ETV Bharat / state

ಮುಖ್ಯಮಂತ್ರಿ ಪರಿಹಾರ ನಿಧಿಗೆ ಅನರ್ಹ ಶಾಸಕ ಎಂಟಿಬಿಯಿಂದ 1 ಕೋಟಿ ರೂ. ದೇಣಿಗೆ - CM's relief fund

ರಾಜ್ಯದ 17 ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ನಾನಾ ಸಮಸ್ಯೆಗಳು ಎದುರಾಗಿವೆ. ಪರಿಹಾರ ಕಾರ್ಯಕ್ಕೆ ನೆರವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಹೊಸಕೋಟೆ ಕ್ಷೇತ್ರದ ಅನರ್ಹ ಶಾಸಕ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.

ಎಂಟಿಬಿಯಿಂದ 1 ಕೋಟಿ ರೂ ದೇಣಿಗೆ
author img

By

Published : Aug 13, 2019, 1:32 PM IST

ಬೆಂಗಳೂರು: ರಾಜ್ಯದ 17 ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಎದುರಾಗಿರುವ ಸಮಸ್ಯೆಗೆ ಹೊಸಕೋಟೆ ಕ್ಷೇತ್ರದ ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಸ್ಪಂದಿಸಿದ್ದಾರೆ. ಪರಿಹಾರ ಕಾರ್ಯಕ್ಕೆ ನೆರವಾಗುವ ನಿಟ್ಟಿನಲ್ಲಿ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡುವುದಾಗಿ ನಾಗರಾಜ್ ಹೇಳಿದ್ದಾರೆ.

ಎಂಟಿಬಿಯಿಂದ 1 ಕೋಟಿ ರೂ ದೇಣಿಗೆ

ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ನಾಗರಾಜ್​, ರಾಜ್ಯದ 17 ಜಿಲ್ಲೆಗಳಲ್ಲಿ ಮಳೆಯಿಂದಾಗಿ ಆಸ್ತಿ-ಪಾಸ್ತಿಯನ್ನು ಕಳೆದುಕೊಂಡು ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕಾಗಿ ಎಂಟಿಬಿ ಸಂಸ್ಥೆಯಿಂದ ಒಂದು ಕೋಟಿ ರೂಪಾಯಿ ನೆರವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುತ್ತಿದ್ದೇವೆ. ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ನೆರವು ನೀಡುವಂತೆ ಕೈಗಾರಿಕೋದ್ಯಮಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಅವರ ಮನವಿಗೆ ನಾವು ಸ್ಪಂದಿಸಿ ನಮ್ಮ ಸಂಸ್ಥೆಯಿಂದ ಈ ಮೊತ್ತವನ್ನು ದೇಣಿಗೆ ರೂಪದಲ್ಲಿ ನೀಡುತ್ತಿದ್ದೇವೆ ಎಂದು ಎಂಟಿಬಿ ವಿವರಿಸಿದ್ದಾರೆ. ಈ ಹಿನ್ನೆಲೆ ಒಂದು ಕೋಟಿ ರೂಪಾಯಿ ಮೊತ್ತದ ಚೆಕ್​ನ್ನು ನಾಳೆ ಸಿಎಂ ಯಡಿಯೂರಪ್ಪಗೆ ಹಸ್ತಾಂತರಿಸುವುದಾಗಿ ಎಂಟಿಬಿ ನಾಗರಾಜ್​ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದ 17 ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಎದುರಾಗಿರುವ ಸಮಸ್ಯೆಗೆ ಹೊಸಕೋಟೆ ಕ್ಷೇತ್ರದ ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಸ್ಪಂದಿಸಿದ್ದಾರೆ. ಪರಿಹಾರ ಕಾರ್ಯಕ್ಕೆ ನೆರವಾಗುವ ನಿಟ್ಟಿನಲ್ಲಿ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡುವುದಾಗಿ ನಾಗರಾಜ್ ಹೇಳಿದ್ದಾರೆ.

ಎಂಟಿಬಿಯಿಂದ 1 ಕೋಟಿ ರೂ ದೇಣಿಗೆ

ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ನಾಗರಾಜ್​, ರಾಜ್ಯದ 17 ಜಿಲ್ಲೆಗಳಲ್ಲಿ ಮಳೆಯಿಂದಾಗಿ ಆಸ್ತಿ-ಪಾಸ್ತಿಯನ್ನು ಕಳೆದುಕೊಂಡು ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕಾಗಿ ಎಂಟಿಬಿ ಸಂಸ್ಥೆಯಿಂದ ಒಂದು ಕೋಟಿ ರೂಪಾಯಿ ನೆರವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುತ್ತಿದ್ದೇವೆ. ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ನೆರವು ನೀಡುವಂತೆ ಕೈಗಾರಿಕೋದ್ಯಮಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಅವರ ಮನವಿಗೆ ನಾವು ಸ್ಪಂದಿಸಿ ನಮ್ಮ ಸಂಸ್ಥೆಯಿಂದ ಈ ಮೊತ್ತವನ್ನು ದೇಣಿಗೆ ರೂಪದಲ್ಲಿ ನೀಡುತ್ತಿದ್ದೇವೆ ಎಂದು ಎಂಟಿಬಿ ವಿವರಿಸಿದ್ದಾರೆ. ಈ ಹಿನ್ನೆಲೆ ಒಂದು ಕೋಟಿ ರೂಪಾಯಿ ಮೊತ್ತದ ಚೆಕ್​ನ್ನು ನಾಳೆ ಸಿಎಂ ಯಡಿಯೂರಪ್ಪಗೆ ಹಸ್ತಾಂತರಿಸುವುದಾಗಿ ಎಂಟಿಬಿ ನಾಗರಾಜ್​ ತಿಳಿಸಿದ್ದಾರೆ.

Intro:newsBody:ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿ ದೇಣಿಗೆ ನೀಡಲು ಎಂಟಿಬಿ ನಿರ್ಧಾರ


ಬೆಂಗಳೂರು: ರಾಜ್ಯದ 17 ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಎದುರಾಗಿರುವ ಸಮಸ್ಯೆಯ ಪರಿಹಾರ ಕಾರ್ಯಕ್ಕೆ ನೆರವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಹೊಸಕೋಟೆ ಅನರ್ಹ ಶಾಸಕ ಎಂ ಟಿ ಬಿ ನಾಗರಾಜ್ ತಿಳಿಸಿದ್ದಾರೆ.
ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಅವರು, ಎಂಟಿಬಿ ಸಂಸ್ಥೆ ಮೂಲಕ ಒಂದು ಕೋಟಿ ರೂಪಾಯಿ ನೆರವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ರಾಜ್ಯದ 17 ಜಿಲ್ಲೆಗಳಲ್ಲಿ ಮಳೆಯಿಂದಾಗಿ ಆಸ್ತಿ, ಮನೆ, ಪ್ರಾಣಿ, ಪಕ್ಷಿಗಳ ಸಾವುನೋವು ಸಂಭವಿಸಿದೆ. ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರ ನೆರವಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ನೆರವು ನೀಡುವಂತೆ ಕೈಗಾರಿಕೋದ್ಯಮಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿ ನಾವು ಎಂಟಿಬಿ ಸಂಸ್ಥೆಯಿಂದ ಈ ಮೊತ್ತವನ್ನು ದೇಣಿಗೆ ರೂಪದಲ್ಲಿ ನೀಡುತ್ತಿದ್ದೇವೆ ಎಂದು ವಿವರಿಸಿದ್ದಾರೆ.
ಸಂಕಷ್ಟದಲ್ಲಿರುವ ಜನರಿಗೆ ಹಾರ್ದಿಕ ನೆರವು ನೀಡುವಂತೆ ಸಿಎಂ ಮನವಿ ಮಾಡಿದ್ದಾರೆ ಇದಕ್ಕೆ ಸ್ಪಂದಿಸಿ ಈ ನೆರವು ಒದಗಿಸುತ್ತಿದ್ದೇವೆ. ಒಂದು ಕೋಟಿ ರೂಪಾಯಿ ಮೊತ್ತದ ಚೆಕ್ಕನ್ನು ನಾಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸುತ್ತಾನೆ ಎಂದು ತಿಳಿಸಿದ್ದಾರೆ.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.