ETV Bharat / state

ಜನರ ಸುರಕ್ಷತೆ ದೃಷ್ಟಿಯಿಂದ ಅನಿವಾರ್ಯವಾಗಿ ನೈಟ್ ಕರ್ಫ್ಯೂ: ಸಚಿವ ಸುಧಾಕರ್

ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಕೆಲವರಿಗೆ ತೊಂದರೆ ಆಗಲಿದೆ ಎನ್ನುವುದನ್ನು ತಕ್ಕಮಟ್ಟಿಗೆ ಒಪ್ಪಿಕೊಳ್ಳುತ್ತೇವೆ. ಆದರೆ ನಾವು ಸಂಜೆ 7 ಗಂಟೆಯಿಂದ ಕರ್ಫ್ಯೂ ಜಾರಿ ಮಾಡಿಲ್ಲ. ರಾತ್ರಿ 10 ಗಂಟೆಯಿಂದ ಮಾಡಿದ್ದೇವೆ. ಎಲ್ಲರೂ ಅಷ್ಟರಲ್ಲಿ ಮನೆ ಸೇರಿಕೊಳ್ಳಬಹುದು ಎಂದು ಸಚಿವ ಸುಧಾಕರ್​ ಹೇಳಿದ್ದಾರೆ.

author img

By

Published : Dec 23, 2020, 6:19 PM IST

minister sudhakar talk about Night curfew resolution
ಸಚಿವ ಸುಧಾಕರ್

ಬೆಂಗಳೂರು: ಬಹಳ ಅವಶ್ಯಕತೆ, ಅನಿವಾರ್ಯ ಇರುವುದರಿಂದ ನೈಟ್ ಕರ್ಫ್ಯೂ ನಿರ್ಣಯವನ್ನು ಜನರ ಸುರಕ್ಷತೆ ದೃಷ್ಟಿಯಿಂದ ಕೈಗೊಳ್ಳಲಾಗಿದ್ದು, ವರ್ತಕರಿಗೆ ನಷ್ಟವಾದರೂ ಜನರ ಆರೋಗ್ಯದ ದೃಷ್ಟಿಯಿಂದ ಸಹಕಾರ ನೀಡಬೇಕು. ಅವರೂ ಕೂಡ ತಮ್ಮ ಸಾಮಾಜಿಕ ಕಳಕಳಿ, ಜವಾಬ್ದಾರಿ ನಿರ್ವಹಿಸಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದ ಕೆಲವರಿಗೆ ತೊಂದರೆ ಆಗಲಿದೆ ಎನ್ನುವುದನ್ನು ತಕ್ಕಮಟ್ಟಿಗೆ ಒಪ್ಪಿಕೊಳ್ಳುತ್ತೇವೆ. ಆದರೆ ನಾವು ಸಂಜೆ 7 ಗಂಟೆಯಿಂದ ಕರ್ಫ್ಯೂ ಜಾರಿ ಮಾಡಿಲ್ಲ. ರಾತ್ರಿ 10 ಗಂಟೆಯಿಂದ ಮಾಡಿದ್ದೇವೆ. ಎಲ್ಲರೂ ಅಷ್ಟರಲ್ಲಿ ಮನೆ ಸೇರಿಕೊಳ್ಳಬಹುದು. ವರ್ತಕರಿಗೆ ನಷ್ಟವಾಗಬಹುದು. ಆದರೂ ಅವರಿಗೂ ಸಾಮಾಜಿಕ ಜವಾಬ್ದಾರಿ ಇರಬೇಕು.

ಸಚಿವ ಸುಧಾಕರ್

ಕೇವಲ ಸಂಪಾದನೆ, ಆರ್ಥಿಕ ಚಟುವಟಿಕೆಯನ್ನು ಮಾತ್ರ ನೋಡಿದರೆ ಜನರ ಸುರಕ್ಷತೆ, ಅವರ ಆರೋಗ್ಯವನ್ನು ಯಾರು ನೋಡುತ್ತಾರೆ. ಹಾಗಾಗಿ ಅವರು ಕೂಡ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಕೇವಲ 9 ದಿನ ಮಾತ್ರ ಕರ್ಫ್ಯೂ ಜಾರಿ ಮಾಡುವುದಾಗಿ ಹೇಳಿದ್ದೇವೆ. 9 ದಿನಗಳಲ್ಲಿ ನಾವು ರೂಪಾಂತರ ವೈರಾಣು ಎಷ್ಟರಮಟ್ಟಿಗೆ ಪರಿಣಾಮ ಬೀರಲಿದೆ ಎನ್ನುವುದನ್ನು ಅಧ್ಯಯನ ಮಾಡಲು ಸಹಾಯವಾಗಲಿದೆ. ಇದಕ್ಕೆ ಸಹಕಾರ ನೀಡಬೇಕು ಎಂದರು.

ಓದಿ: ನ್ಯೂ ಇಯರ್​ ಪಾರ್ಟಿ ಇರಲ್ಲ: ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ

ರಾತ್ರಿ ಕರ್ಫ್ಯೂ ಜಾರಿಯಿಂದ ಯಾರಿಗೂ ಕೂಡ ಸರ್ಕಾರದಿಂದ ಆರ್ಥಿಕ ಸಹಕಾರ ನೀಡಲು ಸಾಧ್ಯವಿಲ್ಲ. ವ್ಯಾಪಾರ ವಹಿವಾಟು ನಡೆಸುವವರಿಗೂ ನೆರವು ನೀಡಲು ಸಾಧ್ಯವಿಲ್ಲ. ಕೊರೊನಾ ನಿಯಂತ್ರಣ ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ, ಜನರ ಜವಾಬ್ದಾರಿ ಕೂಡ ಇದೆ. ಹಾಗಾಗಿ ಎಲ್ಲರೂ ಸರ್ಕಾರದ ಜೊತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ರಾತ್ರಿ ಮಲಗುವ ವೇಳೆಯಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಹಾಗಾಗಿ ಯಾವುದೇ ರೀತಿಯಲ್ಲಿ ಈಗಾಗಲೇ ಇರುವ ಅಗತ್ಯ ಸೇವೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಅದಕ್ಕೆ ಮಾರ್ಗಸೂಚಿಯನ್ನು ಹೊರಡಿಸಲಾಗುತ್ತದೆ. ಅದರಲ್ಲಿ ಎಲ್ಲವನ್ನೂ ಸ್ಪಷ್ಟವಾಗಿ ತಿಳಿಸಲಾಗುತ್ತದೆ ಎಂದರು.

ಈಗಾಗಲೇ ನಮ್ಮ ಅಧಿಕಾರಿಗಳು ಮಾರ್ಗಸೂಚಿಯನ್ನು ಸಿದ್ಧಪಡಿಸುತ್ತಿದ್ದಾರೆ. ನಂತರ ಅದನ್ನು ಮುಖ್ಯ ಕಾರ್ಯದರ್ಶಿಗಳಿಗೆ ಕೊಡಲಿದ್ದೇವೆ. ಅವರು ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಪ್ರತಿಯೊಂದು ಅಂಶವನ್ನು ನಮ್ಮ ಮಾರ್ಗಸೂಚಿಯಲ್ಲಿ ಹೇಳಲಿದ್ದೇವೆ. ಆದರೆ ರೈತರಿಗೆ ಯಾವತ್ತೂ ಸಮಸ್ಯೆಯಾಗಿಲ್ಲ. ನಮ್ಮ ಸರ್ಕಾರ ಕೋವಿಡ್ ಸಮಯದಲ್ಲಿಯೂ ರೈತರ ಎಲ್ಲಾ ಚಟುವಟಿಕೆಗಳಿಗೂ ಆರಂಭದಿಂದಲೂ ಅನುಮತಿ ಕೊಟ್ಟಿದೆ. ಬಸ್ ಸಂಚಾರಕ್ಕೂ ತೊಂದರಯಾಗಲ್ಲ. ಈ ಬಗ್ಗೆಯೂ ಮಾರ್ಗದರ್ಶಿಯಲ್ಲಿ ಸ್ಪಷ್ಟಪಡಿಸಲಾಗುತ್ತಿದೆ ಎಂದರು.

ಬೆಂಗಳೂರು: ಬಹಳ ಅವಶ್ಯಕತೆ, ಅನಿವಾರ್ಯ ಇರುವುದರಿಂದ ನೈಟ್ ಕರ್ಫ್ಯೂ ನಿರ್ಣಯವನ್ನು ಜನರ ಸುರಕ್ಷತೆ ದೃಷ್ಟಿಯಿಂದ ಕೈಗೊಳ್ಳಲಾಗಿದ್ದು, ವರ್ತಕರಿಗೆ ನಷ್ಟವಾದರೂ ಜನರ ಆರೋಗ್ಯದ ದೃಷ್ಟಿಯಿಂದ ಸಹಕಾರ ನೀಡಬೇಕು. ಅವರೂ ಕೂಡ ತಮ್ಮ ಸಾಮಾಜಿಕ ಕಳಕಳಿ, ಜವಾಬ್ದಾರಿ ನಿರ್ವಹಿಸಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದ ಕೆಲವರಿಗೆ ತೊಂದರೆ ಆಗಲಿದೆ ಎನ್ನುವುದನ್ನು ತಕ್ಕಮಟ್ಟಿಗೆ ಒಪ್ಪಿಕೊಳ್ಳುತ್ತೇವೆ. ಆದರೆ ನಾವು ಸಂಜೆ 7 ಗಂಟೆಯಿಂದ ಕರ್ಫ್ಯೂ ಜಾರಿ ಮಾಡಿಲ್ಲ. ರಾತ್ರಿ 10 ಗಂಟೆಯಿಂದ ಮಾಡಿದ್ದೇವೆ. ಎಲ್ಲರೂ ಅಷ್ಟರಲ್ಲಿ ಮನೆ ಸೇರಿಕೊಳ್ಳಬಹುದು. ವರ್ತಕರಿಗೆ ನಷ್ಟವಾಗಬಹುದು. ಆದರೂ ಅವರಿಗೂ ಸಾಮಾಜಿಕ ಜವಾಬ್ದಾರಿ ಇರಬೇಕು.

ಸಚಿವ ಸುಧಾಕರ್

ಕೇವಲ ಸಂಪಾದನೆ, ಆರ್ಥಿಕ ಚಟುವಟಿಕೆಯನ್ನು ಮಾತ್ರ ನೋಡಿದರೆ ಜನರ ಸುರಕ್ಷತೆ, ಅವರ ಆರೋಗ್ಯವನ್ನು ಯಾರು ನೋಡುತ್ತಾರೆ. ಹಾಗಾಗಿ ಅವರು ಕೂಡ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಕೇವಲ 9 ದಿನ ಮಾತ್ರ ಕರ್ಫ್ಯೂ ಜಾರಿ ಮಾಡುವುದಾಗಿ ಹೇಳಿದ್ದೇವೆ. 9 ದಿನಗಳಲ್ಲಿ ನಾವು ರೂಪಾಂತರ ವೈರಾಣು ಎಷ್ಟರಮಟ್ಟಿಗೆ ಪರಿಣಾಮ ಬೀರಲಿದೆ ಎನ್ನುವುದನ್ನು ಅಧ್ಯಯನ ಮಾಡಲು ಸಹಾಯವಾಗಲಿದೆ. ಇದಕ್ಕೆ ಸಹಕಾರ ನೀಡಬೇಕು ಎಂದರು.

ಓದಿ: ನ್ಯೂ ಇಯರ್​ ಪಾರ್ಟಿ ಇರಲ್ಲ: ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ

ರಾತ್ರಿ ಕರ್ಫ್ಯೂ ಜಾರಿಯಿಂದ ಯಾರಿಗೂ ಕೂಡ ಸರ್ಕಾರದಿಂದ ಆರ್ಥಿಕ ಸಹಕಾರ ನೀಡಲು ಸಾಧ್ಯವಿಲ್ಲ. ವ್ಯಾಪಾರ ವಹಿವಾಟು ನಡೆಸುವವರಿಗೂ ನೆರವು ನೀಡಲು ಸಾಧ್ಯವಿಲ್ಲ. ಕೊರೊನಾ ನಿಯಂತ್ರಣ ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ, ಜನರ ಜವಾಬ್ದಾರಿ ಕೂಡ ಇದೆ. ಹಾಗಾಗಿ ಎಲ್ಲರೂ ಸರ್ಕಾರದ ಜೊತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ರಾತ್ರಿ ಮಲಗುವ ವೇಳೆಯಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಹಾಗಾಗಿ ಯಾವುದೇ ರೀತಿಯಲ್ಲಿ ಈಗಾಗಲೇ ಇರುವ ಅಗತ್ಯ ಸೇವೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಅದಕ್ಕೆ ಮಾರ್ಗಸೂಚಿಯನ್ನು ಹೊರಡಿಸಲಾಗುತ್ತದೆ. ಅದರಲ್ಲಿ ಎಲ್ಲವನ್ನೂ ಸ್ಪಷ್ಟವಾಗಿ ತಿಳಿಸಲಾಗುತ್ತದೆ ಎಂದರು.

ಈಗಾಗಲೇ ನಮ್ಮ ಅಧಿಕಾರಿಗಳು ಮಾರ್ಗಸೂಚಿಯನ್ನು ಸಿದ್ಧಪಡಿಸುತ್ತಿದ್ದಾರೆ. ನಂತರ ಅದನ್ನು ಮುಖ್ಯ ಕಾರ್ಯದರ್ಶಿಗಳಿಗೆ ಕೊಡಲಿದ್ದೇವೆ. ಅವರು ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಪ್ರತಿಯೊಂದು ಅಂಶವನ್ನು ನಮ್ಮ ಮಾರ್ಗಸೂಚಿಯಲ್ಲಿ ಹೇಳಲಿದ್ದೇವೆ. ಆದರೆ ರೈತರಿಗೆ ಯಾವತ್ತೂ ಸಮಸ್ಯೆಯಾಗಿಲ್ಲ. ನಮ್ಮ ಸರ್ಕಾರ ಕೋವಿಡ್ ಸಮಯದಲ್ಲಿಯೂ ರೈತರ ಎಲ್ಲಾ ಚಟುವಟಿಕೆಗಳಿಗೂ ಆರಂಭದಿಂದಲೂ ಅನುಮತಿ ಕೊಟ್ಟಿದೆ. ಬಸ್ ಸಂಚಾರಕ್ಕೂ ತೊಂದರಯಾಗಲ್ಲ. ಈ ಬಗ್ಗೆಯೂ ಮಾರ್ಗದರ್ಶಿಯಲ್ಲಿ ಸ್ಪಷ್ಟಪಡಿಸಲಾಗುತ್ತಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.