ETV Bharat / state

ಮಹಾರಾಷ್ಟ್ರ, ಕೇರಳ ಗಡಿ ಬಳಿಯ ರಾಜ್ಯದ 10 ಜಿಲ್ಲೆಗಳಲ್ಲಿ ತೀವ್ರ ನಿಗಾ: ಸಚಿವ ಸುಧಾಕರ್

author img

By

Published : Feb 20, 2021, 11:59 AM IST

Updated : Feb 20, 2021, 5:23 PM IST

ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದ ಯಾವುದೇ ಜನರನ್ನು ಮಹಾರಾಷ್ಟ್ರ ಮತ್ತು ಕೇರಳದಿಂದ ಕರ್ನಾಟಕಕ್ಕೆ ಕಡ್ಡಾಯವಾಗಿ ಪ್ರವೇಶ ನಿರಾಕರಿಸುವಂತೆ ತಾಂತ್ರಿಕ ಸಲಹಾ ಸಮಿತಿಯು ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಹತ್ತು ಜಿಲ್ಲೆಗಳಲ್ಲಿ ಹೆಚ್ಚು ನಿಗಾ ವಹಿಸಬೇಕಾಗಿದೆ ಎಂದು ಸಚಿವರು ಹೇಳಿದರು.

Minister Sudhakar statement on Covid management
: ಸಚಿವ ಸುಧಾಕರ್

ಬೆಂಗಳೂರು: ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ಎರಡೂ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ 10 ಜಿಲ್ಲೆಗಳಲ್ಲಿ ಹೆಚ್ಚು ನಿಗಾ ವಹಿಸಬೇಕಾಗಿದೆ. ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದ ಯಾವುದೇ ಜನರನ್ನು ಮಹಾರಾಷ್ಟ್ರ ಮತ್ತು ಕೇರಳದಿಂದ ಕರ್ನಾಟಕಕ್ಕೆ ಕಡ್ಡಾಯವಾಗಿ ಪ್ರವೇಶ ನಿರಾಕರಿಸುವಂತೆ ತಾಂತ್ರಿಕ ಸಲಹಾ ಸಮಿತಿಯು ಸಲಹೆ ನೀಡಿದೆ. ಈ ಸಂಬಂಧ ಗೃಹ ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಸಚಿವ ಸುಧಾಕರ್ ಸುದ್ದಿಗೋಷ್ಠಿ

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ ವಂಚನೆ: ದೂರು ದಾಖಲು

ಕೋವಿಡ್ ಲಸಿಕೆ ತೆಗೆದುಕೊಳ್ಳಲು ಆರೋಗ್ಯ ಇಲಾಖೆಯ ಕೊರೊನಾ ವಾರಿಯರ್ಸ್​ ಹಿಂಜರಿಯುತ್ತಿದ್ದಾರೆ. ಶೇ.50ರಷ್ಟು ಮಂದಿ ಮಾತ್ರ ಲಸಿಕೆ ತೆಗೆದುಕೊಂಡಿದ್ದಾರೆ. ಇದುವರೆಗೆ ಫ್ರಂಟ್​ಲೈನ್ ವಾರಿಯರ್ಸ್​, ಹಿರಿಯ ಅಧಿಕಾರಿಗಳು ಲಸಿಕೆ ತೆಗೆದುಕೊಂಡು ಮಾದರಿಯಾಗಿದ್ದಾರೆ. ಹಾಗಾಗಿ ಯಾವುದೋ ವದಂತಿಗಳನ್ನು ನಂಬಿ ನೀವು ಬಲಿಪಶುಗಳಾಗಬೇಡಿ. ನೀವೇ ಲಸಿಕೆ ತೆಗೆದುಕೊಳ್ಳದೇ ಇದ್ದರೆ ಜನಸಾಮಾನ್ಯರ ಪಾಡೇನು ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಸಚಿವರು ಮನವರಿಕೆ ಮಾಡಿಸಿದ್ದಾರೆ.

ಮೊದಲ ಡೋಸ್ ಪಡೆದ ಮೇಲೆ 28 ದಿನಕ್ಕೆ ಎರಡನೇ ಡೋಸ್ ಪಡೆಯಬೇಕು. ಮೊದಲ ಹಂತದ ಬಳಿಕ ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೆ ಸೋಂಕು ಬರಬಹುದು. ಆದರೆ ಸಾವಿನ ಪ್ರಮಾಣ ಕಡಿಮೆ. ಇದುವರೆಗೆ ಮುಂಚೂಣಿ ಕಾರ್ಯಕರ್ತರು, ಹಿರಿಯ ಅಧಿಕಾರಿಗಳು ಲಸಿಕೆ ತೆಗೆದುಕೊಂಡು ಮಾದರಿಯಾಗಿದ್ದಾರೆ. ಹಾಗಾಗಿ ಯಾವುದೋ ವದಂತಿಗಳನ್ನು ನಂಬಿ ನೀವು ಬಲಿಪಶುಗಳಾಗಬೇಡಿ. ನೀವೇ ಲಸಿಕೆ ತೆಗೆದುಕೊಳ್ಳದೇ ಇದ್ದರೆ ಜನಸಾಮಾನ್ಯರ ಪಾಡೇನು ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಕೊರೊನಾ ವಾರಿಯರ್ಸ್​ಗೆ ಸಚಿವರು ಮನವಿ ಮಾಡಿದರು.

ರಾಜ್ಯದಲ್ಲಿ ಲಾಕ್​ ಡೌನ್ ಇಲ್ಲ:

ರಾಜ್ಯದಲ್ಲಿ ಲಾಕ್​ಡೌನ್ ಅಥವಾ ನೈಟ್ ಕರ್ಫ್ಯೂ ಮರುಜಾರಿಗೊಳಿಸುವ ಯಾವುದೇ ಚಿಂತನೆ ಇಲ್ಲ. ಅಂತಹ ಪರಿಸ್ಥಿತಿ ತಂದುಕೊಳ್ಳುವುದು ಬೇಡ. ಅದಕ್ಕೆ ನಾವು ಜನರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದರು. ದೇಶದಲ್ಲಿ ಲಸಿಕೆಯಲ್ಲಿ ನಾವೇ ಮೊದಲಿದ್ದೇವೆ. ನಮ್ಮಲ್ಲಿ 1,12,558 ಸಿಬ್ಬಂದಿ ಲಸಿಕೆ ತೆಗೆದುಕೊಂಡಿದ್ದಾರೆ. ನೊಂದಣಿ ಮಾಡಿಕೊಂಡವರು ಹೆಚ್ಚಿದ್ದಾರೆ. ಇಲ್ಲಿಯವರೆಗೆ 6,12,018 ಲಸಿಕೆ ನೀಡಿದ್ದೇವೆ ಎಂದರು.

ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್ ಹೆಚ್ಚಾಗಿದೆ:

ಕೇರಳದಲ್ಲಿ 5405 ಪ್ರಕರಣಗಳು ನಿನ್ನೆ ದಾಖಲಾಗಿವೆ, ಸಕ್ರಿಯ ಪ್ರಕರಣಗಳು 60 ಸಾವಿರ ಇದೆ. ಅಲ್ಲಿ ಪ್ರತಿದಿನ 15 ಜನ ಮೃತಪಡುತ್ತಿದ್ದಾರೆ. ಇನ್ನು ಮಹಾರಾಷ್ಟ್ರದಲ್ಲಿ ನಿನ್ನೆ 6112 ಪ್ರಕರಣಗಳು ದಾಖಲಾಗಿವೆ. ನಿನ್ನೆ ಒಂದೇ ದಿನ 44 ಜನ ಸಾವನ್ನಪ್ಪಿದ್ದಾರೆ. ಹೀಗಾಗಿ ನಾವು ಎಚ್ಚರವಹಿಸಬೇಕಿದೆ ಎಂದರು.

10 ಜಿಲ್ಲೆಗಳು ಎರಡು ರಾಜ್ಯದ ಗಡಿ ಹಂಚಿಕೊಂಡಿವೆ. ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಗಳೂರು, ಉಡುಪಿ, ವಿಜಯಪುರ ಗಡಿ ಭಾಗದಲ್ಲಿವೆ. ಹೀಗಾಗಿ ಅಲ್ಲಿ ಹೆಚ್ಚಿನ ನಿಗಾ ವಹಿಸಿದ್ದೇವೆ. ಎರಡು ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಹೇಳಿದರು.

ಜನಸಾಮಾನ್ಯರಿಗೂ ಲಸಿಕೆ:

ನಾವು ಸಂದಿಗ್ಧ ಸ್ಥಿತಿಗೆ ಸಿಲುಕಿದ್ದೇವೆ. ಲಾಕ್​ಡೌನ್​ನಿಂದ ಆರ್ಥಿಕ ಸ್ಥಿತಿ ಬಿಗಾಡಾಯಿಸಿತ್ತು. ಹಾಗಾಗಿ ಕೆಲವು ವಿನಾಯ್ತಿ‌ ನೀಡಬೇಕಾಯ್ತು. ಆದರೂ ಜನ ಹೆಚ್ಚು ಸೇರದಂತೆ ನೋಡಿಕೊಳ್ಳಬೇಕು. ನಮ್ಮ‌ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು. ತಮ್ಮ ನಡವಳಿಕೆಗಳನ್ನು ಜನ ಚೇಂಜ್ ಮಾಡಿಕೊಳ್ಳಬೇಕು. ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾರ್ಚ್​ನಲ್ಲಿ‌ ಜನಸಾಮಾನ್ಯರಿಗೂ ಲಸಿಕೆ ಸಿಗಲಿದೆ ಎಂದು ತಿಳಿಸಿದರು. ಮುಂದಿನ ವಾರ ಸಿಎಂ ಜೊತೆ ಸಭೆ ನಡೆಸುತ್ತೇವೆ. ರಾಜ್ಯದ ಎಲ್ಲ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡುತ್ತಾರೆ ಎಂದರು. ಪಂಚಮಸಾಲಿ ಸಮುದಾಯದ ಸಮಾವೇಶಕ್ಕೆ ಹೆಚ್ಚು ಜನಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಅನುಷ್ಠಾನವಾಗಲಿದೆ ಎಂದು ಹೇಳಿದರು.

ಇಂದ್ರಧನುಷ್ ಲಸಿಕೆ ಅಭಿಯಾನ:

ಎರಡು ವರ್ಷದ ಮಕ್ಕಳು ಸೇರಿದಂತೆ ಗರ್ಭಿಣಿಯರಿಗೆ ಇಂದ್ರಧನುಷ್ ಲಸಿಕೆ ಅಭಿಯಾನವನ್ನು ಫೆಬ್ರವರಿ 22ರಿಂದ 24ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ರಾಜ್ಯದ ಕಲಬುರ್ಗಿ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಕೊಪ್ಪಳ, ಗದಗ, ರಾಯಚೂರು, ವಿಜಯಪುರ ಸೇರಿದಂತೆ 13 ಜಿಲ್ಲೆಗಳನ್ನು ಈ ಲಸಿಕೆ ಅಭಿಯಾನಕ್ಕೆ ಆಯ್ಕೆ ಮಾಡಲಾಗಿದೆ. ಕಲಬುರ್ಗಿಯಲ್ಲಿ ನಾಳೆ ಸಾಂಕೇತಿಕವಾಗಿ ಇಂದ್ರಧನುಷ್ ಲಸಿಕೆ ನೀಡಲಾಗುತ್ತದೆ. ಈ ಲಸಿಕೆ ಡಿಫ್ತೀರಿಯಾ, ಟೆಟನಸ್, ಕ್ಷಯ ಸೇರಿದಂತೆ ಏಳು ಕಾಯಿಲೆಗಳಿಗೆ ರಾಮಬಾಣವಾಗಲಿದೆ ಎಂದು ಹೇಳಿದರು.

ಬೆಂಗಳೂರು: ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ಎರಡೂ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ 10 ಜಿಲ್ಲೆಗಳಲ್ಲಿ ಹೆಚ್ಚು ನಿಗಾ ವಹಿಸಬೇಕಾಗಿದೆ. ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದ ಯಾವುದೇ ಜನರನ್ನು ಮಹಾರಾಷ್ಟ್ರ ಮತ್ತು ಕೇರಳದಿಂದ ಕರ್ನಾಟಕಕ್ಕೆ ಕಡ್ಡಾಯವಾಗಿ ಪ್ರವೇಶ ನಿರಾಕರಿಸುವಂತೆ ತಾಂತ್ರಿಕ ಸಲಹಾ ಸಮಿತಿಯು ಸಲಹೆ ನೀಡಿದೆ. ಈ ಸಂಬಂಧ ಗೃಹ ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಸಚಿವ ಸುಧಾಕರ್ ಸುದ್ದಿಗೋಷ್ಠಿ

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ ವಂಚನೆ: ದೂರು ದಾಖಲು

ಕೋವಿಡ್ ಲಸಿಕೆ ತೆಗೆದುಕೊಳ್ಳಲು ಆರೋಗ್ಯ ಇಲಾಖೆಯ ಕೊರೊನಾ ವಾರಿಯರ್ಸ್​ ಹಿಂಜರಿಯುತ್ತಿದ್ದಾರೆ. ಶೇ.50ರಷ್ಟು ಮಂದಿ ಮಾತ್ರ ಲಸಿಕೆ ತೆಗೆದುಕೊಂಡಿದ್ದಾರೆ. ಇದುವರೆಗೆ ಫ್ರಂಟ್​ಲೈನ್ ವಾರಿಯರ್ಸ್​, ಹಿರಿಯ ಅಧಿಕಾರಿಗಳು ಲಸಿಕೆ ತೆಗೆದುಕೊಂಡು ಮಾದರಿಯಾಗಿದ್ದಾರೆ. ಹಾಗಾಗಿ ಯಾವುದೋ ವದಂತಿಗಳನ್ನು ನಂಬಿ ನೀವು ಬಲಿಪಶುಗಳಾಗಬೇಡಿ. ನೀವೇ ಲಸಿಕೆ ತೆಗೆದುಕೊಳ್ಳದೇ ಇದ್ದರೆ ಜನಸಾಮಾನ್ಯರ ಪಾಡೇನು ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಸಚಿವರು ಮನವರಿಕೆ ಮಾಡಿಸಿದ್ದಾರೆ.

ಮೊದಲ ಡೋಸ್ ಪಡೆದ ಮೇಲೆ 28 ದಿನಕ್ಕೆ ಎರಡನೇ ಡೋಸ್ ಪಡೆಯಬೇಕು. ಮೊದಲ ಹಂತದ ಬಳಿಕ ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೆ ಸೋಂಕು ಬರಬಹುದು. ಆದರೆ ಸಾವಿನ ಪ್ರಮಾಣ ಕಡಿಮೆ. ಇದುವರೆಗೆ ಮುಂಚೂಣಿ ಕಾರ್ಯಕರ್ತರು, ಹಿರಿಯ ಅಧಿಕಾರಿಗಳು ಲಸಿಕೆ ತೆಗೆದುಕೊಂಡು ಮಾದರಿಯಾಗಿದ್ದಾರೆ. ಹಾಗಾಗಿ ಯಾವುದೋ ವದಂತಿಗಳನ್ನು ನಂಬಿ ನೀವು ಬಲಿಪಶುಗಳಾಗಬೇಡಿ. ನೀವೇ ಲಸಿಕೆ ತೆಗೆದುಕೊಳ್ಳದೇ ಇದ್ದರೆ ಜನಸಾಮಾನ್ಯರ ಪಾಡೇನು ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಕೊರೊನಾ ವಾರಿಯರ್ಸ್​ಗೆ ಸಚಿವರು ಮನವಿ ಮಾಡಿದರು.

ರಾಜ್ಯದಲ್ಲಿ ಲಾಕ್​ ಡೌನ್ ಇಲ್ಲ:

ರಾಜ್ಯದಲ್ಲಿ ಲಾಕ್​ಡೌನ್ ಅಥವಾ ನೈಟ್ ಕರ್ಫ್ಯೂ ಮರುಜಾರಿಗೊಳಿಸುವ ಯಾವುದೇ ಚಿಂತನೆ ಇಲ್ಲ. ಅಂತಹ ಪರಿಸ್ಥಿತಿ ತಂದುಕೊಳ್ಳುವುದು ಬೇಡ. ಅದಕ್ಕೆ ನಾವು ಜನರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದರು. ದೇಶದಲ್ಲಿ ಲಸಿಕೆಯಲ್ಲಿ ನಾವೇ ಮೊದಲಿದ್ದೇವೆ. ನಮ್ಮಲ್ಲಿ 1,12,558 ಸಿಬ್ಬಂದಿ ಲಸಿಕೆ ತೆಗೆದುಕೊಂಡಿದ್ದಾರೆ. ನೊಂದಣಿ ಮಾಡಿಕೊಂಡವರು ಹೆಚ್ಚಿದ್ದಾರೆ. ಇಲ್ಲಿಯವರೆಗೆ 6,12,018 ಲಸಿಕೆ ನೀಡಿದ್ದೇವೆ ಎಂದರು.

ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್ ಹೆಚ್ಚಾಗಿದೆ:

ಕೇರಳದಲ್ಲಿ 5405 ಪ್ರಕರಣಗಳು ನಿನ್ನೆ ದಾಖಲಾಗಿವೆ, ಸಕ್ರಿಯ ಪ್ರಕರಣಗಳು 60 ಸಾವಿರ ಇದೆ. ಅಲ್ಲಿ ಪ್ರತಿದಿನ 15 ಜನ ಮೃತಪಡುತ್ತಿದ್ದಾರೆ. ಇನ್ನು ಮಹಾರಾಷ್ಟ್ರದಲ್ಲಿ ನಿನ್ನೆ 6112 ಪ್ರಕರಣಗಳು ದಾಖಲಾಗಿವೆ. ನಿನ್ನೆ ಒಂದೇ ದಿನ 44 ಜನ ಸಾವನ್ನಪ್ಪಿದ್ದಾರೆ. ಹೀಗಾಗಿ ನಾವು ಎಚ್ಚರವಹಿಸಬೇಕಿದೆ ಎಂದರು.

10 ಜಿಲ್ಲೆಗಳು ಎರಡು ರಾಜ್ಯದ ಗಡಿ ಹಂಚಿಕೊಂಡಿವೆ. ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಗಳೂರು, ಉಡುಪಿ, ವಿಜಯಪುರ ಗಡಿ ಭಾಗದಲ್ಲಿವೆ. ಹೀಗಾಗಿ ಅಲ್ಲಿ ಹೆಚ್ಚಿನ ನಿಗಾ ವಹಿಸಿದ್ದೇವೆ. ಎರಡು ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಹೇಳಿದರು.

ಜನಸಾಮಾನ್ಯರಿಗೂ ಲಸಿಕೆ:

ನಾವು ಸಂದಿಗ್ಧ ಸ್ಥಿತಿಗೆ ಸಿಲುಕಿದ್ದೇವೆ. ಲಾಕ್​ಡೌನ್​ನಿಂದ ಆರ್ಥಿಕ ಸ್ಥಿತಿ ಬಿಗಾಡಾಯಿಸಿತ್ತು. ಹಾಗಾಗಿ ಕೆಲವು ವಿನಾಯ್ತಿ‌ ನೀಡಬೇಕಾಯ್ತು. ಆದರೂ ಜನ ಹೆಚ್ಚು ಸೇರದಂತೆ ನೋಡಿಕೊಳ್ಳಬೇಕು. ನಮ್ಮ‌ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು. ತಮ್ಮ ನಡವಳಿಕೆಗಳನ್ನು ಜನ ಚೇಂಜ್ ಮಾಡಿಕೊಳ್ಳಬೇಕು. ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾರ್ಚ್​ನಲ್ಲಿ‌ ಜನಸಾಮಾನ್ಯರಿಗೂ ಲಸಿಕೆ ಸಿಗಲಿದೆ ಎಂದು ತಿಳಿಸಿದರು. ಮುಂದಿನ ವಾರ ಸಿಎಂ ಜೊತೆ ಸಭೆ ನಡೆಸುತ್ತೇವೆ. ರಾಜ್ಯದ ಎಲ್ಲ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡುತ್ತಾರೆ ಎಂದರು. ಪಂಚಮಸಾಲಿ ಸಮುದಾಯದ ಸಮಾವೇಶಕ್ಕೆ ಹೆಚ್ಚು ಜನಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಅನುಷ್ಠಾನವಾಗಲಿದೆ ಎಂದು ಹೇಳಿದರು.

ಇಂದ್ರಧನುಷ್ ಲಸಿಕೆ ಅಭಿಯಾನ:

ಎರಡು ವರ್ಷದ ಮಕ್ಕಳು ಸೇರಿದಂತೆ ಗರ್ಭಿಣಿಯರಿಗೆ ಇಂದ್ರಧನುಷ್ ಲಸಿಕೆ ಅಭಿಯಾನವನ್ನು ಫೆಬ್ರವರಿ 22ರಿಂದ 24ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ರಾಜ್ಯದ ಕಲಬುರ್ಗಿ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಕೊಪ್ಪಳ, ಗದಗ, ರಾಯಚೂರು, ವಿಜಯಪುರ ಸೇರಿದಂತೆ 13 ಜಿಲ್ಲೆಗಳನ್ನು ಈ ಲಸಿಕೆ ಅಭಿಯಾನಕ್ಕೆ ಆಯ್ಕೆ ಮಾಡಲಾಗಿದೆ. ಕಲಬುರ್ಗಿಯಲ್ಲಿ ನಾಳೆ ಸಾಂಕೇತಿಕವಾಗಿ ಇಂದ್ರಧನುಷ್ ಲಸಿಕೆ ನೀಡಲಾಗುತ್ತದೆ. ಈ ಲಸಿಕೆ ಡಿಫ್ತೀರಿಯಾ, ಟೆಟನಸ್, ಕ್ಷಯ ಸೇರಿದಂತೆ ಏಳು ಕಾಯಿಲೆಗಳಿಗೆ ರಾಮಬಾಣವಾಗಲಿದೆ ಎಂದು ಹೇಳಿದರು.

Last Updated : Feb 20, 2021, 5:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.