ETV Bharat / state

ಯಾವುದೇ ಕಾರಣಕ್ಕೂ ಬೆಂಗಳೂರಿನಲ್ಲಿ ಲಾಕ್​ಡೌನ್​ ಹೇರಿಕೆ ಇಲ್ಲ: ಕಂದಾಯ ಸಚಿವ ಅಶೋಕ್​

author img

By

Published : Jun 25, 2020, 3:54 PM IST

ಬೆಂಗಳೂರಿನಲ್ಲಿ ಯಾವುದೇ ಕಾರಣಕ್ಕೂ ಮತ್ತೊಮ್ಮೆ ಲಾಕ್​ಡೌನ್​ ಹೇರಿಕೆ ಮಾಡಲಾಗುವುದಿಲ್ಲ ಎಂದು ಕಂದಾಯ ಸಚಿವ ಆರ್​.ಅಶೋಕ್​ ಸ್ಪಷ್ಟಪಡಿಸಿದ್ದಾರೆ.

minister R. Ashok
minister R. Ashok

ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮತ್ತೊಮ್ಮೆ ಲಾಕ್​ಡೌನ್ ಹೇರಿಕೆ ಮಾಡಲಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಇದೀಗ ಸಚಿವ ಆರ್​.ಅಶೋಕ್​ ಅದಕ್ಕೆ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಲಾಕ್​ಡೌನ್ ಹೇರಿಕೆ​ ಇಲ್ಲ ಎಂದಿದ್ದಾರೆ. ಸಚಿವ ಸಂಪುಟದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾಹಿತಿ ಹೊರಹಾಕಿದರು. ​​

ಕಂದಾಯ ಸಚಿವ ಅಶೋಕ್​ ಮಾಹಿತಿ

ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಿಬಿಎಂಪಿ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದು, ಈಗಾಗಲೇ 100 ಆ್ಯಂಬುಲೆನ್ಸ್​ ಸೇವೆ ಒದಗಿಸಲು ಕ್ರಮ ಕೈಗೊಂಡಿದ್ದೇವೆ. ಎರಡು ವಾರ್ಡ್​ಗಳಿಗೆ ಒಂದು ಆ್ಯಂಬುಲೆನ್ಸ್​ ನೀಡಲಾಗುವುದು ಎಂದಿರುವ ಅವರು, ಖಾಸಗಿ ಆಸ್ಪತ್ರೆಗಳೊಂದಿಗೆ ನಾನೇ ಸಭೆ ನಡೆಸಿ, 5 ಸಾವಿರ ಬೆಡ್​ ನೀಡಲು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ. ನಾಳೆ ಖಾಸಗಿ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿ, ಅವರೊಂದಿಗೆ ಚರ್ಚೆ ನಡೆಸುವೆ ಎಂದಿರುವ ಅಶೋಕ್​, ಸೋಂಕಿತರನ್ನ 6-8 ಗಂಟೆಯೊಳಗೆ ಆಸ್ಪತ್ರೆಗೆ ದಾಖಲು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಕೊರೊನಾದೊಂದಿಗೆ ನಾವು ಮುಂದುವರಿಯಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿದ್ದು, ಹೀಗಾಗಿ ಬೆಂಗಳೂರಿನಲ್ಲಿ ಲಾಕ್​ಡೌನ್​ ಬೇಡ ಎಂದು ಎಲ್ಲರು ಅಭಿಪ್ರಾಯಪಟ್ಟಿದ್ದಾರೆ ಎಂದು ಇದೇ ವೇಳೆ ತಿಳಿಸಿದರು. ಒಂದು ವೇಳೆ ಲಾಕ್​ಡೌನ್​ ಜಾರಿಗೊಳಿಸಿದರೆ ಶ್ರಮಿಕ ವರ್ಗಕ್ಕೆ ಇದರಿಂದ ಮತ್ತಷ್ಟು ತೊಂದರೆಯಾಗುವ ಸಾಧ್ಯತೆ ಇರುತ್ತದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಕೂಡ 173 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1678 ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್​ಡೌನ್​ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬಂದಿದ್ದವು.

ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮತ್ತೊಮ್ಮೆ ಲಾಕ್​ಡೌನ್ ಹೇರಿಕೆ ಮಾಡಲಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಇದೀಗ ಸಚಿವ ಆರ್​.ಅಶೋಕ್​ ಅದಕ್ಕೆ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಲಾಕ್​ಡೌನ್ ಹೇರಿಕೆ​ ಇಲ್ಲ ಎಂದಿದ್ದಾರೆ. ಸಚಿವ ಸಂಪುಟದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾಹಿತಿ ಹೊರಹಾಕಿದರು. ​​

ಕಂದಾಯ ಸಚಿವ ಅಶೋಕ್​ ಮಾಹಿತಿ

ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಿಬಿಎಂಪಿ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದು, ಈಗಾಗಲೇ 100 ಆ್ಯಂಬುಲೆನ್ಸ್​ ಸೇವೆ ಒದಗಿಸಲು ಕ್ರಮ ಕೈಗೊಂಡಿದ್ದೇವೆ. ಎರಡು ವಾರ್ಡ್​ಗಳಿಗೆ ಒಂದು ಆ್ಯಂಬುಲೆನ್ಸ್​ ನೀಡಲಾಗುವುದು ಎಂದಿರುವ ಅವರು, ಖಾಸಗಿ ಆಸ್ಪತ್ರೆಗಳೊಂದಿಗೆ ನಾನೇ ಸಭೆ ನಡೆಸಿ, 5 ಸಾವಿರ ಬೆಡ್​ ನೀಡಲು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ. ನಾಳೆ ಖಾಸಗಿ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿ, ಅವರೊಂದಿಗೆ ಚರ್ಚೆ ನಡೆಸುವೆ ಎಂದಿರುವ ಅಶೋಕ್​, ಸೋಂಕಿತರನ್ನ 6-8 ಗಂಟೆಯೊಳಗೆ ಆಸ್ಪತ್ರೆಗೆ ದಾಖಲು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಕೊರೊನಾದೊಂದಿಗೆ ನಾವು ಮುಂದುವರಿಯಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿದ್ದು, ಹೀಗಾಗಿ ಬೆಂಗಳೂರಿನಲ್ಲಿ ಲಾಕ್​ಡೌನ್​ ಬೇಡ ಎಂದು ಎಲ್ಲರು ಅಭಿಪ್ರಾಯಪಟ್ಟಿದ್ದಾರೆ ಎಂದು ಇದೇ ವೇಳೆ ತಿಳಿಸಿದರು. ಒಂದು ವೇಳೆ ಲಾಕ್​ಡೌನ್​ ಜಾರಿಗೊಳಿಸಿದರೆ ಶ್ರಮಿಕ ವರ್ಗಕ್ಕೆ ಇದರಿಂದ ಮತ್ತಷ್ಟು ತೊಂದರೆಯಾಗುವ ಸಾಧ್ಯತೆ ಇರುತ್ತದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಕೂಡ 173 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1678 ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್​ಡೌನ್​ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬಂದಿದ್ದವು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.