್ನು ಹಾಗೂ 35,418 ಗಂಭೀರ ಶ್ರವಣ ದೋಷವುಳ್ಳವರನ್ನು ಗುರುತಿಸಲಾಗಿದೆ. 5 ವರ್ಷದೊಳಗಿನ 2,381 ಮಕ್ಕಳಲ್ಲಿ ಗಂಭೀರ ಶ್ರವಣ ದೋಷವಿದೆ. ರಾಜ್ಯದ ಎಲ್ಲಾ ಇ.ಎನ್.ಟಿ ತಜ್ಞರ ಸಹಾಯದಿಂದ ಕಿವಿಯ ಸಮಸ್ಯೆಗಳಿಗೆ 10,213 ಶಸ್ತ್ರಚಿಕಿತ್ಸೆ ಮಾಡಲಾಗಿದೆ. 11,857 ಫಲಾನುಭವಿಗಳಿಗೆ ಶ್ರವಣ ಸಾಧನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಶ್ವ ಶ್ರವಣ ದಿನದಂದು ಎಲ್ಲಾ ಜಿಲ್ಲೆಗಳಲ್ಲಿ ಶ್ರವಣ ತಪಾಸಣಾ ಶಿಬಿರ ನಡೆಸಿ ಚಿಕಿತ್ಸೆ ಒದಗಿಸಲಾಗುವುದು. 6 ವರ್ಷದೊಳಗಿನ ಮಕ್ಕಳಲ್ಲಿ ಎರಡು ಕಿವಿಗಳಲ್ಲಿ ಗಂಭೀರ ಸ್ವರೂಪದ ಶ್ರವಣ ದೋಷಗಳನ್ನು ಗುರುತಿಸಿ ಕಾಕ್ಲಿಯಾರ್‌ ಇಂಪ್ಲಾಂಟ್‌ ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ವಿಕಲಚೇತನ ವ್ಯಕ್ತಿಗಳ ಸಬಲೀಕರಣ ಇಲಾಖೆಯಿಂದ ಮತ್ತು ಸಂಘ ಸಂಸ್ಥೆಗಳಿಂದ ಶ್ರವಣ ಸಾಧನಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

20 ಡಿಎಲ್​ಗಳಿಗಿಂತ ಕಡಿಮೆ ಶಬ್ದವನ್ನು ಯಾರಿಗೆ ಕೇಳಲಾಗುವುದಿಲ್ಲವೋ ಅವರಿಗೆ ಶ್ರವಣ ದೋಷದ ಸಾಧ್ಯತೆ ಇರುತ್ತದೆ. ಯಾವುದೇ ವಯಸ್ಸಿನಲ್ಲಿ ಶ್ರವಣ ದೋಷವು ವಿವಿಧ ಕಾರಣಗಳಿಂದ ಸಂಭವಿಸಬಹುದು. ಜೆನೆಟಿಕ್ಸ್, ಜೋರಾದ ಶಬ್ದ, ಸೋಂಕು, ದೀರ್ಘಕಾಲದ ಕಾಯಿಲೆಗಳು ( ಟಿ.ಬಿ, ಕ್ಯಾನ್ಸರ್‌), ಗರ್ಭಿಣಿಯರಲ್ಲಿ ಉಂಟಾಗುವ ಸೋಂಕುಗಳು (TORCH) ದೀರ್ಘ ಕಾಲ ತೆಗೆದುಕೊಳ್ಳುವ ಔಷಧಿಗಳಿಂದ, ರಕ್ತ ಸಂಬಂಧದಲ್ಲಿ ಮದುವೆ, ಹೆರಿಗೆ ವೇಳೆ ಸಮಸ್ಯೆ, ಅವಧಿಪೂರ್ವ ಜನನ, ವಯಸ್ಸಿಗೆ ತಕ್ಕಂತೆ ಆಗದ ಬೆಳವಣಿಗೆ, ಜೋರಾದ ಪೆಟ್ಟು ಬೀಳುವುದರಿಂದ, ಕಿವಿಯೊಳಗೆ ಅನವಶ್ಯಕವಾಗಿ ಕಡ್ಡಿ, ಪೆನ್ಸಿಲ್‌ ಅಥವಾ ಇನ್ಯಾವುದೇ ವಸ್ತುಗಳನ್ನು ಹಾಕುವುದರಿಂದ ಸಮಸ್ಯೆ ಬರುತ್ತದೆ ಎಂದಿದ್ದಾರೆ.

ಶ್ರವಣ ದೋಷ ತಡೆಗಟ್ಟುವ ಕ್ರಮ : ನಿಯಮಿತ ಶ್ರವಣ ಪರೀಕ್ಷೆ, ನವಜಾತ ಶಿಶುಗಳಿಗೆ ಶ್ರವಣ ಪರೀಕ್ಷೆ, ಗರ್ಭಿಣಿಯರಿಗೆ ಶ್ರವಣ ಪರೀಕ್ಷೆ, ವಯಸ್ಕರು ಹೆಚ್ಚು ಶಬ್ದವನ್ನು ನಿರಂತರವಾಗಿ ಕೇಳುವುದನ್ನು ಕಡಿಮೆ ಮಾಡುವುದರಿಂದ, ಹೆಚ್ಚು ಶಬ್ದ ಇರುವಲ್ಲಿ (ಕಾರ್ಖಾನೆ) ಕಿವಿಗಳಿಗೆ ಹಿಯರ್‌ ಪ್ಯಾಡ್ಸ್ ಅಳವಡಿಕೆ, ರಕ್ತ ಸಂಬಂಧದಲ್ಲಿ ಮದುವೆಯಾಗಬಾರದು, ಪ್ರಾಥಮಿಕ ಹಂತದಲ್ಲಿ ಕಿವಿಯ ತೊಂದರೆಗಳನ್ನು ಗುರುತಿಸಿ ಚಿಕಿತ್ಸೆ, ಯಾವುದೇ ಔಷಧಿಗಳನ್ನು ವೈದ್ಯರ ಸಲಹೆಯಿಂದಲೇ ಪಡೆಯುವುದು, ಧೀರ್ಘ ಕಾಲದ ಚಿಕಿತ್ಸಾವಧಿಯಲ್ಲಿ ನಿಯಮಿತವಾಗಿ ಶ್ರವಣ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು.

ಪ್ರಾರಂಭಿಕ ಹಂತದಲ್ಲೇ ಶ್ರವಣ ದೋಷ ಪರೀಕ್ಷೆ, ಗುಗ್ಗೆ ಮತ್ತು ಇತರೆ ಸೋರಿಕೆಯಿದ್ದಲ್ಲಿ ಕಿವಿಯನ್ನು ಸ್ವಚ್ಛಗೊಳಿಸುವುದು ಮತ್ತು ಚಿಕಿತ್ಸೆ ನೀಡುವುದು, ಗಂಟಿನ ತೊಂದರೆ, ಕಿವಿಯ ತಮಟೆಗೆ ಪೆಟ್ಟಾಗಿದ್ದಲ್ಲಿ ಚಿಕಿತ್ಸೆ ನೀಡುವುದು, ಸೋಂಕು ಅಥವಾ ಉರಿಯೂತ ಇದ್ದಲ್ಲಿ ಚಿಕಿತ್ಸೆ ನೀಡಬೇಕು ಎಂದು ಮಾಧ್ಯಮ ಹೇಳಿಕೆಯಲ್ಲಿ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ : ರಾಮನಗರ ಜಿಲ್ಲಾ ಆಸ್ಪತ್ರೆಗೆ ಚಾಲನೆ ನೀಡಿದ ಮೂರು ಪಕ್ಷದ ನಾಯಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.