ETV Bharat / state

ಆರ್ ಆರ್ ನಗರಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ.. ಹನಿಟ್ರ್ಯಾಪ್ ದೂರಿಗೆ ಮುನಿರತ್ನ ಪ್ರತಿಕ್ರಿಯೆ

author img

By

Published : Jul 24, 2023, 4:10 PM IST

ನನ್ನ ವಿರುದ್ಧ ವೇಲು ನಾಯ್ಕರ್​ ಮೂಲಕ ಆರೋಪ ಮಾಡಿಸಿದ್ದಾರೆ ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ.

ಶಾಸಕ ಮುನಿರತ್ನ
ಶಾಸಕ ಮುನಿರತ್ನ

ಬೆಂಗಳೂರು : ಆರ್. ಆರ್ ನಗರ ಕ್ಷೇತ್ರ ದಕ್ಕಿಸಿಕೊಳ್ಳಲು ಕೆಲವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ನನ್ನ ವಿರುದ್ಧ ವೇಲು ನಾಯ್ಕರ್ ಮೂಲಕ ಆರೋಪ ಮಾಡಿಸಲಾಗುತ್ತಿದೆ ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ. ಹನಿಟ್ರ್ಯಾಪ್ ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ಮುನಿರತ್ನ, ’’ಹಿಂದೆ ನನ್ನ ಜೊತೆ ಇದ್ದವರು ಈಗ ಕಾಂಗ್ರೆಸ್ ಸೇರಿ ನನ್ನ ಮೇಲೆ ಗಂಭೀರ ಆರೋಪ ಮಾಡುತ್ತಿದ್ದಾರೆ. ಆದರೆ, ಆರೋಪ ಮಾಡುತ್ತಿರುವುದಕ್ಕಿಂತ ಮಾಡಿಸುತ್ತಿದ್ದಾರೆ ಎನ್ನಬಹುದು. ಆರ್ ಆರ್ ನಗರ ಕ್ಷೇತ್ರವನ್ನು ಖಾಲಿ ಮಾಡಿಸಬೇಕು ಮತ್ತು ಅವರ ಕಡೆಯವರನ್ನು ಅಲ್ಲಿ ನಿಲ್ಲಿಸಬೇಕು ಎನ್ನುವುದು ಇದರ ಹಿಂದಿನ ಷಡ್ಯಂತ್ರ‘‘ ಎಂದು ಅವರು ಆರೋಪಿಸಿದ್ದಾರೆ.

ಇದು ಅವರ ಮಾತಲ್ಲ, ಹೇಳಿಸಿದ ಮಾತುಗಳು: ’’ವಿಧಾನಸಭಾ ಚುನಾವಣೆಗೂ ಮೊದಲೇ ಅವರು ಪಕ್ಷ ಬಿಟ್ಟು ಹೋಗಬಹುದಿತ್ತಲ್ಲ?. ಈಗ ಯಾಕೆ ಹೋಗಿದ್ದಾರೆ? ನನ್ನನ್ನು ಶಾಸಕನನ್ನಾಗಿ ಮಾಡಿದ ನಂತರ ಈಗ ಹೋಗಿದ್ದಾರೆ ಎಂದರೆ ಇದರಲ್ಲಿ ರಾಜಕೀಯ ಇರಲೇಬೇಕಲ್ಲ. ಚುನಾವಣೆಗೂ ಮೊದಲು ನನ್ನ ಬಳಿಯೇ ಕುಳಿತು ಇವರು ಎರಡು ವರ್ಷ ಮಾತನಾಡಿದ್ದಾರೆ. ಆ ರೀತಿ ಮಾತನಾಡಬೇಡಿ ಎಂದು ನಾನೇ ಅವರಿಗೆ ಬೈದು ಬುದ್ದಿ ಹೇಳಿದ್ದೆ. ರಾಜಕೀಯವನ್ನ ರಾಜಕೀಯವಾಗಿ ಮಾಡಬೇಕು. ವೈಯಕ್ತಿಕ ವಿಷಯಗಳನ್ನು ಮಾತನಾಡಬಾರದು ಎಂದು ನಾನೇ ತಾಕೀತು ಮಾಡಿದ್ದೆ. ಕೇವಲ ಒಂದು ತಿಂಗಳ ಹಿಂದಷ್ಟೇ ನನ್ನ ಜೊತೆಗೆ ಮಾತುಕತೆ ನಡೆಸಿ, ವಿರೋಧಿಗಳನ್ನು ಸೋಲಿಸಬೇಕು ಎಂದು ಹೇಳಿದ್ದರು. ಅಂತಹವರು ಈಗ ಈ ರೀತಿ ಹೇಳುತ್ತಿದ್ದಾರೆ. ಇದು ಅವರ ಮಾತಲ್ಲ, ಹೇಳಿಸಿದ ಮಾತುಗಳು‘‘ ಎಂದು ಮುನಿರತ್ನ ಹೇಳಿದ್ದಾರೆ

’’ನನ್ನ ವಿರುದ್ಧ ಮಾತನಾಡಿದ್ದಾಯಿತು. ಆದರೆ ಬೇರೆಯವರ ಬಗ್ಗೆ ಮಾತನಾಡದಿದ್ದರೆ ಸಾಕು, ನನ್ನ ಬಳಿ ಎರಡು ವರ್ಷದಿಂದ ಅವರಿಬ್ಬರ ಬಗ್ಗೆ ಮಾತನಾಡಿದ್ದಾರೆ. ಇನ್ನು ಮುಂದಾದರೂ ಅವರು ಹಾಗೆಲ್ಲ ಮಾತನಾಡದೇ ಇದ್ದರೆ ಸಾಕು. ಆ ಪಕ್ಷದಲ್ಲಿಯಾದರೂ ಅವರು ಗೌರವವಾಗಿ ಇರಲಿ. ಅವರಿಬ್ಬರ ಬಗ್ಗೆ ಮಾತನಾಡುವುದು ಬೇಡ‘‘ ಎಂದು ವೇಲು ನಾಯ್ಕರ್​ಗೆ ಟಕ್ಕರ್ ನೀಡಿದರು.

ಪ್ರಕರಣದ ಹಿನ್ನಲೆ: ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಭಾನುವಾರ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದು, ಈ ವೇಳೆ ಶಾಸಕ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು, ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.

ಹನಿಟ್ರ್ಯಾಪ್ ಮಾಡಿ ಹೆದರಿಸುವುದಕ್ಕೆ ಜೆ. ಪಿ ಪಾರ್ಕ್‌, ಡಾಲರ್ಸ್‌ ಕಾಲೋನಿ ಮನೆಯಲ್ಲಿ ಇದಕ್ಕಾಗಿ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಪಕರಲ್ಲವೇ? ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ. 2023ರ ಚುನಾವಣೆ ಎದುರಿಸುವುದು ಹೇಗೆ? ಎಂದು ಮುನಿರತ್ನಗೆ ಕೇಳಿದ್ದೆವು. ಆಗ ನಿಮ್ಮದೂ ಈಸ್ಟ್‌ಮನ್ ಕಲರ್ ಪಿಕ್ಚರ್‌ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ? ಎಂದು ನಮ್ಮನ್ನೂ ಹೆದರಿಸುತ್ತಿದ್ದರು ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: ಸಿಂಗಾಪುರದಲ್ಲಿ ಕುಳಿತು ಸರ್ಕಾರ ಬೀಳಿಸುವ ಪಿತೂರಿ ಬಗ್ಗೆ ನಮಗೂ ಮಾಹಿತಿ ಇದೆ: ಡಿ ಕೆ ಶಿವಕುಮಾರ್

ಬೆಂಗಳೂರು : ಆರ್. ಆರ್ ನಗರ ಕ್ಷೇತ್ರ ದಕ್ಕಿಸಿಕೊಳ್ಳಲು ಕೆಲವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ನನ್ನ ವಿರುದ್ಧ ವೇಲು ನಾಯ್ಕರ್ ಮೂಲಕ ಆರೋಪ ಮಾಡಿಸಲಾಗುತ್ತಿದೆ ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ. ಹನಿಟ್ರ್ಯಾಪ್ ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ಮುನಿರತ್ನ, ’’ಹಿಂದೆ ನನ್ನ ಜೊತೆ ಇದ್ದವರು ಈಗ ಕಾಂಗ್ರೆಸ್ ಸೇರಿ ನನ್ನ ಮೇಲೆ ಗಂಭೀರ ಆರೋಪ ಮಾಡುತ್ತಿದ್ದಾರೆ. ಆದರೆ, ಆರೋಪ ಮಾಡುತ್ತಿರುವುದಕ್ಕಿಂತ ಮಾಡಿಸುತ್ತಿದ್ದಾರೆ ಎನ್ನಬಹುದು. ಆರ್ ಆರ್ ನಗರ ಕ್ಷೇತ್ರವನ್ನು ಖಾಲಿ ಮಾಡಿಸಬೇಕು ಮತ್ತು ಅವರ ಕಡೆಯವರನ್ನು ಅಲ್ಲಿ ನಿಲ್ಲಿಸಬೇಕು ಎನ್ನುವುದು ಇದರ ಹಿಂದಿನ ಷಡ್ಯಂತ್ರ‘‘ ಎಂದು ಅವರು ಆರೋಪಿಸಿದ್ದಾರೆ.

ಇದು ಅವರ ಮಾತಲ್ಲ, ಹೇಳಿಸಿದ ಮಾತುಗಳು: ’’ವಿಧಾನಸಭಾ ಚುನಾವಣೆಗೂ ಮೊದಲೇ ಅವರು ಪಕ್ಷ ಬಿಟ್ಟು ಹೋಗಬಹುದಿತ್ತಲ್ಲ?. ಈಗ ಯಾಕೆ ಹೋಗಿದ್ದಾರೆ? ನನ್ನನ್ನು ಶಾಸಕನನ್ನಾಗಿ ಮಾಡಿದ ನಂತರ ಈಗ ಹೋಗಿದ್ದಾರೆ ಎಂದರೆ ಇದರಲ್ಲಿ ರಾಜಕೀಯ ಇರಲೇಬೇಕಲ್ಲ. ಚುನಾವಣೆಗೂ ಮೊದಲು ನನ್ನ ಬಳಿಯೇ ಕುಳಿತು ಇವರು ಎರಡು ವರ್ಷ ಮಾತನಾಡಿದ್ದಾರೆ. ಆ ರೀತಿ ಮಾತನಾಡಬೇಡಿ ಎಂದು ನಾನೇ ಅವರಿಗೆ ಬೈದು ಬುದ್ದಿ ಹೇಳಿದ್ದೆ. ರಾಜಕೀಯವನ್ನ ರಾಜಕೀಯವಾಗಿ ಮಾಡಬೇಕು. ವೈಯಕ್ತಿಕ ವಿಷಯಗಳನ್ನು ಮಾತನಾಡಬಾರದು ಎಂದು ನಾನೇ ತಾಕೀತು ಮಾಡಿದ್ದೆ. ಕೇವಲ ಒಂದು ತಿಂಗಳ ಹಿಂದಷ್ಟೇ ನನ್ನ ಜೊತೆಗೆ ಮಾತುಕತೆ ನಡೆಸಿ, ವಿರೋಧಿಗಳನ್ನು ಸೋಲಿಸಬೇಕು ಎಂದು ಹೇಳಿದ್ದರು. ಅಂತಹವರು ಈಗ ಈ ರೀತಿ ಹೇಳುತ್ತಿದ್ದಾರೆ. ಇದು ಅವರ ಮಾತಲ್ಲ, ಹೇಳಿಸಿದ ಮಾತುಗಳು‘‘ ಎಂದು ಮುನಿರತ್ನ ಹೇಳಿದ್ದಾರೆ

’’ನನ್ನ ವಿರುದ್ಧ ಮಾತನಾಡಿದ್ದಾಯಿತು. ಆದರೆ ಬೇರೆಯವರ ಬಗ್ಗೆ ಮಾತನಾಡದಿದ್ದರೆ ಸಾಕು, ನನ್ನ ಬಳಿ ಎರಡು ವರ್ಷದಿಂದ ಅವರಿಬ್ಬರ ಬಗ್ಗೆ ಮಾತನಾಡಿದ್ದಾರೆ. ಇನ್ನು ಮುಂದಾದರೂ ಅವರು ಹಾಗೆಲ್ಲ ಮಾತನಾಡದೇ ಇದ್ದರೆ ಸಾಕು. ಆ ಪಕ್ಷದಲ್ಲಿಯಾದರೂ ಅವರು ಗೌರವವಾಗಿ ಇರಲಿ. ಅವರಿಬ್ಬರ ಬಗ್ಗೆ ಮಾತನಾಡುವುದು ಬೇಡ‘‘ ಎಂದು ವೇಲು ನಾಯ್ಕರ್​ಗೆ ಟಕ್ಕರ್ ನೀಡಿದರು.

ಪ್ರಕರಣದ ಹಿನ್ನಲೆ: ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಭಾನುವಾರ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದು, ಈ ವೇಳೆ ಶಾಸಕ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು, ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.

ಹನಿಟ್ರ್ಯಾಪ್ ಮಾಡಿ ಹೆದರಿಸುವುದಕ್ಕೆ ಜೆ. ಪಿ ಪಾರ್ಕ್‌, ಡಾಲರ್ಸ್‌ ಕಾಲೋನಿ ಮನೆಯಲ್ಲಿ ಇದಕ್ಕಾಗಿ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಪಕರಲ್ಲವೇ? ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ. 2023ರ ಚುನಾವಣೆ ಎದುರಿಸುವುದು ಹೇಗೆ? ಎಂದು ಮುನಿರತ್ನಗೆ ಕೇಳಿದ್ದೆವು. ಆಗ ನಿಮ್ಮದೂ ಈಸ್ಟ್‌ಮನ್ ಕಲರ್ ಪಿಕ್ಚರ್‌ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ? ಎಂದು ನಮ್ಮನ್ನೂ ಹೆದರಿಸುತ್ತಿದ್ದರು ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: ಸಿಂಗಾಪುರದಲ್ಲಿ ಕುಳಿತು ಸರ್ಕಾರ ಬೀಳಿಸುವ ಪಿತೂರಿ ಬಗ್ಗೆ ನಮಗೂ ಮಾಹಿತಿ ಇದೆ: ಡಿ ಕೆ ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.