ಬೆಂಗಳೂರು: ಅಲಾಯನ್ಸ್ ವಿಶ್ವವಿದ್ಯಾಲಯ ಸದಾ ಒಂದಲ್ಲಾ ಒಂದು ರೀತಿಯ ವಿವಾದಗಳಿಗೆ ಕಾರಣವಾಗುತ್ತಿತ್ತು. ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆಯಲ್ಲಿ ಅಂತ್ಯಗೊಂಡಿದೆ.
ತಮ್ಮದೇ ಅಲಾಯನ್ಸ್ ವಿವಿಯ ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆ ಮಾಡಿಸಿದ್ದ. ಸುಧೀರ್ ಅಂಗೂರ್ ಮತ್ತು ಆತನ ಶಿಷ್ಯ ಸೂರಜ್ ಸಿಂಗ್ನನ್ನು ಕೋರ್ಟ್ಗೆ ಹಾಜರುಪಡಿಸಿ ಮತ್ತಷ್ಟು ವಿಚಾರಣೆಗೆ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು 32ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ಹಾಜರುಪಡಿಸಿದ್ದಾರೆ. ಅಲಾಯನ್ಸ್ ವಿಶ್ವವಿದ್ಯಾಲಯದಲ್ಲಿ ನಡೆದಿರಬಹುದಾದ ಮತ್ತಷ್ಟು ಹಗರಣಗಳನ್ನು ಪತ್ತೆ ಹಚ್ಚಲು ಪೊಲೀಸರು ಆರೋಪಿಗಳಿಬ್ಬರನ್ನು ತೀವ್ರ ತನಿಖೆಗೆ ಒಳಪಡಿಸಲಿದ್ದಾರೆ.