ETV Bharat / state

ನನ್ನ ಪ್ರಾಣ ಹೋದ್ರೂ ಪರವಾಗಿಲ್ಲ, ಕನಕಪುರದಿಂದ ಮೆಡಿಕಲ್​​​​​ ಕಾಲೇಜು ಸ್ಥಳಾಂತರಕ್ಕೆ ಬಿಡಲ್ಲ: ಡಿಕೆಶಿ

author img

By

Published : Oct 29, 2019, 7:04 PM IST

ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಿದರೆ ನನ್ನ ಪ್ರಾಣ ಹೋದರು ಪರವಾಗಿಲ್ಲ, ಸ್ಥಳಾಂತರಕ್ಕೆ ಅವಕಾಶ ಕೊಡಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮೆಡಿಕಲ್ ಕಾಲೇಜ್ ಸ್ಥಳಾಂತರಕ್ಕೆ ಬಿಡಲ್ಲ: ಡಿಕೆಶಿ ಖಡಕ್ ವಾರ್ನಿಂಗ್

ಬೆಂಗಳೂರು: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಿದರೆ ನನ್ನ ಪ್ರಾಣ ಹೋದರು ಪರವಾಗಿಲ್ಲ, ಸ್ಥಳಾಂತರಕ್ಕೆ ಅವಕಾಶ ಕೊಡಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮೆಡಿಕಲ್ ಕಾಲೇಜ್ ಸ್ಥಳಾಂತರಕ್ಕೆ ಬಿಡಲ್ಲ: ಡಿಕೆಶಿ

ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ, ಮೆಡಿಕಲ್ ಕಾಲೇಜು ಮಾತ್ರ ಬಿಟ್ಟು ಕೊಡಲ್ಲ. ಕನಕಪುರದಲ್ಲೇ ಮೆಡಿಕಲ್ ಕಾಲೇಜು ಆಗಬೇಕು. ಈಗಾಗಲೇ ನಮ್ಮ ಸರ್ಕಾರದ ಅವಧಿಯಲ್ಲಿ ತೀರ್ಮಾನ ಆಗಿದೆ. ಆದರೆ ಯಡಿಯೂರಪ್ಪ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿದ್ದಾರೆ. ಯಡಿಯೂರಪ್ಪ ಧೋರಣೆ ಸರಿಯಿಲ್ಲ. ನಾನು ಈ ಬಗ್ಗೆ ಹೋರಾಟ ಮಾಡಲು ಸಿದ್ಧನಿದ್ದೇನೆ. ವಿಧಾನಸೌಧದಲ್ಲಿ ನನ್ನ ಪ್ರಾಣ ಬೇಕಿದ್ರೆ ಹೋಗಲಿ. ಆದರೆ ಮೆಡಿಕಲ್ ಕಾಲೇಜನ್ನು ಮಾತ್ರ ಬಿಟ್ಟುಕೊಡುವುದಿಲ್ಲ. ಅದೇನು ಬೇಕಾದರು ಆಗಲಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಯಡಿಯೂರಪ್ಪ ನನ್ನ ಮನೆ ಬಾಗಿಲಿಗೆ ಬಂದಾಗ ಯಾವುದೇ ರಾಜಕೀಯ ಮಾಡದೇ ನೂರಾರು ಕೋಟಿ ಯೋಜನೆಗಳಿಗೆ ಅನುಮೋದನೆ ಕೊಟ್ಟಿದ್ದೇನೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಸಿಎಂ ಬಿಎಸ್​​ವೈ ವಿರುದ್ಧ ಆಕ್ರೋಶ ಹೊರಹಾಕಿದರು.

ಬೆಂಗಳೂರು: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಿದರೆ ನನ್ನ ಪ್ರಾಣ ಹೋದರು ಪರವಾಗಿಲ್ಲ, ಸ್ಥಳಾಂತರಕ್ಕೆ ಅವಕಾಶ ಕೊಡಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮೆಡಿಕಲ್ ಕಾಲೇಜ್ ಸ್ಥಳಾಂತರಕ್ಕೆ ಬಿಡಲ್ಲ: ಡಿಕೆಶಿ

ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ, ಮೆಡಿಕಲ್ ಕಾಲೇಜು ಮಾತ್ರ ಬಿಟ್ಟು ಕೊಡಲ್ಲ. ಕನಕಪುರದಲ್ಲೇ ಮೆಡಿಕಲ್ ಕಾಲೇಜು ಆಗಬೇಕು. ಈಗಾಗಲೇ ನಮ್ಮ ಸರ್ಕಾರದ ಅವಧಿಯಲ್ಲಿ ತೀರ್ಮಾನ ಆಗಿದೆ. ಆದರೆ ಯಡಿಯೂರಪ್ಪ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿದ್ದಾರೆ. ಯಡಿಯೂರಪ್ಪ ಧೋರಣೆ ಸರಿಯಿಲ್ಲ. ನಾನು ಈ ಬಗ್ಗೆ ಹೋರಾಟ ಮಾಡಲು ಸಿದ್ಧನಿದ್ದೇನೆ. ವಿಧಾನಸೌಧದಲ್ಲಿ ನನ್ನ ಪ್ರಾಣ ಬೇಕಿದ್ರೆ ಹೋಗಲಿ. ಆದರೆ ಮೆಡಿಕಲ್ ಕಾಲೇಜನ್ನು ಮಾತ್ರ ಬಿಟ್ಟುಕೊಡುವುದಿಲ್ಲ. ಅದೇನು ಬೇಕಾದರು ಆಗಲಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಯಡಿಯೂರಪ್ಪ ನನ್ನ ಮನೆ ಬಾಗಿಲಿಗೆ ಬಂದಾಗ ಯಾವುದೇ ರಾಜಕೀಯ ಮಾಡದೇ ನೂರಾರು ಕೋಟಿ ಯೋಜನೆಗಳಿಗೆ ಅನುಮೋದನೆ ಕೊಟ್ಟಿದ್ದೇನೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಸಿಎಂ ಬಿಎಸ್​​ವೈ ವಿರುದ್ಧ ಆಕ್ರೋಶ ಹೊರಹಾಕಿದರು.

Intro:newsBody:ನನ್ನ ಪ್ರಾಣ ಹೋದರು ಪರವಾಗಿಲ್ಲ, ಮೆಡಿಕಲ್ ಕಾಲೇಜ್ ಸ್ಥಳಾಂತರಕ್ಕೆ ಬಿಡಲ್ಲ: ಡಿಕೆಶಿ


ಬೆಂಗಳೂರು: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರ ವಿಚಾರದಲ್ಲಿ ನನ್ನ ಪ್ರಾಣ ಹೋದರು ಪರವಾಗಿಲ್ಲ, ಸ್ಥಳಾಂತರಕ್ಕೆ ಅವಕಾಶ ಕೊಡಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮೆಡಿಕಲ್ ಕಾಲೇಜು ಮಾತ್ರ ಬಿಟ್ಟು ಕೊಡಲ್ಲ. ಕನಕಪುರದಲ್ಲೆ ಮೆಡಿಕಲ್ ಕಾಲೇಜು ಆಗಬೇಕು. ಈಗಾಗಲೇ ನಮ್ಮ ಸರ್ಕಾರದಲ್ಲಿ ಬಗ್ಗೆ ತೀರ್ಮಾನ ಆಗಿದೆ. ಆದರೆ ಯಡಿಯೂರಪ್ಪ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿದ್ದಾರೆ. ಯಡಿಯೂರಪ್ಪ ಧೋರಣೆ ಸರಿಯಲ್ಲ. ಕನಕಪುರದಲ್ಲೇ ಮೆಡಿಕಲ್ ಕಾಲೇಜು ಆಗಬೇಕು. ನಾನು ಈ ಬಗ್ಗೆ ಹೋರಾಟ ಮಾಡಲು ಸಿದ್ದನಿದ್ದೇನೆ. ವಿಧಾನಸೌಧದಲ್ಲಿ ನನ್ನ ಪ್ರಾಣ ಬೇಕಿದ್ರೆ ಹೋಗಲಿ. ಆದರೆ ಮೆಡಿಕಲ್ ಕಾಲೇಜನ್ನು ಮಾತ್ರ ಬಿಟ್ಟುಕೊಡುವುದಿಲ್ಲ. ಅದೇನು ಬೇಕಾದರು ಆಗಲಿ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.
ರಾಜಕೀಯ ಮಾಡಿಲ್ಲ
ಯಡಿಯೂರಪ್ಪ ನನ್ನ ಮನೆ ಬಾಗಲಿಗೆ ಬಂದಾಗ ಯಾವುದೇ ರಾಜಕೀಯ ಮಾಡಿಲ್ಲ. ನೂರಾರು ಕೋಟಿ ಯೋಜನೆಗಳಿಗೆ ಅನುಮೋದನೆ ಕೊಟ್ಟಿದ್ದೇನೆ. ಈ ವಿಚಾರಗಳಲ್ಲಿ ರಾಜಕೀಯ ನಾನು ಮಾಡಿಲ್ಲ ಎಂದು ಸಿಎಂ ಬಿಎಸ್ ವೈ ವಿರುದ್ಧವೂ ಆಕ್ರೋಶ ಹೊರಹಾಕಿದರು.
ನಾಳೆ ದಿಲ್ಲಿ ಹೈಕೋರ್ಟ್ ನಲ್ಲಿ ಕೇಸ್ ಇದೆ. ನಾನು ಅಥವಾ ನಮ್ಮ ತಮ್ಮ ಆಗಲಿ ಹೋಗಲಿದ್ದೇವೆ. ವಕೀಲರನ್ನು ಮೀಟ್ ಮಾಡಲು ಆಗಿಲ್ಲ, ಅವರನ್ನು ಭೇಟಿ ಮಾಡಬೇಕು. ಉಪಚುನಾವಣೆ ಬಗ್ಗೆ ಅಧ್ಯಕ್ಷರು ಇನ್ನು ಮಾತನಾಡಿಲ್ಲ, ಬ್ಯುಸಿ ಇದ್ದಾರೆ. ನನ್ನ ಫೋನ್ ಕೂಡ ಇಲ್ಲ. ಸಂಪರ್ಕ ಮಾಡಲು ಕಷ್ಟ ವಾಗಿದೆ ಎಂದರು.
ಹೊಸಕೋಟೆ ರಣಾಂಗಣಕ್ಕೆ ಎಂಟಿಬಿ ಆಹ್ವಾನ ಕೊಟ್ಟ ಹಿನ್ನೆಲೆ ಮಾತನಾಡಿ, ಅವರು ದೊಡ್ಡವರು, ಬಹಳ ಸಂತೋಷ. ಪರಮೇಶ್ವರ್ ಪಿಎ ನಿವಾಸಕ್ಕೆ ಹೋಗ್ತೀನಿ. ಅವನು ನಮ್ಮ ಕ್ಷೇತ್ರದವನು, ಅವನ ನಿಧನ ದುರ್ಧೈವ, ಧೈರ್ಯ ತೆಗೆದುಕೊಳ್ಳಬೇಕಿತ್ತು. ಮೈಸೂರಿಗೂ ಹೋಗಬೇಕು, ದೇವಸ್ಥಾನ, ಮಠಕ್ಕೆ ಹೋಗಬೇಕು ಎಂದ ಅವರು ತಮ್ಮ ಗಡ್ಡ ಬೆಳೆಸಿದ ವಿಚಾರ ಪ್ರಸ್ತಾಪಿಸಿದಾಗ ನೀವೆಲ್ಲ ಏನ್ ಹೇಳ್ತೀರಿ ಎಂದು ಮಾಧ್ಯಮದವರನ್ನೇ ಕೇಳಿದರು.
ಪಾಲಿಟಿಕ್ಸ್ ಈಗ ಬೇಡ, ಕೈಕಾಲು, ಮೈ ಬೆನ್ನು ಸದ್ಯ ರೆಡಿ ಮಾಡಿಕೊಳ್ಳೋಣ. ಸಿಎಂ ಗೆ ನನ್ನಿಂದ ತೊಂದರೆ ಆಗೋದು ಬೇಡ. ನನ್ನ ಹತ್ತಿರ ಯಾರೂ ಮಾತನಾಡಿಲ್ಲ. ಹಲವರು ವಿಷಸ್ ಕಳಿಸಿದ್ದಾರೆ. ಯಾರು ಅಂತ ಹೇಳೋದು ಬೇಡ ಎಂದ ಅವರು, ತಮ್ಮ ಮೆರವಣಿಗೆ ವೇಳೆ ಫ್ಲೆಕ್ಸ್ ಬ್ಯಾನರ್ಸ್ ಹಾಕಿದ್ದವರ ಮೇಲೆ ಕೇಸ್ ಹಾಕಿರುವ ಹಿನ್ನೆಲೆ ಮಾತನಾಡಿ, ಫ್ಲೆಕ್ಸ್ ಬ್ಯಾನರ್ಸ್ ನಿಷೇಧ ಸಿಟಿ ಒಳೆ, ಕಾರ್ಪೊರೇಷನ್ ಒಳಗೆ ಮಾತ್ರ. ಸಿಡಿ ಒಳಗೆ ಯಾರೂ ಕೂಡ ಫ್ಲೆಕ್ಸ್ ಮತ್ತು ಬ್ಯಾನರ್ಸ್ ಹಾಕಿಲ್ಲ. ಏನಾಗಿದೆ ಎಲ್ಲದರ ಬಗ್ಗೆ ತಿಳಿದುಕೊಳ್ತೀನಿ ಎಂದರು.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.