ETV Bharat / state

ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲು: ಆದಿ ನಾರಾಯಣಗೆ ಬಿಫಾರಂ!

ಮುಳಬಾಗಿಲು ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಲಾಗಿದೆ. ​

author img

By

Published : Apr 20, 2023, 2:14 PM IST

Mulabagilu Congress candidate changed
ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷ ನಿನ್ನೆಯಷ್ಟೇ ಘೋಷಿಸಿದ್ದ ಮುಳಬಾಗಿಲು ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯನ್ನು ದಿಢೀರ್ ಬದಲಿಸಿದೆ. ಐದನೇ ಪಟ್ಟಿಯಲ್ಲಿ ಹೊಸದಾಗಿ ಮೂವರ ಹೆಸರು ಪ್ರಕಟಿಸಿದ್ದ ಕಾಂಗ್ರೆಸ್, ಮುಳಬಾಗಿಲು ಕ್ಷೇತ್ರದಿಂದ ಡಾ. ಬಿ.ಸಿ ಮುದ್ದು ಗಂಗಾಧರ್ ಹೆಸರು ಪ್ರಕಟಿಸಿತ್ತು. ಆದರೆ, ಇಂದು ಆ ಹೆಸರು ಬದಲಿಸಿದ್ದು ಆದಿ ನಾರಾಯಣ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ ಫಾರಂ ನೀಡಿದ್ದಾರೆ. ಕೆಪಿಸಿಸಿ ಕಚೇರಿಗೆ ಕರೆಸಿಕೊಂಡು ಆದಿ ನಾರಾಯಣ ಅವರಿಗೆ ಬಿ ಫಾರಂ ನೀಡಲಾಗಿದೆ.

Mulabagilu Congress candidate changed
ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲು

ಕೋಲಾರ ಕ್ಷೇತ್ರದ ಅಭ್ಯರ್ಥಿ ಹಾಗೂ ಮುಳಬಾಗಿಲು ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರು ಪಕ್ಷದ ಮೇಲೆ ಒತ್ತಡ ತಂದಿದ್ದರು. ಅಭ್ಯರ್ಥಿ ಬದಲಾಗಬೇಕು ಎಂದು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆ ಅವರ ಮಾತಿಗೆ ಬೆಲೆ ಕೊಟ್ಟು ಕಾಂಗ್ರೆಸ್ ಕಡೆಯ ಕ್ಷಣದಲ್ಲಿ ಈ ಬದಲಾವಣೆ ಮಾಡಿದೆ ಎನ್ನಲಾಗುತ್ತಿದೆ.

ಎರಡನೇ ಬದಲಾವಣೆ: ಐದನೇ ಪಟ್ಟಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಲಾಗಿತ್ತು. ಮೊದಲು ಮೊಹಮ್ಮದ್ ಯೂಸುಫ್ ಸವಣೂರು ಅವರ ಹೆಸರನ್ನು ಘೋಷಿಸಲಾಗಿತ್ತು. ಆದರೆ, ಇವರ ಹೆಸರನ್ನು ಬದಲಿಸಿ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇಂದು ಮತ್ತೊಂದು ಬದಲಾವಣೆ ಮಾಡಿದ್ದು, ಮುಳಬಾಗಿಲಿನಿಂದ ನಿನ್ನೆ ಘೋಷಿತವಾಗಿದ್ದ ಡಾ. ಬಿ.ಸಿ. ಮುದ್ದು ಗಂಗಾಧರ್ ಬದಲು ಏಕಾಏಕಿ ಆದಿ ನಾರಾಯಣ ಅವರಿಗೆ ಟಿಕೆಟ್ ನೀಡಲಾಗಿದೆ.

Mulabagilu Congress candidate changed
ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲು

ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿ‌‌ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ನನಗೆ ಗೊತ್ತಿಲ್ಲಪ್ಪ. ಡಿ.ಕೆ ಶಿವಕುಮಾರ್, ಖರ್ಗೆ ಚರ್ಚೆ ಮಾಡಿದ್ದಾರೆ. ಬದಲಾವಣೆ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಅರ್ಜಿ ವಜಾ ವಿಚಾರವಾಗಿ ಮಾತನಾಡಿ, ಇದು ಕೆಳಹಂತದ ಕೋರ್ಟ್​ನಲ್ಲಿ ಆಗಿದೆ. ಹೈಕೋರ್ಟ್​​ಗೆ ಮೇಲ್ಮನವಿ ಹಾಕ್ತೀವಿ ಎಂದರು.

ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲಿ ಎಂಬ ಸಚಿವ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಾವ ಸೋಮಣ್ಣ ಹೇಳಿದ್ದಾರೆ ಅಂದರು. ಕಾಂಗ್ರೆಸ್ಸಿನಲ್ಲಿ ಚುನಾವಣೆಗೂ ಮೊದಲು ಸಿಎಂ ಘೋಷಣೆ ಸಂಪ್ರದಾಯ ಇಲ್ಲ. ಶಾಸಕಾಂಗ ಸಭೆಯಲ್ಲಿ ಸಿಎಂ ನಿರ್ಧಾರವಾಗುತ್ತದೆ. ಬಿಜೆಪಿ ಇಂಟರ್ನಲ್ ಚರ್ಚೆ ಬಗ್ಗೆ ನಾನು ಮಾತನಾಡಲ್ಲ ಎಂದು ವಿವರಿಸಿದರು.

ಇದನ್ನೂ ಓದಿ: ಇಷ್ಟೆಲ್ಲಾ ಮಾತಾಡುವ ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲಿ: ಸೋಮಣ್ಣ ಸವಾಲ್

ಬೊಮ್ಮಾಯಿಗೆ ಡಿಕೆಶಿ ತಿರುಗೇಟು: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ವಿಚಾರದಲ್ಲಿ ಸಿಎಂ ಬೊಮ್ಮಾಯಿ ಅವರ ಕಾಂಗ್ರೆಸ್ ಜೆಡಿಎಸ್ ಒಪ್ಪಂದ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಯಾರು ಏನು ಬೇಕಾದ್ರೂ ಹೇಳಲಿ. ನಾವು ಅಲ್ಪ ಸಮುದಾಯದವರಿಗೆ ಟಿಕೆಟ್ ನೀಡಿದ್ದೇವೆ. ಅಲ್ಲಿ ಅಲ್ಪ ಸಂಖ್ಯಾತರು ಹೆಚ್ಚು ಇದ್ದಾರೆ. ಅದಕ್ಕೆ ನಾವು ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡಿದ್ದೇವೆ ಎಂದರು. ಪದ್ಮನಾಭ ನಗರದಿಂದ ಸಂಸದ ಡಿ.ಕೆ. ಸುರೇಶ್​ ನಾಮಪತ್ರ ಸಲ್ಲಿಕೆ ವಿಚಾರ ಏನಾಯಿತು ಎಂಬ ಪ್ರಶ್ನೆಗೆ ಇಂದು ಮಧ್ಯಾಹ್ನದವರೆಗೆ ಕಾಯಿರಿ ಎಂದು ಹೇಳಿದರು.

ಇದನ್ನೂ ಓದಿ: ಪೊಲೀಸರು ತಡೆಯುತ್ತಿಲ್ಲವೆಂದು ಸಂಚಾರ ರಸ್ತೆ ನಿಯಮ ಉಲ್ಲಂಘಿಸಿದ್ರೆ ಜೋಕೆ! ಐಟಿಎಂಎಸ್ ಮೂಲಕ ಬೀಳುತ್ತೆ ದಂಡ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷ ನಿನ್ನೆಯಷ್ಟೇ ಘೋಷಿಸಿದ್ದ ಮುಳಬಾಗಿಲು ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯನ್ನು ದಿಢೀರ್ ಬದಲಿಸಿದೆ. ಐದನೇ ಪಟ್ಟಿಯಲ್ಲಿ ಹೊಸದಾಗಿ ಮೂವರ ಹೆಸರು ಪ್ರಕಟಿಸಿದ್ದ ಕಾಂಗ್ರೆಸ್, ಮುಳಬಾಗಿಲು ಕ್ಷೇತ್ರದಿಂದ ಡಾ. ಬಿ.ಸಿ ಮುದ್ದು ಗಂಗಾಧರ್ ಹೆಸರು ಪ್ರಕಟಿಸಿತ್ತು. ಆದರೆ, ಇಂದು ಆ ಹೆಸರು ಬದಲಿಸಿದ್ದು ಆದಿ ನಾರಾಯಣ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ ಫಾರಂ ನೀಡಿದ್ದಾರೆ. ಕೆಪಿಸಿಸಿ ಕಚೇರಿಗೆ ಕರೆಸಿಕೊಂಡು ಆದಿ ನಾರಾಯಣ ಅವರಿಗೆ ಬಿ ಫಾರಂ ನೀಡಲಾಗಿದೆ.

Mulabagilu Congress candidate changed
ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲು

ಕೋಲಾರ ಕ್ಷೇತ್ರದ ಅಭ್ಯರ್ಥಿ ಹಾಗೂ ಮುಳಬಾಗಿಲು ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರು ಪಕ್ಷದ ಮೇಲೆ ಒತ್ತಡ ತಂದಿದ್ದರು. ಅಭ್ಯರ್ಥಿ ಬದಲಾಗಬೇಕು ಎಂದು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆ ಅವರ ಮಾತಿಗೆ ಬೆಲೆ ಕೊಟ್ಟು ಕಾಂಗ್ರೆಸ್ ಕಡೆಯ ಕ್ಷಣದಲ್ಲಿ ಈ ಬದಲಾವಣೆ ಮಾಡಿದೆ ಎನ್ನಲಾಗುತ್ತಿದೆ.

ಎರಡನೇ ಬದಲಾವಣೆ: ಐದನೇ ಪಟ್ಟಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಲಾಗಿತ್ತು. ಮೊದಲು ಮೊಹಮ್ಮದ್ ಯೂಸುಫ್ ಸವಣೂರು ಅವರ ಹೆಸರನ್ನು ಘೋಷಿಸಲಾಗಿತ್ತು. ಆದರೆ, ಇವರ ಹೆಸರನ್ನು ಬದಲಿಸಿ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇಂದು ಮತ್ತೊಂದು ಬದಲಾವಣೆ ಮಾಡಿದ್ದು, ಮುಳಬಾಗಿಲಿನಿಂದ ನಿನ್ನೆ ಘೋಷಿತವಾಗಿದ್ದ ಡಾ. ಬಿ.ಸಿ. ಮುದ್ದು ಗಂಗಾಧರ್ ಬದಲು ಏಕಾಏಕಿ ಆದಿ ನಾರಾಯಣ ಅವರಿಗೆ ಟಿಕೆಟ್ ನೀಡಲಾಗಿದೆ.

Mulabagilu Congress candidate changed
ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲು

ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿ‌‌ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ನನಗೆ ಗೊತ್ತಿಲ್ಲಪ್ಪ. ಡಿ.ಕೆ ಶಿವಕುಮಾರ್, ಖರ್ಗೆ ಚರ್ಚೆ ಮಾಡಿದ್ದಾರೆ. ಬದಲಾವಣೆ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಅರ್ಜಿ ವಜಾ ವಿಚಾರವಾಗಿ ಮಾತನಾಡಿ, ಇದು ಕೆಳಹಂತದ ಕೋರ್ಟ್​ನಲ್ಲಿ ಆಗಿದೆ. ಹೈಕೋರ್ಟ್​​ಗೆ ಮೇಲ್ಮನವಿ ಹಾಕ್ತೀವಿ ಎಂದರು.

ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲಿ ಎಂಬ ಸಚಿವ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಾವ ಸೋಮಣ್ಣ ಹೇಳಿದ್ದಾರೆ ಅಂದರು. ಕಾಂಗ್ರೆಸ್ಸಿನಲ್ಲಿ ಚುನಾವಣೆಗೂ ಮೊದಲು ಸಿಎಂ ಘೋಷಣೆ ಸಂಪ್ರದಾಯ ಇಲ್ಲ. ಶಾಸಕಾಂಗ ಸಭೆಯಲ್ಲಿ ಸಿಎಂ ನಿರ್ಧಾರವಾಗುತ್ತದೆ. ಬಿಜೆಪಿ ಇಂಟರ್ನಲ್ ಚರ್ಚೆ ಬಗ್ಗೆ ನಾನು ಮಾತನಾಡಲ್ಲ ಎಂದು ವಿವರಿಸಿದರು.

ಇದನ್ನೂ ಓದಿ: ಇಷ್ಟೆಲ್ಲಾ ಮಾತಾಡುವ ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲಿ: ಸೋಮಣ್ಣ ಸವಾಲ್

ಬೊಮ್ಮಾಯಿಗೆ ಡಿಕೆಶಿ ತಿರುಗೇಟು: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ವಿಚಾರದಲ್ಲಿ ಸಿಎಂ ಬೊಮ್ಮಾಯಿ ಅವರ ಕಾಂಗ್ರೆಸ್ ಜೆಡಿಎಸ್ ಒಪ್ಪಂದ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಯಾರು ಏನು ಬೇಕಾದ್ರೂ ಹೇಳಲಿ. ನಾವು ಅಲ್ಪ ಸಮುದಾಯದವರಿಗೆ ಟಿಕೆಟ್ ನೀಡಿದ್ದೇವೆ. ಅಲ್ಲಿ ಅಲ್ಪ ಸಂಖ್ಯಾತರು ಹೆಚ್ಚು ಇದ್ದಾರೆ. ಅದಕ್ಕೆ ನಾವು ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡಿದ್ದೇವೆ ಎಂದರು. ಪದ್ಮನಾಭ ನಗರದಿಂದ ಸಂಸದ ಡಿ.ಕೆ. ಸುರೇಶ್​ ನಾಮಪತ್ರ ಸಲ್ಲಿಕೆ ವಿಚಾರ ಏನಾಯಿತು ಎಂಬ ಪ್ರಶ್ನೆಗೆ ಇಂದು ಮಧ್ಯಾಹ್ನದವರೆಗೆ ಕಾಯಿರಿ ಎಂದು ಹೇಳಿದರು.

ಇದನ್ನೂ ಓದಿ: ಪೊಲೀಸರು ತಡೆಯುತ್ತಿಲ್ಲವೆಂದು ಸಂಚಾರ ರಸ್ತೆ ನಿಯಮ ಉಲ್ಲಂಘಿಸಿದ್ರೆ ಜೋಕೆ! ಐಟಿಎಂಎಸ್ ಮೂಲಕ ಬೀಳುತ್ತೆ ದಂಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.