ETV Bharat / state

64‌ ನೇ‌‌‌ ಕನ್ನಡ‌ ರಾಜ್ಯೋತ್ಸವ ಸಂಭ್ರಮ : ಅಧಿಕಾರಿಗಳ ಜತೆ ಸಚಿವ ಸುರೇಶ್‌ಕುಮಾರ್ ಸಭೆ

author img

By

Published : Oct 29, 2019, 4:29 AM IST

64ನೇ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ಇಲಾಖೆಯು ತೆಗೆದುಕೊಂಡಿರುವ ಪೂರ್ವಭಾವಿ ಕ್ರಮಗಳ ಕುರಿತಂತೆ ಪರಾಮರ್ಶಿಸಿದರು.

ಅಧಿಕಾರಿಗಳ ಜತೆ ಸಚಿವ ಸುರೇಶ್‌ಕುಮಾರ್ ಸಭೆ

ಬೆಂಗಳೂರು: 64ನೇ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ಇಲಾಖೆಯು ತೆಗೆದುಕೊಂಡಿರುವ ಪೂರ್ವಭಾವಿ ಕ್ರಮಗಳ ಕುರಿತಂತೆ ಪರಾಮರ್ಶಿಸಿದರು.

ವಿವಿಧ ಇಲಾಖೆಗಳ ಸಹಯೋಗದಲ್ಲಿ ನವೆಂಬರ್ 1 ರಂದು ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸುಮಾರು 8,000 ವಿದ್ಯಾರ್ಥಿಗಳು ಭಾಗವಹಿಸುವ ‘ಮಕ್ಕಳ ಮೇಳ’ವನ್ನು ಆಯೋಜಿಸುತ್ತಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಹಿಸುತ್ತಿದ್ದಾರೆಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.

ಅಧಿಕಾರಿಗಳ ಜತೆ ಸಚಿವ ಸುರೇಶ್‌ಕುಮಾರ್ ಸಭೆ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆಯನ್ನು ಪರಿಶೀಲಿಸಲು ಅಕ್ಟೋಬರ್ 31 ರಂದು ಕ್ರೀಡಾಂಗಣದಲ್ಲಿಯೇ ಅಧಿಕಾರಿಗಳ ಸಭೆಯನ್ನು ನಡೆಸಿ ಅಗತ್ಯ ಸೂಚನೆಗಳನ್ನು ನೀಡುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಕಳೆದ ಅಕ್ಟೋಬರ್​ 23-24 ರಂದು ಎರಡು ದಿನಗಳ ಬೆಳಗಾವಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ ಸಚಿವರು, ಈ ವಿಭಾಗದ ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ ಜಿಲ್ಲೆಗಳ ನೆರೆ ಪೀಡಿತ ಪ್ರದೇಶಗಳ ಹಲವಾರು ಶಾಲೆಗಳಿಗೆ ಭೇಟಿ ನೀಡಲಾಗಿದೆ. ಶಾಲಾ ಕೊಠಡಿಗಳನ್ನು ಪುನರ್ ನಿರ್ಮಾಣ ಮತ್ತು ದುರಸ್ಥಿಗೆ ಕಾರ್ಯಗಳನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದರು.

ನವೆಂಬರ್ 2 ರಂದು ಶಿಕ್ಷಣ ಸಚಿವರ ಮಹಾತ್ಮಕಾಂಕ್ಷೆಯ ಸಾರ್ವಜನಿಕರು, ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಫೋನ್ ಇನ್ ಸಂವಾದವನ್ನು ನಡೆಸುವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದಾಗಿ ಘೋಷಿಸಿದರು. ಸಾರ್ವಜನಿಕರು, ವಿದ್ಯಾರ್ಥಿಗಳು, ಶಿಕ್ಷಕರು, ತಮ್ಮೊಂದಿಗೆ ನೇರವಾಗಿ ಮಾತನಾಡಿ ತಮ್ಮ ಕುಂದು ಕೊರತೆಗಳನ್ನು ಹಂಚಿ ಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಬೆಂಗಳೂರು: 64ನೇ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ಇಲಾಖೆಯು ತೆಗೆದುಕೊಂಡಿರುವ ಪೂರ್ವಭಾವಿ ಕ್ರಮಗಳ ಕುರಿತಂತೆ ಪರಾಮರ್ಶಿಸಿದರು.

ವಿವಿಧ ಇಲಾಖೆಗಳ ಸಹಯೋಗದಲ್ಲಿ ನವೆಂಬರ್ 1 ರಂದು ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸುಮಾರು 8,000 ವಿದ್ಯಾರ್ಥಿಗಳು ಭಾಗವಹಿಸುವ ‘ಮಕ್ಕಳ ಮೇಳ’ವನ್ನು ಆಯೋಜಿಸುತ್ತಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಹಿಸುತ್ತಿದ್ದಾರೆಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.

ಅಧಿಕಾರಿಗಳ ಜತೆ ಸಚಿವ ಸುರೇಶ್‌ಕುಮಾರ್ ಸಭೆ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆಯನ್ನು ಪರಿಶೀಲಿಸಲು ಅಕ್ಟೋಬರ್ 31 ರಂದು ಕ್ರೀಡಾಂಗಣದಲ್ಲಿಯೇ ಅಧಿಕಾರಿಗಳ ಸಭೆಯನ್ನು ನಡೆಸಿ ಅಗತ್ಯ ಸೂಚನೆಗಳನ್ನು ನೀಡುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಕಳೆದ ಅಕ್ಟೋಬರ್​ 23-24 ರಂದು ಎರಡು ದಿನಗಳ ಬೆಳಗಾವಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ ಸಚಿವರು, ಈ ವಿಭಾಗದ ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ ಜಿಲ್ಲೆಗಳ ನೆರೆ ಪೀಡಿತ ಪ್ರದೇಶಗಳ ಹಲವಾರು ಶಾಲೆಗಳಿಗೆ ಭೇಟಿ ನೀಡಲಾಗಿದೆ. ಶಾಲಾ ಕೊಠಡಿಗಳನ್ನು ಪುನರ್ ನಿರ್ಮಾಣ ಮತ್ತು ದುರಸ್ಥಿಗೆ ಕಾರ್ಯಗಳನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದರು.

ನವೆಂಬರ್ 2 ರಂದು ಶಿಕ್ಷಣ ಸಚಿವರ ಮಹಾತ್ಮಕಾಂಕ್ಷೆಯ ಸಾರ್ವಜನಿಕರು, ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಫೋನ್ ಇನ್ ಸಂವಾದವನ್ನು ನಡೆಸುವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದಾಗಿ ಘೋಷಿಸಿದರು. ಸಾರ್ವಜನಿಕರು, ವಿದ್ಯಾರ್ಥಿಗಳು, ಶಿಕ್ಷಕರು, ತಮ್ಮೊಂದಿಗೆ ನೇರವಾಗಿ ಮಾತನಾಡಿ ತಮ್ಮ ಕುಂದು ಕೊರತೆಗಳನ್ನು ಹಂಚಿ ಕೊಳ್ಳಬಹುದಾಗಿದೆ ಎಂದು ತಿಳಿಸಿದರು.

Intro:64‌ನೇ‌‌‌ ಕನ್ನಡ‌ ರಾಜ್ಯೋತ್ಸವ; ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಸುರೇಶ್‌ಕುಮಾರ್..‌

ಬೆಂಗಳೂರು: 64ನೇ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ಇಲಾಖೆಯು ತೆಗೆದುಕೊಂಡಿರುವ ಪೂರ್ವಭಾವಿ ಕ್ರಮಗಳ ಕುರಿತಂತೆ ಪರಾಮರ್ಶಿಸಿದರು. ವಿವಿಧ ಇಲಾಖೆಗಳ ಸಹಯೋಗದಲ್ಲಿ ನವೆಂಬರ್ 01 ರಂದು ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ..‌ಅಂದು ಸುಮಾರು 8000 ವಿದ್ಯಾಗಳು ಭಾಗವಹಿಸುವ ಮಕ್ಕಳ ಮೇಳವನ್ನು ಸಹ ಶಿಕ್ಷಣ ಇಲಾಖೆಯು ಆಯೋಜಿಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ವಹಿಸುತ್ತಿದ್ದಾರೆಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆಯನ್ನು ಪರಿಶೀಲಿಸಲು ಅಕ್ಟೋಬರ್ 31 ರಂದು ಕ್ರೀಡಾಂಗಣದಲ್ಲಿಯೇ ಅಧಿಕಾರಿಗಳ ಸಭೆಯನ್ನು ನಡೆಸಿ ಅಗತ್ಯ ಸೂಚನೆಗಳನ್ನು ನೀಡುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಕಳೆದ 23-24 ರಂದು
ಎರಡು ದಿನಗಳ ಬೆಳಗಾವಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ ಸಚಿವರು ಈ ವಿಭಾಗದ ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ ಜಿಲ್ಲೆಗಳ ನೆರೆ ಪೀಡಿತ ಪ್ರದೇಶಗಳ ಹಲವಾರು ಶಾಲೆಗಳಿಗೆ ತಾವು ಭೇಟಿ ನೀಡಿದ್ದು ಈ ಶಾಲಾ ಕೊಠಡಿಗಳನ್ನು ಪುನರ್ ನಿರ್ಮಿಸಿ/ದುರಸ್ಥಿಗೆ ಬಿಡುಗಡೆಯಾಗಿರುವ ಅನುದಾನದಲ್ಲಿ ತುರ್ತು ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಶಾಲೆಗಳಲ್ಲಿ ನೀರು ನಿಂತಿರುವ ಹಿನ್ನೆಲೆಯಲ್ಲಿ ಈ ಶಾಲಾ ಕೊಠಡಿಗಳನ್ನು ಪ್ರವೇಶಿಸುವುದು ಸಹ ದುಸ್ಥಿರವಾಗಿರುವ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆಗೆ ಸೂಚನೆಗಳನ್ನು ನೀಡಲಾಗಿದ್ದು ದುರಸ್ಥಿ ಕಾರ್ಯ ಪೂರ್ಣಗೊಳ್ಳುವರೆವಿಗೆ ಶಾಲಾ ಚಟುವಟಿಕೆಗಳು ನಿರಂತರವಾಗಿ ನಡೆಯುವಲ್ಲಿ ಎಲ್ಲಾ ಕ್ರಮ ವಹಿಸಲಾಗಿದೆ ಎಂದಿದ್ದಾರೆ.

ಇತ್ತ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸರ್ಕಾರಿ ಶಾಲೆಯ ಮರು ನಿರ್ಮಾಣ ಕಾರ್ಯಕ್ಕೆ ಬೆಂಗಳೂರಿನ ಪಿ.ಇ.ಎಸ್. ಸಂಸ್ಥೆಯು ಮುಂದೆ ಬಂದಿದ್ದು, ಇಷ್ಟರಲ್ಲಿಯೇ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು.

ನವೆಂಬರ್ 2 ರಂದು ಶಿಕ್ಷಣ ಸಚಿವರ ಮಹಾತ್ಮಕಾಂಕ್ಷೆಯ ಸಂವೇದನ ಸಾರ್ವಜನಿಕರೊಂದಿಗೆ ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಫೋನ್ ಇನ್ ಸಂವಾದವನ್ನು ನಡೆಸುವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದಾಗಿ ಘೋಷಿಸಿದರು. ಸಾರ್ವಜನಿಕರು, ವಿದ್ಯಾಗಳು, ಶಿಕ್ಷಕರು, ತಮ್ಮೊಂದಿಗೆ ನೇರವಾಗಿ ಮಾತನಾಡಿ ತಮ್ಮ ಕುಂದು ಕೊರತೆಗಳನ್ನು ಹಂಚಿ ಕೊಳ್ಳಬಹುದಾಗಿದೆಯೆಂದು ಸಚಿವ ಸುರೇಶ್ಕುಮಾರ್ ತಿಳಿಸಿದರು. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರೊಂದಿಗೆ ಖುದ್ದಾಗಿ ಶಾಲಾ ಭೇಟಿಯನ್ನು ಕೈಗೊಂಡು ಕಡ್ಡಾಯ ಕನ್ನಡ ಕಲಿಕಾ ಕಾಯ್ದೆಯ 2015ರ ಸಮರ್ಪಕ ಅನುಷ್ಠಾನವಾಗುತ್ತಿರುವ ಬಗ್ಗೆ ಇಷ್ಟರಲ್ಲಿಯೇ ಪರಿಶೀಲನೆ ನಡೆಸುವುದಾಗಿ ಸಚಿವರು ತಿಳಿಸಿದರು.


KN_BNG_3_SURESHKUMAR_PC_SCRIPT_7201801
Body:..Conclusion:..

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.