ETV Bharat / state

ಡಬಲ್​ ಇಂಜಿನ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಆಗಿಲ್ಲ: ಜೆಡಿಎಸ್ ಉಪನಾಯಕ ಬಂಡೆಪ್ಪ ಕಾಶೆಂಪೂರ್ ಟೀಕೆ

ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಡಬಲ್​​​ ಇಂಜಿನ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ - ಜೆಡಿಎಸ್ ಉಪನಾಯಕ ಬಂಡೆಪ್ಪ ಕಾಶೆಂಪೂರ್.

author img

By

Published : Feb 15, 2023, 5:14 PM IST

ಜೆಡಿಎಸ್ ಉಪನಾಯಕ ಬಂಡೆಪ್ಪ ಕಾಶೆಂಪೂರ್
ಜೆಡಿಎಸ್ ಉಪನಾಯಕ ಬಂಡೆಪ್ಪ ಕಾಶೆಂಪೂರ್

ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ರೈತ ಸಮುದಾಯಕ್ಕೆ ಯಾವುದೇ ಅನುಕೂಲ ಆಗಿಲ್ಲ. ರೈತರು ಈ ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರ ಅವರ ಬೆನ್ನು ಮುರಿದಿದೆ ಎಂದು ಜೆಡಿಎಸ್ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ವಿಧಾನಸಭೆಯಲ್ಲಿ ಟೀಕಿಸಿದ್ದಾರೆ. ಇಂದು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಡಬಲ್​​​ ಇಂಜಿನ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇದು ಡಬಲ್​ ಎಂಜಿನ್ ಸರ್ಕಾರವಲ್ಲ. ನಿಂತಲ್ಲೇ ನಿಂತಿರುವ ಡೀಸೆಲ್ ಇಲ್ಲದ ಸರ್ಕಾರವಾಗಿದೆ ಎಂದು ಕುಟುಕಿದರು.

ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಸರ್ಕಾರ, ಯಾವುದೇ ಪ್ರಯತ್ನ ಮಾಡಿಲ್ಲ. ರೈತರ ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 24 ಸಾವಿರ ಕೋಟಿ ರೂಪಾಯಿ ರೈತರ ಸಾಲ ಮನ್ನಾ ಮಾಡಲಾಗಿತ್ತು. ಸಹಕಾರಿ ಸಚಿವರು ನಿತ್ಯ ರೈತರಿಗೆ ಸಾಲಸೌಲಭ್ಯ ಕಲ್ಪಿಸಿರುವ ಬಗ್ಗೆ ಹೇಳುತ್ತಲೇ ಇದ್ದಾರೆ. ವಾಸ್ತವಿಕವಾಗಿ ನಿಜವಾದ ರೈತರಿಗೆ ಈ ಸೌಲಭ್ಯ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾತಿನ ಚಕಮಕಿ : ಇದೇ ವೇಳೆ, ರೈತರಿಗೆ ಸಾಲ ನೀಡುವ ವಿಚಾರದಲ್ಲಿ ಸಹಕಾರ ಸಚಿವ ಎಸ್. ಟಿ ಸೋಮಶೇಖರ್ ಹಾಗೂ ಕಾಶೆಂಪೂರ್ ನಡುವೆ ಕೆಲ ಮಾತಿನ ಚಕಮಕಿ ನಡೆಯಿತು. ಮತ್ತೆ ಮಾತು ಮುಂದುವರೆಸಿದ ಕಾಶೆಂಪೂರ್, ರಾಜ್ಯಪಾಲರ ಭಾಷಣ ಕುರಿತು ಮಾತನಾಡಿದ ಆಡಳಿತ ಪಕ್ಷದ ಶಾಸಕ ಸಿ. ಟಿ ರವಿ ಅವರು, ಅಧಿಕಾರದ ಮದದಿಂದ ಸಮ್ಮಿಶ್ರ ಸರ್ಕಾರದ ರಚನೆ ಕುರಿತು ವ್ಯಂಗ್ಯವಾಡಿದ್ದಾರೆ. ಮಾತಿನ ಭರಾಟೆಯಲ್ಲಿ ವಿಕಲಾಂಗ ಮಗುವಿಗೆ ಹೋಲಿಕೆ ಮಾಡಿದ್ದಾರೆ.

ಆದರೆ, ನಾವ್ಯಾರು ಇನ್ನೊಬ್ಬರ ಮನೆ ಬಾಗಿಲಿಗೆ ಅಧಿಕಾರಕ್ಕಾಗಿ ಹೋಗಿಲ್ಲ. ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಇಂತಹ ಕೆಲಸ ಮಾಡಿಲ್ಲ. ಬಿಜೆಪಿ ರಾಜ್ಯದಲ್ಲಿ ಹೇಗೆ ಬೆಳೆಯಿತು? ಎಷ್ಟು ಬಾರಿ ಆಪರೇಷನ್ ಮಾಡಿತ್ತು ಎಂಬ ವಿಚಾರಗಳು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಚುನಾವಣೆ ಪ್ರಣಾಳಿಕೆಯಲ್ಲಿನ ಯಾವುದೇ ಭರವಸೆ ಈಡೇರಿಸಿಲ್ಲ. ರಾಜ್ಯಪಾಲರ ಭಾಷಣದಲ್ಲಿ ಹೇಳಿರುವಂತೆ ಅಭಿವೃದ್ಧಿಯಾಗಿಲ್ಲ ಎಂದು ಟೀಕಿಸಿದರು.

ಆಟೋರಿಕ್ಷಾ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ನಿಗಮ ಅಥವಾ ಮಂಡಳಿ ರಚನೆಗೆ ಆಗ್ರಹ : ರಾಜ್ಯದಲ್ಲಿನ ಆಟೋರಿಕ್ಷಾ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ನಿಗಮ ಅಥವಾ ಮಂಡಳಿ ರಚಿಸಬೇಕು ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ವಿಧಾನಸಭೆಯಲ್ಲಿ ಇಂದು ಆಗ್ರಹಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರಿದ್ದು, ಬಡ ಮಧ್ಯಮ ವರ್ಗದ ಜನರು, ಆಟೋರಿಕ್ಷಾವನ್ನು ಅವಲಂಬಿಸಿದ್ದಾರೆ. ಆದರೆ, ಆಟೋರಿಕ್ಷಾ ಚಾಲಕರಿಗೆ ಇಎಸ್‍ಐ, ಪಿಎಫ್, ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯವಿಲ್ಲ. ರಿಕ್ಷಾ ಚಾಲಕರು ಎಲ್ಲಾ ಜಾತಿ ವರ್ಗದವರು ಇದ್ದಾರೆ. ಹೀಗಾಗಿ ಅವರಿಗೆ ಪ್ರತ್ಯೇಕ ನಿಗಮ ರಚಿಸಿ ಅವರ ಕಲ್ಯಾಣಕ್ಕೆ ನೆರವಾಗಬೇಕು. ಮುಂದಿನ ಆಯ-ವ್ಯಯದಲ್ಲಿ ಈ ವಿಚಾರ ಘೋಷಣೆ ಆಗಬೇಕು ಎಂದು ಒತ್ತಾಯಿಸಿದರು.

ಸಂಕಷ್ಟದ ಸುಳಿಯಲ್ಲಿರುವ ಈಶಾನ್ಯ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಅಧ್ಯಯನ ನಡೆಸಿ ಸೂಕ್ತ ಕ್ರಮ ವಹಿಸಬೇಕು. ಅಲ್ಲದೆ, ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಜತೆಗೆ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಹೊಸ ಬಸ್ ನೀಡುವ ಮೂಲಕ ಜನರಿಗೆ ಸೂಕ್ತ ಸಾರಿಗೆ ಸೌಲಭ್ಯ ಒದಗಿಸಿಕೊಡಬೇಕು. ಸಂಸ್ಥೆಯ ನೌಕರರ ವೇತನ, ಭತ್ಯೆ, ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಜತೆಗೆ ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನೂತನವಾಗಿ ಪ್ರಾರಂಭಿಸಿರುವ ವೈದ್ಯಕೀಯ ಕಾಲೇಜಿಗೆ ಕಟ್ಟಡವಿಲ್ಲ. ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಬೋಧಕರಿಲ್ಲದಂತಾಗಿದೆ. ಹೀಗಾಗಿ ಕೂಡಲೇ ಕಟ್ಟಡ ನಿರ್ಮಾಣ ಹಾಗೂ ಬೋಧಕರ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಆರೋಗ್ಯ ಇಲಾಖೆ ಕಾರ್ಯ ವೈಖರಿ ಬಗ್ಗೆ ಸಚಿವರ ಹೆಸರು ಹೇಳಿ ಪ್ರಸ್ತಾಪಿಸಿದ ಶೆಟ್ಟರ್, ಆರೋಗ್ಯ ಇಲಾಖೆಯಲ್ಲಿ ಫೈಲ್ ಮೂವ್​ಮೆಂಟ್​ ವಿಳಂಬ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ದಕ್ಷ ಸಚಿವರು ಎಂಬ ಹೆಸರು ಹಾಳಾಗದಂತೆ ಕಾರ್ಯ ನಿರ್ವಹಿಸುವಂತೆ ಇದೇ ಸಂದರ್ಭದಲ್ಲಿ ಸಲಹೆ ನೀಡಿದರು. ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಒಂದು ವಾರದಲ್ಲಿ ಸಿಬ್ಬಂದಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಸದನಕ್ಕೆ ತಿಳಿಸಿದರು.

ಬೆಣ್ಣೆ ಹಳ್ಳ, ಪ್ರವಾಹ ನಿಯಂತ್ರಣ ಯೋಜನೆ, ಬೇಲೇಕೇರಿ ಮತ್ತು ಹೊನ್ನಾವರ ಬಂದರು ಅಭಿವೃದ್ಧಿ, ಹುಬ್ಬಳ್ಳಿ-ಅಂಕೋಲಾ ರೈಲ್ವೇ ಯೋಜನೆ, ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಸಮಸ್ಯೆ, ಎಲೆಕ್ಟ್ರಿಕ್ ಬಸ್ ಖರೀದಿ, ಉಚಿತ ಬಸ್​ಪಾಸ್​ ಸಮಸ್ಯೆ, ಸರ್ಕಾರಿ ವಾಹನ ಸ್ಕ್ರಾಪ್, ಸರ್ಕಾರಿ ಬಸ್ ಗಳಿಗೆ ತೆರಿಗೆ ವಿನಾಯಿತಿ, ಉತ್ತರ ಕರ್ನಾಟಕ ಭಾಗದಲ್ಲಿ ಬಸ್ ಖಾಸಗೀಕರಣ ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದ ಶೆಟ್ಟರ್, ಸರ್ಕಾರ ಕ್ರಮ ಕೈಗೊಳ್ಳಬೇಕು, ಸಿಎಂ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಶೈಕ್ಷಣಿಕ ಸಾಲ ಮಾಡಿಕೊಂಡ ನಿರುದ್ಯೋಗಿ ಯುವಕರ ಸಾಲ ಇಲ್ಲವೇ ಬಡ್ಡಿ ಮನ್ನಾಗೆ ಸರ್ಕಾರ ಮುಂದಾಗಬೇಕು: ಆಯನೂರು ಮನವಿ

ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ರೈತ ಸಮುದಾಯಕ್ಕೆ ಯಾವುದೇ ಅನುಕೂಲ ಆಗಿಲ್ಲ. ರೈತರು ಈ ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರ ಅವರ ಬೆನ್ನು ಮುರಿದಿದೆ ಎಂದು ಜೆಡಿಎಸ್ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ವಿಧಾನಸಭೆಯಲ್ಲಿ ಟೀಕಿಸಿದ್ದಾರೆ. ಇಂದು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಡಬಲ್​​​ ಇಂಜಿನ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇದು ಡಬಲ್​ ಎಂಜಿನ್ ಸರ್ಕಾರವಲ್ಲ. ನಿಂತಲ್ಲೇ ನಿಂತಿರುವ ಡೀಸೆಲ್ ಇಲ್ಲದ ಸರ್ಕಾರವಾಗಿದೆ ಎಂದು ಕುಟುಕಿದರು.

ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಸರ್ಕಾರ, ಯಾವುದೇ ಪ್ರಯತ್ನ ಮಾಡಿಲ್ಲ. ರೈತರ ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 24 ಸಾವಿರ ಕೋಟಿ ರೂಪಾಯಿ ರೈತರ ಸಾಲ ಮನ್ನಾ ಮಾಡಲಾಗಿತ್ತು. ಸಹಕಾರಿ ಸಚಿವರು ನಿತ್ಯ ರೈತರಿಗೆ ಸಾಲಸೌಲಭ್ಯ ಕಲ್ಪಿಸಿರುವ ಬಗ್ಗೆ ಹೇಳುತ್ತಲೇ ಇದ್ದಾರೆ. ವಾಸ್ತವಿಕವಾಗಿ ನಿಜವಾದ ರೈತರಿಗೆ ಈ ಸೌಲಭ್ಯ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾತಿನ ಚಕಮಕಿ : ಇದೇ ವೇಳೆ, ರೈತರಿಗೆ ಸಾಲ ನೀಡುವ ವಿಚಾರದಲ್ಲಿ ಸಹಕಾರ ಸಚಿವ ಎಸ್. ಟಿ ಸೋಮಶೇಖರ್ ಹಾಗೂ ಕಾಶೆಂಪೂರ್ ನಡುವೆ ಕೆಲ ಮಾತಿನ ಚಕಮಕಿ ನಡೆಯಿತು. ಮತ್ತೆ ಮಾತು ಮುಂದುವರೆಸಿದ ಕಾಶೆಂಪೂರ್, ರಾಜ್ಯಪಾಲರ ಭಾಷಣ ಕುರಿತು ಮಾತನಾಡಿದ ಆಡಳಿತ ಪಕ್ಷದ ಶಾಸಕ ಸಿ. ಟಿ ರವಿ ಅವರು, ಅಧಿಕಾರದ ಮದದಿಂದ ಸಮ್ಮಿಶ್ರ ಸರ್ಕಾರದ ರಚನೆ ಕುರಿತು ವ್ಯಂಗ್ಯವಾಡಿದ್ದಾರೆ. ಮಾತಿನ ಭರಾಟೆಯಲ್ಲಿ ವಿಕಲಾಂಗ ಮಗುವಿಗೆ ಹೋಲಿಕೆ ಮಾಡಿದ್ದಾರೆ.

ಆದರೆ, ನಾವ್ಯಾರು ಇನ್ನೊಬ್ಬರ ಮನೆ ಬಾಗಿಲಿಗೆ ಅಧಿಕಾರಕ್ಕಾಗಿ ಹೋಗಿಲ್ಲ. ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಇಂತಹ ಕೆಲಸ ಮಾಡಿಲ್ಲ. ಬಿಜೆಪಿ ರಾಜ್ಯದಲ್ಲಿ ಹೇಗೆ ಬೆಳೆಯಿತು? ಎಷ್ಟು ಬಾರಿ ಆಪರೇಷನ್ ಮಾಡಿತ್ತು ಎಂಬ ವಿಚಾರಗಳು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಚುನಾವಣೆ ಪ್ರಣಾಳಿಕೆಯಲ್ಲಿನ ಯಾವುದೇ ಭರವಸೆ ಈಡೇರಿಸಿಲ್ಲ. ರಾಜ್ಯಪಾಲರ ಭಾಷಣದಲ್ಲಿ ಹೇಳಿರುವಂತೆ ಅಭಿವೃದ್ಧಿಯಾಗಿಲ್ಲ ಎಂದು ಟೀಕಿಸಿದರು.

ಆಟೋರಿಕ್ಷಾ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ನಿಗಮ ಅಥವಾ ಮಂಡಳಿ ರಚನೆಗೆ ಆಗ್ರಹ : ರಾಜ್ಯದಲ್ಲಿನ ಆಟೋರಿಕ್ಷಾ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ನಿಗಮ ಅಥವಾ ಮಂಡಳಿ ರಚಿಸಬೇಕು ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ವಿಧಾನಸಭೆಯಲ್ಲಿ ಇಂದು ಆಗ್ರಹಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರಿದ್ದು, ಬಡ ಮಧ್ಯಮ ವರ್ಗದ ಜನರು, ಆಟೋರಿಕ್ಷಾವನ್ನು ಅವಲಂಬಿಸಿದ್ದಾರೆ. ಆದರೆ, ಆಟೋರಿಕ್ಷಾ ಚಾಲಕರಿಗೆ ಇಎಸ್‍ಐ, ಪಿಎಫ್, ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯವಿಲ್ಲ. ರಿಕ್ಷಾ ಚಾಲಕರು ಎಲ್ಲಾ ಜಾತಿ ವರ್ಗದವರು ಇದ್ದಾರೆ. ಹೀಗಾಗಿ ಅವರಿಗೆ ಪ್ರತ್ಯೇಕ ನಿಗಮ ರಚಿಸಿ ಅವರ ಕಲ್ಯಾಣಕ್ಕೆ ನೆರವಾಗಬೇಕು. ಮುಂದಿನ ಆಯ-ವ್ಯಯದಲ್ಲಿ ಈ ವಿಚಾರ ಘೋಷಣೆ ಆಗಬೇಕು ಎಂದು ಒತ್ತಾಯಿಸಿದರು.

ಸಂಕಷ್ಟದ ಸುಳಿಯಲ್ಲಿರುವ ಈಶಾನ್ಯ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಅಧ್ಯಯನ ನಡೆಸಿ ಸೂಕ್ತ ಕ್ರಮ ವಹಿಸಬೇಕು. ಅಲ್ಲದೆ, ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಜತೆಗೆ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಹೊಸ ಬಸ್ ನೀಡುವ ಮೂಲಕ ಜನರಿಗೆ ಸೂಕ್ತ ಸಾರಿಗೆ ಸೌಲಭ್ಯ ಒದಗಿಸಿಕೊಡಬೇಕು. ಸಂಸ್ಥೆಯ ನೌಕರರ ವೇತನ, ಭತ್ಯೆ, ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಜತೆಗೆ ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನೂತನವಾಗಿ ಪ್ರಾರಂಭಿಸಿರುವ ವೈದ್ಯಕೀಯ ಕಾಲೇಜಿಗೆ ಕಟ್ಟಡವಿಲ್ಲ. ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಬೋಧಕರಿಲ್ಲದಂತಾಗಿದೆ. ಹೀಗಾಗಿ ಕೂಡಲೇ ಕಟ್ಟಡ ನಿರ್ಮಾಣ ಹಾಗೂ ಬೋಧಕರ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಆರೋಗ್ಯ ಇಲಾಖೆ ಕಾರ್ಯ ವೈಖರಿ ಬಗ್ಗೆ ಸಚಿವರ ಹೆಸರು ಹೇಳಿ ಪ್ರಸ್ತಾಪಿಸಿದ ಶೆಟ್ಟರ್, ಆರೋಗ್ಯ ಇಲಾಖೆಯಲ್ಲಿ ಫೈಲ್ ಮೂವ್​ಮೆಂಟ್​ ವಿಳಂಬ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ದಕ್ಷ ಸಚಿವರು ಎಂಬ ಹೆಸರು ಹಾಳಾಗದಂತೆ ಕಾರ್ಯ ನಿರ್ವಹಿಸುವಂತೆ ಇದೇ ಸಂದರ್ಭದಲ್ಲಿ ಸಲಹೆ ನೀಡಿದರು. ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಒಂದು ವಾರದಲ್ಲಿ ಸಿಬ್ಬಂದಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಸದನಕ್ಕೆ ತಿಳಿಸಿದರು.

ಬೆಣ್ಣೆ ಹಳ್ಳ, ಪ್ರವಾಹ ನಿಯಂತ್ರಣ ಯೋಜನೆ, ಬೇಲೇಕೇರಿ ಮತ್ತು ಹೊನ್ನಾವರ ಬಂದರು ಅಭಿವೃದ್ಧಿ, ಹುಬ್ಬಳ್ಳಿ-ಅಂಕೋಲಾ ರೈಲ್ವೇ ಯೋಜನೆ, ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಸಮಸ್ಯೆ, ಎಲೆಕ್ಟ್ರಿಕ್ ಬಸ್ ಖರೀದಿ, ಉಚಿತ ಬಸ್​ಪಾಸ್​ ಸಮಸ್ಯೆ, ಸರ್ಕಾರಿ ವಾಹನ ಸ್ಕ್ರಾಪ್, ಸರ್ಕಾರಿ ಬಸ್ ಗಳಿಗೆ ತೆರಿಗೆ ವಿನಾಯಿತಿ, ಉತ್ತರ ಕರ್ನಾಟಕ ಭಾಗದಲ್ಲಿ ಬಸ್ ಖಾಸಗೀಕರಣ ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದ ಶೆಟ್ಟರ್, ಸರ್ಕಾರ ಕ್ರಮ ಕೈಗೊಳ್ಳಬೇಕು, ಸಿಎಂ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಶೈಕ್ಷಣಿಕ ಸಾಲ ಮಾಡಿಕೊಂಡ ನಿರುದ್ಯೋಗಿ ಯುವಕರ ಸಾಲ ಇಲ್ಲವೇ ಬಡ್ಡಿ ಮನ್ನಾಗೆ ಸರ್ಕಾರ ಮುಂದಾಗಬೇಕು: ಆಯನೂರು ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.