ETV Bharat / state

ಓಡಲು ದಾರಿ ಹುಡುಕುವ ಇಟಲಿಯ ಅಕ್ಕ: ಕಾಂಗ್ರೆಸ್ ಅಧಿನಾಯಕಿ ಬಗ್ಗೆ ವ್ಯಂಗ್ಯವಾಡಿದ ನಳಿನ್‍ ಕುಮಾರ್ ಕಟೀಲ್..!

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಅಧಿನಾಯಕಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

author img

By

Published : Oct 7, 2022, 4:41 PM IST

Nalin Kumar Kateel Slams Sonia Gandhi
Nalin Kumar Kateel Slams Sonia Gandhi

ಬೆಂಗಳೂರು: ಭಾರತದಿಂದ ಓಡಲು ಇಟಲಿಯ ಅಕ್ಕ ದಾರಿ ಹುಡುಕುತ್ತಿದ್ದಾರೆ. ಇದು ಭಾರತ್ ಜೋಡೋ ಅಲ್ಲ. ಇದು ಯಶಸ್ವಿ ಆಗುವುದಿಲ್ಲ. ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ವಿಜಯದಶಮಿ ದಸರ ಹಬ್ಬ ಮುಗಿಸಿ, ವಿಜಯ ಯಾತ್ರೆ ಸಂಘಟಿಸಿದ್ದೇವೆ. ತಾಯಿ ದುಷ್ಟರ ಸಂಹಾರ ಮಾಡಿದಳು. ತಾಯಿ ಪ್ರಾರ್ಥನೆ ಮೂಲಕ ಕಾರ್ಯಕಾರಿಣಿ ಆರಂಭವಾಗಿದೆ. 150 ಸೀಟುಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಕೆಂಪೇಗೌಡರು ಕಟ್ಟಿದ ನಾಡಿದು, ಬೆಂಗಳೂರು ಕಟ್ಟಿದ ವ್ಯಕ್ತಿಯ ಸ್ಮರಣೆ ಮಾಡಿ ಕಾರ್ಯಕ್ರಮ ಆರಂಭಿಸಿದ್ದೇವೆ.

ಕೆಂಪೇಗೌಡರ ಸ್ಮರಣೆ: ಹೊಸಪೇಟೆ ಬಳಿಕ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. 108 ಅಡಿ ಎತ್ತರದ ಕೆಂಪೇಗೌಡರ ಪುತ್ಥಳಿ ಅನಾವರಣ ಮಾಡೋ ಮೂಲಕ ಕೆಂಪೇಗೌಡರ ಸ್ಮರಣೆ ಮಾಡುವ ಕೆಲಸ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಂದ ನೆರೆ ಹೆಚ್ಚಾಗಿದೆ, ಸಂಕಷ್ಟದಲ್ಲೂ ಯಡಿಯೂರಪ್ಪ ಒಬ್ಬರೇ ಪ್ರವಾಸ ಮಾಡಿದ್ದರು.

ಈಗ ಬೊಮ್ಮಾಯಿ ಅವರು ಉತ್ತಮ ತಂಡದ ಜೊತೆ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸೇರಿ‌ ಉತ್ತಮ ಯೋಜನೆ ನೀಡಿದ್ದಾರೆ. ಬಿಜೆಪಿ ಮುಖಂಡರ ಪ್ರವಾಸಕ್ಕೆ ಜನರಿಂದ ಅತ್ಯುತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಫಲಾನುಭವಿಗಳು ಆನಂದದಿಂದಿದ್ದಾರೆ. ದೇಶ ಮಾತ್ರವಲ್ಲದೇ, ವೀರಶೈವ ಸಮಾಜವನ್ನೂ ಒಡೆಯಲು ಮುಂದಾದ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದ ಅವರು, ಭಾರತದಿಂದ ಓಡಲು ಇಟಲಿಯ ಅಕ್ಕ ದಾರಿ ಹುಡುಕುತ್ತಿದ್ದಾರೆ. ಇದು ಭಾರತ್ ಜೋಡೋ ಅಲ್ಲ. ಇದು ಯಶಸ್ವಿ ಆಗುವುದಿಲ್ಲ ಎಂದು ವಿಶ್ವಾಸದಿಂದ ನುಡಿದರು.

ನಳಿನ್‍ ಕುಮಾರ್ ಕಟೀಲ್

ಭ್ರಷ್ಟಾಚಾರವೇ ಕಾಂಗ್ರೆಸ್​ನ ದೊಡ್ಡ ಕೊಡುಗೆ: ಭಯೋತ್ಪಾದನೆ, ಭ್ರಷ್ಟಾಚಾರವೇ ಕಾಂಗ್ರೆಸ್‍ನ ದೊಡ್ಡ ಕೊಡುಗೆ. 6 ದಶಕಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ ಸದಾ ಕಾಲ ಹಗರಣಗಳನ್ನೇ ಮಾಡಿತು. ಕಾಂಗ್ರೆಸ್ ಅವಧಿಯಲ್ಲಿ ಎಲ್ಲ ಪ್ರಧಾನಿಗಳ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ. ಲಾಲ್ ಬಹಾದ್ದೂರ್ ಶಾಸ್ತ್ರಿ ಅವರನ್ನ ಹೊರತುಪಡಿಸಿದರೆ, ನೆಹರು, ಇಂದಿರಾ, ರಾಜೀವ್ ಗಾಂಧಿ ಕಾಲದಲ್ಲಿ ಹಗರಣ ಆಗಿದೆ.

ಮನಮೋಹನ್ ಸಿಂಗ್ ಅವಧಿಯಲ್ಲಿ ಗಾಳಿ, ನೀರು, ಆಕಾಶದಲ್ಲಿ ಹಗರಣ ಆಗಿದೆ‌. ಹಾಸ್ಟೆಲ್, ಹಾಸಿಗೆ, ಸೋಲಾರ್, ಶಾಲಾ ಮೊಟ್ಟೆ, ನೇಮಕಾತಿಯಲ್ಲೂ ಹಗರಣಗಳನ್ನು ಮಾಡಿದ್ದ, ಜಾತಿ - ಜಾತಿಗಳ ನಡುವೆ ಸಂಘರ್ಷ ತಂದಿಟ್ಟ ಸಿದ್ದರಾಮಣ್ಣ ಕೊಡುಗೆಯನ್ನು ಜನರು ಮರೆತಿಲ್ಲ. ಅರ್ಕಾವತಿ ರೀಡೂ ಹಗರಣದಲ್ಲಿ ಸಿದ್ದರಾಮಣ್ಣ ಎಲ್ಲಿರುತ್ತಾರೆ ಎಂಬುದನ್ನು ಕಾದುನೋಡಿ ಎಂದು ಮುನ್ಸೂಚನೆ ನೀಡಿದರು.

ಸೋನಿಯಾರಿಂದ ಹಿಡಿದು ಡಿಕೆಶಿವರೆಗೂ ಬೇಲ್​​​​​ನಲ್ಲಿದ್ದಾರೆ; ನಿಮ್ಮ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಬರ್ಟ್ ವಾದ್ರಾ, ಡಿ.ಕೆ ಶಿವಕುಮಾರ್ ಎಲ್ಲರೂ ಬೇಲ್ ಮೇಲೆ ಹೊರಗಿದ್ದಾರೆ. ಯಾಕೆ ಬೇಲ್ ಮೇಲೆ ಹೊರಗಿದ್ದಾರೆ ಅನ್ನೋದನ್ನು ಯಾರಾದರೂ ಕೇಳಿದ್ದೀರಾ? ಸಿದ್ದರಾಮಯ್ಯ ಮಾತು ಎತ್ತಿದ್ರೆ ಭ್ರಷ್ಟಾಚಾರದ ವಿರೋಧಿ ಅಂತಾರೆ. ಅವರ ಅವಧಿಯಲ್ಲಿ ಎಷ್ಟು ಭ್ರಷ್ಟಾಚಾರ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ ಎಂದರು.

ಚುನಾವಣಾ ಪೂರ್ವತಯಾರಿ ನಡೆಯುತ್ತಿದೆ. ಅದ್ಭುತ ಪ್ರತಿಕ್ರಿಯೆ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಸಂಘಟನೆ ಕುರಿತು ಮೆಚ್ಚುಗೆ ಸೂಚಿಸಿದರು. ಜನರು ಬಿಜೆಪಿ ಕಡೆ ಮೆಚ್ಚುಗೆ ಸೂಚಿಸುತ್ತಿದ್ದಾರೆ ಎಂದು ತಿಳಿಸಿದರು. ಕೋವಿಡ್ ಉಚಿತ ಲಸಿಕೆ ಮೂಲಕ ಮಾಸ್ಕ್ ತೆಗೆದು ಕುಳಿತುಕೊಳ್ಳಲು ಜನಪರ ಕಾಳಜಿ ಉಳ್ಳ ಪ್ರಧಾನಿ ನರೇಂದ್ರ ಮೋದಿ ಅವರು ಕಾರಣರಾಗಿದ್ದಾರೆ ಎಂದು ಧನ್ಯವಾದ ಸಲ್ಲಿಸಿದರು.

ಇತರ ಪಕ್ಷಗಳ ಹತ್ತಾರು ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ. ಪಕ್ಷದ ಮುಖಂಡರ ಪ್ರವಾಸ ನಡೆಸಲಾಗುತ್ತಿದೆ. ಚುನಾವಣೆಗೆ ಪಕ್ಷ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಪೂರಕವಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಲಹೆ ನೀಡಿದರು. ಪ್ರಕಾಶನ ಪ್ರಕೋಷ್ಠದ ವತಿಯಿಂದ ಹೊರತಂದ ಸಮಷ್ಟಿ, ಧ್ಯೇಯಪಥ ಪುಸ್ತಕಗಳನ್ನು ಅವರು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಸರ್ವಪಕ್ಷ ಸಭೆ ಮುಕ್ತಾಯ.. ಎಸ್​​​​​ಟಿಗೆ ಶೇ 7, ಎಸ್​​ಸಿಗೆ ಶೇ 17ರಷ್ಟು ಮೀಸಲು: ನಾಳೆನೇ ಸಚಿವ ಸಂಪುಟ ಸಭೆ ಕರೆದು ಅಂತಿಮ ಕಾರ್ಯಾದೇಶ

ಬೆಂಗಳೂರು: ಭಾರತದಿಂದ ಓಡಲು ಇಟಲಿಯ ಅಕ್ಕ ದಾರಿ ಹುಡುಕುತ್ತಿದ್ದಾರೆ. ಇದು ಭಾರತ್ ಜೋಡೋ ಅಲ್ಲ. ಇದು ಯಶಸ್ವಿ ಆಗುವುದಿಲ್ಲ. ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ವಿಜಯದಶಮಿ ದಸರ ಹಬ್ಬ ಮುಗಿಸಿ, ವಿಜಯ ಯಾತ್ರೆ ಸಂಘಟಿಸಿದ್ದೇವೆ. ತಾಯಿ ದುಷ್ಟರ ಸಂಹಾರ ಮಾಡಿದಳು. ತಾಯಿ ಪ್ರಾರ್ಥನೆ ಮೂಲಕ ಕಾರ್ಯಕಾರಿಣಿ ಆರಂಭವಾಗಿದೆ. 150 ಸೀಟುಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಕೆಂಪೇಗೌಡರು ಕಟ್ಟಿದ ನಾಡಿದು, ಬೆಂಗಳೂರು ಕಟ್ಟಿದ ವ್ಯಕ್ತಿಯ ಸ್ಮರಣೆ ಮಾಡಿ ಕಾರ್ಯಕ್ರಮ ಆರಂಭಿಸಿದ್ದೇವೆ.

ಕೆಂಪೇಗೌಡರ ಸ್ಮರಣೆ: ಹೊಸಪೇಟೆ ಬಳಿಕ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. 108 ಅಡಿ ಎತ್ತರದ ಕೆಂಪೇಗೌಡರ ಪುತ್ಥಳಿ ಅನಾವರಣ ಮಾಡೋ ಮೂಲಕ ಕೆಂಪೇಗೌಡರ ಸ್ಮರಣೆ ಮಾಡುವ ಕೆಲಸ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಂದ ನೆರೆ ಹೆಚ್ಚಾಗಿದೆ, ಸಂಕಷ್ಟದಲ್ಲೂ ಯಡಿಯೂರಪ್ಪ ಒಬ್ಬರೇ ಪ್ರವಾಸ ಮಾಡಿದ್ದರು.

ಈಗ ಬೊಮ್ಮಾಯಿ ಅವರು ಉತ್ತಮ ತಂಡದ ಜೊತೆ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸೇರಿ‌ ಉತ್ತಮ ಯೋಜನೆ ನೀಡಿದ್ದಾರೆ. ಬಿಜೆಪಿ ಮುಖಂಡರ ಪ್ರವಾಸಕ್ಕೆ ಜನರಿಂದ ಅತ್ಯುತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಫಲಾನುಭವಿಗಳು ಆನಂದದಿಂದಿದ್ದಾರೆ. ದೇಶ ಮಾತ್ರವಲ್ಲದೇ, ವೀರಶೈವ ಸಮಾಜವನ್ನೂ ಒಡೆಯಲು ಮುಂದಾದ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದ ಅವರು, ಭಾರತದಿಂದ ಓಡಲು ಇಟಲಿಯ ಅಕ್ಕ ದಾರಿ ಹುಡುಕುತ್ತಿದ್ದಾರೆ. ಇದು ಭಾರತ್ ಜೋಡೋ ಅಲ್ಲ. ಇದು ಯಶಸ್ವಿ ಆಗುವುದಿಲ್ಲ ಎಂದು ವಿಶ್ವಾಸದಿಂದ ನುಡಿದರು.

ನಳಿನ್‍ ಕುಮಾರ್ ಕಟೀಲ್

ಭ್ರಷ್ಟಾಚಾರವೇ ಕಾಂಗ್ರೆಸ್​ನ ದೊಡ್ಡ ಕೊಡುಗೆ: ಭಯೋತ್ಪಾದನೆ, ಭ್ರಷ್ಟಾಚಾರವೇ ಕಾಂಗ್ರೆಸ್‍ನ ದೊಡ್ಡ ಕೊಡುಗೆ. 6 ದಶಕಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ ಸದಾ ಕಾಲ ಹಗರಣಗಳನ್ನೇ ಮಾಡಿತು. ಕಾಂಗ್ರೆಸ್ ಅವಧಿಯಲ್ಲಿ ಎಲ್ಲ ಪ್ರಧಾನಿಗಳ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ. ಲಾಲ್ ಬಹಾದ್ದೂರ್ ಶಾಸ್ತ್ರಿ ಅವರನ್ನ ಹೊರತುಪಡಿಸಿದರೆ, ನೆಹರು, ಇಂದಿರಾ, ರಾಜೀವ್ ಗಾಂಧಿ ಕಾಲದಲ್ಲಿ ಹಗರಣ ಆಗಿದೆ.

ಮನಮೋಹನ್ ಸಿಂಗ್ ಅವಧಿಯಲ್ಲಿ ಗಾಳಿ, ನೀರು, ಆಕಾಶದಲ್ಲಿ ಹಗರಣ ಆಗಿದೆ‌. ಹಾಸ್ಟೆಲ್, ಹಾಸಿಗೆ, ಸೋಲಾರ್, ಶಾಲಾ ಮೊಟ್ಟೆ, ನೇಮಕಾತಿಯಲ್ಲೂ ಹಗರಣಗಳನ್ನು ಮಾಡಿದ್ದ, ಜಾತಿ - ಜಾತಿಗಳ ನಡುವೆ ಸಂಘರ್ಷ ತಂದಿಟ್ಟ ಸಿದ್ದರಾಮಣ್ಣ ಕೊಡುಗೆಯನ್ನು ಜನರು ಮರೆತಿಲ್ಲ. ಅರ್ಕಾವತಿ ರೀಡೂ ಹಗರಣದಲ್ಲಿ ಸಿದ್ದರಾಮಣ್ಣ ಎಲ್ಲಿರುತ್ತಾರೆ ಎಂಬುದನ್ನು ಕಾದುನೋಡಿ ಎಂದು ಮುನ್ಸೂಚನೆ ನೀಡಿದರು.

ಸೋನಿಯಾರಿಂದ ಹಿಡಿದು ಡಿಕೆಶಿವರೆಗೂ ಬೇಲ್​​​​​ನಲ್ಲಿದ್ದಾರೆ; ನಿಮ್ಮ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಬರ್ಟ್ ವಾದ್ರಾ, ಡಿ.ಕೆ ಶಿವಕುಮಾರ್ ಎಲ್ಲರೂ ಬೇಲ್ ಮೇಲೆ ಹೊರಗಿದ್ದಾರೆ. ಯಾಕೆ ಬೇಲ್ ಮೇಲೆ ಹೊರಗಿದ್ದಾರೆ ಅನ್ನೋದನ್ನು ಯಾರಾದರೂ ಕೇಳಿದ್ದೀರಾ? ಸಿದ್ದರಾಮಯ್ಯ ಮಾತು ಎತ್ತಿದ್ರೆ ಭ್ರಷ್ಟಾಚಾರದ ವಿರೋಧಿ ಅಂತಾರೆ. ಅವರ ಅವಧಿಯಲ್ಲಿ ಎಷ್ಟು ಭ್ರಷ್ಟಾಚಾರ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ ಎಂದರು.

ಚುನಾವಣಾ ಪೂರ್ವತಯಾರಿ ನಡೆಯುತ್ತಿದೆ. ಅದ್ಭುತ ಪ್ರತಿಕ್ರಿಯೆ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಸಂಘಟನೆ ಕುರಿತು ಮೆಚ್ಚುಗೆ ಸೂಚಿಸಿದರು. ಜನರು ಬಿಜೆಪಿ ಕಡೆ ಮೆಚ್ಚುಗೆ ಸೂಚಿಸುತ್ತಿದ್ದಾರೆ ಎಂದು ತಿಳಿಸಿದರು. ಕೋವಿಡ್ ಉಚಿತ ಲಸಿಕೆ ಮೂಲಕ ಮಾಸ್ಕ್ ತೆಗೆದು ಕುಳಿತುಕೊಳ್ಳಲು ಜನಪರ ಕಾಳಜಿ ಉಳ್ಳ ಪ್ರಧಾನಿ ನರೇಂದ್ರ ಮೋದಿ ಅವರು ಕಾರಣರಾಗಿದ್ದಾರೆ ಎಂದು ಧನ್ಯವಾದ ಸಲ್ಲಿಸಿದರು.

ಇತರ ಪಕ್ಷಗಳ ಹತ್ತಾರು ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ. ಪಕ್ಷದ ಮುಖಂಡರ ಪ್ರವಾಸ ನಡೆಸಲಾಗುತ್ತಿದೆ. ಚುನಾವಣೆಗೆ ಪಕ್ಷ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಪೂರಕವಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಲಹೆ ನೀಡಿದರು. ಪ್ರಕಾಶನ ಪ್ರಕೋಷ್ಠದ ವತಿಯಿಂದ ಹೊರತಂದ ಸಮಷ್ಟಿ, ಧ್ಯೇಯಪಥ ಪುಸ್ತಕಗಳನ್ನು ಅವರು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಸರ್ವಪಕ್ಷ ಸಭೆ ಮುಕ್ತಾಯ.. ಎಸ್​​​​​ಟಿಗೆ ಶೇ 7, ಎಸ್​​ಸಿಗೆ ಶೇ 17ರಷ್ಟು ಮೀಸಲು: ನಾಳೆನೇ ಸಚಿವ ಸಂಪುಟ ಸಭೆ ಕರೆದು ಅಂತಿಮ ಕಾರ್ಯಾದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.