ETV Bharat / state

ಪುರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯ ಭೂಮಿ ಪರಿವರ್ತನೆ ಅಗತ್ಯವಿಲ್ಲ; ಹೈಕೋರ್ಟ್ ಸ್ಪಷ್ಟನೆ

author img

By ETV Bharat Karnataka Team

Published : Jan 11, 2024, 2:43 PM IST

ಉದ್ಯಮಿ ಶ್ರೀ ಶೈಲ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, 60 ದಿನಗಳಲ್ಲಿ ಅರ್ಜಿದಾರರ ಆಸ್ತಿಗೆ ಸಂಬಂಧಿಸಿದಂತೆ ನಿಯಮಗಳ ಅನುಸಾರ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡುವಂತೆ ಪುರಸಭೆಗೆ ಸೂಚನೆ ನೀಡಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಪುರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಉದ್ಯಮಿ ಶ್ರೀಶೈಲ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಕರ್ನಾಟಕ ಭೂ ಕಂದಾಯ ಕಾಯಿದೆ 1964ರ ಸೆಕ್ಷನ್ 95 ರಿಂದ 97ಗಳ ಪ್ರಕಾರ ಪುರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಜಮೀನುಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ಒಳಪಡಲಿದೆ ಎಂದು ಹೇಳಲಾಗಿದೆ. ಆದ ಕಾರಣ ಈ ವ್ಯಾಪ್ತಿಯ ಭೂಮಿಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಪೀಠ ತಿಳಿಸಿದೆ. ಅಲ್ಲದೇ, ಉದ್ದೇಶಿತ ಭೂಮಿ ಪುರಸಭೆ ವ್ಯಾಪ್ತಿಯಲ್ಲಿದೆ. ಈ ಭೂಮಿಗೆ ಕರ್ನಾಟಕ ಭೂ ಕಂದಾಯ ಕಾಯಿದೆಯ ನಿಯಮಗಳು ಅನ್ವಯವಾಗುವುದಿಲ್ಲ ಎಂದು ಸಹ ಪೀಠ ತಿಳಿಸಿದೆ.

ಕೃಷಿಯೇತರ ಉದ್ದೇಶಕ್ಕಾಗಿ(ಪೆಟ್ರೋಲ್ ಬಂಕ್ ನಿರ್ಮಾಣಕ್ಕಾಗಿ) ಪರಿವರ್ತಿಸಲಾದ ಭೂಮಿಯು ಕೃಷಿಯೇತರ ವಾಣಿಜ್ಯ ಬಳಕೆಯ ನಡುವೆ ಯಾವುದೇ ವ್ಯತ್ಯಾಸವಿರುವುದಿಲ್ಲ. ಪೆಟ್ರೋಲ್ ಬಂಕ್‌ಗಾಗಿ ಭೂಮಿಯನ್ನು ಪರಿವರ್ತಿಸಿ ಜಿಲ್ಲಾಧಿಕಾರಿಗಳ ಆದೇಶಿಸಿದ್ದಾರೆ. ಆದರೆ, ವಾಣಿಜ್ಯ ಕಟ್ಟಡ ಹಾಗೂ ಪೆಟ್ರೋಲ್ ಬಂಕ್ ನಿರ್ಮಾಣ ವಿಚಾರವಾಗಿ ಪರಿವರ್ತಿತ ಭೂಮಿಯನ್ನು ಪ್ರತ್ಯೇಕಿಸಿ ನೋಡುವುದಕ್ಕೆ ಅವಕಾಶವಿಲ್ಲ ಎಂದು ಪೀಠ ತಿಳಿಸಿದೆ.

ಜತೆಗೆ, ಪ್ರಸ್ತುತ ಪರಿವರ್ತಿತ ಭೂಮಿಯಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿರುವುದರಿಂದ, ಇತರ ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡುವುದಕ್ಕೆ ಅವಕಾಶ ನಿರ್ಬಂಧಿಸುವಂತಿಲ್ಲ. ಒಂದು ವೇಳೆ ಆ ರೀತಿಯಲ್ಲಿ ನಿರ್ಬಂಧ ವಿಧಿಸಿದಲ್ಲಿ ಪೆಟ್ರೋಲ್ ಬಂಕ್‌ಗೆ ನೀಡಿದ ಅನುಮತಿ ಕಾನೂನು ಬಾಹಿರವಾಗಲಿದೆ. ಆದ್ದಿಂದ ಮುಂದಿನ 60 ದಿನಗಳಲ್ಲಿ ಅರ್ಜಿದಾರರ ಆಸ್ತಿಗೆ ಸಂಬಂಧಿಸಿದಂತೆ ನಿಯಮಗಳ ಅನುಸಾರ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡುವಂತೆ ನ್ಯಾಯಪೀಠ ಪುರಸಭೆಗೆ ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ ಏನು? ಅರ್ಜಿದಾರರಿಗೆ ತನ್ನ ತಂದೆಯ ಪಿತ್ರಾರ್ಜಿತ ಆಸ್ತಿಯಲ್ಲಿ 1.29 ಎಕರೆ ಜಮೀನು ಲಭ್ಯವಾಗಿತ್ತು. ಈ ಜಮೀನನ್ನು ಕೃಷಿಯೇತರ ಚಟುವಟುಕೆಗಳಿಗೆ ಬಳಕೆ ಮಾಡಿಕೊಳ್ಳುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಗಣಿಸಿದ್ದ ಜಿಲ್ಲಾಧಿಕಾರಿಗಳು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಅನುಮತಿ ನೀಡಿದ್ದರು.

ಪರಿವರ್ತಿ ಈ ಜಮೀನಿನಲ್ಲಿ 14,436 ಚದರಡಿಯಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿದ್ದರು. ಇನ್ನುಳಿದ ಜಮೀನನ್ನು ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಬೈಲಹೊಂಗಲ ಪುರಸಭೆಯು ವಾಣಿಜ್ಯ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡುವಂತೆ ಕೋರಿದ್ದ ಮನವಿಯನ್ನು 2022ರ ಅಕ್ಟೋಬರ್ 13ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀಶೈಲಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಉದ್ದೇಶಿದ ಭೂಮಿ ಪುರಸಭೆ ವ್ಯಾಪ್ತಿಗೆ ಬರಲಿದ್ದು, ಸ್ಥಳೀಯ ಸಂಸ್ಥೆ ಅದರಂತೆ ತೆರಿಗೆ ನಿಗದಿಪಡಿಸಿ ಸಂಗ್ರಹಿಸುತ್ತಿದೆ. ಜತೆಗೆ, ಕೃಷಿ ಭೂಮಿ ಪುರಸಭೆ ವ್ಯಾಪ್ತಿಗೆ ಸೇರ್ಪಡೆಗೊಂಡಲ್ಲಿ ವಾಣಿಜ್ಯ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಇದಕ್ಕೆ ಸರ್ಕಾರದ ಪರ ವಕೀಲರು ಆಕ್ಷೇಪಿಸಿದ್ದರು.

ಇದನ್ನೂ ಓದಿ: ಸೇನೆಯಲ್ಲಿನ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಇದ್ದ ಅವಕಾಶ ರದ್ದುಗೊಳಿಸಿದ ಹೈಕೋರ್ಟ್

ಇದನ್ನೂ ಓದಿ: ಹೈಕೋರ್ಟ್ ಕಟ್ಟಡ ವಿಸ್ತರಣೆ: ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರಸ್ತಾವ ಇಡಲು ಸೂಚನೆ

ಬೆಂಗಳೂರು: ಪುರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಉದ್ಯಮಿ ಶ್ರೀಶೈಲ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಕರ್ನಾಟಕ ಭೂ ಕಂದಾಯ ಕಾಯಿದೆ 1964ರ ಸೆಕ್ಷನ್ 95 ರಿಂದ 97ಗಳ ಪ್ರಕಾರ ಪುರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಜಮೀನುಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ಒಳಪಡಲಿದೆ ಎಂದು ಹೇಳಲಾಗಿದೆ. ಆದ ಕಾರಣ ಈ ವ್ಯಾಪ್ತಿಯ ಭೂಮಿಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಪೀಠ ತಿಳಿಸಿದೆ. ಅಲ್ಲದೇ, ಉದ್ದೇಶಿತ ಭೂಮಿ ಪುರಸಭೆ ವ್ಯಾಪ್ತಿಯಲ್ಲಿದೆ. ಈ ಭೂಮಿಗೆ ಕರ್ನಾಟಕ ಭೂ ಕಂದಾಯ ಕಾಯಿದೆಯ ನಿಯಮಗಳು ಅನ್ವಯವಾಗುವುದಿಲ್ಲ ಎಂದು ಸಹ ಪೀಠ ತಿಳಿಸಿದೆ.

ಕೃಷಿಯೇತರ ಉದ್ದೇಶಕ್ಕಾಗಿ(ಪೆಟ್ರೋಲ್ ಬಂಕ್ ನಿರ್ಮಾಣಕ್ಕಾಗಿ) ಪರಿವರ್ತಿಸಲಾದ ಭೂಮಿಯು ಕೃಷಿಯೇತರ ವಾಣಿಜ್ಯ ಬಳಕೆಯ ನಡುವೆ ಯಾವುದೇ ವ್ಯತ್ಯಾಸವಿರುವುದಿಲ್ಲ. ಪೆಟ್ರೋಲ್ ಬಂಕ್‌ಗಾಗಿ ಭೂಮಿಯನ್ನು ಪರಿವರ್ತಿಸಿ ಜಿಲ್ಲಾಧಿಕಾರಿಗಳ ಆದೇಶಿಸಿದ್ದಾರೆ. ಆದರೆ, ವಾಣಿಜ್ಯ ಕಟ್ಟಡ ಹಾಗೂ ಪೆಟ್ರೋಲ್ ಬಂಕ್ ನಿರ್ಮಾಣ ವಿಚಾರವಾಗಿ ಪರಿವರ್ತಿತ ಭೂಮಿಯನ್ನು ಪ್ರತ್ಯೇಕಿಸಿ ನೋಡುವುದಕ್ಕೆ ಅವಕಾಶವಿಲ್ಲ ಎಂದು ಪೀಠ ತಿಳಿಸಿದೆ.

ಜತೆಗೆ, ಪ್ರಸ್ತುತ ಪರಿವರ್ತಿತ ಭೂಮಿಯಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿರುವುದರಿಂದ, ಇತರ ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡುವುದಕ್ಕೆ ಅವಕಾಶ ನಿರ್ಬಂಧಿಸುವಂತಿಲ್ಲ. ಒಂದು ವೇಳೆ ಆ ರೀತಿಯಲ್ಲಿ ನಿರ್ಬಂಧ ವಿಧಿಸಿದಲ್ಲಿ ಪೆಟ್ರೋಲ್ ಬಂಕ್‌ಗೆ ನೀಡಿದ ಅನುಮತಿ ಕಾನೂನು ಬಾಹಿರವಾಗಲಿದೆ. ಆದ್ದಿಂದ ಮುಂದಿನ 60 ದಿನಗಳಲ್ಲಿ ಅರ್ಜಿದಾರರ ಆಸ್ತಿಗೆ ಸಂಬಂಧಿಸಿದಂತೆ ನಿಯಮಗಳ ಅನುಸಾರ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡುವಂತೆ ನ್ಯಾಯಪೀಠ ಪುರಸಭೆಗೆ ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ ಏನು? ಅರ್ಜಿದಾರರಿಗೆ ತನ್ನ ತಂದೆಯ ಪಿತ್ರಾರ್ಜಿತ ಆಸ್ತಿಯಲ್ಲಿ 1.29 ಎಕರೆ ಜಮೀನು ಲಭ್ಯವಾಗಿತ್ತು. ಈ ಜಮೀನನ್ನು ಕೃಷಿಯೇತರ ಚಟುವಟುಕೆಗಳಿಗೆ ಬಳಕೆ ಮಾಡಿಕೊಳ್ಳುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಗಣಿಸಿದ್ದ ಜಿಲ್ಲಾಧಿಕಾರಿಗಳು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಅನುಮತಿ ನೀಡಿದ್ದರು.

ಪರಿವರ್ತಿ ಈ ಜಮೀನಿನಲ್ಲಿ 14,436 ಚದರಡಿಯಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿದ್ದರು. ಇನ್ನುಳಿದ ಜಮೀನನ್ನು ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಬೈಲಹೊಂಗಲ ಪುರಸಭೆಯು ವಾಣಿಜ್ಯ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡುವಂತೆ ಕೋರಿದ್ದ ಮನವಿಯನ್ನು 2022ರ ಅಕ್ಟೋಬರ್ 13ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀಶೈಲಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಉದ್ದೇಶಿದ ಭೂಮಿ ಪುರಸಭೆ ವ್ಯಾಪ್ತಿಗೆ ಬರಲಿದ್ದು, ಸ್ಥಳೀಯ ಸಂಸ್ಥೆ ಅದರಂತೆ ತೆರಿಗೆ ನಿಗದಿಪಡಿಸಿ ಸಂಗ್ರಹಿಸುತ್ತಿದೆ. ಜತೆಗೆ, ಕೃಷಿ ಭೂಮಿ ಪುರಸಭೆ ವ್ಯಾಪ್ತಿಗೆ ಸೇರ್ಪಡೆಗೊಂಡಲ್ಲಿ ವಾಣಿಜ್ಯ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಇದಕ್ಕೆ ಸರ್ಕಾರದ ಪರ ವಕೀಲರು ಆಕ್ಷೇಪಿಸಿದ್ದರು.

ಇದನ್ನೂ ಓದಿ: ಸೇನೆಯಲ್ಲಿನ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಇದ್ದ ಅವಕಾಶ ರದ್ದುಗೊಳಿಸಿದ ಹೈಕೋರ್ಟ್

ಇದನ್ನೂ ಓದಿ: ಹೈಕೋರ್ಟ್ ಕಟ್ಟಡ ವಿಸ್ತರಣೆ: ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರಸ್ತಾವ ಇಡಲು ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.