ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ 40 ವರ್ಷಗಳಿಂದ ನಿರಂತರ ಕಾರ್ಮಿಕರ ಪರ ಹೋರಾಟ ನಡೆಸುತ್ತಿರುವ ನಾನು ಕೂಡ ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿ ಎಂದು ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಕರ್ನಾಟಕ ರಾಜ್ಯ ಶಾಖೆ ಅಧ್ಯಕ್ಷ ಡಾ. ಎಸ್ ಎಸ್ ಪ್ರಕಾಶಂ ಹೇಳಿದ್ದಾರೆ.
ನಾನು ಸಹ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಳಿ ಅವಕಾಶಕ್ಕಾಗಿ ಮನವಿ ಮಾಡಿದ್ದೇನೆ. ಅವಕಾಶ ಸಿಕ್ಕರೆ ಮೇಲ್ಮನೆಯಲ್ಲಿ ಕಾರ್ಮಿಕರ ಪರ ಹೋರಾಟ ನಡೆಸುತ್ತೇನೆ.
ಸಾಧ್ಯವಾದಷ್ಟು ವರ್ಗದವರಿಗೆ ನ್ಯಾಯ ದೊರಕಿಸಿಕೊಡುವ ಪ್ರಾಮಾಣಿಕ ಪರಿಶ್ರಮ ಮಾಡುತ್ತೇನೆ ಎಂದು ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.