ETV Bharat / state

ಮೈಸೂರು ದಸರಾ: ಹೆಚ್ಚುವರಿ ಜನದಟ್ಟಣೆ ನಿವಾರಣೆಗೆ ವಿಶೇಷ ರೈಲುಗಳ ವ್ಯವಸ್ಥೆ

author img

By ETV Bharat Karnataka Team

Published : Oct 19, 2023, 6:08 PM IST

ಮೈಸೂರು ದಸರಾಕ್ಕೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿರುವ ನೈರುತ್ಯ ರೈಲ್ವೆ, ಪ್ರಯಾಣಿಕರು ಕಾಯ್ದಿರಿಸದ ಟಿಕೆಟ್‌ಗಳನ್ನು ತೊಂದರೆಮುಕ್ತವಾಗಿ ಖರೀದಿಸಲು ಯುಟಿಎಸ್ ಮೊಬೈಲ್ ಅಪ್ಲಿಕೇಶನ್ ವ್ಯವಸ್ಥೆ ಮಾಡಿದೆ.

Etv Bharat
ನೈರುತ್ಯ ರೈಲ್ವೆ

ಬೆಂಗಳೂರು: ಮೈಸೂರು ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರು-ಧಾರವಾಡ ಹಾಗು ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು ಸೇವೆ ಒದಗಿಸಲು ನಿರ್ಧರಿಸಿದೆ.

  • ರೈಲು ಸಂಖ್ಯೆ 06205 ಮೈಸೂರಿನಿಂದ ಧಾರವಾಡಕ್ಕೆ ಅಕ್ಟೋಬರ್ 22 ಮತ್ತು 24 ರಂದು ಎರಡು ಸಲ ಪ್ರಯಾಣವನ್ನು ಪ್ರಾರಂಭಿಸುತ್ತದೆ. ರೈಲು ಮೈಸೂರಿನಿಂದ 22:35 ಗಂಟೆಗೆ ಹೊರಡುತ್ತದೆ ಮತ್ತು ಮರುದಿನ 08:00 ಕ್ಕೆ ಧಾರವಾಡ ತಲುಪುತ್ತದೆ. ಮಾರ್ಗದಲ್ಲಿ ರೈಲಿಗೆ ಕೃಷ್ಣರಾಜನಗರ, ಹೊಳೆನರಸೀಪುರ, ಹಾಸನ, ಅರಸೀಕೆರೆ, ಕಡೂರು, ಬೀರೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಬ್ಯಾಡಗಿ, ಹಾವೇರಿ ಮತ್ತು ಹುಬ್ಬಳ್ಳಿಯಲ್ಲಿ ವಾಣಿಜ್ಯ ನಿಲುಗಡೆ ನೀಡಲಾಗಿದೆ.
  • ರೈಲು ನಂ.06206 ಧಾರವಾಡದಿಂದ ಮೈಸೂರಿಗೆ ಪ್ರಯಾಣವನ್ನು ಎರಡು ಸಲ, ಅಂದರೆ, ಅಕ್ಟೋಬರ್ 23 ಮತ್ತು 25 ರಂದು ಪ್ರಾರಂಭಿಸುತ್ತದೆ. ರೈಲು ಧಾರವಾಡದಿಂದ 11:15 ಗಂಟೆಗೆ ಹೊರಡುತ್ತದೆ ಮತ್ತು ಅದೇ ದಿನ 21:30 ಗಂಟೆಗೆ ಮೈಸೂರು ತಲುಪುತ್ತದೆ. ರೈಲು ಮಾರ್ಗದಲ್ಲಿ ಹುಬ್ಬಳ್ಳಿ, ಹಾವೇರಿ, ಬ್ಯಾಡಗಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಕಡೂರು, ಅರಸೀಕೆರೆ, ಹಾಸನ, ಹೊಳೆನರಸೀಪುರ ಮತ್ತು ಕೃಷ್ಣರಾಜನಗರದಲ್ಲಿ ವಾಣಿಜ್ಯ ನಿಲುಗಡೆ ಇರುತ್ತದೆ.
  • ರೈಲು ಸಂಖ್ಯೆ.06205 ಮತ್ತು 06206 ಒಂದು ಎರಡನೆಯ ದರ್ಜೆ ಎಸಿ, ಮೂರು ಮೂರನೆಯ ದರ್ಜೆ ಎಸಿ, ಎಂಟು ಸ್ಲೀಪರ್ ದರ್ಜೆ ಮತ್ತು ನಾಲ್ಕು ದ್ವಿತೀಯ ದರ್ಜೆ ಆಸನದ ಕೋಚ್‌ಗಳ ಸಂಯೋಜನೆಯನ್ನು ಹೊಂದಿರುತ್ತದೆ.
  • ರೈಲು ನಂ.06203 ಅಕ್ಟೋಬರ್ 20 ರಂದು ಮೈಸೂರಿನಿಂದ ಬಿಜಾಪುರಕ್ಕೆ ಒಂದು ಬಾರಿಯ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಅದು ಕೆಎಸ್‌ಆರ್ ಬೆಂಗಳೂರು ನಿಲ್ದಾಣದ ಮೂಲಕ ಹಾದು ಹೋಗುತ್ತದೆ. ರೈಲು ಮೈಸೂರಿನಿಂದ 17:30 ಗಂಟೆಗೆ ಹೊರಟು ಮರುದಿನ 10:00 ಗಂಟೆಗೆ ಬಿಜಾಪುರ ತಲುಪಲಿದೆ. ರೈಲಿಗೆ ಮಾರ್ಗ ಮದ್ಯದಲ್ಲಿ ಮಂಡ್ಯ, ರಾಮನಗರ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಕರಜಗಿ, ಹುಬ್ಬಳ್ಳಿ, ಹೊಳೆ ಆಲೂರು, ಬಾದಾಮಿ ಮತ್ತು ಬಾಗಲಕೋಟೆಯಲ್ಲಿ ವಾಣಿಜ್ಯ ನಿಲುಗಡೆ ಇರುತ್ತದೆ.
  • ರೈಲು ನಂ.06204 ಬಿಜಾಪುರದಿಂದ ಮೈಸೂರಿಗೆ ಹಾಸನ ಮಾರ್ಗವಾಗಿ 21 ನೇ ಅಕ್ಟೋಬರ್‌ ರಂದು ದಸರಾ ವಿಶೇಷ ಪ್ರಯಾಣವನ್ನು ನಡೆಸಲಿದೆ. ರೈಲು ಬಿಜಾಪುರದಿಂದ 11:45 ಗಂಟೆಗೆ ಹೊರಟು ಮರುದಿನ 03:00 ಗಂಟೆಗೆ ಮೈಸೂರು ತಲುಪುತ್ತದೆ. ಮಾರ್ಗದಲ್ಲಿ ರೈಲಿಗೆ ಬಾಗಲಕೋಟೆ, ಬಾದಾಮಿ, ಹೊಳೆ ಆಲೂರು, ಹುಬ್ಬಳ್ಳಿ, ಕಾರಜಗಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ಹಾಸನ, ಹೊಳೆನರಸೀಪುರ ಮತ್ತು ಕೃಷ್ಣರಾಜನಗರದಲ್ಲಿ ವಾಣಿಜ್ಯ ನಿಲುಗಡೆ ಇರುತ್ತದೆ.
  • ರೈಲು ಸಂಖ್ಯೆ.06203 ಮತ್ತು 06204 ಒಂದು ಎರಡನೆಯ ದರ್ಜೆ ಎಸಿ, ಮೂರು ಮೂರನೆಯ ದರ್ಜೆ ಎಸಿ, ಎಂಟು ಸ್ಲೀಪರ್ ದರ್ಜೆ ಮತ್ತು ನಾಲ್ಕು ದ್ವಿತೀಯ ದರ್ಜೆ ಆಸನದ ಕೋಚ್‌ಗಳ ಸಂಯೋಜನೆಯನ್ನು ಹೊಂದಿರುತ್ತದೆ.
  • ಮೈಸೂರಿನಿಂದ ಚಾಮರಾಜನಗರ ಮತ್ತು ಮೈಸೂರಿನಿಂದ ಕೆಎಸ್‌ಆರ್ ಬೆಂಗಳೂರು ನಡುವೆ ಸಂಚರಿಸುವ ದಸರಾ ವಿಶೇಷ ರೈಲುಗಳ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ ಅದರಂತೆ ರೈಲು ಸಂಖ್ಯೆ. 06597 ಈಗ ಕೆಎಸ್‌ಆರ್ ಬೆಂಗಳೂರಿನಿಂದ 17:00 ಗಂಟೆಗೆ ಹೊರಟು 20:15 ಗಂಟೆಗೆ ಮೈಸೂರು ತಲುಪಲಿದೆ ಮತ್ತು ಪ್ರತಿಯಾಗಿ ರೈಲು ನಂ.06598 ಮೈಸೂರಿನಿಂದ 20:30 ಗಂಟೆಗೆ ಹೊರಟು 23:30 ಗಂಟೆಗೆ ಕೆಎಸ್‌ಆರ್ ಬೆಂಗಳೂರು ತಲುಪಲಿದೆ. ಈ ವಿಶೇಷ ರೈಲುಗಳು ಹೆಚ್ಚುವರಿ ಜನದಟ್ಟಣೆ ತೆರವುಗೊಳಿಸಲು ಅಕ್ಟೋಬರ್ 20 ರಿಂದ ಅಕ್ಟೋಬರ್ 24 ರವರೆಗೆ ಸೇವೆಗಳನ್ನು ಹೊಂದಿರುತ್ತವೆ.
  • ರೈಲು ನಂ.06283 ಮೈಸೂರಿನಿಂದ ಚಾಮರಾಜನಗರಕ್ಕೆ ಅಕ್ಟೋಬರ್ 24 ರಂದು 20:45 ಗಂಟೆಗೆ ಮೈಸೂರಿನಿಂದ ಹೊರಟು 22:40 ಗಂಟೆಗೆ ಚಾಮರಾಜನಗರ ತಲುಪಲಿದೆ. ಮತ್ತು ಹಿಂದಿರುಗುವ ದಿಕ್ಕಿನಲ್ಲಿ ರೈಲು ನಂ.06284 ಅಕ್ಟೋಬರ್ 24 ರಂದು 23:00 ಗಂಟೆಗೆ ಚಾಮರಾಜನಗರದಿಂದ ಹೊರಟು ಮರುದಿನ 01:00 ಗಂಟೆಗೆ ಮೈಸೂರಿಗೆ ತಲುಪುತ್ತದೆ.
  • ಪ್ರಯಾಣಿಸುವ ಸಾರ್ವಜನಿಕರು ಈ ದಸರಾ ಹಬ್ಬದ ಋತುವಿನಲ್ಲಿ ತೊಂದರೆ ರಹಿತ ಪ್ರಯಾಣಕ್ಕಾಗಿ ಈ ವಿಶೇಷ ರೈಲು ಸೇವೆಗಳನ್ನು ಬಳಸಿಕೊಳ್ಳಬಹುದು ಮತ್ತು ಪ್ರಯಾಣಿಕರು ಕಾಯ್ದಿರಿಸದ ಟಿಕೆಟ್‌ಗಳನ್ನು ತೊಂದರೆ ಮುಕ್ತವಾಗಿ ಖರೀದಿಸಲು ಯುಟಿಎಸ್ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಲು ನೈರುತ್ಯ ರೈಲ್ವೆ ವಿನಂತಿಸಿದೆ.

ಬೆಂಗಳೂರು: ಮೈಸೂರು ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರು-ಧಾರವಾಡ ಹಾಗು ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು ಸೇವೆ ಒದಗಿಸಲು ನಿರ್ಧರಿಸಿದೆ.

  • ರೈಲು ಸಂಖ್ಯೆ 06205 ಮೈಸೂರಿನಿಂದ ಧಾರವಾಡಕ್ಕೆ ಅಕ್ಟೋಬರ್ 22 ಮತ್ತು 24 ರಂದು ಎರಡು ಸಲ ಪ್ರಯಾಣವನ್ನು ಪ್ರಾರಂಭಿಸುತ್ತದೆ. ರೈಲು ಮೈಸೂರಿನಿಂದ 22:35 ಗಂಟೆಗೆ ಹೊರಡುತ್ತದೆ ಮತ್ತು ಮರುದಿನ 08:00 ಕ್ಕೆ ಧಾರವಾಡ ತಲುಪುತ್ತದೆ. ಮಾರ್ಗದಲ್ಲಿ ರೈಲಿಗೆ ಕೃಷ್ಣರಾಜನಗರ, ಹೊಳೆನರಸೀಪುರ, ಹಾಸನ, ಅರಸೀಕೆರೆ, ಕಡೂರು, ಬೀರೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಬ್ಯಾಡಗಿ, ಹಾವೇರಿ ಮತ್ತು ಹುಬ್ಬಳ್ಳಿಯಲ್ಲಿ ವಾಣಿಜ್ಯ ನಿಲುಗಡೆ ನೀಡಲಾಗಿದೆ.
  • ರೈಲು ನಂ.06206 ಧಾರವಾಡದಿಂದ ಮೈಸೂರಿಗೆ ಪ್ರಯಾಣವನ್ನು ಎರಡು ಸಲ, ಅಂದರೆ, ಅಕ್ಟೋಬರ್ 23 ಮತ್ತು 25 ರಂದು ಪ್ರಾರಂಭಿಸುತ್ತದೆ. ರೈಲು ಧಾರವಾಡದಿಂದ 11:15 ಗಂಟೆಗೆ ಹೊರಡುತ್ತದೆ ಮತ್ತು ಅದೇ ದಿನ 21:30 ಗಂಟೆಗೆ ಮೈಸೂರು ತಲುಪುತ್ತದೆ. ರೈಲು ಮಾರ್ಗದಲ್ಲಿ ಹುಬ್ಬಳ್ಳಿ, ಹಾವೇರಿ, ಬ್ಯಾಡಗಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಕಡೂರು, ಅರಸೀಕೆರೆ, ಹಾಸನ, ಹೊಳೆನರಸೀಪುರ ಮತ್ತು ಕೃಷ್ಣರಾಜನಗರದಲ್ಲಿ ವಾಣಿಜ್ಯ ನಿಲುಗಡೆ ಇರುತ್ತದೆ.
  • ರೈಲು ಸಂಖ್ಯೆ.06205 ಮತ್ತು 06206 ಒಂದು ಎರಡನೆಯ ದರ್ಜೆ ಎಸಿ, ಮೂರು ಮೂರನೆಯ ದರ್ಜೆ ಎಸಿ, ಎಂಟು ಸ್ಲೀಪರ್ ದರ್ಜೆ ಮತ್ತು ನಾಲ್ಕು ದ್ವಿತೀಯ ದರ್ಜೆ ಆಸನದ ಕೋಚ್‌ಗಳ ಸಂಯೋಜನೆಯನ್ನು ಹೊಂದಿರುತ್ತದೆ.
  • ರೈಲು ನಂ.06203 ಅಕ್ಟೋಬರ್ 20 ರಂದು ಮೈಸೂರಿನಿಂದ ಬಿಜಾಪುರಕ್ಕೆ ಒಂದು ಬಾರಿಯ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಅದು ಕೆಎಸ್‌ಆರ್ ಬೆಂಗಳೂರು ನಿಲ್ದಾಣದ ಮೂಲಕ ಹಾದು ಹೋಗುತ್ತದೆ. ರೈಲು ಮೈಸೂರಿನಿಂದ 17:30 ಗಂಟೆಗೆ ಹೊರಟು ಮರುದಿನ 10:00 ಗಂಟೆಗೆ ಬಿಜಾಪುರ ತಲುಪಲಿದೆ. ರೈಲಿಗೆ ಮಾರ್ಗ ಮದ್ಯದಲ್ಲಿ ಮಂಡ್ಯ, ರಾಮನಗರ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಕರಜಗಿ, ಹುಬ್ಬಳ್ಳಿ, ಹೊಳೆ ಆಲೂರು, ಬಾದಾಮಿ ಮತ್ತು ಬಾಗಲಕೋಟೆಯಲ್ಲಿ ವಾಣಿಜ್ಯ ನಿಲುಗಡೆ ಇರುತ್ತದೆ.
  • ರೈಲು ನಂ.06204 ಬಿಜಾಪುರದಿಂದ ಮೈಸೂರಿಗೆ ಹಾಸನ ಮಾರ್ಗವಾಗಿ 21 ನೇ ಅಕ್ಟೋಬರ್‌ ರಂದು ದಸರಾ ವಿಶೇಷ ಪ್ರಯಾಣವನ್ನು ನಡೆಸಲಿದೆ. ರೈಲು ಬಿಜಾಪುರದಿಂದ 11:45 ಗಂಟೆಗೆ ಹೊರಟು ಮರುದಿನ 03:00 ಗಂಟೆಗೆ ಮೈಸೂರು ತಲುಪುತ್ತದೆ. ಮಾರ್ಗದಲ್ಲಿ ರೈಲಿಗೆ ಬಾಗಲಕೋಟೆ, ಬಾದಾಮಿ, ಹೊಳೆ ಆಲೂರು, ಹುಬ್ಬಳ್ಳಿ, ಕಾರಜಗಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ಹಾಸನ, ಹೊಳೆನರಸೀಪುರ ಮತ್ತು ಕೃಷ್ಣರಾಜನಗರದಲ್ಲಿ ವಾಣಿಜ್ಯ ನಿಲುಗಡೆ ಇರುತ್ತದೆ.
  • ರೈಲು ಸಂಖ್ಯೆ.06203 ಮತ್ತು 06204 ಒಂದು ಎರಡನೆಯ ದರ್ಜೆ ಎಸಿ, ಮೂರು ಮೂರನೆಯ ದರ್ಜೆ ಎಸಿ, ಎಂಟು ಸ್ಲೀಪರ್ ದರ್ಜೆ ಮತ್ತು ನಾಲ್ಕು ದ್ವಿತೀಯ ದರ್ಜೆ ಆಸನದ ಕೋಚ್‌ಗಳ ಸಂಯೋಜನೆಯನ್ನು ಹೊಂದಿರುತ್ತದೆ.
  • ಮೈಸೂರಿನಿಂದ ಚಾಮರಾಜನಗರ ಮತ್ತು ಮೈಸೂರಿನಿಂದ ಕೆಎಸ್‌ಆರ್ ಬೆಂಗಳೂರು ನಡುವೆ ಸಂಚರಿಸುವ ದಸರಾ ವಿಶೇಷ ರೈಲುಗಳ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ ಅದರಂತೆ ರೈಲು ಸಂಖ್ಯೆ. 06597 ಈಗ ಕೆಎಸ್‌ಆರ್ ಬೆಂಗಳೂರಿನಿಂದ 17:00 ಗಂಟೆಗೆ ಹೊರಟು 20:15 ಗಂಟೆಗೆ ಮೈಸೂರು ತಲುಪಲಿದೆ ಮತ್ತು ಪ್ರತಿಯಾಗಿ ರೈಲು ನಂ.06598 ಮೈಸೂರಿನಿಂದ 20:30 ಗಂಟೆಗೆ ಹೊರಟು 23:30 ಗಂಟೆಗೆ ಕೆಎಸ್‌ಆರ್ ಬೆಂಗಳೂರು ತಲುಪಲಿದೆ. ಈ ವಿಶೇಷ ರೈಲುಗಳು ಹೆಚ್ಚುವರಿ ಜನದಟ್ಟಣೆ ತೆರವುಗೊಳಿಸಲು ಅಕ್ಟೋಬರ್ 20 ರಿಂದ ಅಕ್ಟೋಬರ್ 24 ರವರೆಗೆ ಸೇವೆಗಳನ್ನು ಹೊಂದಿರುತ್ತವೆ.
  • ರೈಲು ನಂ.06283 ಮೈಸೂರಿನಿಂದ ಚಾಮರಾಜನಗರಕ್ಕೆ ಅಕ್ಟೋಬರ್ 24 ರಂದು 20:45 ಗಂಟೆಗೆ ಮೈಸೂರಿನಿಂದ ಹೊರಟು 22:40 ಗಂಟೆಗೆ ಚಾಮರಾಜನಗರ ತಲುಪಲಿದೆ. ಮತ್ತು ಹಿಂದಿರುಗುವ ದಿಕ್ಕಿನಲ್ಲಿ ರೈಲು ನಂ.06284 ಅಕ್ಟೋಬರ್ 24 ರಂದು 23:00 ಗಂಟೆಗೆ ಚಾಮರಾಜನಗರದಿಂದ ಹೊರಟು ಮರುದಿನ 01:00 ಗಂಟೆಗೆ ಮೈಸೂರಿಗೆ ತಲುಪುತ್ತದೆ.
  • ಪ್ರಯಾಣಿಸುವ ಸಾರ್ವಜನಿಕರು ಈ ದಸರಾ ಹಬ್ಬದ ಋತುವಿನಲ್ಲಿ ತೊಂದರೆ ರಹಿತ ಪ್ರಯಾಣಕ್ಕಾಗಿ ಈ ವಿಶೇಷ ರೈಲು ಸೇವೆಗಳನ್ನು ಬಳಸಿಕೊಳ್ಳಬಹುದು ಮತ್ತು ಪ್ರಯಾಣಿಕರು ಕಾಯ್ದಿರಿಸದ ಟಿಕೆಟ್‌ಗಳನ್ನು ತೊಂದರೆ ಮುಕ್ತವಾಗಿ ಖರೀದಿಸಲು ಯುಟಿಎಸ್ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಲು ನೈರುತ್ಯ ರೈಲ್ವೆ ವಿನಂತಿಸಿದೆ.

ಇದನ್ನೂ ಓದಿ: ಮೈಸೂರು ದಸರಾ ಪ್ರಯುಕ್ತ ನೈರುತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ: ಹೀಗಿದೆ ವೇಳಾಪಟ್ಟಿ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.