ETV Bharat / state

ಬೆಡ್ ಬ್ಲಾಕಿಂಗ್ ದಂಧೆ: ಕಮೀಷನರ್ ಭೇಟಿ ಮಾಡಿ ಮಾಹಿತಿ ನೀಡಿದ ಸಂಸದ ತೇಜಸ್ವಿ ಸೂರ್ಯ

author img

By

Published : May 5, 2021, 5:08 PM IST

Updated : May 5, 2021, 6:45 PM IST

ಸಂಸದ ತೇಜಸ್ವಿ‌ ಸೂರ್ಯ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ಮಾಡಿ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿರುವ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

mp-tejaswi-surya
mp-tejaswi-surya

ಬೆಂಗಳೂರು: ಸರ್ಕಾರಿ ಕೋಟಾದಡಿ‌ ಮೀಸಲಿರಿಸಿದ ಬೆಡ್​ಗಳನ್ನು ಬ್ಲಾಕ್‌ ಮಾಡಿ ಅವ್ಯವಹಾರ ಬಯಲಿಗೆಳೆದಿರುವ ಸಂಸದ ತೇಜಸ್ವಿ‌ ಸೂರ್ಯ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ಮಾಡಿ ದಂಧೆಯಲ್ಲಿ ತೊಡಗಿರುವ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಹೊರಬಂದು ಮಾತನಾಡಿರುವ ಅವರು, ಬೆಡ್ ಹಗರಣ ಕುರಿತು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ನಿನ್ನೆ ರಾತ್ರಿಯಿಂದಲೂ ಸಾಕಷ್ಟು ಮಾಹಿತಿ ಪೊಲೀಸರು ಕಲೆ ಹಾಕಿದ್ದಾರೆ.‌ ಹಣ ಪಡೆದವರು ಎಲ್ಲವನ್ನು ಗೂಗಲ್ ಪೇ ಮೂಲಕ ಪಡೆದಿದ್ದಾರೆ. ಮುಖ್ಯಮಂತ್ರಿ ಸಹ ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಅಂತಹವನ್ನ ಬಂಧಿಸುಂತೆ ಹೇಳಿದ್ದಾರೆ. ನನಗೆ ಬಂದಿರುವ ಮಾಹಿತಿಯನ್ನು ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ‌. ಲಭ್ಯವಾಗಿರುವ ಫೋನ್​​ ಸಂಭಾಷಣೆ ಸಹ ಸಾಕಷ್ಟು ಸಿಕ್ಕಿದ್ದು ಅದೆಲ್ಲ ಪೊಲೀಸರು‌ ಪರಿಶೀಲನೆ ಮಾಡುತ್ತಿದ್ದಾರೆ ಎಂದರು.

ಕಮೀಷನರ್ ಭೇಟಿ ಮಾಡಿದ ತೇಜಸ್ವಿ ಸೂರ್ಯ

ಪ್ರಕರಣ ಕುರಿತಂತೆ ರಾಜಕೀಯ ಮಾಡುತ್ತಿಲ್ಲ. ಸಮಸ್ಯೆಗಳ‌ ಜೊತೆಗೆ ಪರಿಹಾರ ಸಹ ಕೇಳುವಂತೆ ಸಿಎಂ ಹೇಳಿದ್ದಾರೆ. ಈ ಬಗ್ಗೆ ನಂದನ್ ನಿಲೇಕಣಿ ಅವರಿಗೂ ಕಾಲ್ ಮಾಡಿ ಮಾತನಾಡಿದ್ದೇನೆ. ಸಾಫ್ಟ್‌ವೇರ್ ಇಂಜಿನಿಯರ್​ಗಳ ಒಳ್ಳೆಯ ತಂಡ ನೀಡುವುದಾಗಿ ಭರವಸೆ ನೀಡಿದ್ದಾರೆ. ಬೆಡ್ ಬುಕ್ ಮಾಡುವ ಸಾಫ್ಟ್‌ವೇರ್​ನಲ್ಲಿ ಯಾವುದೇ ಲೋಪದೋಷ ಇಲ್ಲದ ಹಾಗೆ ಮಾಡಲಾಗುವುದು ಎಂದರು.

ಬೆಂಗಳೂರು: ಸರ್ಕಾರಿ ಕೋಟಾದಡಿ‌ ಮೀಸಲಿರಿಸಿದ ಬೆಡ್​ಗಳನ್ನು ಬ್ಲಾಕ್‌ ಮಾಡಿ ಅವ್ಯವಹಾರ ಬಯಲಿಗೆಳೆದಿರುವ ಸಂಸದ ತೇಜಸ್ವಿ‌ ಸೂರ್ಯ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ಮಾಡಿ ದಂಧೆಯಲ್ಲಿ ತೊಡಗಿರುವ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಹೊರಬಂದು ಮಾತನಾಡಿರುವ ಅವರು, ಬೆಡ್ ಹಗರಣ ಕುರಿತು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ನಿನ್ನೆ ರಾತ್ರಿಯಿಂದಲೂ ಸಾಕಷ್ಟು ಮಾಹಿತಿ ಪೊಲೀಸರು ಕಲೆ ಹಾಕಿದ್ದಾರೆ.‌ ಹಣ ಪಡೆದವರು ಎಲ್ಲವನ್ನು ಗೂಗಲ್ ಪೇ ಮೂಲಕ ಪಡೆದಿದ್ದಾರೆ. ಮುಖ್ಯಮಂತ್ರಿ ಸಹ ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಅಂತಹವನ್ನ ಬಂಧಿಸುಂತೆ ಹೇಳಿದ್ದಾರೆ. ನನಗೆ ಬಂದಿರುವ ಮಾಹಿತಿಯನ್ನು ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ‌. ಲಭ್ಯವಾಗಿರುವ ಫೋನ್​​ ಸಂಭಾಷಣೆ ಸಹ ಸಾಕಷ್ಟು ಸಿಕ್ಕಿದ್ದು ಅದೆಲ್ಲ ಪೊಲೀಸರು‌ ಪರಿಶೀಲನೆ ಮಾಡುತ್ತಿದ್ದಾರೆ ಎಂದರು.

ಕಮೀಷನರ್ ಭೇಟಿ ಮಾಡಿದ ತೇಜಸ್ವಿ ಸೂರ್ಯ

ಪ್ರಕರಣ ಕುರಿತಂತೆ ರಾಜಕೀಯ ಮಾಡುತ್ತಿಲ್ಲ. ಸಮಸ್ಯೆಗಳ‌ ಜೊತೆಗೆ ಪರಿಹಾರ ಸಹ ಕೇಳುವಂತೆ ಸಿಎಂ ಹೇಳಿದ್ದಾರೆ. ಈ ಬಗ್ಗೆ ನಂದನ್ ನಿಲೇಕಣಿ ಅವರಿಗೂ ಕಾಲ್ ಮಾಡಿ ಮಾತನಾಡಿದ್ದೇನೆ. ಸಾಫ್ಟ್‌ವೇರ್ ಇಂಜಿನಿಯರ್​ಗಳ ಒಳ್ಳೆಯ ತಂಡ ನೀಡುವುದಾಗಿ ಭರವಸೆ ನೀಡಿದ್ದಾರೆ. ಬೆಡ್ ಬುಕ್ ಮಾಡುವ ಸಾಫ್ಟ್‌ವೇರ್​ನಲ್ಲಿ ಯಾವುದೇ ಲೋಪದೋಷ ಇಲ್ಲದ ಹಾಗೆ ಮಾಡಲಾಗುವುದು ಎಂದರು.

Last Updated : May 5, 2021, 6:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.