ETV Bharat / state

ವೈದ್ಯಾಧಿಕಾರಿ ಆತ್ಮಹತ್ಯೆ: ಕಪ್ಪು ಪಟ್ಟಿ ಧರಿಸಿ ರಾಜ್ಯಾದ್ಯಂತ ವೈದ್ಯರ ಪ್ರತಿಭಟನೆ

ನಂಜನಗೂಡಿನ ವೈದ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ವೈದ್ಯಕೀಯ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. ಇದರ ಜೊತೆಗೆ ಇಂದು ಮತ್ತು ನಾಳೆ ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸಲು ಮುಂದಾಗಿದ್ದಾರೆ.

author img

By

Published : Aug 21, 2020, 10:40 PM IST

Bangalore doctors
Bangalore doctors

ಬೆಂಗಳೂರು: ನಂಜನಗೂಡಿನ‌ ‌ ತಾಲೂಕು ‌ವೈದ್ಯಾಧಿಕಾರಿ ಡಾ.ನಾಗೇಂದ್ರರ ಆತ್ಮಹತ್ಯೆ ನಿಜಕ್ಕೂ ‌ದಿಗ್ಭ್ರಮೆ ಮೂಡಿಸಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಸಂತಾಪ ಸೂಚಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಸಂಘ, ಕುಟುಂಬದಿಂದ ದೂರ ಉಳಿದು‌ ನಿರಂತರ‌ ಒತ್ತಡದಲ್ಲಿ ಎಲ್ಲಾ ಇಲ್ಲಗಳ ಹಾಗೂ ಅತ್ಯಂತ ‌ಸಂಕೀರ್ಣ ವ್ಯವಸ್ಥೆಯ ನಡುವೆ‌ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದ‌ ಇಂತಹ ಕಾಯಕ‌ ಜೀವಿಯನ್ನು ಕಳೆದು‌ಕೊಂಡಿರುವುದು ವಿಷಾದನೀಯ.

ಈ ರೀತಿಯ‌ ಅನಾಹುತಗಳು‌ ನಡೆಯಲು‌‌ ಕಾರಣ ಮತ್ತು‌ ಅವು‌ ಪುನಃ ‌ಮರುಕಳಿಸದಂತೆ ಜಾಗೃತಿ ವಹಿಸುವುದರ ಜೊತೆಗೆ ವೈದ್ಯರನ್ನು ಬೆದರಿಸುವ, ಕಾನೂನಿನ‌‌ ಗುಮ್ಮ ತೋರಿಸುವುದನ್ನು‌ ಬಿಟ್ಟು ಸೌಹಾರ್ದಯುತವಾಗಿ ನಡೆಸಿಕೊಂಡು ಹೋಗಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ. ಈ ಘಟನೆಯನ್ನು ಖಂಡಿಸುತ್ತಾ ಇದಕ್ಕೆ ಕಾರಣವಾದವರನ್ನು ಶಿಕ್ಷಿಸಬೇಕೆಂದು ಒತ್ತಾಯಿಸಿದೆ.

ಹೀಗಾಗಿ ಇಂದು ಮತ್ತು ನಾಳೆ ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ. ಭಾನುವಾರದಂದು ರಾತ್ರಿ 8 ಗಂಟೆಗೆ ದೀಪ ಬೆಳಗಿ ಈ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದೆ.

ಬೆಂಗಳೂರು: ನಂಜನಗೂಡಿನ‌ ‌ ತಾಲೂಕು ‌ವೈದ್ಯಾಧಿಕಾರಿ ಡಾ.ನಾಗೇಂದ್ರರ ಆತ್ಮಹತ್ಯೆ ನಿಜಕ್ಕೂ ‌ದಿಗ್ಭ್ರಮೆ ಮೂಡಿಸಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಸಂತಾಪ ಸೂಚಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಸಂಘ, ಕುಟುಂಬದಿಂದ ದೂರ ಉಳಿದು‌ ನಿರಂತರ‌ ಒತ್ತಡದಲ್ಲಿ ಎಲ್ಲಾ ಇಲ್ಲಗಳ ಹಾಗೂ ಅತ್ಯಂತ ‌ಸಂಕೀರ್ಣ ವ್ಯವಸ್ಥೆಯ ನಡುವೆ‌ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದ‌ ಇಂತಹ ಕಾಯಕ‌ ಜೀವಿಯನ್ನು ಕಳೆದು‌ಕೊಂಡಿರುವುದು ವಿಷಾದನೀಯ.

ಈ ರೀತಿಯ‌ ಅನಾಹುತಗಳು‌ ನಡೆಯಲು‌‌ ಕಾರಣ ಮತ್ತು‌ ಅವು‌ ಪುನಃ ‌ಮರುಕಳಿಸದಂತೆ ಜಾಗೃತಿ ವಹಿಸುವುದರ ಜೊತೆಗೆ ವೈದ್ಯರನ್ನು ಬೆದರಿಸುವ, ಕಾನೂನಿನ‌‌ ಗುಮ್ಮ ತೋರಿಸುವುದನ್ನು‌ ಬಿಟ್ಟು ಸೌಹಾರ್ದಯುತವಾಗಿ ನಡೆಸಿಕೊಂಡು ಹೋಗಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ. ಈ ಘಟನೆಯನ್ನು ಖಂಡಿಸುತ್ತಾ ಇದಕ್ಕೆ ಕಾರಣವಾದವರನ್ನು ಶಿಕ್ಷಿಸಬೇಕೆಂದು ಒತ್ತಾಯಿಸಿದೆ.

ಹೀಗಾಗಿ ಇಂದು ಮತ್ತು ನಾಳೆ ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ. ಭಾನುವಾರದಂದು ರಾತ್ರಿ 8 ಗಂಟೆಗೆ ದೀಪ ಬೆಳಗಿ ಈ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.