ETV Bharat / state

ಫೇಸ್​ಬುಕ್​ನಲ್ಲಿಅವಹೇಳನಕಾರಿ ಪೋಸ್ಟ್​​ ವಿಚಾರ- ನವೀನ್​​ ತಪ್ಪೊಪ್ಪಿಗೆ: ’’ಅಖಂಡ’’ ಮನೆ ಲಾಕ್

author img

By

Published : Aug 14, 2020, 10:07 AM IST

ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ ಆರೋಪಿ ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ‌ ಎಂಬ ಮಾಹಿತಿ ಬಹಿರಂಗವಾಗಿದ್ದು, ಇಂದು ಅಖಂಡ ಶ್ರೀನಿವಾಸ ಮನೆಗೆ ಎಫ್​ಎಸ್​ಎಲ್​ ತಂಡ ಭೇಟಿ ನೀಡಿ ತನಿಖೆ ನಡೆಸಲಿದೆ.

ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ನವೀನ್​
ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ನವೀನ್​

ಬೆಂಗಳೂರು: ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ ಆರೋಪಿ ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ‌ ಎಂಬ ಮಾಹಿತಿ ಬಹಿರಂಗವಾಗಿದೆ.

ಪೂರ್ವ ವಿಭಾಗದ ವಿಶೇಷ ತಂಡ ಹಾಗೂ ಸಿಸಿಬಿ ಪೊಲೀಸರು ನವೀನ್​ನನ್ನು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ವೇಳೆ ವಿವಾದಾತ್ಮಕ ಫೋಟೋವನ್ನು ಕಮೆಂಟ್ ಮೂಲಕ ಪೋಸ್ಟ್ ಮಾಡಿ, ಬಳಿಕ ಅದನ್ನು ಡಿಲೀಟ್ ಮಾಡಿ ಹ್ಯಾಕ್ ಆಗಿದೆ ಎಂದು ಸುಳ್ಳು ಹೇಳಿದ್ದ. ಆದರೆ, ಪೋಲಿಸರು ಸಾಕ್ಷ್ಯಗಳನ್ನು ಇಟ್ಟಾಗ ಘಟನೆಯ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಫೇಸ್​​​ಬುಕ್​ ಪೋಸ್ಟ್​ ವಿಚಾರ: ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ನವೀನ್​

ಆದರೆ, ನವೀನ್ ಮೊಬೈಲ್ ಮಾತ್ರ ಇದುವರೆಗೂ ಪತ್ತೆಯಾಗಿಲ್ಲ. ನವೀನ್ ಫೇಸ್​ಬುಕ್ ಐಡಿ, ಪಾಸ್​​​​​ವರ್ಡ್​​​ ಮೂಲಕ ಅಕೌಂಟ್ ಆಕ್ಸೆಸ್​ ಮಾಡಿ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ತನಿಖೆ ವೇಳೆ ಕ್ಷಮೆಯಾಚಿಸಿದ್ದಾನೆಂದು ತಿಳಿದು ಬಂದಿದೆ.

ಮತ್ತೊಂದೆಡೆ ನವೀನ್ ಮೊಬೈಲ್ ಎಲ್ಲಿದೆ ಎಂಬ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಇನ್ನು ಪೊಲೀಸ್​ ತನಿಖೆ ವೇಳೆ ಮೊಬೈಲ್​ ಕಳೆದು ಹೋಗಿದೆ ಎಂದು ನವೀನ್ ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣವನ್ನ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಇಂದು ಎಫ್ಎಸ್ಎಲ್ ಅಧಿಕಾರಿಗಳ ತಂಡ ಶಾಸಕ ಅಖಂಡ ಶ್ರೀನಿವಾಸ ಅವರ ನಿವಾಸಕ್ಕೆ ಭೇಟಿ ನೀಡಲಿದ್ದು, ಶಾಸಕರ ಮನೆ ಗೇಟ್​ಗೆ ಪೊಲೀಸರು ಬೀಗ ಹಾಕಿದ್ದಾರೆ. ಅಷ್ಟೇ ಅಲ್ಲದೆ, ಅನಾವಶ್ಯಕವಾಗಿ ಓಡಾಡುವವರಿಗೆ ಪೊಲೀಸರು ಎಚ್ಚರಿಕೆ ಸಹ ನೀಡಿದ್ದಾರೆ.

ಬೆಂಗಳೂರು: ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ ಆರೋಪಿ ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ‌ ಎಂಬ ಮಾಹಿತಿ ಬಹಿರಂಗವಾಗಿದೆ.

ಪೂರ್ವ ವಿಭಾಗದ ವಿಶೇಷ ತಂಡ ಹಾಗೂ ಸಿಸಿಬಿ ಪೊಲೀಸರು ನವೀನ್​ನನ್ನು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ವೇಳೆ ವಿವಾದಾತ್ಮಕ ಫೋಟೋವನ್ನು ಕಮೆಂಟ್ ಮೂಲಕ ಪೋಸ್ಟ್ ಮಾಡಿ, ಬಳಿಕ ಅದನ್ನು ಡಿಲೀಟ್ ಮಾಡಿ ಹ್ಯಾಕ್ ಆಗಿದೆ ಎಂದು ಸುಳ್ಳು ಹೇಳಿದ್ದ. ಆದರೆ, ಪೋಲಿಸರು ಸಾಕ್ಷ್ಯಗಳನ್ನು ಇಟ್ಟಾಗ ಘಟನೆಯ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಫೇಸ್​​​ಬುಕ್​ ಪೋಸ್ಟ್​ ವಿಚಾರ: ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ನವೀನ್​

ಆದರೆ, ನವೀನ್ ಮೊಬೈಲ್ ಮಾತ್ರ ಇದುವರೆಗೂ ಪತ್ತೆಯಾಗಿಲ್ಲ. ನವೀನ್ ಫೇಸ್​ಬುಕ್ ಐಡಿ, ಪಾಸ್​​​​​ವರ್ಡ್​​​ ಮೂಲಕ ಅಕೌಂಟ್ ಆಕ್ಸೆಸ್​ ಮಾಡಿ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ತನಿಖೆ ವೇಳೆ ಕ್ಷಮೆಯಾಚಿಸಿದ್ದಾನೆಂದು ತಿಳಿದು ಬಂದಿದೆ.

ಮತ್ತೊಂದೆಡೆ ನವೀನ್ ಮೊಬೈಲ್ ಎಲ್ಲಿದೆ ಎಂಬ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಇನ್ನು ಪೊಲೀಸ್​ ತನಿಖೆ ವೇಳೆ ಮೊಬೈಲ್​ ಕಳೆದು ಹೋಗಿದೆ ಎಂದು ನವೀನ್ ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣವನ್ನ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಇಂದು ಎಫ್ಎಸ್ಎಲ್ ಅಧಿಕಾರಿಗಳ ತಂಡ ಶಾಸಕ ಅಖಂಡ ಶ್ರೀನಿವಾಸ ಅವರ ನಿವಾಸಕ್ಕೆ ಭೇಟಿ ನೀಡಲಿದ್ದು, ಶಾಸಕರ ಮನೆ ಗೇಟ್​ಗೆ ಪೊಲೀಸರು ಬೀಗ ಹಾಕಿದ್ದಾರೆ. ಅಷ್ಟೇ ಅಲ್ಲದೆ, ಅನಾವಶ್ಯಕವಾಗಿ ಓಡಾಡುವವರಿಗೆ ಪೊಲೀಸರು ಎಚ್ಚರಿಕೆ ಸಹ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.