ETV Bharat / state

ಆದೇಶ ಉಲ್ಲಂಘಿಸಿ 1ನೇ ತರಗತಿಯಿಂದ ಶಾಲೆ ಆರಂಭ: ಕ್ರಮಕ್ಕೆ ಸಚಿವ ಸುರೇಶ್ ಕುಮಾರ್ ಸೂಚನೆ

author img

By

Published : Jan 29, 2021, 3:34 PM IST

ಅಪಘಾತದಲ್ಲಿ ಗಾಯಗೊಂಡ ಮುಳಬಾಗಿಲಿನ ಶಾಲೆಯ ಇಬ್ಬರು ಮಕ್ಕಳು ನಗರದ ಕೊಡಿಗೆಹಳ್ಳಿ ಬಳಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಪೋಷಕರನ್ನ ಸಂತೈಸಿದ್ದಾರೆ. ಇನ್ನು ಸರ್ಕಾರದ ಆದೇಶ ಉಲ್ಲಂಘಿಸಿ ಒಂದನೇ ತರಗತಿ ಕ್ಲಾಸ್​ ಆರಂಭಿಸಿದ್ದ ಶಾಲೆ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ.

minister suresh kumar visits to see the hospitalized school students
ಗಾಯಗೊಂಡ ಶಾಲಾ ಮಕ್ಕಳನ್ನು ಭೇಟಿ ಮಾಡಿದ ಶಿಕ್ಷಣ ಸಚಿವ

ಬೆಂಗಳೂರು: ಖಾಸಗಿ ಶಾಲೆಯೊಂದು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಒಂದನೇ ತರಗತಿಯಿಂದಲೇ ಶಾಲೆ ಆರಂಭಿಸಿತ್ತು. ಕಳೆದ ಜನವರಿ 25ರಂದು ಬೆಳಗ್ಗೆ ಶಾಲೆಗೆ ಸೇರಿದ್ದ ಟಾಟಾ ಸುಮೋದಲ್ಲಿ ಸುಮಾರು 20 ಮಕ್ಕಳನ್ನು ತುಂಬಿಕೊಂಡು ಶಾಲೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿ ಮಕ್ಕಳು ಗಾಯಗೊಂಡಿದ್ರು. ಈ ಹಿನ್ನೆಲೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ.

minister suresh kumar visits to see the hospitalized school students
ಗಾಯಗೊಂಡ ಶಾಲಾ ಮಕ್ಕಳನ್ನು ಭೇಟಿ ಮಾಡಿದ ಶಿಕ್ಷಣ ಸಚಿವ

ಅಪಘಾತದಲ್ಲಿ ಗಾಯಗೊಂಡ ಮುಳಬಾಗಿಲಿನ ಶಾಲೆಯ ಇಬ್ಬರು ಮಕ್ಕಳು ನಗರದ ಕೊಡಿಗೆಹಳ್ಳಿ ಬಳಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಪೋಷಕರನ್ನ ಸಂತೈಸಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಸಚಿವ ಸುರೇಶ್ ಕುಮಾರ್, ಕುಶಲ್ ಎಂಬ ಒಂದನೇ ತರಗತಿಯ ಮಗುವಿನ ತಲೆಗೆ ಗಂಭೀರ ಸ್ವರೂಪದ ಗಾಯ ಆಗಿದೆ. ತೇಜಸ್ ಎಂಬ ಏಳನೇ ತರಗತಿಯ ಮಗುವಿನ ಕೈಗಳಿಗೆ ತೀವ್ರ ಸ್ವರೂಪದ ಗಾಯ ಉಂಟಾಗಿದೆ. ಕುಶಾಲ್ ತಂದೆ ಮುಳಬಾಗಿಲಿನ ಸಮೀಪದ ಟೋಲ್​ನಲ್ಲಿ ಕೆಲಸ ಮಾಡುವ ನೌಕರರಾಗಿದ್ದಾರೆ. ಆಸ್ಪತ್ರೆಯಲ್ಲಿ ಪೋಷಕರನ್ನು ಹಾಗೂ ವೈದ್ಯರನ್ನು ಮಾತನಾಡಿಸಿ ಮಕ್ಕಳ ಪರಿಸ್ಥಿತಿಯ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ, ಮಕ್ಕಳ ಈ ಪರಿಸ್ಥಿತಿಗೆ ಕಾರಣಕರ್ತವಾದ ಆ ಶಾಲೆಯ ವಿರುದ್ಧ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

minister suresh kumar visits to see the hospitalized school students
ಗಾಯಗೊಂಡ ಮಕ್ಕಳ ಆರೋಗ್ಯ ವಿಚಾರಿಸುತ್ತಿರುವ ಸಚಿವ ಸುರೇಶ್​ ಕುಮಾರ್​

ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿ ಈ ಮಕ್ಕಳ ಚಿಕಿತ್ಸೆಗೆ ತಗುಲುವ ವೆಚ್ಚವನ್ನು ಶಾಲೆಯೇ ಭರಿಸುವಂತೆ ಮಾಡಬೇಕೆಂದು ಹೇಳಿದ್ದೇನೆ. ಒಂದನೇ ತರಗತಿಯ ಮಗು ಕುಶಲ್ ಪರಿಸ್ಥಿತಿ ನೋಡಿದರೆ ಯಾರಿಗಾದರೂ ಕಣ್ಣಲ್ಲಿ ನೀರು ಬರದೇ ಇರದು. ಬ್ಯಾಂಡೇಜ್ ಹಾಕಿದ್ದ ಇಬ್ಬರು ಮಕ್ಕಳ ಚಿತ್ರಗಳನ್ನು ನಾನು ಬೇಕೆಂದೇ ಪೋಸ್ಟ್ ಮಾಡಿಲ್ಲ. ಅಷ್ಟು ಗಾಬರಿಯಾಗುವಂತಿವೆ ಆ ಚಿತ್ರಗಳು ಅಂತಾ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಒಳಚರಂಡಿ ಸ್ವಚ್ಛತೆಗಾಗಿ ಸಾಂಸ್ಕೃತಿಕ ನಗರಿಗೆ ಬಂತು ರೋಬೋಟ್ ಯಂತ್ರ!

ಬೆಂಗಳೂರು: ಖಾಸಗಿ ಶಾಲೆಯೊಂದು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಒಂದನೇ ತರಗತಿಯಿಂದಲೇ ಶಾಲೆ ಆರಂಭಿಸಿತ್ತು. ಕಳೆದ ಜನವರಿ 25ರಂದು ಬೆಳಗ್ಗೆ ಶಾಲೆಗೆ ಸೇರಿದ್ದ ಟಾಟಾ ಸುಮೋದಲ್ಲಿ ಸುಮಾರು 20 ಮಕ್ಕಳನ್ನು ತುಂಬಿಕೊಂಡು ಶಾಲೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿ ಮಕ್ಕಳು ಗಾಯಗೊಂಡಿದ್ರು. ಈ ಹಿನ್ನೆಲೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ.

minister suresh kumar visits to see the hospitalized school students
ಗಾಯಗೊಂಡ ಶಾಲಾ ಮಕ್ಕಳನ್ನು ಭೇಟಿ ಮಾಡಿದ ಶಿಕ್ಷಣ ಸಚಿವ

ಅಪಘಾತದಲ್ಲಿ ಗಾಯಗೊಂಡ ಮುಳಬಾಗಿಲಿನ ಶಾಲೆಯ ಇಬ್ಬರು ಮಕ್ಕಳು ನಗರದ ಕೊಡಿಗೆಹಳ್ಳಿ ಬಳಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಪೋಷಕರನ್ನ ಸಂತೈಸಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಸಚಿವ ಸುರೇಶ್ ಕುಮಾರ್, ಕುಶಲ್ ಎಂಬ ಒಂದನೇ ತರಗತಿಯ ಮಗುವಿನ ತಲೆಗೆ ಗಂಭೀರ ಸ್ವರೂಪದ ಗಾಯ ಆಗಿದೆ. ತೇಜಸ್ ಎಂಬ ಏಳನೇ ತರಗತಿಯ ಮಗುವಿನ ಕೈಗಳಿಗೆ ತೀವ್ರ ಸ್ವರೂಪದ ಗಾಯ ಉಂಟಾಗಿದೆ. ಕುಶಾಲ್ ತಂದೆ ಮುಳಬಾಗಿಲಿನ ಸಮೀಪದ ಟೋಲ್​ನಲ್ಲಿ ಕೆಲಸ ಮಾಡುವ ನೌಕರರಾಗಿದ್ದಾರೆ. ಆಸ್ಪತ್ರೆಯಲ್ಲಿ ಪೋಷಕರನ್ನು ಹಾಗೂ ವೈದ್ಯರನ್ನು ಮಾತನಾಡಿಸಿ ಮಕ್ಕಳ ಪರಿಸ್ಥಿತಿಯ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ, ಮಕ್ಕಳ ಈ ಪರಿಸ್ಥಿತಿಗೆ ಕಾರಣಕರ್ತವಾದ ಆ ಶಾಲೆಯ ವಿರುದ್ಧ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

minister suresh kumar visits to see the hospitalized school students
ಗಾಯಗೊಂಡ ಮಕ್ಕಳ ಆರೋಗ್ಯ ವಿಚಾರಿಸುತ್ತಿರುವ ಸಚಿವ ಸುರೇಶ್​ ಕುಮಾರ್​

ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿ ಈ ಮಕ್ಕಳ ಚಿಕಿತ್ಸೆಗೆ ತಗುಲುವ ವೆಚ್ಚವನ್ನು ಶಾಲೆಯೇ ಭರಿಸುವಂತೆ ಮಾಡಬೇಕೆಂದು ಹೇಳಿದ್ದೇನೆ. ಒಂದನೇ ತರಗತಿಯ ಮಗು ಕುಶಲ್ ಪರಿಸ್ಥಿತಿ ನೋಡಿದರೆ ಯಾರಿಗಾದರೂ ಕಣ್ಣಲ್ಲಿ ನೀರು ಬರದೇ ಇರದು. ಬ್ಯಾಂಡೇಜ್ ಹಾಕಿದ್ದ ಇಬ್ಬರು ಮಕ್ಕಳ ಚಿತ್ರಗಳನ್ನು ನಾನು ಬೇಕೆಂದೇ ಪೋಸ್ಟ್ ಮಾಡಿಲ್ಲ. ಅಷ್ಟು ಗಾಬರಿಯಾಗುವಂತಿವೆ ಆ ಚಿತ್ರಗಳು ಅಂತಾ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಒಳಚರಂಡಿ ಸ್ವಚ್ಛತೆಗಾಗಿ ಸಾಂಸ್ಕೃತಿಕ ನಗರಿಗೆ ಬಂತು ರೋಬೋಟ್ ಯಂತ್ರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.