ETV Bharat / state

ಪ್ರಾಮಾಣಿಕತೆಗಿಂತ ಹಣ, ಅಧಿಕಾರಕ್ಕೆ ಹೆಚ್ಚು ಬೆಲೆ: ಸಂತೋಷ್‌ ಹೆಗ್ಡೆ ಕಳವಳ - bangalore university program

ಬೆಂಗಳೂರು ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹಗ್ಡೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

Money is more than honesty, more price for power: hegade
ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ
author img

By

Published : Dec 20, 2019, 3:33 PM IST

ಬೆಂಗಳೂರು: ಇಂದಿನ ಸಮಾಜದಲ್ಲಿ ಪ್ರಾಮಾಣಿಕತೆಗಿಂತಲೂ ಹಣ ಮತ್ತು ಅಧಿಕಾರಕ್ಕೆ ಹೆಚ್ಚು ಬೆಲೆ ಇದೆ ಎಂದು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ.

ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ

ಬೆಂಗಳೂರು ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಮ್ಮ ಪರಂಪರೆಯನ್ನು ನೆನೆದು ಜೀವನದಲ್ಲಿ ಮಾನವೀಯ ಮೌಲ್ಯ, ನೈತಿಕತೆ ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಬೇಕು. ಯುವಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಬೆಳೆಸಿಕೊಳ್ಳುವ ಮೂಲಕ ಭವಿಷ್ಯದ ಭಾರತವನ್ನು ನಿರ್ಮಿಸಬೇಕು ಎಂದು ಕರೆ ನೀಡಿದರು.

ಬೆಂಗಳೂರು: ಇಂದಿನ ಸಮಾಜದಲ್ಲಿ ಪ್ರಾಮಾಣಿಕತೆಗಿಂತಲೂ ಹಣ ಮತ್ತು ಅಧಿಕಾರಕ್ಕೆ ಹೆಚ್ಚು ಬೆಲೆ ಇದೆ ಎಂದು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ.

ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ

ಬೆಂಗಳೂರು ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಮ್ಮ ಪರಂಪರೆಯನ್ನು ನೆನೆದು ಜೀವನದಲ್ಲಿ ಮಾನವೀಯ ಮೌಲ್ಯ, ನೈತಿಕತೆ ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಬೇಕು. ಯುವಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಬೆಳೆಸಿಕೊಳ್ಳುವ ಮೂಲಕ ಭವಿಷ್ಯದ ಭಾರತವನ್ನು ನಿರ್ಮಿಸಬೇಕು ಎಂದು ಕರೆ ನೀಡಿದರು.

Intro:ಸಸ್ಯ ಶಾಸ್ತ್ರ ವಿಭಾಗದ ಶತಮಾನೋತ್ಸವ ಸಂಭ್ರಮ

ಇಂದಿನ ಸಮಾಜದಲ್ಲಿ ಪ್ರಾಮಾಣಿಕತೆಗಿಂತಲೂ ಹಣ ಮತ್ತು ಅಧಿಕಾರಕ್ಕೆ ಹೆಚ್ಚು ಬೆಲೆ ಎಂದು ನಿವೃತ್ತ ಲೋಕಾಯುಕ್ತ ಜಸ್ಟಿಸ್ ಸಂತೋಷ್ ಹೆಗಡೆ ವಿಷಾದ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಸಸ್ಯ ಶಾಸ್ತ್ರ ವಿಭಾಗದ ಶತಮಾನೋತ್ಸವ ಕಾರ್ಯಕ್ರಮ
ವನ್ಜು ಉದ್ಘಾಟಿಸಿ ,ಕಾರ್ಯಕ್ರಮದ‌ವೇದಿಕೆಯಲ್ಲಿ
ಮಾತನಾಡಿದ ಸಂತೋಷ್ ಹೆಗಡೆ. ಇಂದು ನಮ್ಮ ಪರಂಪರೆಯನ್ನು ನೆನೆದು ಮಾನವೀಯ ಮೌಲ್ಯ,ನೈತಿಕತೆ
ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಬೇಕು
ಎಂದು ತಿಳಿಸಿದರು. ಹಾಗೂ ಯುವಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಬೆಳೆಸಿಕೊಳ್ಳವ ಮೂಲಕ ಭವಿಷ್ಯದ ಭಾರತವನ್ನು ನಿರ್ಮಿಸಬೇಕು ಎಂದು ಯುವಜನತೆಗೆಕರೆನೀಡಿದರು.ಇನ್ನುಈಕಾರ್ಯಕ್ರಮದಲ್ಲಿ
ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ ಕೆ ಆರ್ ವೇಣುಗೋಪಾಲ್,ಪ್ರೊ ಸಿ ಎನ್ ಆರ್ ರಾವ್, ಪ್ರೊ. ಸಿ ವಿ ರಾಮನ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ, ಈ ಮೂರು ಭಾರತರತ್ನಗಳು ವಿಶ್ವವಿದ್ಯಾಲಯದ ಆಸ್ತಿ, ಸಸ್ಯ ಶಾಸ್ತ್ರದ ಹೆಚ್ಚಿನ ಕಲಿಕೆ ಮತ್ತು ಸಂಶೋಧನೆಗಾಗಿ ಸಸ್ಯ ಉದ್ಯಾನವನ ನಿರ್ಮಾಣಕ್ಕೆ ವಿಶ್ವವಿದ್ಯಾಲಯವು50ಎಕರೆಜಮೀನನ್ನುಮಂಜೂರುಮಾಡಿದೆಹಾಗೂವಿದ್ಯಾರ್ಥಿಗಳಾನುಕೂಲಕ್ಕಾಗಿ. ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು ಈಗಾಗಲೇ 44 ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ತಿಳಿಸಿದರು. ಅಲ್ಲದೆ. Body:ಎರಡು ದಿನದ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪದ್ಮಭೂಷಣ ಡಾ.ಪಿ ಬಲರಾಮ್ ಮಾತನಾಡಿ, ಇಂದಿನ ರಾಜಕಾರಣಿಗಳಲ್ಲಿ, ನಿಜವಾದ ವಿಜ್ಞಾನಕ್ಕಿಂತ ಇತರೆ ರಾಜಕಾರಣಿಗಳ ಅನುವಂಶೀಯ ಮತ್ತು ಕೆಮಿಸ್ಟ್ರಿಗಳನ್ನು ತಿಳಿಯುವ ಕುತೂಹಲ ಹೆಚ್ಚಿರುವುದು ವಿಷಾದನೀಯ ಎಂದರು‌. ಭಾರತೀಯರಿಗೆ ಇತಿಹಾಸವೆಂದರೆ ಪೌರಾಣಿಕ ಕಥೆಗಳಷ್ಟೇ ಆಗಿವೆ ಅದನ್ನು ಹೊರತುಪಡಿಸಿ ಹಲವಾರು ಇತಿಹಾಸಗಳು ನಮ್ಮ ನಡುವೆ ನಶಿಸಿಹೋಗುತ್ತಿವೆ ಅವುಗಳನ್ನು ಉಳಿಸಿಕೊಳ್ಳುವ ಅಗತ್ಯತೆ ಇದೆ. ಪ್ರೊ. ಸಿ ವಿ ರಾಮನ್ ಅವರು ಇದ್ದಂತಹ ಸಸ್ಯ ಶಾಸ್ತ್ರ ವಿಭಾಗ ಇಂದು ನಮಗೆ ಕಾಣಲು ಸಿಗುತ್ತಿಲ್ಲ ಕಾರಣ ನಮ್ಮಲ್ಲಿ ಇತಿಹಾಸವನ್ನು ದಾಖಲಿಸುವ ಜ್ಞಾನದ ಕೊರತೆ ಇದೆ. ಹಾಗೂ ನವೇಲ್ಲರೊ ನಾವು ಓದಿದ ಶಿಕ್ಷಣ ಸಂಸ್ಥೆಗಳತ್ತ ಮುಖ ಮಾಡಿ ಅವುಗಳನ್ನು ಜೀರ್ಣೋದ್ಧಾರ ಮತ್ತು ಉಳಿಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಿದೆ ಎಂದು ಹೇಳಿದರು.ಇನ್ನು ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದ ಸಸ್ಯಶಾಸ್ತ್ರ ವಿಭಾಗದ ಶತಮಾನೋತ್ಸವ ಸಂಭ್ರಮದ ಭಾಗವಾಗಿ ಆಯೋಜಿಸಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಅಟ್ರಿ, ಆಯುಷ್ ಬ್ಯಾಬೂ ಸೊಸೈಟಿ ಮತ್ತು ಇತರೆ ಸಂಸ್ಥೆಗಳು ಭಾಗವಹಿಸಿದ್ದು ಸಾರ್ವಜನಿಕರ ವೀಕ್ಷಣೆಗೆ ಇಂದು ಮತ್ತು ನಾಳೆ‌ಅವಕಾಶವಿದ್ದು,ಇನ್ನು ಈ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ರೆಜಿಸ್ಟಾರ್ ಪ್ರೊ. ಬಿ ಕೆ ರವಿ, ಕರ್ನಾಟಕದ ಮುಖ್ಯ ಪೋಸ್ಟಲ್ ಜನರಲ್ , ಸಸ್ಯಶಾಸ್ತ್ರ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಬಿ ಎಚ್ ಎಂ ನಿಜಲಿಂಗಪ್ಪ ಮತ್ತು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಟಿ ಜಿ ಉಮೇಶ್ ಉಪಸ್ಥಿತರಿದ್ದರು.

ಸತೀಶ ಎಂಬಿ
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.