ಬೆಂಗಳೂರು: ಕೊರೊನಾ ನಿಯಂತ್ರಿಸಲು ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ರಾಜ್ಯದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಸದಾ ಜನಸಂದಣಿಯಿಂದ ತುಂಬಿರುತ್ತಿದ್ದ ನಗರದ ಮೆಜೆಸ್ಟಿಕ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳು ಸಂಪೂರ್ಣ ಸ್ತಬ್ಧವಾಗಿವೆ. ಆದರೆ ಇಂದು ಇಲ್ಲಿ ಜನರಿಂದ ಮುಕ್ತವಾಗಿದ್ದ ಈ ಸ್ಥಳಗಳಲ್ಲಿ ಬಸ್ ನಿಲ್ದಾಣದಲ್ಲಿ ನೂರಾರು ಪಾರಿವಾಳಗಳ ಕಾರುಬಾರು ಜೋರಾಗಿತ್ತು. ಯಾರ ಹಂಗಿಲ್ಲದೇ ತಮ್ಮ ಇಚ್ಛೆಯಂತೆ ಹಾರಾಟ ನಡೆಸುತ್ತಿದ್ದ ದೃಶ್ಯಗಳು ಕಂಡು ಬಂದವು.