ETV Bharat / state

ದೆಹಲಿ ವಿಧಾನಸಭೆ ದಂಗಲ್:​ ಚುನಾವಣಾ ಪ್ರಚಾರಕ್ಕೆ ಡಿಕೆಶಿ, ಸಿದ್ದರಾಮಯ್ಯ, ಖರ್ಗೆಗೆ ಇಲ್ಲ ಚಾನ್ಸ್!

author img

By

Published : Jan 22, 2020, 7:32 PM IST

ದೆಹಲಿ ವಿಧಾನಸಭೆ ಚುನಾವಣಾ ಅಖಾಡ ರಂಗೇರಿದ್ದು, ಆಯಾ ಪಕ್ಷದ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು ಕಾಂಗ್ರೆಸ್​ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು, ಇದರಲ್ಲಿ ರಾಜ್ಯದಿಂದ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಡಿಕೆಶಿ ಹಾಗೂ ಕೇಂದ್ರದ ಮಾಜಿ ಸಚಿವರುಗಳಿಗೆ ಅವಕಾಶ ಸಿಗದಿರುವುದು ಅಚ್ಚರಿಗೆ ಕಾರಣವಾಗಿದೆ.

no-chance-for-dikshi-siddaramaiah-kharge-to-campaign-for-delhi-assembly-elections
ದಿಲ್ಲಿ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಡಿಕೆಶಿ, ಸಿದ್ದರಾಮಯ್ಯ, ಖರ್ಗೆಗೆ ಇಲ್ಲ ಚಾನ್ಸ್!

ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು, ಇದರಲ್ಲಿ ರಾಜ್ಯದಿಂದ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಡಿಕೆಶಿ ಹಾಗೂ ಕೇಂದ್ರದ ಮಾಜಿ ಸಚಿವರುಗಳಿಗೆ ಅವಕಾಶ ಸಿಗದಿರುವುದು ಅಚ್ಚರಿಗೆ ಕಾರಣವಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆಗಿರುವ ಕೆ ಸಿ ವೇಣುಗೋಪಾಲ್ ಮೂಲಕ ಬಿಡುಗಡೆಯಾಗಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ನಾಯಕರಾದ ಪ್ರಿಯಾಂಕ ಗಾಂಧಿ, ಗುಲಾಮ್ ನಬಿ ಆಜಾದ್, ನವಜೋತ್ ಸಿಂಗ್ ಸಿದ್ದು, ಜ್ಯೋತಿರಾದಿತ್ಯ ಸಿಂಧ್ಯಾ, ಸಚಿನ್ ಪೈಲೆಟ್, ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ 40 ಸದಸ್ಯರ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಹೊರತುಪಡಿಸಿದರೆ ಉಳಿದ್ಯಾವ ನಾಯಕರಿಗೂ ಅವಕಾಶ ಸಿಕ್ಕಿಲ್ಲ.

no-chance-for-dikshi-siddaramaiah-kharge-to-campaign-for-delhi-assembly-elections
ದೆಹಲಿ ವಿಧಾನಸಭೆ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿ

ವಿಶೇಷ ಎಂದರೆ ರಾಷ್ಟ್ರೀಯ ಮಟ್ಟದಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್, ಮಾಜಿ ಸಚಿವ ಡಿ ಕೆ ಶಿವಕುಮಾರ್ ಮಾತ್ರವಲ್ಲದೇ ಕೇಂದ್ರದ ಮಾಜಿ ಸಚಿವರಾದ ಎಂ ವೀರಪ್ಪ ಮೊಯ್ಲಿ, ಕೆ ಹೆಚ್ ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾವೊಬ್ಬ ನಾಯಕರ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ.

ಹಿಂದಿ ಭಾಷೆಯ ಮೇಲೆ ಉತ್ತಮ ಹಿಡಿತ ಹೊಂದಿದ್ದರೂ ಕೂಡ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆಗೆ ಈ ಪಟ್ಟಿಯಲ್ಲಿ ಸ್ಥಾನ ಸಿಗದಿರುವುದು ಅಚ್ಚರಿ ಮೂಡಿಸಿದೆ. ಬಹುತೇಕ ಎಲ್ಲ ರಾಜ್ಯದ ನಾಯಕರಿಗೆ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಅವಕಾಶ ಸಿಕ್ಕಿದ್ದು ರಾಜ್ಯಕ್ಕೆ ಮಾತ್ರ ಯಾಕೆ ಈ ಸ್ಥಿತಿ ಎದುರಾಗಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು, ಇದರಲ್ಲಿ ರಾಜ್ಯದಿಂದ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಡಿಕೆಶಿ ಹಾಗೂ ಕೇಂದ್ರದ ಮಾಜಿ ಸಚಿವರುಗಳಿಗೆ ಅವಕಾಶ ಸಿಗದಿರುವುದು ಅಚ್ಚರಿಗೆ ಕಾರಣವಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆಗಿರುವ ಕೆ ಸಿ ವೇಣುಗೋಪಾಲ್ ಮೂಲಕ ಬಿಡುಗಡೆಯಾಗಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ನಾಯಕರಾದ ಪ್ರಿಯಾಂಕ ಗಾಂಧಿ, ಗುಲಾಮ್ ನಬಿ ಆಜಾದ್, ನವಜೋತ್ ಸಿಂಗ್ ಸಿದ್ದು, ಜ್ಯೋತಿರಾದಿತ್ಯ ಸಿಂಧ್ಯಾ, ಸಚಿನ್ ಪೈಲೆಟ್, ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ 40 ಸದಸ್ಯರ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಹೊರತುಪಡಿಸಿದರೆ ಉಳಿದ್ಯಾವ ನಾಯಕರಿಗೂ ಅವಕಾಶ ಸಿಕ್ಕಿಲ್ಲ.

no-chance-for-dikshi-siddaramaiah-kharge-to-campaign-for-delhi-assembly-elections
ದೆಹಲಿ ವಿಧಾನಸಭೆ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿ

ವಿಶೇಷ ಎಂದರೆ ರಾಷ್ಟ್ರೀಯ ಮಟ್ಟದಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್, ಮಾಜಿ ಸಚಿವ ಡಿ ಕೆ ಶಿವಕುಮಾರ್ ಮಾತ್ರವಲ್ಲದೇ ಕೇಂದ್ರದ ಮಾಜಿ ಸಚಿವರಾದ ಎಂ ವೀರಪ್ಪ ಮೊಯ್ಲಿ, ಕೆ ಹೆಚ್ ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾವೊಬ್ಬ ನಾಯಕರ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ.

ಹಿಂದಿ ಭಾಷೆಯ ಮೇಲೆ ಉತ್ತಮ ಹಿಡಿತ ಹೊಂದಿದ್ದರೂ ಕೂಡ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆಗೆ ಈ ಪಟ್ಟಿಯಲ್ಲಿ ಸ್ಥಾನ ಸಿಗದಿರುವುದು ಅಚ್ಚರಿ ಮೂಡಿಸಿದೆ. ಬಹುತೇಕ ಎಲ್ಲ ರಾಜ್ಯದ ನಾಯಕರಿಗೆ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಅವಕಾಶ ಸಿಕ್ಕಿದ್ದು ರಾಜ್ಯಕ್ಕೆ ಮಾತ್ರ ಯಾಕೆ ಈ ಸ್ಥಿತಿ ಎದುರಾಗಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

Intro:newsBody:ದಿಲ್ಲಿ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಡಿಕೆಶಿ, ಸಿದ್ದರಾಮಯ್ಯ, ಖರ್ಗೆಗೆ ಇಲ್ಲ ಚಾನ್ಸ್!

ಬೆಂಗಳೂರು: ದಿಲ್ಲಿ ವಿಧಾನಸಭೆ ಚುನಾವಣೆ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು ಇದರಲ್ಲಿ ರಾಜ್ಯದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಸಚಿವ ಡಿಕೆಶಿ ಹಾಗೂ ಕೇಂದ್ರದ ಮಾಜಿ ಸಚಿವರು ಗಳಿಗೆ ಅವಕಾಶ ಸಿಗದಿರುವುದು ಅಚ್ಚರಿಗೆ ಕಾರಣವಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆಗಿರುವ ಕೆಸಿ ವೇಣುಗೋಪಾಲ್ ಮೂಲಕ ಬಿಡುಗಡೆಯಾಗಿರುವ ಸ್ಟಾರ್ ಪ್ರಚಾರಕರ ಪಟ್ಟಿ ಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಾ. ಮನಮೋಹನ್ ಸಿಂಗ್, ಪ್ರಿಯಾಂಕ ಗಾಂಧಿ, ಗುಲಾಮ್ ನಬಿ ಆಜಾದ್, ನವಜೋತ್ ಸಿಂಗ್ ಸಿದ್ದು, ಜ್ಯೋತಿರಾದಿತ್ಯ ಸಿಂಧ್ಯಾ, ಸಚಿನ್ ಪೈಲೆಟ್, ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ 40 ಸದಸ್ಯರ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಏನಕ್ಕೆ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಹೊರತುಪಡಿಸಿದರೆ ಉಳಿದ್ಯಾವ ನಾಯಕರಿಗೂ ಅವಕಾಶ ಸಿಕ್ಕಿಲ್ಲ. ವಿಶೇಷ ಎಂದರೆ ರಾಷ್ಟ್ರೀಯ ಮಟ್ಟದಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಮಾಜಿ ಸಚಿವ ಡಿಕೆ ಶಿವಕುಮಾರ್ ಮಾತ್ರವಲ್ಲದೇ ಮಾಜಿ ಸಂಸದರಾದ ಡಾ ಎಂ ವೀರಪ್ಪ ಮೊಯ್ಲಿ ಕೆಎಚ್ ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾವೊಬ್ಬ ನಾಯಕರ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ. ಹಿಂದಿ ಭಾಷೆಯ ಮೇಲೆ ಉತ್ತಮ ಹಿಡಿತ ಹೊಂದಿದ್ದರೂ ಕೂಡ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಈ ಪಟ್ಟಿಯಲ್ಲಿ ಇಲ್ಲದಿರುವುದು ದೊಡ್ಡಮಟ್ಟದ ಅಚ್ಚರಿಗೆ ಕಾರಣವಾಗಿದೆ. ಬಹುತೇಕ ಎಲ್ಲ ರಾಜ್ಯದ ನಾಯಕರಿಗೆ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಅವಕಾಶ ಸಿಕ್ಕಿದ್ದು ರಾಜ್ಯಕ್ಕೆ ಮಾತ್ರ ಯಾಕೆ ಈ ಸ್ಥಿತಿ ಎದುರಾಗಿದೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.
ಒಂದೆಡೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ತಿಕ್ಕಾಟದಲ್ಲಿ ಕಾಲಹರಣ ಮಾಡುತ್ತಿರುವ ರಾಜ್ಯ ನಾಯಕರು ದಿಲ್ಲಿ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಅನಗತ್ಯವೇನು ಎಂಬ ಭಾವನೆಗೆ ಕಾಂಗ್ರೆಸ್ ಹೈಕಮಾಂಡ್ ಬಂದಿದೆಯಾ ಎಂಬ ಅನುಮಾನ ಕೂಡ ಇದರಿಂದ ಮೂಡುತ್ತಿದೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.