ETV Bharat / state

ನಕಲಿ ಬಿಲ್ ಪ್ರಕರಣ; ಶಾಸಕ ಮುನಿರತ್ನ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ರಾಜರಾಜೇಶ್ವರಿ ನಗರದ ಬಹುಕೋಟಿ ನಕಲಿ ಕಡತ ಸೃಷ್ಟಿ ಪ್ರಕರಣಕ್ಕೆ ಸಂಬಂಧಿಸಿ ಕ್ಷೇತ್ರದ ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದೆ. ಆರೋಪ ಪಟ್ಟಿಯಲ್ಲಿ ಶಾಸಕ ಮುನಿರತ್ನ ಹಾಗೂ ಅವರ ಪತ್ನಿ ಮಂಜುಳಾ ಹೆಸರನ್ನು ಪೊಲೀಸರು ಕೈಬಿಟ್ಟಿದ್ದಾರೆ.

author img

By

Published : Mar 10, 2021, 4:34 PM IST

Munirathna gets relief from high court
ಶಾಸಕ ಮುನಿರತ್ನ

ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿನ ಬಿಬಿಎಂಪಿ ಅಭಿವೃದ್ಧಿ ಕಾಮಗಾರಿಗಳಿಗೆ ನಕಲಿ ಬಿಲ್​​ಗಳನ್ನು ಸೃಷ್ಟಿಸಿದ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನ ಹೆಸರು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶಿಸಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ದೂರು ವಾಪಸ್ ಪಡೆದ ಬಳಿಕ ದಿನೇಶ್ ಕಲ್ಲಹಳ್ಳಿ ಮೊದಲ ಪ್ರತಿಕ್ರಿಯೆ

ಈ ಕುರಿತು ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಪ್ರಕರಣದ ಹಿನ್ನೆಲೆ - 2014ರ ಡಿ.27ರಂದು ಲೋಕಾಯುಕ್ತ ಪೊಲೀಸರು ಶಾಸಕ ಮುನಿರತ್ನ ಅವರಿಗೆ ಸೇರಿದ್ದೆನ್ನಲಾದ ವೈಯಾಲಿಕಾವಲ್‌​​ನ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಮನೆಯಲ್ಲಿ ಆರ್‌.ಆರ್‌. ನಗರದ ಕಾಮಗಾರಿಗಳ ಟೆಂಡರ್‌, ನಕಲಿ ಕಾಮಗಾರಿ ಬಿಲ್‌, ಬಿಬಿಎಂಪಿ ಕಚೇರಿಯ ಸೀಲ್​​ಗಳು ಪತ್ತೆಯಾಗಿದ್ದವು.

ಈ ಸಂಬಂಧ ಎರಡು ವರ್ಷಗಳ ಕಾಲ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ವಿಚಾರಣಾ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಈ ಆರೋಪಪಟ್ಟಿಯಲ್ಲಿ ಶಾಸಕ ಮುನಿರತ್ನ ಹಾಗೂ ಅವರ ಪತ್ನಿ ಮಂಜುಳಾ ಹೆಸರನ್ನು ಪೊಲೀಸರು ಕೈಬಿಟ್ಟಿದ್ದಾರೆ.

ಕಡತಗಳು ಸಿಕ್ಕಿರುವ ವೈಯಾಲಿಕಾವಲ್‌ ಮನೆಯ ಪೂರ್ಣ ವಿಳಾಸ ಉಲ್ಲೇಖಿಸಿದ್ದಾರೆ. ಆದರೆ, ಆ ಮನೆಯ ಮಾಲೀಕ ಯಾರು ಎಂಬುದನ್ನೇ ಉಲ್ಲೇಖಿಸಿಲ್ಲ. ರಾಜಕೀಯ ಪ್ರಭಾವ ಬಳಸಿ ಶಾಸಕ ಮುನಿರತ್ನ ಅವರು ತಮ್ಮ ಹೆಸರಿಲ್ಲದಂತೆ ನೋಡಿಕೊಂಡಿದ್ದಾರೆ. ಆದ್ದರಿಂದ ಆರೋಪಿಗಳ ಪಟ್ಟಿಯಲ್ಲಿ ಶಾಸಕ ಮುನಿರತ್ನ ಹಾಗೂ ಅವರ ಪತ್ನಿ ಹೆಸರನ್ನು ಸೇರಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಇದನ್ನೂ ಓದಿ: ಮಾನಹಾನಿ ಸುದ್ದಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟ್ ಮೊರೆ ಹೋಗಲ್ಲ: ಎಂಟಿಬಿ ನಾಗರಾಜ್

ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ, ಆರ್‌.ಆರ್.‌ ನಗರದ ಬಿಬಿಎಂಪಿ ಕಚೇರಿಯ ಮುಖ್ಯ ಕಾರ್ಯ ನಿರ್ವಾಹಕ ಎಂಜಿನಿಯರ್‌ ಆಗಿದ್ದ ಇದಯಾ ವೆಂಡನ್‌, ಕಾರ್ಯ ನಿರ್ವಾಹಕ ಎಂಜಿನಿಯರ್‌ ನಾಗರಾಜ, ಇಬ್ಬರು ಗುಮಾಸ್ತರು ಹಾಗೂ ಗುತ್ತಿಗೆದಾರರು ಸೇರಿದಂತೆ ಒಂಬತ್ತು ಜನರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿನ ಬಿಬಿಎಂಪಿ ಅಭಿವೃದ್ಧಿ ಕಾಮಗಾರಿಗಳಿಗೆ ನಕಲಿ ಬಿಲ್​​ಗಳನ್ನು ಸೃಷ್ಟಿಸಿದ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನ ಹೆಸರು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶಿಸಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ದೂರು ವಾಪಸ್ ಪಡೆದ ಬಳಿಕ ದಿನೇಶ್ ಕಲ್ಲಹಳ್ಳಿ ಮೊದಲ ಪ್ರತಿಕ್ರಿಯೆ

ಈ ಕುರಿತು ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಪ್ರಕರಣದ ಹಿನ್ನೆಲೆ - 2014ರ ಡಿ.27ರಂದು ಲೋಕಾಯುಕ್ತ ಪೊಲೀಸರು ಶಾಸಕ ಮುನಿರತ್ನ ಅವರಿಗೆ ಸೇರಿದ್ದೆನ್ನಲಾದ ವೈಯಾಲಿಕಾವಲ್‌​​ನ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಮನೆಯಲ್ಲಿ ಆರ್‌.ಆರ್‌. ನಗರದ ಕಾಮಗಾರಿಗಳ ಟೆಂಡರ್‌, ನಕಲಿ ಕಾಮಗಾರಿ ಬಿಲ್‌, ಬಿಬಿಎಂಪಿ ಕಚೇರಿಯ ಸೀಲ್​​ಗಳು ಪತ್ತೆಯಾಗಿದ್ದವು.

ಈ ಸಂಬಂಧ ಎರಡು ವರ್ಷಗಳ ಕಾಲ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ವಿಚಾರಣಾ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಈ ಆರೋಪಪಟ್ಟಿಯಲ್ಲಿ ಶಾಸಕ ಮುನಿರತ್ನ ಹಾಗೂ ಅವರ ಪತ್ನಿ ಮಂಜುಳಾ ಹೆಸರನ್ನು ಪೊಲೀಸರು ಕೈಬಿಟ್ಟಿದ್ದಾರೆ.

ಕಡತಗಳು ಸಿಕ್ಕಿರುವ ವೈಯಾಲಿಕಾವಲ್‌ ಮನೆಯ ಪೂರ್ಣ ವಿಳಾಸ ಉಲ್ಲೇಖಿಸಿದ್ದಾರೆ. ಆದರೆ, ಆ ಮನೆಯ ಮಾಲೀಕ ಯಾರು ಎಂಬುದನ್ನೇ ಉಲ್ಲೇಖಿಸಿಲ್ಲ. ರಾಜಕೀಯ ಪ್ರಭಾವ ಬಳಸಿ ಶಾಸಕ ಮುನಿರತ್ನ ಅವರು ತಮ್ಮ ಹೆಸರಿಲ್ಲದಂತೆ ನೋಡಿಕೊಂಡಿದ್ದಾರೆ. ಆದ್ದರಿಂದ ಆರೋಪಿಗಳ ಪಟ್ಟಿಯಲ್ಲಿ ಶಾಸಕ ಮುನಿರತ್ನ ಹಾಗೂ ಅವರ ಪತ್ನಿ ಹೆಸರನ್ನು ಸೇರಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಇದನ್ನೂ ಓದಿ: ಮಾನಹಾನಿ ಸುದ್ದಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟ್ ಮೊರೆ ಹೋಗಲ್ಲ: ಎಂಟಿಬಿ ನಾಗರಾಜ್

ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ, ಆರ್‌.ಆರ್.‌ ನಗರದ ಬಿಬಿಎಂಪಿ ಕಚೇರಿಯ ಮುಖ್ಯ ಕಾರ್ಯ ನಿರ್ವಾಹಕ ಎಂಜಿನಿಯರ್‌ ಆಗಿದ್ದ ಇದಯಾ ವೆಂಡನ್‌, ಕಾರ್ಯ ನಿರ್ವಾಹಕ ಎಂಜಿನಿಯರ್‌ ನಾಗರಾಜ, ಇಬ್ಬರು ಗುಮಾಸ್ತರು ಹಾಗೂ ಗುತ್ತಿಗೆದಾರರು ಸೇರಿದಂತೆ ಒಂಬತ್ತು ಜನರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.