ಬೆಂಗಳೂರು: ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸೇರಿ ಇಬ್ಬರ ಮೇಲೆ ಹಾಡುಹಗಲೇ ಗುಂಡಿನ ದಾಳಿ ನಡೆದಿದೆ. ಈ ಘಟನೆ ಕೆ ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿಶೀಟರ್ ಶಿವಶಂಕರ್ ರೆಡ್ಡಿ ಹಾಗೂ ಚಾಲಕ ಅಶೋಕ್ ರೆಡ್ಡಿ ಗುಂಡಿನ ದಾಳಿಗೊಳಗಾಗಿ ಗಾಯಗೊಂಡಿದ್ದು ಕೆ ಆರ್ ಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
![ಚಾಲಕ ಅಶೋಕ್ ರೆಡ್ಡಿ](https://etvbharatimages.akamaized.net/etvbharat/prod-images/17151120_thumbno.jpg)
ಶಿವಶಂಕರ್ ರೆಡ್ಡಿ ವಿರುದ್ಧ ಮದನಪಲ್ಲಿ ಪೊಲೀಸ್ ಠಾಣೆಯಲ್ಲಿ ಎರಡು ಕೊಲೆ ಪ್ರಕರಣ ದಾಖಲಾಗಿದ್ದು, ಕಳೆದ ಆರು ದಿನಗಳ ಹಿಂದೆ ಕುರುಡುಸೊನ್ನೇನಹಳ್ಳಿಯ ಹ್ಯಾಪಿ ಗಾರ್ಡನ್ ಲೇಔಟ್ನ ಬಳಿ ಮನೆ ನಿರ್ಮಾಣಕ್ಕಾಗಿ ನಗರಕ್ಕೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
![ರೌಡಿಶೀಟರ್ ಶಿವಶಂಕರ್ ರೆಡ್ಡಿ](https://etvbharatimages.akamaized.net/etvbharat/prod-images/17151120_thumbn.jpg)
ನಾಲ್ಕು ಬಾರಿ ಟ್ರಿಗರ್ ಒತ್ತಿದ ದುಷ್ಕರ್ಮಿಗಳು: ಶಿವಶಂಕರ್ ರೆಡ್ಡಿ ಹತ್ಯೆಗೆ ಸಂಚು ರೂಪಿಸಿರುವ ಆರೋಪಿಗಳು ಮಧ್ಯಾಹ್ನ ಏಕಾಏಕಿ ಮನೆ ನಿರ್ಮಾಣ ಮಾಡುತ್ತಿದ್ದ ಜಾಗದ ಬಳಿ ರಿವಾಲ್ವಾರ್ನಿಂದ ಆರು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಗಳು ಆಂಧ್ರದಿಂದಲೇ ಬಂದು ಕೃತ್ಯವೆಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಇದನ್ನೂ ಓದಿ: ಹಾಸನ: ಪತ್ನಿ ಕೊಲೆಗೈದ ಆರೋಪಿ ಪತಿಯ ಬಂಧನ